ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕುಡಿಯುವ ನೀರು ಯೋಜನೆ ಅನುಷ್ಠಾದಲ್ಲಿ ನಿರ್ಲಕ್ಷ ವಹಿಸಿರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯ್ತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್ ಒತ್ತಾಯಿಸಿದ್ದಾರೆ.
ಇಂದು ನಡೆದ ಜಿಪಂ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಯೋಜನೆಯ ಅನುಷ್ಠಾನದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ದೀರ್ಘಾವಧಿಯ ನಂತರವೂ ಕಾಮಗಾರಿ ಅಪೂರ್ಣವಾಗಿರುವ ಹಾಗೂ ನಿಗಧಿಪಡಿಸಿದ ಗ್ರಾಮಗಳಿಗೆ ಈವರೆಗೂ ಕುಡಿಯುವ ನೀರು ನೀಡದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಸಂಬಂಧಿತ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಮೇಲೆ ಕ್ರಮಕ್ಕೆ ಒತ್ತಾಯಿಸಿದರು.
ಇದಕ್ಕೆ ಸ್ಪಂದಿಸಿದ ಸಚಿವ ಕೆ.ಎಸ್. ಈಶ್ವರಪ್ಪ, ಈ ಎಲ್ಲಾ ವಿಷಯದ ಕುರಿತು ವಾಸ್ತವ ಸ್ಥಿತಿಯನ್ನರಿತು ತಪ್ಪಿತಸ್ತರ ವಿರುದ್ಧ ಕ್ರಮಕೈಗೊಳ್ಳಲು ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದರು.
ಅಲ್ಲದೇ, ಜಿಲ್ಲೆಯ ಬುಳ್ಳಾಪುರ ಸೇರಿದಂತೆ ಅನೇಕ ಕಡೆಗಳಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಗಳು ಅಪೂರ್ಣಗೊಂಡಿರುವುದು ಬೇಸರದ ಸಂಗತಿ. ತಾಂತ್ರಿಕವಾಗಿರುವ ಸಮಸ್ಯಗಳನ್ನು ಇತ್ಯರ್ಥಪಡಿಸಿಕೊಂಡು ಯೋಜನೆಯ ತ್ವರಿತ ಅನುಷ್ಠಾನಕ್ಕೆ ಮುಂದಾಗುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
Get in Touch With Us info@kalpa.news Whatsapp: 9481252093
Discussion about this post