ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ #AravindKejriwal ಅವರನ್ನು ಇಂದು ಪಿಎಂಎಲ್’ಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ನಿನ್ನೆ ರಾತ್ರಿ ಬಂಧಿಸಲಾಗಿದ್ದ ಕೇಜ್ರಿವಾಲ್ ಅವರನ್ನು ಇಂದು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ #Court ಹಾಜರುಪಡಿಸಲಾಗಿದ್ದು, 10 ದಿನ ಕಸ್ಟಡಿಕಗೆ ಕೋರಲಾಗಿದೆ.
ಇನ್ನು, ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಹಾಜರುಪಡಿಸಿದ ಇಡಿ ಅಧಿಕಾರಿಗಳು ಈ ಕೇಸ್’ನಲ್ಲಿ ಕಿಂಗ್’ಪಿನ್ ಕೇಜ್ರಿವಾಲ್ ಅವರೇ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.
ಇಡಿ ಪರವಾಗಿ ರಾಜು ವಾದ ಮಂಡಿಸಿದರೆ, ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸುತ್ತಿದ್ದಾರೆ. ಅಬಕಾರಿ ನೀತಿ ಪ್ರಕರಣ ಸಂಬಂಧಿತ ಅಕ್ರಮ ಹಣ ವರ್ಗಾವಣೆಯಲ್ಲಿ ಜಾರಿ ನಿರ್ದೇಶನಾಲಯದ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್’ನಲ್ಲಿ ಸಲ್ಲಿಸಿದ್ದ ಮನವಿಯನ್ನು ಹಿಂಪಡೆದ ಬೆನ್ನಲ್ಲೇ ಕೇಜ್ರಿವಾಲ್ ಅವರನ್ನು ವಿಚಾರಣಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಈ ವೇಳೆ ಇಡಿ ಪರ ವಕೀಲರು, ಕೇಜ್ರಿವಾಲ್ ಕೆಲವು ವ್ಯಕ್ತಿಗಳಿಗೆ ಕಿಕ್-ಬ್ಯಾಕ್ ಸ್ವೀಕರಿಸಲು ಸೂಚಿಸಿದರು. ಈ ಹಣವನ್ನು ಆಪ್ ಗೋವಾ ಚುನಾವಣೆಯಲ್ಲಿ ಬಳಸಲಾಗಿತ್ತು. ಮದ್ಯದ ನೀತಿಯ ರಚನೆಯಲ್ಲಿ ಅವರು ನೇರವಾಗಿ ಭಾಗಿಯಾಗಿದ್ದು ಅವರೇ ಕಿಂಗ್ ಪಿನ್ ಆಗಿದ್ದು, ಕಿಕ್ ಬ್ಯಾಕ್’ಗೆ ಬೇಡಿಕೆ ಇಟ್ಟಿದ್ದರು ಎಂದು ಮಾಹಿತಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post