ಕಲ್ಪ ಮೀಡಿಯಾ ಹೌಸ್ | ಈರೋಡ್ |
ಲೋಕಸಭಾ ಚುನಾವಣಾ Lok Sabha Election ಟಿಕೇಟ್ ಕೈತಪ್ಪಿದ ಹಿನ್ನೆಲೆಯಲ್ಲಿ ತಮಿಳುನಾಡಿನ ಈರೋಡ್ ಕ್ಷೇತ್ರದ ಎಂಡಿಎಂಕೆ ಹಾಲಿ ಸಂಸದ ಎ. ಗಣೇಶ್ ಮೂರ್ತಿ(76) ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಕೀಟನಾಶನ ಸೇವಿಸಿ ಅಸ್ವಸ್ಥಗೊಂಡಿರುವ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ನಿನ್ನೆ ಬೆಳಗ್ಗೆ ಗಣೇಶ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದರು. ಮನೆಯವರು ವಿಚಾರಿಸಿದಾಗ ಕೀಟ ನಾಶಕ ಸೇವನೆ ಮಾಡಿರುವುದಾಗಿ ಹೇಳಿದ್ದಾರೆ.
Also read: ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟನ್ಸ್’ಗೆ ರೋಚಕ ಜಯ
ತತಕ್ಷಣವೇ ಅವನ್ನು ಪಟ್ಟಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post