ಕಲ್ಪ ಮೀಡಿಯಾ ಹೌಸ್ | ಇರುವಕ್ಕಿ |
ನಮ್ಮದು ಕೃಷಿ ಪ್ರಧಾನ ದೇಶ. ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ. ಕೃಷಿ ಮತ್ತು ತೋಟಗಾರಿಕೆ ಪದವೀಧರರು, ವಿದ್ಯಾರ್ಥಿಗಳು ರೈತರಿಗೆ ಲಾಭದಾಯಕವಾದ, ಪರಿಸರಕ್ಕೆ ಪೂರಕವಾದ ಕೃಷಿ ಸಂಶೋಧನೆಗಳನ್ನು ಕೈಗೊಂಡು ಕೊಡುಗೆ ನೀಡಬೇಕೆಂದು ರಾಜ್ಯದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ಚಂದ್ ಗೆಹ್ಲೋಟ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಬುಧವಾರ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, #University of Agriculture and Horticulture ಇರುವಕ್ಕಿಯಲ್ಲಿ ಆಯೋಜಿಸಲಾಗಿದ್ದ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವ #Convocation ಸುಗ್ಗಿ ಸಂಭ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರಿಗೆ ಕಡಿಮೆ ಖರ್ಚು ಮಾಡಿ ಅಧಿಕ ಇಳುವರಿ ಪಡೆಯಲು ತಾವು ಸಹಕಾರಿಯಾಗಬೇಕು. ಈ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯವೆಸಗಬೇಕು. ಇಸ್ರೇಲ್ ಅಂತಹ ಸಣ್ಣ ದೇಶ ನವೀನ ಸಾಧನ, ಕಡಿಮೆ ನೀರು ಬಳಸಿಕೊಂಡು ಉತ್ತಮ ಆದಾಯ ಪಡೆದು ಬೆಳೆಯುತ್ತಿದೆ. ನಮ್ಮಲ್ಲಿಯೂ ಅಂತಹ ತಂತ್ರಜ್ಞಾನ, ಸಾಧನ ಬಳಸಿಕೊಂಡು ಮುಂದುವರೆಯಬೇಕಿದೆ ಎಂದರು.
ಬೆಂಗಳೂರಿನ ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಪ್ರೊ.ಎಲ್.ಎಸ್.ಶಶಿಧರ್ ಘಟಿಕೋತ್ಸವದ ಮುಖ್ಯ ಭಾಷಣಕಾರರಾಗಿ ಮಾತನಾಡಿ, ನಮ್ಮ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮತ್ತು ವಿಸ್ತರಣೆಯ ಮೇಲೆ ಹಾಗೂ ನಾಶವಾಗುತ್ತಿರವ ಆವಾಸಸ್ಥನಗಳನ್ನು ಪುನಶ್ಚೇತನಗೊಳಿಸಿ ಮುಂದುವರಿಯಬಲ್ಲ ಕೃಷಿ ಪದ್ದತಿಗಳನ್ನು ಅಳವಡಿಸಿಕೊಳ್ಳುವುದರ ಮೇಲೆ ನಮ್ಮ ಗಮನವನ್ನು ಕೇಂದ್ರಿಕರಿಸುವುದು ಅವಶ್ಯಕವಾಗಿದೆ.
Also read: ಶಿವಮೊಗ್ಗ | ಸಾಧನೆ ಎಂದರೆ ಇದು | ಅಡುಗೆ ಭಟ್ಟರ ಪುತ್ರಿಗೆ 4, ಕೃಷಿಕರ ಪುತ್ರಿಗೆ 3 ಚಿನ್ನದ ಪದಕ
ಹವಾಮಾನದಲ್ಲಿನ ಬದಲಾವಣೆ ಬೇರೆಲ್ಲಾ ಕ್ಷೇತ್ರಗಳಿಗಿಂತಲು ಕೃಷಿ ಹಾಗೂ ಪರಿಸರದ ಮೇಲೆ ಹೆಚ್ಚು ಪರಿಣಾಮ ಮಾಡುತ್ತದೆ. ಒಳ್ಳೆಯ ಹವಾಮಾನ, ಮಣ್ಣಿನ ಪರಿಸ್ಥಿತಿ ಹಾಗೂ ಸನಿಹದಲ್ಲಿ ಅರಣ್ಯ ಪ್ರದೇಶ ಇರುವಿಕೆ ಇವುಗಳ ಮೇಲೆ ಕೃಷಿ ನಿರ್ಭರವಾಗಿದೆ ಎಂದರು.
ಪರಿಸರ ವ್ಯವಸ್ಥೆ ಹಾಗೂ ಜೈವಿಕ ವೈವಿಧ್ಯತೆ ಇವುಗಳಿಂದ ಕೃಷಿ ಹಾಗೂ ಪಶು ಸಂಗೋಪನೆ ಇವೆರಡು ನೇರವಾಗಿ ಪ್ರಭಾವಿತವಾಗುತ್ತದೆ. ನಮ್ಮ ದೇಶ ತನ್ನ ಪ್ರಜೆಗಳೆಲ್ಲರೂ ಆಹಾರ ಮತ್ತು ಪೌಷ್ಟಿಕತೆಯನ್ನು ಒದಗಿಸುವಲ್ಲಿ ಆತ್ಮನಿರ್ಭರವಾಗಲು ಮತ್ತು ಮುಂದಿನ ದಶಕಗಳಲ್ಲಿ ಸಂಭವಿಸಬಹುದಾಗ ನೈಸರ್ಗಿಕ ಹಾಗೂ ಮಾನವ ನಿರ್ಮಿತ ದುರಂತಗಳ ಸಮಯದಲ್ಲಿಯೂ ಆಹಾರ ಸಂರಕ್ಷಣೆಯನ್ನು ನೀಡಲು ಸಫಲವಾಗಿದೆ ಎಂದು ಹೇಳಿದರು.
ನಾವಿನ್ನೂ ಅಭಿವೃದ್ಧಿಯ ಹೊಂದುತ್ತಿರುವ ಹಂತದಲ್ಲಿ ಇದ್ದೇವೆ. ಭಾರತದ ಜನಸಂಖ್ಯೆಯ ದೊಡ್ಡ ಭಾಗ ಬಡತನದ ರೇಖೆಯ ಕೆಳಗೆ ಇದೆ. ಉತ್ತಮ ಮತ್ತು ಪೌಷ್ಟಿಕ ಆಹಾರದ ಲಭ್ಯತೆಯಲ್ಲಿ ಅಸಮಾನತೆ ಈಗಲೂ ಬಹಳ ಇದೆ. ನಮ್ಮ ಕೃಷಿ ಪದ್ದತಿಯಲ್ಲಿ ಅತಿಯಾದ ನೀರು ಮತ್ತು ರಾಸಾಯನಿಕ ಗೊಬ್ಬರಗಳ ಬಳಕೆ ಹಾಗೂ ತ್ರೀವ ವ್ಯವಸಾಯ ಪದ್ದತಿಗಳಿಂದಾಗಿ ಕೃಷಿ ಉತ್ಪಾದಕತೆಯ ಮೇಲೆ ಅತೀವ ಒತ್ತಡವುಂಟಾಗಿದೆ. ವ್ಯವಸಾಯ ಖರ್ಚು ವೆಚ್ಚದಲ್ಲಿ ಗಣನೀಯ ಏರಿಕೆಯಾಗಿದೆ ಹಾಗೂ ಅದರಿಂದ ಬರುವ ಆದಾಯ ಕುಂಠಿತವಾಗುತ್ತಿದೆ ಎಂದರು.
ಈ ವಿಶ್ವವಿದ್ಯಾಲಯವು ತನ್ನ ಸಂಶೋಧನೆ ಹಾಗೂ ಶಿಕ್ಷಣದ ಚಟುವಟಿಕೆಗಳಲ್ಲಿ ಇಂತಹ ಸವಾಲಾಗುವ ಸಮಸ್ಯೆಗಳ ಬಗ್ಗೆ ಗಮನವನ್ನು ಕೇಂದ್ರಿಕರಿಸಿದೆಯೆಂದು ತಿಳಿದು ನನಗೆ ಸಂತೋಷವಾಗಿದೆ. ಮೊದಲನೆದಾಗಿ ಇದು ಕೃಷಿ, ತೋಟಗಾರಿಕೆ ಹಾಗೂ ಅರಣ್ಯಶಾಸ್ತ್ರಗಳನ್ನೊಳಗೊಂಡ ಒಂದು ಸಮಗ್ರ ವಿಶ್ವವಿದ್ಯಾಲಯವಾಗಿದೆ. ಸುಸ್ಥಿರ ಜೀವನಕ್ಕೆ ಈ ಮೂರು ವಿಜ್ಞಾನಗಳ ಕೊಡುಗೆ ಅವಶ್ಯಕವಾಗಿದೆ. ಕೃಷಿ ಅರಣ್ಯ ಹಾಗೂ ಆಹಾರಧಾನ್ಯಗಳು, ಹಣ್ಣು ತರಕಾರಿಗಳು ಸೇರಿದಂತೆ ಬೆಳೆಗಳ ಆವರ್ತನೆ ಇವುಗಳಿಂದ ಭೂಮಿಯ ಕ್ಷಮತೆಯನ್ನು ಉತ್ತಮಗೊಳಿಸುವುದರ ಜೊತೆಗೆ ರೈತರ ಆದಾಯವನ್ನು ಹೆಚ್ಚಿಸಬಹುದು. ಈ ವಿಶ್ವವಿದ್ಯಾಲಯದವು ಕೃಷಿ ಅರಣ್ಯ, ಜೈವಿಕ ಗೊಬ್ಬರಗಳು, ಜೈವಿಕ ನಿಯಂತ್ರಣ ಸೂತ್ರಗಳು, ಜೈವಿಕ ಇಂಧನಗಳು, ಪರಾಗಸ್ಪರ್ಷಗಳು ಇತ್ಯಾದಿ ವಿಷಯಗಳಲ್ಲಿ ನವೀನ ಉಪಕ್ರಮಗಳನ್ನು ತೆಗೆದುಕೊಂಡಿದೆ. ಪಶ್ಚಿಮಘಟ್ಟದಲ್ಲಿ ಜೀವಿಸುತ್ತಾ, ಅಲ್ಲಿನ ಪರಿಸರವನ್ನು ಸ್ವಾಭಾವಿಕವಾಗಿ ಹಾಗೂ ಸಾಂಪ್ರದಾಯಿಕವಾಗಿ ರಕ್ಷಿಸುತ್ತಿರುವ ರೈತ ಸಮುದಾಯಕ್ಕೆ ಈ ವಿಶ್ವವಿದ್ಯಾಲಯವು ಪ್ರಾಮುಖ್ಯತೆಯನ್ನು ಕೊಡುತ್ತಿದೆಯೆಂದು ನಾನು ಕೇಳಿದ್ದೇನೆ ಎಂದು ತಿಳಿಸಿದರು.

ಸರ್ವಜ್ಞ ಹೇಳುವಂತೆ ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು. ಡಿವಿಜಿ ಅವರು ಋಷಿಗಳು, ರೈತರನ್ನು ಕೃಷಿ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ನಮ್ಮ ಸಹಭಾಗಿಗಳನ್ನಾಗಿ ಮಾಡಿಕೊಂಡು ಸಮಾಜದಲ್ಲಿ ತರ್ಕಬದ್ಧತೆಯನ್ನು ಹೆಚ್ಚಾಗಿ ತರಲು ಇದು ಸಕಾಲವಾಗಿ ಎಂದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ.ಆರ್.ಜಗದೀಶ್ ಸ್ವಾಗತ ಭಾಷಣ ಮಾಡಿ, ಸಂಕ್ಷಿಪ್ತ ವರದಿ ಸಲ್ಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post