No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Saturday, August 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೃಷಿ – ತೋಟಗಾರಿಕೆ ಪದವೀಧರರು ಸ್ಮಾರ್ಟ್ ಅಗ್ರಿಕಲ್ಚರ್ ಕಡೆ ಗಮನಹರಿಸಿ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರೆ

ಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವ

kalpa News by kalpa News
January 23, 2025
in ಶಿವಮೊಗ್ಗ
0
ಕೃಷಿ – ತೋಟಗಾರಿಕೆ ಪದವೀಧರರು ಸ್ಮಾರ್ಟ್ ಅಗ್ರಿಕಲ್ಚರ್ ಕಡೆ ಗಮನಹರಿಸಿ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಇರುವಕ್ಕಿ  |

ನಮ್ಮದು ಕೃಷಿ ಪ್ರಧಾನ ದೇಶ. ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ. ಕೃಷಿ ಮತ್ತು ತೋಟಗಾರಿಕೆ ಪದವೀಧರರು,  ವಿದ್ಯಾರ್ಥಿಗಳು ರೈತರಿಗೆ ಲಾಭದಾಯಕವಾದ, ಪರಿಸರಕ್ಕೆ ಪೂರಕವಾದ ಕೃಷಿ ಸಂಶೋಧನೆಗಳನ್ನು ಕೈಗೊಂಡು ಕೊಡುಗೆ ನೀಡಬೇಕೆಂದು ರಾಜ್ಯದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಬುಧವಾರ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, #University of Agriculture and Horticulture ಇರುವಕ್ಕಿಯಲ್ಲಿ ಆಯೋಜಿಸಲಾಗಿದ್ದ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವ #Convocation ಸುಗ್ಗಿ ಸಂಭ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರ ದೇಶದ ಬೆನ್ನೆಲಯಬಾಗಿದ್ದು, ಈ ಶಿಕ್ಷಣ ಪಡೆದ ವಿದ್ಯಾರ್ಥಿಗಳು ತಮ್ಮ ಜ್ಞಾನದಿಂದ ಎತ್ತರಕ್ಕೆ ಬೆಳೆಯಬೇಕು. ಹೆಚ್ಚುತ್ತಿರುವ ಜನಸಂಖ್ಯೆ, ನೈಸರ್ಗಿಕ ಸಂಪನ್ಮೂಲಗಳ ಕೊರತೆ ಹಿನ್ನೆಲೆಯಲ್ಲಿ ನಿಮ್ಮ ಪಾತ್ರ ದೊಡ್ಡದಿದೆ. ಕೌಶಲ್ಯ ಮತ್ತು ತಂತ್ರಜ್ಞಾನವನ್ನು ಸಮರ್ಪಕವಾಗಿ ಅಳವಡಿಸಿಕೊಂಡು ಹೊಸ ಹೊಸ ಸಂಶೋಧನೆ ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ. ಕೃಷಿ‌ಕ್ಷೇತ್ರದಲ್ಲಿ ನವೀನ ತಂತ್ರಜ್ಞಾನ, ಸ್ಮಾರ್ಟ್ ಅಗ್ರಿಕಲ್ಚರ್ ಕಡೆ ಗಮನ ಹರಿಸಬೇಕಿದೆ.

ರೈತರಿಗೆ ಕಡಿಮೆ ಖರ್ಚು ಮಾಡಿ ಅಧಿಕ ಇಳುವರಿ ಪಡೆಯಲು ತಾವು ಸಹಕಾರಿಯಾಗಬೇಕು. ಈ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯವೆಸಗಬೇಕು. ಇಸ್ರೇಲ್ ಅಂತಹ ಸಣ್ಣ ದೇಶ ನವೀನ ಸಾಧನ, ಕಡಿಮೆ ನೀರು ಬಳಸಿಕೊಂಡು ಉತ್ತಮ‌ ಆದಾಯ ಪಡೆದು ಬೆಳೆಯುತ್ತಿದೆ. ನಮ್ಮಲ್ಲಿಯೂ ಅಂತಹ ತಂತ್ರಜ್ಞಾನ, ಸಾಧನ ಬಳಸಿಕೊಂಡು ಮುಂದುವರೆಯಬೇಕಿದೆ ಎಂದರು.

ಬೆಂಗಳೂರಿನ ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಪ್ರೊ.ಎಲ್.ಎಸ್.ಶಶಿಧರ್ ಘಟಿಕೋತ್ಸವದ ಮುಖ್ಯ ಭಾಷಣಕಾರರಾಗಿ ಮಾತನಾಡಿ, ನಮ್ಮ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮತ್ತು ವಿಸ್ತರಣೆಯ ಮೇಲೆ ಹಾಗೂ ನಾಶವಾಗುತ್ತಿರವ ಆವಾಸಸ್ಥನಗಳನ್ನು ಪುನಶ್ಚೇತನಗೊಳಿಸಿ ಮುಂದುವರಿಯಬಲ್ಲ ಕೃಷಿ ಪದ್ದತಿಗಳನ್ನು ಅಳವಡಿಸಿಕೊಳ್ಳುವುದರ ಮೇಲೆ ನಮ್ಮ ಗಮನವನ್ನು ಕೇಂದ್ರಿಕರಿಸುವುದು ಅವಶ್ಯಕವಾಗಿದೆ.

Also read: ಶಿವಮೊಗ್ಗ | ಸಾಧನೆ ಎಂದರೆ ಇದು | ಅಡುಗೆ ಭಟ್ಟರ ಪುತ್ರಿಗೆ 4, ಕೃಷಿಕರ ಪುತ್ರಿಗೆ 3 ಚಿನ್ನದ ಪದಕ

ಹವಾಮಾನದಲ್ಲಿನ ಬದಲಾವಣೆ ಬೇರೆಲ್ಲಾ ಕ್ಷೇತ್ರಗಳಿಗಿಂತಲು ಕೃಷಿ ಹಾಗೂ ಪರಿಸರದ ಮೇಲೆ ಹೆಚ್ಚು ಪರಿಣಾಮ ಮಾಡುತ್ತದೆ. ಒಳ್ಳೆಯ ಹವಾಮಾನ, ಮಣ್ಣಿನ ಪರಿಸ್ಥಿತಿ ಹಾಗೂ ಸನಿಹದಲ್ಲಿ ಅರಣ್ಯ ಪ್ರದೇಶ ಇರುವಿಕೆ ಇವುಗಳ ಮೇಲೆ ಕೃಷಿ ನಿರ್ಭರವಾಗಿದೆ ಎಂದರು.

ಪರಿಸರ ವ್ಯವಸ್ಥೆ ಹಾಗೂ ಜೈವಿಕ ವೈವಿಧ್ಯತೆ ಇವುಗಳಿಂದ ಕೃಷಿ ಹಾಗೂ ಪಶು ಸಂಗೋಪನೆ ಇವೆರಡು ನೇರವಾಗಿ ಪ್ರಭಾವಿತವಾಗುತ್ತದೆ. ನಮ್ಮ ದೇಶ ತನ್ನ ಪ್ರಜೆಗಳೆಲ್ಲರೂ ಆಹಾರ ಮತ್ತು ಪೌಷ್ಟಿಕತೆಯನ್ನು ಒದಗಿಸುವಲ್ಲಿ ಆತ್ಮನಿರ್ಭರವಾಗಲು ಮತ್ತು ಮುಂದಿನ ದಶಕಗಳಲ್ಲಿ ಸಂಭವಿಸಬಹುದಾಗ ನೈಸರ್ಗಿಕ ಹಾಗೂ ಮಾನವ ನಿರ್ಮಿತ ದುರಂತಗಳ ಸಮಯದಲ್ಲಿಯೂ ಆಹಾರ ಸಂರಕ್ಷಣೆಯನ್ನು ನೀಡಲು ಸಫಲವಾಗಿದೆ ಎಂದು ಹೇಳಿದರು.

ನಾವಿನ್ನೂ ಅಭಿವೃದ್ಧಿಯ ಹೊಂದುತ್ತಿರುವ ಹಂತದಲ್ಲಿ ಇದ್ದೇವೆ. ಭಾರತದ ಜನಸಂಖ್ಯೆಯ ದೊಡ್ಡ ಭಾಗ ಬಡತನದ ರೇಖೆಯ ಕೆಳಗೆ ಇದೆ. ಉತ್ತಮ ಮತ್ತು ಪೌಷ್ಟಿಕ ಆಹಾರದ ಲಭ್ಯತೆಯಲ್ಲಿ ಅಸಮಾನತೆ ಈಗಲೂ ಬಹಳ ಇದೆ. ನಮ್ಮ ಕೃಷಿ ಪದ್ದತಿಯಲ್ಲಿ ಅತಿಯಾದ ನೀರು ಮತ್ತು ರಾಸಾಯನಿಕ ಗೊಬ್ಬರಗಳ ಬಳಕೆ ಹಾಗೂ ತ್ರೀವ ವ್ಯವಸಾಯ ಪದ್ದತಿಗಳಿಂದಾಗಿ ಕೃಷಿ ಉತ್ಪಾದಕತೆಯ ಮೇಲೆ ಅತೀವ ಒತ್ತಡವುಂಟಾಗಿದೆ. ವ್ಯವಸಾಯ ಖರ್ಚು ವೆಚ್ಚದಲ್ಲಿ ಗಣನೀಯ ಏರಿಕೆಯಾಗಿದೆ ಹಾಗೂ ಅದರಿಂದ ಬರುವ ಆದಾಯ ಕುಂಠಿತವಾಗುತ್ತಿದೆ ಎಂದರು.

ಈ ವಿಶ್ವವಿದ್ಯಾಲಯವು ತನ್ನ ಸಂಶೋಧನೆ ಹಾಗೂ ಶಿಕ್ಷಣದ ಚಟುವಟಿಕೆಗಳಲ್ಲಿ ಇಂತಹ ಸವಾಲಾಗುವ ಸಮಸ್ಯೆಗಳ ಬಗ್ಗೆ ಗಮನವನ್ನು ಕೇಂದ್ರಿಕರಿಸಿದೆಯೆಂದು ತಿಳಿದು ನನಗೆ ಸಂತೋಷವಾಗಿದೆ. ಮೊದಲನೆದಾಗಿ ಇದು ಕೃಷಿ, ತೋಟಗಾರಿಕೆ ಹಾಗೂ ಅರಣ್ಯಶಾಸ್ತ್ರಗಳನ್ನೊಳಗೊಂಡ ಒಂದು ಸಮಗ್ರ ವಿಶ್ವವಿದ್ಯಾಲಯವಾಗಿದೆ. ಸುಸ್ಥಿರ ಜೀವನಕ್ಕೆ ಈ ಮೂರು ವಿಜ್ಞಾನಗಳ ಕೊಡುಗೆ ಅವಶ್ಯಕವಾಗಿದೆ. ಕೃಷಿ ಅರಣ್ಯ ಹಾಗೂ ಆಹಾರಧಾನ್ಯಗಳು, ಹಣ್ಣು ತರಕಾರಿಗಳು ಸೇರಿದಂತೆ ಬೆಳೆಗಳ ಆವರ್ತನೆ ಇವುಗಳಿಂದ ಭೂಮಿಯ ಕ್ಷಮತೆಯನ್ನು ಉತ್ತಮಗೊಳಿಸುವುದರ ಜೊತೆಗೆ ರೈತರ ಆದಾಯವನ್ನು ಹೆಚ್ಚಿಸಬಹುದು. ಈ ವಿಶ್ವವಿದ್ಯಾಲಯದವು ಕೃಷಿ ಅರಣ್ಯ, ಜೈವಿಕ ಗೊಬ್ಬರಗಳು, ಜೈವಿಕ ನಿಯಂತ್ರಣ ಸೂತ್ರಗಳು, ಜೈವಿಕ ಇಂಧನಗಳು, ಪರಾಗಸ್ಪರ್ಷಗಳು ಇತ್ಯಾದಿ ವಿಷಯಗಳಲ್ಲಿ ನವೀನ ಉಪಕ್ರಮಗಳನ್ನು ತೆಗೆದುಕೊಂಡಿದೆ. ಪಶ್ಚಿಮಘಟ್ಟದಲ್ಲಿ ಜೀವಿಸುತ್ತಾ, ಅಲ್ಲಿನ ಪರಿಸರವನ್ನು ಸ್ವಾಭಾವಿಕವಾಗಿ ಹಾಗೂ ಸಾಂಪ್ರದಾಯಿಕವಾಗಿ ರಕ್ಷಿಸುತ್ತಿರುವ ರೈತ ಸಮುದಾಯಕ್ಕೆ ಈ ವಿಶ್ವವಿದ್ಯಾಲಯವು ಪ್ರಾಮುಖ್ಯತೆಯನ್ನು ಕೊಡುತ್ತಿದೆಯೆಂದು ನಾನು ಕೇಳಿದ್ದೇನೆ ಎಂದು ತಿಳಿಸಿದರು.
ನಮ್ಮ ರೈತರು ಕೃಷಿ ಪದ್ದತಿಗಳಲ್ಲಿನ ಹೊಸ ಆವಿಷ್ಕಾರಗಳಿಂದ ದೂರ ನಿಂತಿಲ್ಲ. ಅವರಲ್ಲಿ ಆ ರೀತಿ ಬದಲಾವಣೆಗಳನ್ನು ಹೊಂದಿಕೊಳ್ಳುವ, ಅಳವಡಿಸಿಕೊಳ್ಳುವ ಸಾಮರ್ಥ್ಯವಿಲ್ಲದಿದ್ದರೆ ನಾವು ದೇಶದ ಸ್ವಾತಂತ್ರ್ಯ ನಂತರದ ಇಷ್ಟು ಕಡಿಮೆ ಸಮಯದಲ್ಲೇ ಆಹಾರ ಮತ್ತು ಪೌಷ್ಠಿಕತೆಯಲ್ಲಿ ಸ್ವಾವಂಲಬಿಯಾಗಲು ಸಾಧ್ಯವಾಗುತ್ತಿರಲಿಲ್ಲ. ಕೃಷಿ ಪದ್ದತಿಗಳು ನಮ್ಮ ಸಾಂಸ್ಕೃತಿಕ ಹಾಗೂ ಧಾರ್ಮಿಕ ಪದ್ದತಿಗಳನ್ನು ಹುಚ್ಚಾಗಿ ಪ್ರಭಾವಗೊಳಿಸಿದೆ. ಭಾರತೀಯ ತತ್ವಶಾಸ್ತ್ರ ಮತ್ತು ಪದ್ದತಿಗಳು ತರ್ಕಬದ್ಧವಾಗಿದ್ದರೂ, ನಮ್ಮ ಸಮಾಜದಲ್ಲಿ ಈಗಲೂ ಮೂಡನಂಭಿಗಳು ಹಾಗೂ ಹುಸಿ ವಿಜ್ಞಾನಗಳು ಹೇರಳವಾಗಿವೆ. ಕುತೂಹಲಕಾರಿ ಅಂಶವೆಂದರೆ, ತರ್ಕಬದ್ಧ ಮತ್ತು ಆಧುನಿಕ ಜ್ಞಾನವನ್ನು ಸ್ವೀಕರಿಸುವುದರಲ್ಲಿ ನರಗವಾಸಿಗಳಿಗಿಂತ, ರೈತರೇ ಹೆಚ್ಚಾಗಿ ಮುಂದಿದ್ದಾರೆಂದು ಗಮನಿಸಲಾಗಿದೆ ಎಂದರು.

ಸರ್ವಜ್ಞ ಹೇಳುವಂತೆ ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು. ಡಿವಿಜಿ ಅವರು ಋಷಿಗಳು, ರೈತರನ್ನು ಕೃಷಿ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ನಮ್ಮ ಸಹಭಾಗಿಗಳನ್ನಾಗಿ ಮಾಡಿಕೊಂಡು ಸಮಾಜದಲ್ಲಿ ತರ್ಕಬದ್ಧತೆಯನ್ನು ಹೆಚ್ಚಾಗಿ ತರಲು ಇದು ಸಕಾಲವಾಗಿ ಎಂದರು.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ.ಆರ್.ಜಗದೀಶ್ ಸ್ವಾಗತ ಭಾಷಣ ಮಾಡಿ, ಸಂಕ್ಷಿಪ್ತ ವರದಿ ಸಲ್ಲಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: ConvocationEruvakkiKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsUniversity of Agriculture and Horticultureಇರುವಕ್ಕಿಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಘಟಿಕೋತ್ಸವಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಸಾಧನೆ ಎಂದರೆ ಇದು | ಅಡುಗೆ ಭಟ್ಟರ ಪುತ್ರಿಗೆ 4, ಕೃಷಿಕರ ಪುತ್ರಿಗೆ 3 ಚಿನ್ನದ ಪದಕ

Next Post

ಹಸುವಿನ ಕೆಚ್ಚಲಿನಲ್ಲಿ ಹಾಲು ಕರೆಯುವ ವಿವಿಧ ವಿಧಾನಗಳು ಯಾವುವು?

kalpa News

kalpa News

Next Post
ಹಸುವಿನ ಕೆಚ್ಚಲಿನಲ್ಲಿ ಹಾಲು ಕರೆಯುವ ವಿವಿಧ ವಿಧಾನಗಳು ಯಾವುವು?

ಹಸುವಿನ ಕೆಚ್ಚಲಿನಲ್ಲಿ ಹಾಲು ಕರೆಯುವ ವಿವಿಧ ವಿಧಾನಗಳು ಯಾವುವು?

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL