ಕಲ್ಪ ಮೀಡಿಯಾ ಹೌಸ್ | ಕಾನೂನು ಕಲ್ಪ – ಪ್ರಶ್ನೋತ್ತರ ಅಂಕಣ |
ಉತ್ತರ: ಈ ಹಂತದಲ್ಲಿ ನೀವು ಪ್ರಕರಣದಲ್ಲಿ ಭಾಗವಹಿಸಲು ಅವಕಾಶವಿದೆ. ನೋಟೀಸ್ ಸ್ವೀಕರಿಸಿದಾಗ ನೀವು ಖುದ್ದಾಗಿ ಅಥವಾ ನಿಮ್ಮ ವಕೀಲರ ಮೂಲಕ ಪ್ರಕರಣದಲ್ಲಿ ಭಾಗವಹಿಸಿ ನಿಮ್ಮ ಆಕ್ಷೇಪಣೆಗಳು ಹಾಗು ಪ್ರತಿವಾದ ಪತ್ರವನ್ನು ಸಲ್ಲಿಸಬೇಕಿತ್ತು. ಈ ಹಂತದಲ್ಲಿ ನೀವು ಪ್ರಕರಣದಲ್ಲಿ ಭಾಗವಹಿಸಲು ಸಿವಿಲ್ ಪ್ರಕ್ರಿಯಾ ಸಂಹಿತೆಯ (CPC) ಆರ್ಡರ್ 9 ರೂಲ್ 7 ರ ಅಡಿಯಲ್ಲಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿ ನಿಮ್ಮನ್ನು ಪ್ರಕರಣದಲ್ಲಿ ಮುಂದುವರೆಯಲು ಅವಕಾಶ ನೀಡುವಂತೆ ಕೋರಬಹುದು. ಅರ್ಜಿಯೊಂದಿಗೆ ಸಲ್ಲಿಸುವ ಪ್ರಮಾಣಪತ್ರದಲ್ಲಿ ಗೈರುಹಾಜರಿಗೆ ಕಾರಣವಾದ ಅರೋಗ್ಯ ಸಮಸ್ಯೆಯ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿ, ಪ್ರಕರಣದಲ್ಲಿ ಮುಂದುವರೆಯಲು ನ್ಯಾಯಾಲಯದಿಂದ ನಿಮ್ಮ ಪರವಾಗಿ ಆದೇಶ ಪಡೆಯಬಹುದು. ಆಗ ನೀವು ಪ್ರಕರಣದಲ್ಲಿ ಪಕ್ಷಗಾರರಾಗಿ(party) ಮುಂದುವರೆಯುವಿರಿ. ನಂತರ ನೀವು ಪ್ರತಿವಾದ ಪತ್ರವನ್ನು ಕೂಡ ಸಲ್ಲಿಸಬಹುದು.
ಕಲ್ಪ ಮೀಡಿಯಾ ಹೌಸ್(ರಿ.) ಅಡಿಯಲ್ಲಿ ಪ್ರಕಟವಾಗುತ್ತಿರುನ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದಲ್ಲಿ ನಮ್ಮ ಓದುಗರಿಗಾಗಿ `ಕಾನೂನು ಕಲ್ಪ’ ಎಂಬ ಹೊಸ ಅಂಕಣವನ್ನು ಆರಂಭಿಸಲಾಗಿದ್ದು, ಪ್ರತಿ ಶುಕ್ರವಾರ ಪ್ರಕಟವಾಗಲಿದೆ. ಶಿವಮೊಗ್ಗ-ಭದ್ರಾವತಿಯ ಖ್ಯಾತ ವಕೀಲರು ಹಾಗೂ ಹಿರಿಯ ಪತ್ರಕರ್ತರೂ ಆಗಿರುವ ಶ್ರೀ ವೀರೇಂದ್ರ ಪಿ.ಎಂ. ಅವರು ಯಾವುದೇ ರೀತಿಯ ಕಾನೂನು ಸಮಸ್ಯೆಗಳು, ಕಾನೂನಿನ ಕುರಿತಾಗಿನ ಮಾರ್ಗದರ್ಶನ ಮಾಡಲಿದ್ದಾರೆ. ಸಾರ್ವಜನಿಕರು ತಮಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದರೆ ನಮಗೆ ಕಳುಹಿಸಬಹುದು. ಆ ಪ್ರಶ್ನೆಗಳಿಗೆ ವಕೀಲರಾದ ಶ್ರೀ ವೀರೇಂದ್ರ ಪಿ.ಎಂ. ಅವರು ಉತ್ತರ ನೀಡಲಿದ್ದಾರೆ. ನಿಮ್ಮ ಪ್ರಶ್ನೆಗಳು ಸ್ಪಷ್ಟ, ಸ್ಪುಟ, ನೇರವಾಗಿರಲಿ.
ನಿಮ್ಮ ಪ್ರಶ್ನೆಗಳನ್ನು ಈ ಕೆಳಗಿನ ವಾಟ್ಸಪ್ ಸಂಖ್ಯೆ 9481252093 (ವಾಟ್ಸಪ್ ಮಾತ್ರ) ಅಥವಾ ಇ-ಮೇಲ್ info@kalpa.news ಗೆ ಕಳುಹಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
