No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಮನಗರ

ಸಂಪುಟ ಸಭೆಯಿಂದ ಹೊರಗುಳಿದ ಡಿಸಿಎಂ ದೊಡ್ಡತನ ಪ್ರದರ್ಶಿಸಿದ್ದಾರೆ: ಎಚ್’ಡಿಕೆ ವ್ಯಂಗ್ಯ

kalpa News by kalpa News
November 24, 2023
in ರಾಮನಗರ
0
ನಾಡಪ್ರಭು ಕೆಂಪೇಗೌಡರ ಹೆಸರು ರಾಜಕೀಯಕ್ಕೆ ಬಳಕೆ: ಬಿಜೆಪಿ ವಿರುದ್ಧ ಹೆಚ್‌ಡಿಕೆ ಟೀಕಾ ಪ್ರಹಾರ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ರಾಮನಗರ  |

ಡಿಸಿಎಂ ಡಿ.ಕೆ. ಶಿವಕುಮಾರ್ #DKShivakumar ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ವಾಪಸ್ ಪಡೆಯುವ ನಿರ್ಧಾರ ಕೈಗೊಂಡ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ #HDKumaraswamy ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮನಗರದಲ್ಲಿ #Ramanagar ವಕೀಲರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮಗಳ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರಲ್ಲದೆ; ಕಳ್ಳಕಾಕರ ರಕ್ಷಣೆಗೆ ಈ ಸರಕಾರ ಇದೆ ಎನ್ನುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಕಿಡಿಕಾರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ #Siddharamaiah ವಕೀಲರಾಗಿ, ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಆದರೆ, ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ. ಸುಪ್ರೀಂ ಕೋರ್ಟ್ #SupremeCourt ನೀಡಿರುವ ಹಲವಾರು ತೀರ್ಪುಗಳು ನಮ್ಮ ಕಣ್ಣಮುಂದೆ ಇವೆ. ಈಗಾಗಲೇ ಇದೇ ವಿಷಯವಾಗಿ ಎರಡು ಬಾರಿ ಹೈಕೋರ್ಟ್ ನಲ್ಲಿ ಚರ್ಚೆ ವಿಚಾರಣೆ ನಡೆದು ಆದೇಶಗಳು ಬಂದಿವೆ. ಸಿಬಿಐ ತನಿಖೆ ರದ್ದು ಕೋರಿ ಡಿ.ಕೆ.ಶಿವಕುಮಾರ್ ಅವರು ಎರಡು ಸಲ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿಲ್ಲ. ಇದು ಸಿಎಂಗೆ ಗೊತ್ತಿಲ್ಲವೇ? ಎಂದು ಅವರು ಪ್ರಶ್ನಿಸಿದರು.

ಇಂಥ ಸೂಕ್ಷ್ಮ ವಿಚಾರ ನ್ಯಾಯಾಲಯದ ಮುಂದೆ ಇದ್ದಾಗ ಸರಕಾರ ಏಕಾಏಕಿ ಈ ನಿರ್ಧಾರ ತೆಗೆದುಕೊಂಡಿರುವುದು ತಪ್ಪು. ಕಾನೂನನ್ನು ಧಿಕ್ಕರಿಸಿದವರು ಇವರು. ನಾವು ಕಾನೂನಿಗಿಂತ ದೊಡ್ಡವರು ಎಂಬುದನ್ನು ಅವರು ಪ್ರದರ್ಶನ ಮಾಡಿಕೊಂಡಿದ್ದಾರೆ. ಬಡವರಿಗೆ ರಕ್ಷಣೆ ಇಲ್ಲ, ಲೂಟಿ‌ ಮಾಡುವವರಿಗೆ ಕೊಳ್ಳೆ ಹೊಡೆಯುವವರ ಪರವಾಗಿ ಸರಕಾರ ಇದೆ ಎಂಬುದನ್ನು ಇವರು ನಿರೂಪಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕಿಡಿ ಕಾರಿದರು.
Kalahamsa Infotech private limitedಡಿಸಿಎಂ ಬಗ್ಗೆ ಹೆಚ್ಡಿಕೆ ವ್ಯಂಗ್ಯ

ಸಂಪುಟ ಸಭೆಯಿಂದ ಹೊರಗುಳಿದ ಡಿಕೆಶಿ ಬಗ್ಗೆ ವ್ಯಂಗ್ಯವಾಡಿದ ಮಾಜಿ ಮುಖ್ಯಮಂತ್ರಿಗಳು; ಡಿಸಿಎಂ ಎಂತಹ ದೊಡ್ಡತನ ತೋರಿಸಿದ್ದಾರೆ ಅಂದರೆ, ತಮ್ಮ ಕೇಸಿನ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆ ಆಗುತ್ತದೆ ಎಂದು ಅವರು ಕ್ಯಾಬಿನೆಟ್ ಸಭೆಯಿಂದ ಹೊರಗೆ ಉಳಿದಿದ್ದರು. ಪಾಪ.. ಅವರು ಸಂಪುಟ ಸಭೆಗೂ ಹೋಗಿಲ್ಲ. ಅವರ ಸಹಕಾರಕ್ಕೆ ಅಭಿನಂದಿಸಲೇಬೇಕು ಎಂದು ಟಾಂಗ್ ನೀಡಿದರು.

ಡಿಸಿಎಂ ಅವರು ಕಳೆದ 3 ದಿನಗಳ ಹಿಂದೆ ಹಿರಿಯ ವಕೀಲರ ಸಭೆ ಕರೆದು, ಈ ಕೇಸಿನಿಂದ ಯಾವ ರೀತಿ ರಕ್ಷಣೆ ಪಡೆಯಬೇಕು ಎಂದು ಚರ್ಚೆ ಮಾಡಿದ್ದಾರೆ. ನಮಗೆ ಎಲ್ಲಾ ಮಾಹಿತಿ ಇದೆ. ಮೊನ್ನೆಯೇ ಈ ವಿಚಾರ ನನ್ನ ಗಮನಕ್ಕೆ ಬಂತು. ಸಂಪುಟ ಸಭೆಯ ತೀರ್ಮಾನ, ಈ ನಡವಳಿಕೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತದೆ. ಈ ವಿಚಾರವನ್ನು ಮುಂದಿನ ಸದನದಲ್ಲಿ ಚರ್ಚೆ ಮಾಡೋಣ ಎಂದರು ಅವರು.

ರಾಜ್ಯ ಸರಕಾರದ ಮೇಲೆ ಡಿಕೆಶಿ ಒತ್ತಡ ಹಾಕಿದ್ದಾರಾ? ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದ ಅವರು; ಇಲ್ಲಿ ಒತ್ತಡದ ಪ್ರಶ್ನೆ ಅಲ್ಲ, ಸರಕಾರ ಇರೋದು ಕಾನೂನು ವ್ಯಾಪ್ತಿಯಲ್ಲಿ ಕೆಲಸ ಮಾಡುವುದಕ್ಕೆ. ತಿಳಿವಳಿಕೆ ಇರುವವರೇ ಇಂತಹ ನಿರ್ಣಯ ಮಾಡಿರೋದು ಸರಕಾರಕ್ಕೆ ಛೀಮಾರಿ ಹಾಕಿದಂತೆ ಇದೆ ಇದು. ಒಂದು ಬಾರಿ ಆದೇಶ ಮಾಡಿದ ಮೇಲೆ ಬದಲಾವಣೆ ಮಾಡಲು ಆಗುವುದಿಲ್ಲ ಎಂದರು.
ಅಕ್ರಮ ಆಸ್ತಿ ಕೇಸನ್ನು ಸಿಬಿಐನಿಂದ ವಾಪಸ್ ಪಡೆದು ಲೋಕಾಯುಕ್ತ ಅಥವಾ ಸ್ಥಳೀಯ ಪೊಲೀಸರಿಂದ ತನಿಖೆ ಮಾಡಲು ಆಗುತ್ತದೆಯೇ? ಲೋಕಾಯುಕ್ತ ಅಥವಾ ಪೊಲೀಸರು ಈ ತನಿಖೆ ಮಾಡಲು ಸಾಧ್ಯವೇ? ಹಿಂದಿನ ಸರಕಾರವು ಸಿಬಿಐಗೆ ವಹಿಸಲು ಸ್ಪೀಕರ್ ಅನುಮತಿ ಪಡೆದಿರಲಿಲ್ಲ ಎನ್ನುವುದಾದರೆ, ಇವರು ಸ್ಪೀಕರ್ ಅವರಿಂದ ಅನುಮತಿ ಪಡೆದಿದ್ದಾರಾ? ಇದೆಲ್ಲಾ ಕೇವಲ ಸಬೂಬುಗಳು ಮಾತ್ರ. ತನಿಖೆ ಮುಂದುವರಿಸಿ ಎಂದು ಈಗಾಗಲೇ ಕೋರ್ಟ್ ಆದೇಶ ಆಗಿದೆ. ಈಗ ಸ್ಪೀಕರ್ ಅನುಮತಿ ಪಡೆದರೂ ಸಿಬಿಐನಿಂದ ಕೇಸ್ ವಾಪಸ್ ಪಡೆಯಲು ಆಗುತ್ತಾ? ಎಂದು ರಾಜ್ಯ ಸರಕಾರಕ್ಕೆ ಪ್ರಶ್ನೆಗಳ ಸುರಿಮಳೆಗರೆದರು ಮಾಜಿ ಮುಖ್ಯಮಂತ್ರಿಗಳು.

ಇದೇ ಸಿದ್ದರಾಮಯ್ಯ ಅವರು ಐದು ವರ್ಷ ಸಿಎಂ ಆಗಿದ್ದಾಗ, ಲೋಕಾಯುಕ್ತ ರದ್ದು ಮಾಡಿ, ಎಸಿಬಿ ರಚನೆ ಮಾಡಿ ಎಲ್ಲಾ ಅಕ್ರಮಗಳನ್ನು ಮುಚ್ಚಿ ಹಾಕಿದರು. ಇಂಥ ಕೆಲಸದಲ್ಲಿ ಸಿದ್ದರಾಮಯ್ಯ ನಿಪುಣರು. ಈ ಬಗ್ಗೆ ಅವರಿಗೆ ಬಹಳ ಅನುಭವ ಇದೆ. ಹಾಗಾಗಿ ಕಾನೂನು ವ್ಯವಸ್ಥೆಯಲ್ಲಿ ಹೊಸ ಹೆಜ್ಜೆ ಹಾಕಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ACBBENGALURUD K ShivakumarH D Kumara SwamyKannada News WebsiteLatest News KannadaRamanagarSiddharamaiahಎಚ್.ಡಿ. ಕುಮಾರಸ್ವಾಮಿಎಸಿಬಿಡಿ.ಕೆ. ಶಿವಕುಮಾರ್ರಾಮನಗರಲೋಕಾಯುಕ್ತಸಿದ್ದರಾಮಯ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರತಿ ಹಂತದಲ್ಲಿ ಬಳಸಿದಾಗ ಮಾತ್ರ ಕನ್ನಡ ಭಾಷೆ ಉಳಿಯಲು ಸಾಧ್ಯ: ನಾಗರಾಜ ಅಭಿಮತ

Next Post

ಮೈಸೂರು | ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಉತ್ಥಾನದ್ವಾದಶಿ ಆಚರಣೆ

kalpa News

kalpa News

Next Post
ಮೈಸೂರು | ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಉತ್ಥಾನದ್ವಾದಶಿ ಆಚರಣೆ

ಮೈಸೂರು | ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಉತ್ಥಾನದ್ವಾದಶಿ ಆಚರಣೆ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL