No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Sunday, August 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ರೈತರೇ ಗಾಬರಿಯಾಗಬೇಡಿ ಕರ್ನಾಟಕಕ್ಕೆ ಮಿಡತೆ ಹಾವಳಿ ಸಾಧ್ಯತೆ ತೀರಾ ಕಡಿಮೆ: ಸಚಿವ ಬಿ.ಸಿ.ಪಾಟೀಲ್

kalpa News by kalpa News
May 28, 2020
in Small Bytes, ಬೆಂಗಳೂರು ನಗರ
0
ಕೃಷಿಕರಿಗೆ ಕ್ರೆಡಿಟ್ ಕಾರ್ಡ್ ನೀಡಿಕೆ: ಕೃಷಿ ಸಚಿವ ಬಿ.ಸಿ. ಪಾಟೀಲ್

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೋಲಾರದಲ್ಲಿ ಕಂಡುಬಂದಿರುವುದು ಸಾಮಾನ್ಯ ಎಕ್ಕೆಗಿಡದ ಮಿಡತೆಯಾಗಿದ್ದು, ಲೋಕ್ಟಸ್ ಮಿಡತೆಗೂ ಇದಕ್ಕೂ ಸಂಬಂಧವಿಲ್ಲ.ಕರ್ನಾಟಕಕ್ಕೆ ಲಾಕ್ಟಸ್ ಮಿಡತೆ ಹಾವಳಿ ಸಾಧ್ಯತೆ ತೀರಾ ಕಡಿಮೆಯಿದ್ದು, ರೈತರು ಯಾವುದೇ ಕಾರಣಕ್ಕೂ ಗಾಬರಿಗೊಳ್ಳುವ ಅವಶ್ಯಕತೆಯಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಮಧ್ಯಪ್ರದೇಶ, ಮಹಾರಾಷ್ಟ್ರ ರಾಜಸ್ಥಾನ ಸೇರಿದಂತೆ ಇತರೆ ರಾಜ್ಯಗಳಲ್ಲಿ ರೈತರನ್ನು ಬಾಧಿಸಿರುವ ಲೋಕ್ಟಸ್ ಮಿಡತೆ ಹಾವಳಿ ರಾಜ್ಯಕ್ಕೆ ಬಾಧಿಸದಂತೆ ತೆಗೆದುಕೊಳ್ಳಬಹುದಾದ ಕ್ರಮಗಳು ಮುನ್ನೆಚ್ಚರಿಕೆಗಳ ಕುರಿತು ಕೃಷಿ ಸಚಿವರಾದ ಬಿ.ಸಿ. ಪಾಟೀಲರು ವಿಕಾಸಸೌಧದಲ್ಲಿಂದು, ಕೃಷಿ ಅಧಿಕಾರಿಗಳು, ಕೃಷಿ ವಿಶ್ವವಿದ್ಯಾಲಯದ ಸಂಶೋಧಕರು ಹಾಗೂ ಕೀಟಶಾಸ್ತ್ರಜ್ಞರೊಂದಿಗೆ ಮಹತ್ವದ ಸಭೆ ನಡೆಸಿದರು.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೃಷಿಸಚಿವರು, ಮಿಡತೆ ಗಾಳಿಯನ್ನು ಅವಲಂಬಿಸಿರುವುದರಿಂದ ಗಾಳಿಯ ದಿಕ್ಕು ಬದಲಾದಂತೆ ಮಿಡತೆಗಳು ಪಸರಿಸುವುದು ಬದಲಾಗುತ್ತದೆ. ಕೃಷಿ ತಜ್ಞರ ಪ್ರಕಾರ ಕರ್ನಾಟಕಕ್ಕೆ ಮಿಡತೆ ಹಾವಳಿ ಸಾಧ್ಯತೆ ಕಡಿಮೆಯಿದೆ. ಮೇ.26 ರಿಂದ ಎರಡು ದಿನಗಳು ಮಾತ್ರ ದಕ್ಷಿಣಾಭಿಮುಖವಾಗಿ ಗಾಳಿ ಬೀಸುತ್ತಿದ್ದು, ಎರಡು ದಿನಗಳ ಬಳಿಕ ಅಂದರೆ ಮೇ.30 ರಷ್ಟೊತ್ತಿಗೆ ಅದರ ದಿಕ್ಕು ಬದಲಾಗುವ ಸಾಧ್ಯತೆಯಿದೆ. ಹೀಗಾಗಿಮಿಡತೆಗಳು ಕರ್ನಾಟಕ ಮುಟ್ಟುವ ಸಾಧ್ಯತೆ ಕಡಿಮೆಯಿದೆ. ಬೀದರ್ ಗಡಿಯಿಂದ ಮಿಡತೆಗಳು ಸುಮಾರು 450 ಕಿ.ಮೀ. ದೂರದಲ್ಲಿರುವುದರಿಂದ ರಾಜ್ಯ ಮುಟ್ಟುವ ಸಾಧ್ಯತೆ ಬಹಳಷ್ಟು ಕಡಿಮೆ ಇದೆ ಎಂದರು.

ಗಾಳಿಯ ದಿಕ್ಕು ಬದಲಾಗಿದೆ
ಒಂದು ವೇಳೆ ಕಾರಣಾಂತರಗಳಿಂದ ಗಾಳಿ ದಿಕ್ಕು ಬದಲಾಗದೇ ಮಿಡತೆಗಳು ಕರ್ನಾಟಕ ಮುಟ್ಟಿದಲ್ಲಿ ಯಾವ ಮುಂಜಾಗ್ರತೆ ವಹಿಸಬೇಕು ಎನ್ನುವ ಬಗ್ಗೆ ಡೆವಲಪ್ಮೆಂಟ್ ಕಮಿಷನರ್ ಅವರ ನೇತೃತ್ವದಲ್ಲಿ ಸಭೆ ನಡೆಸಿದ್ದು, ಎಸ್ ಓಪಿ(STANDARD OPERATING PROCEDURE)ಸಿದ್ಧಗೊಳಿಸಲಾಗಿದೆ. ಅದೇ ರೀತಿ ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ಮುನ್ನೆಚ್ಚರಿಕೆ ನೀಡಿದ್ದು, ಅಗತ್ಯಬಿದ್ದಲ್ಲಿ ಅವಶ್ಯಕ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಅವಶ್ಯಕಕ್ರಮಗಳಲ್ಲಿ ಮುಖ್ಯವಾಗಿ ಮೊದಲನೆಯದಾಗಿ ರೈತರು ತಮ್ಮ ಜಮೀನುಗಳಲ್ಲಿ ಮಿಡತೆ ಬಾದೆ ಕಂಡುಬಂದಲ್ಲಿ ಶಬ್ದ ಮಾಡುವ ಮೂಲಕ ದೂರ ಓಡಿಸಬಹುದು. ಇಂತಹ ಬೆಳೆಗಳು ದುಬಾರಿ ಬೆಳೆಗಳಾಗಿದ್ದಲ್ಲಿ ಅವುಗಳ ರಕ್ಷಣೆಗೋಸ್ಕರ ಬೇವು ಆಧಾರಿತ ಕೀಟನಾಶಕಗಳನ್ನು ರೈತರೇ ಸಿಂಪಡಿಸಿಕೊಳ್ಳಬೇಕಾಗುತ್ತದೆ. ಮಿಡತೆಗಳು ಅವುಗಳ ಹಾರುವ ಕ್ರಮದಲ್ಲಿ ಸಾಮಾನ್ಯವಾಗಿ ಸಂಜೆ ವೇಳೆಗೆ ಯಾವುದಾದರೂ ಮರ ಗಿಡಗಳ ಮೇಲೆ ಕೂರುವುದು ಹೆಚ್ಚಿರುವುದರಿಂದ ಅಂತಹ ಸಂದರ್ಭಗಳಲ್ಲಿ ಇವುಗಳ ಹತೋಟಿಗಾಗಿ ಕ್ಲೋರ್ ಫೈರಿಫಾಸ್ ಅಥವಾ ಲಾಮ್ಡಾಸಿಹಲೋತ್ರಿನ್ ಔಷಧಿಗಳನ್ನು ಸರಿಯಾದ ಪ್ರಮಾಣದಲ್ಲಿ ಸಿಂಪಡಣೆ ಮಾಡುವುದು ಎಂದು ತೀರ್ಮಾನಿಸಲಾಗಿದೆ. ಇದಕ್ಕಾಗಿ ಅವಶ್ಯಕವಾದಂತಹ ಸಿಂಪಡಣಾ ವ್ಯವಸ್ಥೆಗಾಗಿ ಫೈರ್ ಇಂಜಿನ್ಸ್, ಟ್ರ್ಯಾಕ್ಟರ್ ಚಾಲಿತ ಸ್ಪ್ರೇಯರ್ ಗಳು ಹಾಗೂ ಡ್ರೋಣ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತ ಕ್ರಮವಾಗಿ ಮಹಾರಾಷ್ಟ್ರದ ಕೃಷಿ ಆಯುಕ್ತರೊಂದಿಗೆ ನಮ್ಮ ರಾಜ್ಯದ ಕೃಷಿ ಆಯುಕ್ತರು ಪ್ರತಿಗಂಟೆಗೊಮ್ಮೆ ಮಿಡತೆಗಳ ಚಲನವಲನಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ನಿರ್ವಹಣಾ ಕ್ರಮಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು.

ನಿರ್ವಹಣಾ ಕ್ರಮಗಳು: ಜಿಲ್ಲಾಮಟ್ಟದಲ್ಲಿ ಕೀಟನಾಶಕ ನಿರ್ವಹಣಾ ಸಮಿತಿ
ಜಿಲ್ಲಾಮಟ್ಟದಲ್ಲಿ ಕೀಟನಾಶಕ ನಿರ್ವಹಣೆ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಮಿತಿಯಿದ್ದು, ಸಮಿತಿಯಲ್ಲಿ ಜಂಟಿ ಕೃಷಿ ನಿರ್ದೇಶಕರು,ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ತೋಟಗಾರಿಕಾ ಉಪನಿರ್ದೇಶಕರು, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆಯನ್ನೊಳಗೊಂಡ ಸಮಿತಿಯಿದೆ. ಮಿಡತೆಗಳು ಹಗಲಿಗಿಂತ ರಾತ್ರಿವೇಳೆ ಹೆಚ್ಚು ಸಂಚರಿಸುವುದರಿಂದ ರಾತ್ರಿವೇಳೆ ಮರ,ಗಿಡಗಳ ಮೇಲೆ ಔಷಧಿ, ಕ್ರಿಮಿನಾಶಕ ಸಿಂಪಡಣೆ ಮಾಡಿ ನಾಶಮಾಡಬಹುದಾಗಿದೆ.

ಗಾಳಿಯ ದಿಕ್ಕು ಆಧರಿಸಿ ಲೋಕ್ಟಸ್ ಮಿಡತೆಗಳು ಚಲಿಸುವುದರಿಂದ ಇವುಗಳ ಚಲನವಲನಗಳ ಮೇಲೆ ನಿಗಾವಹಿಸಲು ಭಾರತೀಯ ಹವಾಮಾನ ಸಂಸ್ಥೆಯಿಂದ ಸತತವಾಗಿ ಗಾಳಿಯ ವೇಗ ಹಾಗೂ ದಿಕ್ಕಿನ ಮಾಹಿತಿ ಸಂಗ್ರಹಿಸಿ ಅದರಾಧರದ ಮೇಲೆ ಮುನ್ಸೂಚನೆ ನೀಡುವುದು. ಹೋಗುತ್ತಿರುವ ದಾರಿಯಲ್ಲಿ ಹೊಗೆ ಹಚ್ಚಿಸಿ ಮಿಡತೆಗಳನ್ನು ಮಂಕಾಗಿಸಿ ಶಬ್ದಮಾಡಿ ನಾಶ ಮಾಡುವುದು.ರಾತ್ರಿ ಮರದಲ್ಲಿ ಇವು ವಿಶ್ರಮಿಸುವುದರಿಂದ ರಾಸಾಯನಿಕ ಸಿಂಪಡಣೆ ಬಳಸಿ ನಿಯಂತ್ರಿಸಬಹುದು.

ರಾಜ್ಯಮಟ್ಟದ ತಂಡ
ಮುಂಜಾಗ್ರತಾ ಕ್ರಮವಾಗಿ ರಾಜ್ಯಮಟ್ಟದಲ್ಲಿ ಕೃಷಿ ಮತ್ತು ತೋಟಗಾರಿಕಾ ನಿರ್ದೇಶಕರು ಹಾಗೂ ಉನ್ನತಮಟ್ಟದ ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಲಾಗಿದ್ದು, ಈ ತಂಡ ಬೀದರ್, ಕೊಪ್ಪಳ, ಗುಲ್ಬರ್ಗಾ, ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡಿ ಮಿಡತೆ ನಿಯಂತ್ರಣ ಮುನ್ನೆಚ್ಚರಿಕೆ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಲು ಸೂಚನೆ ನೀಡಲಾಗಿದೆ. ರಾಜ್ಯವಿಪತ್ತು ನಿರ್ವಹಣಾ ನಿಧಿಯಲ್ಲಿ ಶೇ.25 ರಷ್ಟನ್ನು ಮಿಡತೆ ನಿರ್ವಹಣೆಗೆ ಬಳಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದರು.

ಈ ಸಂದರ್ಭದಲ್ಲಿ ತೋಟಗಾರಿಕಾ ಸಚಿವ ನಾರಾಯಣಗೌಡ ಸಹ ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: BENGALURUGrasshopperKannadaNewsWebsiteLatestNewsKannadaMinister B C Patilಕೀಟನಾಶಕಕೃಷಿಮಿಡತೆಸಚಿವ ಬಿ.ಸಿ. ಪಾಟೀಲ್
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡ ನಿರ್ಲಕ್ಷ್ಯ ಮಾಡುವ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸಚಿವ ಸುರೇಶ್ ಕುಮಾರ್

Next Post

ಇನ್ನು ಮುಂದೆ ಹೊರರಾಜ್ಯದಿಂದ ಬಂದವರಿಗೆ ಕೇವಲ 7 ದಿನ ಸಾಂಸ್ಥಿಕ ಕ್ವಾರಂಟೈನ್: ಡಿಸಿ ಶಿವಕುಮಾರ್

kalpa News

kalpa News

Next Post
ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಇನ್ನು ಮುಂದೆ ಹೊರರಾಜ್ಯದಿಂದ ಬಂದವರಿಗೆ ಕೇವಲ 7 ದಿನ ಸಾಂಸ್ಥಿಕ ಕ್ವಾರಂಟೈನ್: ಡಿಸಿ ಶಿವಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL