Wednesday, August 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

father’s day special: ಈಕೆಯ ಸಾಧನೆಯ ಹಾದಿಗೆ ತಂದೆಯೇ ಮೈಲಿಗಲ್ಲು

June 17, 2018
in Special Articles
0 0
0
Share on facebookShare on TwitterWhatsapp
Read - 3 minutes

ಸಾಮಾನ್ಯವಾಗಿ ಹೆಣ್ಣುಮಕ್ಕಳಿಗೆ ತಂದೆ ಎಂದರೆ ಎಲ್ಲಿಲ್ಲದ ಮಮತೆ ಜತೆಗೆ ವಿಶೇಷ ಗೌರವ. ಬಾಲ್ಯದಿಂದ ಮೊದಲ್ಗೊಂಡು ದಡ ಸೇರಿಸುವವರೆಗೂ ತನ್ನ ಬೆನ್ನೆಲುಬಾಗಿ ನಿಂತು ತನ್ನದೇ ಆದ ಕೊಡುಗೆ ನೀಡುವ ತಂದೆಯೆಂಬ ಮಹಾನ್ ವ್ಯಕ್ತಿತ್ವವನ್ನು ಬಹುಷಃ ಹೆಣ್ಣುಮಕ್ಕಳು ಜೀವಿತಾವಧಿಯವರೆಗೂ ಮರೆಯಲಾರರು. ಅಂತಹುದೇ ತಂದೆಯ ಹಠ, ಮಗಳ ಸಾಧನೆಯ ಬಗ್ಗೆ ತಿಳಿಸಲು ಹೊರಟಿದೆ ಈ ಸ್ಟೋರಿ.

ಹೌದು, ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ತಂದೆ, ತನ್ನ ಮಗಳನ್ನು ಮಗನಂತೆ ಬೆಳೆಸಿ, ತನ್ನಷ್ಟೇ ತೃಪ್ತಿಪಟ್ಟುಕೊಳ್ಳದೆ ಉನ್ನತ ಕೆಲಸ ಪಡೆದು, ಸಮಾಜಕ್ಕೆ ಕೊಡುಗೆ ನೀಡುವ ಶಕ್ತಿಯಾಗಲಿ ಎಂದು ಹಠತೊಟ್ಟಿದ್ದು, ಆ ಹಠವನ್ನು ಸವಾಲಾಗಿ ತೆಗೆದುಕೊಂಡು ಸಾಧನೆ ಮಾಡುವ ಮೂಲಕ ಇತರರಿಗೆ ಮಾದರಿಯಾಗುವ ಜತೆಗೆ ಸಾಮಾಜಿಕ ಕೆಲಸಗಳನ್ನು ಮಾಡಿ ಸೈ ಎನಿಸಿಕೊಂಡ ಮಗಳ ವೃತ್ತಾಂತಕ್ಕೆ ಸಾಕ್ಷಿಯಾಗಿದೆ ಈ ಕಥಾನಕ.

ಈ ಕಥೆ ಬೇರೆ ಯಾರದೂ ಅಲ್ಲ, ನಮ್ಮಲ್ಲೇ ಓಡಾಡಿಕೊಂಡು ಬೆಳೆದು ಇದೀಗ ಸಾಫ್ಟ್ ವೇರ್ ಪ್ರಪಂಚದಲ್ಲಿ ನೆಲೆಕಂಡುಕೊಂಡಿರುವ ಆರ್. ನವ್ಯಶ್ರೀ ಹಾಗೂ ಅವರ ತಂದೆ ರಾಮಚಂದ್ರರಾವ್ ಅವರದ್ದು. ಎಚ್ ಸಿಎಲ್ ನಲ್ಲಿ ಸಾಫ್ಟ್ ವೇರ್ ಇಂಜಿನೀಯರ್ ಆಗಿರುವ ನವ್ಯಶ್ರೀ ಸಮಾಜ ಸೇವೆಗಳಲ್ಲಿಯೂ ಸಹ ತೊಡಗಿಸಿಕೊಂಡಿದ್ದಾರೆ. ರಾಜಕಾರಣದ ಮೂಲಕ ತನ್ನ ಆಕಾಂಕ್ಷೆಗಳನ್ನು ಈಡೇರಿಸುವ ಮಹತ್ವಾಕಾಂಕ್ಷೆಯೊಂದಿಗೆ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿಯೂ ಸಹ ಅವರು ಸ್ಪರ್ಧೆ ಮಾಡಿ ಅಧಿಕೃತವಾಗಿ ರಾಜಕಾರಣ ಪ್ರವೇಶ ಮಾಡಿದ್ದರು. ತಾಲೂಕಿನಾದ್ಯಂತ ಚಿರಪರಿಚಿತವಾಗಿರುವ ಅವರ ಸಾಧನೆಯ ಹೆಜ್ಜೆಗಳ ಬಗ್ಗೆ ಕಲ್ಪ ನ್ಯೂಸ್ ಸಂದರ್ಶಿಸಿದ ಭಾಗ ಇಲ್ಲಿದೆ.

ಕಲ್ಪ: ಸಾಮಾನ್ಯ ಕುಟುಂಬದಲ್ಲಿ ಜನಿಸಿದ ನೀವು, ಸವಾಲುಗಳ ನಡುವೆಯೂ ಈ ಹಂತಕ್ಕೆ ಬರುತ್ತೀರೆಂಬ ನಂಬಿಕೆ ಇತ್ತೆ?

ನವ್ಯ: ಖಂಡಿತ ಇತ್ತು. ನನ್ನ ಈ ಬೆಳವಣಿಗೆಗೆ ಪ್ರಮುಖ ಕಾರಣ ತಂದೆ ರಾಮಚಂದ್ರರಾವ್. ಚಿಕ್ಕಂದಿನಿಂದಲೂ ಅಪಾರ ಪ್ರೀತಿ, ಮಗನಂತೆ ಬೆಳೆಸಿ ನನ್ನ ದಡ ಮುಟ್ಟಿಸಲು ಅಹರ್ನಿಷಿ ದುಡಿದಿದ್ದಾರೆ. ಪ್ರತಿ ಹಂತದಲ್ಲಿಯೂ ಹೆಗಲುಕೊಟ್ಟಿದ್ದಾರೆ, ಹುರಿದುಂಬಿಸುತ್ತಿದ್ದಾರೆ. ಅವರ ಆಸೆಯನ್ನು ನನಸು ಮಾಡುವ ಸಂದರ್ಭದಲ್ಲಿ ಅನೇಕ ಸವಾಲುಗಳನ್ನು ಎದುರಿಸಿದ್ದೇನೆ, ಅಂತಿಮವಾಗಿ ಸಾಫ್ಟ್ ವೇರ್ ಇಂಜಿನಿಯರ್ ಕನಸನ್ನು ನನಸು ಮಾಡುವ ಜತೆಗೆ ತಾಲೂಕಿನಲ್ಲಿ ಸಾಮಾಜಿಕ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡು ಪರಿಚಿತಳಾಗಿದ್ದೇನೆ.

ಕಲ್ಪ: ಎಲ್ಲ ಸಾಧನೆಗಳ ಹಿಂದೆ ತಂದೆ ಶ್ರಮವಿದೆ ಎನ್ನುತ್ತೀರಿ, ಅವರ ಸಹಕಾರ ಹೇಗಿತ್ತು?

ನವ್ಯ: ಬಾಲ್ಯದಿಂದಲೂ ಅವರ ಸಹಕಾರ ಅದ್ಭುತವಾಗಿತ್ತು. ಶಾಲೆಗೆ ತಮ್ಮ ಸೈಕಲ್ ನಲ್ಲಿ ಕರೆತಂದು ಬಿಟ್ಟು ಹೋದರೆ ಮಧ್ಯಾಹ್ನದ ವೇಳೆಗೆ ಬಾಕ್ಸ್ ಜೊತೆಯಲ್ಲಿ ಹಾಜರಾಗುತ್ತಿದ್ದರು, ಸಂಜೆ ವಾಪಸ್ ಕರೆದೊಯ್ಯುವ ಸಂದರ್ಭದಲ್ಲಿ ಕೇಳಿದ್ದನ್ನು ಕೊಡಿಸಿ, ಮನೆ ತಲುಪಿಸಿ ಅವರ ಕರ್ತವ್ಯಕ್ಕೆ ತೆರಳುತ್ತಿದ್ದರು, ಒತ್ತಡದ ನಡುವೆಯೂ ನನ್ನ ಶಾಲಾ ದಿನಗಳಲ್ಲಿ ಸಾಕಷ್ಟು ಕಷ್ಟಪಟ್ಟರು. ಮಗ, ಮಗಳು ಇಬ್ಬರೂ ನೀನೇ, ನನಗಿಂತ ಉನ್ನತ ಸ್ಥಾನದಲ್ಲಿ ನೀನು ಕೂರಬೇಕೆಂದು ಹೇಳುತ್ತಲೇ ಇದ್ದರು, ಅದು ಆಗುವವರೆಗೂ ಜತೆಯಲ್ಲಿಯೇ ನಿಂತರು.

ಕಲ್ಪ: ಇಂಜಿನಿಯರ್ ಮಾಡಬೇಕೆಂಬ ಹಠ ಅವರಲ್ಲಿ ಏಕಿತ್ತು?

ನವ್ಯ: ಸರ್ಕಾರಿ ಕೆಲಸದಲ್ಲಿ ಮೇಲು, ಕೀಳು ಎಂಬ ಸನ್ನಿವೇಶ ಸಾಮಾನ್ಯ. ಹಾಗಾಗಿ ತನ್ನ ಹುದ್ದೆಯ ಮೇಲಿನವರು ನಡೆದುಕೊಳ್ಳುತ್ತಿದ್ದ ರೀತಿ ಅವರಿಗೆ ಸಾಕಷ್ಟು ಬೇಸರ ತರಿಸಿತ್ತು. ತನ್ನ ಮಗಳು ಆ ಸ್ಥಿತಿ ಅನುಭವಿಸಬಾರದೆಂಬ ಉದ್ದೇಶ ಅವರಲ್ಲಿತ್ತು. ಹಾಗಾಗಿ ಇಂಜಿನಿಯರ್ ಮಾಡಿ, ನನ್ನನ್ನೂ ಅಧಿಕಾರಿ ಮಟ್ಟದಲ್ಲಿ ನೋಡಲು ಅವರಿಗೆ ಸಾಕಷ್ಟು ಆಸೆಯಿತ್ತು, ಅವರ ಆಸೆಗೆ ತಕ್ಕಂತೆ ಎಲ್ಲ ಸವಾಲುಗಳನ್ನು ಮೆಟ್ಟಿ 2013ರಲ್ಲಿ ಸಾಫ್ಟ್ ವೇರ್ ದೈತ್ಯ ವಿಪ್ರೋದಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಕನಸಿನ ಆರಂಭಕ್ಕೆ ಮುನ್ನುಡಿ ಬರೆದೆ.

ಕಲ್ಪ: ಅವರ ಕನಸನ್ನು ನನಸು ಮಾಡಿದ್ದು ಸರಿ, ಸಮಾಜ ಸೇವೆಯತ್ತ ಮನಸ್ಸು ಏತಕ್ಕೆ ಹರಿಯಿತು?

ನವ್ಯ: ಚಿಕ್ಕಂದಿನಿಂದಲೂ ಸಮಾಜಕ್ಕೆ ಏನಾದರೂ ಸೇವೆ ಸಲ್ಲಿಸಬೇಕೆಂಬ ತುಡಿತ ನನ್ನಲ್ಲಿತ್ತು. ಅದಕ್ಕೆ ವೇದಿಕೆಯಾಗಿದ್ದು ಪತ್ರಿಕೋದ್ಯಮ. 2011ರಲ್ಲಿ ಪತ್ರಿಕೋದ್ಯಮಕ್ಕೆ ಬಂದ ನಾನು ಅಲ್ಲಿಂದ ಸಮಾಜದಲ್ಲಿನ ಸಮಸ್ಯೆಗಳು, ಅಸಮಾನತೆ ಬಗ್ಗೆ ಸಾಕಷ್ಟು ತಿಳಿದುಕೊಂಡೆ. ತಂದೆಯ ಕನಸು ನನಸು ಮಾಡಿದ ನಂತರ ಸಮಾಜಕ್ಕೆ ಕೊಡುಗೆ ನೀಡುವ ಮನಸ್ಸು ಮಾಡಿದೆ. ಅದರಂತೆ ನನ್ನದೇ ಸಂಸ್ಥೆ ಕಟ್ಟಿಕೊಂಡ ಅದರ ಮೂಲಕ ಹಲವು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಾಮಾಜಿಕ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದೇನೆ.

ಕಲ್ಪ: ರಾಜಕಾರಣ ನಿಮಗೆ ಬೇಕಿತ್ತಾ? ತಂದೆಯ ಪಾತ್ರವೇನು?

ನವ್ಯ: ರಾಜಕಾರಣವೆಂದರೆ ನನಗೆ ಪಂಚಚ್ರಾಣ, ರಾಜಕಾರಣಿಯಾಗಬೇಕೆಂಬ ಆಸೆ ಚಿಗುರೊಡೆದಿದ್ದೇ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡ ನಂತರ. ಸಮಾಜದ ಸೇವೆ ಮಾಡಲು ಅಧಿಕಾರ ಸಿಕ್ಕರೆ ಜನರಿಗೆ ಹತ್ತಿರವಾಗಬಹುದೆಂಬ ಮಹತ್ವಾಕಾಂಕ್ಷೆ ನನ್ನದಾಗಿತ್ತು. ರಾಜಕಾರಣಕ್ಕೆ ಪ್ರವೇಶ ಮಾಡಬೇಕೆಂಬ ಆಸೆಗೆ ಇನ್ನಷ್ಟು ಪುಷ್ಟಿ ನೀಡಿದ್ದು ಅಭಿಮಾನಿಗಳ ಬೆಂಬಲ. ಹೌದು ನೂರಾರು ಮಂದಿ ರಾಜಕಾರಣಕ್ಕೆ ನಿಮ್ಮಂತಹ ಯುವ ಪ್ರತಿಭೆ ಬೇಕು ಎಂದು ಹೇಳಿದ್ದು ಇಷ್ಟು ಬೇಗನೇ ರಾಜಕಾರಣಕ್ಕೆ ಬರಲು ಕಾರಣವಾಯಿತು.

ರಾಜಕಾರಣಕ್ಕೆ ಬರಬೇಕೆಂದು ನಿರ್ಧಾರ ಮಾಡಿದಾಗ ಪ್ರಮುಖ ಪಕ್ಷಗಳು ನನ್ನನ್ನು ತಮ್ಮ ಪಕ್ಷಕ್ಕೆ ಬರುವಂತೆ ಆಹ್ವಾನ ಮಾಡಿದವು. ಆದರೆ ಆ ಬಗ್ಗೆ ನಿರ್ಧಾರ ಮಾಡುವಷ್ಟರಲ್ಲಿ ವಿಧಾನಸಭೆ ಚುನಾವಣೆ ಎದುರಾಯಿತು. ರಾಜಕಾರಣಕ್ಕೆ ಎಂಟ್ರಿ ಕೊಡಲು ಇದು ಸದಾವಕಾಶ ಎಂದು ತಿಳಿದು ಚುನಾವಣೆಯಲ್ಲಿ ಸ್ಪರ್ಧೆಯನ್ನೇ ಮಾಡಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಮಾಡಿದ್ದೇನೆ.

ಇನ್ನು ತಂದೆಯ ಪಾತ್ರದ ಬಗ್ಗೆ ಹೇಳುವುದಾದರೆ ರಾಜಕಾರಣ ಪ್ರವೇಶ ಅವರಿಗೆ ಸಾಕಷ್ಟು ಖುಷಿ ತಂದುಕೊಟ್ಟಿತ್ತು. ಅವರ ಕನಸಿನ ನಂತರ ಹೊಸ ಕನಸು ಟಿಸಿಲೊಡೆದದ್ದು ಅವರಿಗೆ ಹೇಳಲಸಾಧ್ಯವಾಗಿತ್ತು. ತಮ್ಮ ವಂಶದಲ್ಲೇ ಯಾರೂ ರಾಜಕಾರಣಕ್ಕೆ ಬರಲಿಲ್ಲ ನೀನಾದರೂ ಬಂದೆಯಲ್ಲ ಮಗಳೇ ಎಂದು ಬೆನ್ನುತಟ್ಟಿದ್ದರು. ಆದರೆ ಅನಾರೋಗ್ಯದ ಕಾರಣ ಅವರು ನನ್ನೊಂದಿಗೆ ಹೆಚ್ಚು ಪಾಳ್ಗೊಳ್ಳಲು ಸಾಧ್ಯವಾಗಲಿಲ್ಲ, ಆ ನೋವು ಇಂದಿಗೂ ಅವರಲ್ಲಿದೆ.

ಕಲ್ಪ: ಚುನಾವಣೆ ಅನುಭವ ಹೇಗಿತ್ತು?

ನವ್ಯ: ಮೊದಲಾಗಿ ಚುನಾವಣೆಯ ವಿಧಾನ, ಸವಾಲಿಗೆ ಪ್ರತಿಸವಾಲು ಹೇಗೆ ಹೂಡಬೇಕು, ಚುನಾವಣೆಯ ಎಲ್ಲ ಆಯಾಮಗಳ ಬಗ್ಗೆ ಖುದ್ದಾಗಿ ಅರಿತುಕೊಂಡಿದ್ದೇನೆ. ಜನರ ನಾಡಿ ಮಿಡಿತ, ಅವರ ಆಕಾಂಕ್ಷೆಗಳೇನು, ಮನಸ್ಸಿನಲ್ಲಿ ಏನಿದೆ ಎಂಬ ಬಗ್ಗೆ ಪ್ರತಿ ಗ್ರಾಮಕ್ಕೆ ಪ್ರತಿ ಮನೆಗೆ ತೆರಳಿ ತಿಳಿದುಕೊಂಡೆ ಹಾಗೆಯೇ ಅಲ್ಲಲ್ಲಿ ನಕಾರಾತ್ಮಕ ಬೆಳವಣಿಗೆಗಳ ಬಗ್ಗೆಯೂ ತಿಳಿದುಕೊಂಡೆ. ಜನರ ಮನಸ್ಸನ್ನು ಹೇಗೆ ಗೆಲ್ಲಬೇಕೆಂಬ ತಂತ್ರವನ್ನು ಚುನಾವಣೆಯಲ್ಲಿ ಕಂಡುಕೊಂಡಿದ್ದೇನೆ. ಮುಂದೆ ಅದಕ್ಕೆಲ್ಲಾ ತಯಾರಾಗುತ್ತೇನೆ.

ಇದು, ನವ್ಯಶ್ರೀ ಅವರ ಸಂದರ್ಶನದ ಪೂರ್ಣ ಪಾಠ. ಪ್ರತಿ ಹಂತದಲ್ಲಿಯೂ ಅವರ ತಂದೆಯ ಸಹಕಾರ ಇದೆ ಎಂಬುದನ್ನು ಅವರು ಖಡಾಖಂಡಿತವಾಗಿ ಒಪ್ಪಿಕೊಳ್ಳುತ್ತಾರೆ. ಈ ಮೂಲಕ ಪ್ರತಿ ಮಗಳ ಹಿಂದೆ ತಂದೆಯ ಪಾತ್ರವಿದೆ ಎಂಬುದಕ್ಕೆ ಉತ್ತಮ ನಿದರ್ಶನವಾಗಿದೆ.

Tags: Fathers dayKalpa NewsNavyaSrisoftware engineer
Previous Post

Highlights: 15.06.2018

Next Post

ಸನಾತನಂ ಪರೀಕ್ಷೆ ತೆಗೆದುಕೊಳ್ಳಿ: ಧರ್ಮ ಉಳಿವಿಗೆ ಸಹಕರಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸನಾತನಂ ಪರೀಕ್ಷೆ ತೆಗೆದುಕೊಳ್ಳಿ: ಧರ್ಮ ಉಳಿವಿಗೆ ಸಹಕರಿಸಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ಆ.15-16 | ಗುಡ್ಡೇಕಲ್‍ ಜಾತ್ರೆ | ಏನೆಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ?

August 13, 2025

ವಿದ್ಯಾರ್ಥಿಗಳಿಗೆ ಸಮತೋಲಿತ ಅಧ್ಯಯನ ಬಹಳ ಮುಖ್ಯ: ಪ್ರೊ. ಶರತ್ ಅನಂತಮೂರ್ತಿ

August 13, 2025

ಬೀದರ್ | ಹಿಂದು ವಿರೋಧಿ ಷಡ್ಯಂತ್ರ ಹೆಣೆದವರ ವಿರುದ್ಧ ಎಸ್ ಐಟಿ ರಚಿಸಲು ಶಾಸಕ ಬೆಲ್ದಾಳೆ ಒತ್ತಾಯ

August 13, 2025

ಆ.15ರಂದು ಸೊರಬದಿಂದ ಈಸೂರಿನವರೆಗೆ ಬೈಕ್ ರ್‍ಯಾಲಿ: ಚಿದಾನಂದಗೌಡ

August 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ಆ.15-16 | ಗುಡ್ಡೇಕಲ್‍ ಜಾತ್ರೆ | ಏನೆಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ?

August 13, 2025

ವಿದ್ಯಾರ್ಥಿಗಳಿಗೆ ಸಮತೋಲಿತ ಅಧ್ಯಯನ ಬಹಳ ಮುಖ್ಯ: ಪ್ರೊ. ಶರತ್ ಅನಂತಮೂರ್ತಿ

August 13, 2025

ಬೀದರ್ | ಹಿಂದು ವಿರೋಧಿ ಷಡ್ಯಂತ್ರ ಹೆಣೆದವರ ವಿರುದ್ಧ ಎಸ್ ಐಟಿ ರಚಿಸಲು ಶಾಸಕ ಬೆಲ್ದಾಳೆ ಒತ್ತಾಯ

August 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!