ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಪಶು ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಫೆ.27 ಹಾಗೂ 28ರಂದು ADVANCES IN DIAGNOSIS AND TREATMENT OF RUMINAL DISORDERS OF BOVINES ಎಂಬ ವಿಷಯದ ಮೇಲೆ ಎರಡು ದಿನಗಳ ಅಂತರಾಷ್ಟ್ರೀಯ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಕಾರ್ಯಾಗಾರದ ಸಂಘಟನಾ ಕಾರ್ಯದರ್ಶಿಗಳಾಗಿ ಡಾ. ಎನ್.ಬಿ. ಶ್ರೀಧರ್, ಕಾರ್ಯಾಗಾರದಲ್ಲಿ ವಿವಿಧ ರಾಜ್ಯಗಳ 40 ಕ್ಕಿಂತಲೂ ಹೆಚ್ಚು ಪಶುವೈದ್ಯರು ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಾಗಾರವು ವಿವಿಧ ಶಸ್ತ್ರ ಚಿಕಿತ್ಸೆಗಳನ್ನು ಕೈಗೊಳ್ಳುವಲ್ಲಿ, ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುವೈದ್ಯರ ಆತ್ಮವಿಶ್ವಾಸವನ್ನು ಹೆಚ್ಚಿಸಲಿದ್ದು, ಈ ಮೂಲಕ ರೈತರಿಗೆ ದೊರಕುವ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಲಿದೆ. ಈ ಕಾರ್ಯಕ್ರಮವನ್ನು ಏರ್ಪಡಿಸುತ್ತಿರುವ್ಯದರಿಂದ ವಿಶ್ವವಿದ್ಯಾಲಯದ ಧ್ಯೇಯ ವಾಕ್ಯವಾದ ರೈತ ಸ್ನೇಹಿ ಹಾಗೂ ಗ್ರಾಮೀಣಾಭಿವೃದ್ದಿಯ ಧ್ಯೇಯ ಎಂಬ ಉದ್ದೇಶ ಈಡೇರಲಿದೆ ಎಂದರು.
ಈ ಅಂತಾರಾಷ್ಟ್ರೀಯ ಕಾರ್ಯಾಗಾರವು ಕಾಮನ್ ವೆಲ್ತ್ ವೆಟರಿನರಿ ಅಸೋಸಿಯೇಷನ್ ಮತ್ತು ಇಂಡಿಯನ್ ಬ್ಯಯಾಟ್ರಿಶಿಯನ್ಸ್ ಅಸೋಸಿಯೇಷನ್, ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇವರ ಜಂಟಿ ಸಹಯೋಗದಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗದಲ್ಲಿ ನಡೆಯುತ್ತಿದ್ದು, ಆಸ್ಟ್ರೇಲಿಯಾದಿಂದ ಸಂಪನ್ಮೂಲ ವಿಷಯ ತಜ್ಞರಾದ ಡಾ.ನತಾಶಾ ಲೀಸ್ ಹಾಗೂ ಡಾ.ಮಾರ್ಕ್ಸ್ ಬೂತ್ ಇವರ ಮೇಲ್ವಿಚಾರಣೆಯಲ್ಲಿ ಜರುಗಲಿದೆ.
ಇದೇ ಸಂದರ್ಭದಲ್ಲಿ ಪ್ರಾಣಿಗಳಲ್ಲಿ ಹುಚ್ಚುನಾಯಿ ಕಾಯಿಲೆಯ ರೋಗಪತ್ತೆಯ ಬಗ್ಗೆಯೂ ಸಹ ಪ್ರತ್ಯೇಕ ಕಾರ್ಯಾಗಾರವು ನಡೆಯಲಿದೆ. ಈ ಎರಡೂ ಕಾರ್ಯಾಗಾರಗಳನ್ನು ಪ್ರೊ.ಎಚ್.ಡಿ. ನಾರಾಯಣಸ್ವಾಮಿ, ಕುಲಪತಿಗಳು, ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಕೆ.ಸಿ.ವೀರಣ್ಣ, ಸಿವಿಎ ಕಾರ್ಯಕಾರಿ ನಿರ್ದೇಶಕರಾದ ಡಾ. ಅಬ್ದುಲ್ ರಹಮಾನ್, ಐಬಿಎ ಅಧ್ಯಕ್ಷರಾದ ಡಾ. ಎಸ್. ಯತಿರಾಜ್ ಇವರು ಭಾಗವಹಿಸಲಿದ್ದು ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗದ ಡೀನ್, ಡಾ. ಪ್ರಕಾಶ್ ನಡೂರ್ ಇವರು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.
ಈ ಕಾರ್ಯಾಗಾರದ ಸಂಘಟನಾ ಕಾರ್ಯದರ್ಶಿಗಳಾಗಿ ಡಾ. ಎನ್.ಬಿ. ಶ್ರೀಧರ ಹಾಗೂ ಡಾ. ಶ್ರೀಕೃಷ್ಣ ಇಸಳೂರು ಮತ್ತು ಸಹ ಸಂಘಟನಾ ಕಾರ್ಯದರ್ಶಿಗಳಾಗಿ ಡಾ. ರವಿ ರಾಯದುರ್ಗ್ ಹಾಗೂ ಡಾ. ಅರುಣ್ ಎಸ್.ಜೆ. ಇವರು ಕಾರ್ಯ ನಿರ್ವಹಿಸಲಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post