ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿಕಾರಿಪುರ: ಪುರಸಭೆಯ ಐವರು ಸದಸ್ಯರು ನೀಡಿ ಸಂಸದ ಬಿ.ವೈ ರಾಘವೇಂದ್ರ ಅವರ ಸಮ್ಮುಖದಲ್ಲಿ ಇಂದು ಬಿಜೆಪಿ ಸೇರಿದ್ದಾರೆ.
ಕಾಂಗ್ರೆಸ್ ಸದಸ್ಯರಾದ ರಮೇಶ್, ಉಮಾವತಿ, ಪಕ್ಷೇತರ ಸದಸ್ಯರಾದ ಪ್ರಶಾಂತ್, ಸಾಧಿಕ್ ಹಾಗೂ ರೇಖಾಬಾಯಿ ಅವರುಗಳು ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಪಕ್ಷ ಸೇರ್ಪಡೆ ಸಂದರ್ಭದಲ್ಲಿ ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ರೇವಣ್ಣಪ್ಪ, ಶಿಕಾರಿಪುರ ನಗರ ಅಧ್ಯಕ್ಷ ಮೋಹನ್ ಇತರರು ಉಪಸ್ಥಿತರಿದ್ದರು.
Get In Touch With Us info@kalpa.news Whatsapp: 9481252093
















