No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Sunday, June 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸಾವಿರ ಸಂವತ್ಸರಕ್ಕೂ ಒಬ್ಬರೇ ಸರ್.ಎಂ.ವಿ.

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 15, 2018
in Special Articles
0
Share on FacebookShare on TwitterShare on WhatsApp

ವ್ಯಕ್ತಿಗಳಿಗಿಂತ ವಿಚಾರ ಶ್ರೇಷ್ಠ, ವಿಚಾರಗಳಿಗಿಂತ ವ್ಯಕ್ತಿ ಮಾಡಿದ ಸಕರ್ಮ ಶ್ರೇಷ್ಠ ಎಂಬ ಮಾತು ಬಹುಶಃ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರಂತವರನ್ನೇ ನೆನೆದು ಹೇಳಿದಂತಿದೆ. ಇಂದು ಎರಡು ರಾಜ್ಯಗಳ ಬಹುಪಾಲು ಮಡಿಲಿಗೆ ಕುಡಿಯಲು ಶುದ್ದ ನೀರು ಸಿಗುತ್ತಿದೆ ಎಂದರೆ ಅದು ಸರ್.ಎಂ.ವಿ.ರವರ ನಿಸ್ವಾರ್ಥ ಕೊಡುಗೆಯೇ. ಈ ಕಾರಣದಿಂದಾಗಿ ಅವರ ಪ್ರತಿ ಕಾರ್ಯವೂ ಶ್ಲಾಘನೀಯ ಮತ್ತು ಸ್ಮರಣೀಯ.

ಮೂಲತಃ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯವರಾದ ಇವರು ಜನಿಸಿದ್ದು 1861ರ ಸೆಪ್ಟೆಂಬರ್ 15ರಂದು. ತಂದೆ ಮೋಕ್ಷಗುಂಡಂ ಶ್ರೀನಿವಾಸ ಶಾಸ್ತ್ರಿ, ವೃತ್ತಿಯಲ್ಲಿ ಸಂಸ್ಕೃತ ವಿದ್ವಾಂಸರು. ತಾಯಿ ವೆಂಕಟಲಕ್ಷಮ್ಮ, ಗೃಹಿಣಿ. ಇವರಿಬ್ಬರೂ ಸಹ ಸರಳತೆ, ಸಜ್ಜನಿಕೆಗೆ ಹೆಸರಾದವರು.

ಆರ್ಥಿಕವಾಗಿ ಬಡವರಾಗಿದ್ದರೂ ಅವರು ಮೈಗೂಡಿಸಿಕೊಂಡಿದ್ದ ಸಂಸ್ಕಾರ ಶ್ರೀಮಂತವಾಗಿತ್ತು. ಸರ್.ಎಂ.ವಿ. ತಮ್ಮ ಹನ್ನೆರಡರ ಪ್ರಾಯದಲ್ಲಿ ತಂದೆಯನ್ನು ಕಳೆದುಕೊಂಡರು. ಆದರೂ ಎದೆಗುಂದದೇ ಬದುಕು ಎಸೆದ ಸವಾಲುಗಳನ್ನು ಧೈರ್ಯದಿಂದ ಎದುರಿಸಿದರು.

ತಮ್ಮ ಪ್ರಾಥಮಿಕ ಶಿಕ್ಷಣವನ್ನು ಚಿಕ್ಕಬಳ್ಳಾಪುರದಲ್ಲಿ ಪೂರೈಸಿ, ಹೈಸ್ಕೂಲ್ ಶಿಕ್ಷಣವನ್ನು ಬೆಂಗಳೂರಿನಲ್ಲಿ ಪೂರ್ಣಗೊಳಿಸಿದರು. 1881ರಲ್ಲಿ ತಮ್ಮ ಬಿ.ಎ. ಹಾನರ್ರ್‌ಸ್ ಪದವಿಯನ್ನು ಪಡೆದ ನಂತರ 1884ರಲ್ಲಿ ಪುಣೆಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನೀಯರ್ ಪದವಿ ಪಡೆದರು.

ನಂತರ ಮುಂಬಯಿಯ ಪಿಡಬ್ಲ್ಯೂಡಿಯಲ್ಲಿ ಸಹ ತಂತ್ರಜ್ಞರಾಗಿ ಕೆಲಸಕ್ಕೆ ಸೇರಿಕೊಂಡರು. ಇದೇ ಸಂದರ್ಭದಲ್ಲಿ ನಾಸಿಕ್, ಖಾಂಡೇಶ್, ಪುಣೆ ಸೇರಿದಂತೆ ಹಲವಾರು ಕಡೆಗಳಲ್ಲಿ ತಮ್ಮ ಸೇವೆ ಸಲ್ಲಿಸಿದರು.

ಭಾರತೀಯ ನೀರಾವರಿ ಆಯೋಗಕ್ಕೆ ಸೇರಿದ ನಂತರ ಇವರಿಗೆ ದಕ್ಷಿಣ ಪ್ರಾಂತ್ಯ ನೀರಾವರಿ ವ್ಯವಸ್ಥೆಯನ್ನು ಸುಧಾರಿಸುವ ಯೋಜನೆಗಳನ್ನು ಜಾರಿಗೆ ತರುವಂತೆ ಕೇಳಿಕೊಳ್ಳಲಾಯಿತು. ನಂತರ ಸಿಂಧು ನದಿಯಿಂದ ಸುಕ್ಕೂರು ಎಂಬ ಹಳ್ಳಿಗೆ ನೀಡಿದ್ದ ಜಲಮಾರ್ಗದಲ್ಲಿ ನೀರು ಪೋಲಾಗದಂತಹ ವ್ಯವಸ್ಥೆ ಮಾಡಿದರು. ಇವರ ಈ ಕಾರ್ಯವನ್ನು ಇಡಿಯ ಭಾರತ ಹಾಡಿ ಹೊಗಳಿತ್ತು.

ನಂತರದ ದಿನಗಳಲ್ಲಿ ವಿಶಾಖಪಟ್ಟಣಂ ಸೇರಿದಂತೆ ದೇಶದ ಹಲವು ಕಡೆಗಳಲ್ಲಿ ಕಾರ್ಯ ನಿರ್ವಹಿಸಿದ ಇವರು 1909ರಲ್ಲಿ ಮೈಸೂರು ಸಂಸ್ಥಾನದ ಮುಖ್ಯ ತಂತ್ರಜ್ಞರಾಗಿ, 1912ರಲ್ಲಿ ಮೈಸೂರು ಪ್ರಾಂತ್ಯದ ದಿವಾನರಾಗಿ ಸೇರ್ಪಡೆಗೊಂಡರು. ಸುಮಾರು ಏಳು ವರ್ಷಗಳ ಕಾಲ ದಿವಾನರಾಗಿದ್ದ ಇವರ ಅವಧಿಯ ಕೈಗೊಂಡ ಎಲ್ಲ ಕಾರ್ಯಕ್ರಗಳು ಸಹ ಸ್ಮರಿಸುವಂತಹದ್ದು ಮಾತ್ರವಲ್ಲಿ ಇಡಿಯ ಭಾರತ ಎಂದೆಂದಿಗೂ ನೆನಪಿಟ್ಟುಕೊಳ್ಳಬೇಕಾದ್ದು.

1924ರಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕೃಷ್ಣರಾಜ ಸಾಗರ ಅಣೆಕಟ್ಟು ಕಟ್ಟುವ ಮೂಲಕ ಲಕ್ಷಾಂತರ ಜನರ ದಾಹ ತೀರಿಸಿದ ಆಧುನಿಕ ಭಗೀರಥ ಸರ್.ಎಂ.ವಿ.
ಇಂದು ಅಂದು ಕಟ್ಟಿದ ಕಟ್ಟಡ ನಾಳೆಯವರೆಗೂ ಗಟ್ಟಿಯಾಗಿ ನಿಲ್ಲುತ್ತದೋ ಇಲ್ಲವೇ ಎಂಬಂತಹ ತಂತ್ರಜ್ಞರಿರುವ ಕಾಲವಿದು. ತಂತ್ರಜ್ಞಾನ ಮುಂದುವರೆದರೂ ಈಗಿನ ತಂತ್ರಜ್ಞರ ಕಾರ್ಯವೈಖರಿ ಅಷ್ಟಕ್ಕಷ್ಟೆ. ಇಂತಹುದರಲ್ಲಿ ಬರಿಯ ಮಾನವಶಕ್ತಿಯ ಸಹಯೋಗದಲ್ಲಿ ಕಟ್ಟಿರುವ ಕೃಷ್ಣರಾಜ ಸಾಗರ ಅಣೆಕಟ್ಟು 94 ವರ್ಷವಾದರು ಒಂದಿಂಚೂ ಅಲುಗಾಡದೇ ಸ್ಥಿರವಾಗಿದೆಯೆಂದರೇ ಸರ್.ಎಂ.ವಿ. ಅವರ ಬುದ್ದಿಮತ್ತೆ, ಕಾರ್ಯವೈಖರಿ ಎಂತಹುದೆಂದು ತಿಳಿಯುತ್ತದೆ.

ಇಡಿಯ ರಾಷ್ಟ್ರವು ಮತ್ತೆ ಮತ್ತೆ ನೆನಪಿಸಿಕೊಳ್ಳುವಂತಹ ವ್ಯಕ್ತಿತ್ವದವರು. ಪ್ರಾಮಾಣಿಕತೆಗೆ ಮತ್ತೊಂದು ಹೆಸರೇ ಸರ್.ಎಂ.ವಿ ತಮ್ಮದೇ ಆದ ತತ್ವಗಳನ್ನು, ಮೌಲ್ಯಗಳನ್ನು ಇರಿಸಿಕೊಂಡು, ಉಸಿರಿರುವ ತನಕವೂ ತಾಯಿ ಭಾರತಿ, ತಾಯಿ ಭುವನೇಶ್ವರಿಯ ಸೇವೆ ಮಾಡಿದವರು.

ಇವರ ಪರಿಶ್ರಮದ ಫಲವಾಗಿ 1917ರಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯವೊಂದು ಜನ್ಮತಾಳಿತು. ಇವರ ಸ್ಮರಣಾರ್ಥ ಆ ಮಹಾವಿದ್ಯಾಲಯಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಎಂದು ಮರುನಾಮಕರಣ ಮಾಡಲಾಯಿತು. ಪುಣೆ ತಾಂತ್ರಿಕ ಮಹಾವಿದ್ಯಾಲಯವೂ ಗೌರವಾರ್ಥ ಇವರ ವಿಗ್ರಹವೊಂದನ್ನು ಪ್ರತಿಷ್ಟಾಪನೆ ಮಾಡಿತು.

ಪೂಜ್ಯರ ನಿಸ್ವಾರ್ಥ ಸೇವೆಗಾಗಿ ಭಾರತ ಸರ್ಕಾರವು ದೇಶದ ಸರ್ವೋಚ್ಛ ಗೌರವ ಭಾರತರತ್ನವನ್ನು ಮರಣೋತ್ತರವಾಗಿ ನೀಡಿ ಗೌರವಿಸಿದೆ. ಇದರಿಂದಾಗಿ ಬಹುಶಃ ಆ ಗೌರವವೇ ಹೆಮ್ಮೆಪಟ್ಟಿರಬೇಕು. ಇಂತಹ ಅಪ್ರತಿಮ ವ್ಯಕ್ತಿತ್ವ ಮುಕುಟಕ್ಕೆ ಗರಿಯಾಗಲು.

ಇಷ್ಟೆಲ್ಲಾ ಮಹೋನ್ನತ ಕಾರ್ಯಗಳನ್ನು ಮಾಡಿದವರು 102 ವರ್ಷಗಳ ಕಾಲ ಸುದೀರ್ಘ, ಶ್ರೇಷ್ಠ ತುಂಬು ಜೀವನವನ್ನು ನಡೆಸಿ 1962ರ ಎಪ್ರಿಲ್ 14ರಂದು ಇಹಲೋಕ ತ್ಯಜಿಸಿದರು. ಸಮಾಜಕ್ಕಾಗಿ ತಮ್ಮ ಸರ್ವಸ್ವವನ್ನೂ ಸಮರ್ಪಿಸಿದ ಸರ್.ಎಂ.ವಿ. ಸಾವಿರ ಸಂವತ್ಸರಕ್ಕೆ ಒಬ್ಬರು. ಇಂತಹ ಶ್ರೇಷ್ಠ ವ್ಯಕ್ತಿತ್ವ ಧರೆಗಿಳಿದ ಪುಣ್ಯದಿನವಿಂದು. ಮತ್ತೆ ಮತ್ತೆ ಅವರ ಕಾರ್ಯಗಳನ್ನು ನೆನಪಿಸಿಕೊಳ್ಳುತ್ತ ಇವರಂತೆಯೇ ಬಾಳಲು ಪ್ರಯತ್ನಿಸೋಣ.

-ತೇಜಶ್ರೀ ವೆಂಕಟೇಶ್,
 ಪುತ್ತೂರು

 

Tags: Bharat RatnaKRS DamM. VisvesvarayamysoreSir M Vಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯಸರ್.ಎಂ.ವಿ.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಯಿಯಂತೆ ಅಲ್ಲ, ಕಜ್ಜಿ ನಾಯಿಯಂತೆ ಎಳೆಯಬೇಕಿತ್ತು ಉಗ್ರನ ಹೆಣವನ್ನು

Next Post

ಕುರಲ್‌ ಪರ್ಬ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕುರಲ್‌ ಪರ್ಬ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Kerala Free Bus Travel for Women Extended to Interstate Routes

ಸ್ತ್ರೀಯರಿಗೆ ಕೇರಳ ಬಸ್’ನಲ್ಲಿ ಕಾಸರಗೋಡು-ಮಂಗಳೂರು-ಪುತ್ತೂರಿಗೆ ಉಚಿತ ಪ್ರಯಾಣ

June 14, 2026
Davanagere Student Dies by Suicide Near Shivamogga

ಶಿವಮೊಗ್ಗ | ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

June 14, 2026
Narayana Multy Speciality Clinic Shimoga

ಶಿವಮೊಗ್ಗ | ನಗರದ ಹೃದಯ ಭಾಗದಲ್ಲಿ ಕೀಮೋಥೆರಪಿ, ಎಂಡೋಸ್ಕೋಪಿ ಸೌಲಭ್ಯಗಳು ಲಭ್ಯ

June 14, 2026
Shivamogga Police Firing on Rowdy Sheeter

ಪೊಲೀಸರ ಕಠಿಣ ಕ್ರಮ | ಶಿವಮೊಗ್ಗದಲ್ಲಿ ರೌಡಿಶೀಟರ್ ಕಾಲಿಗೆ ಗುಂಡೇಟು

June 14, 2026
Uttaradi Matha Swamiji

ಹಿರಿಯರ ಮಾರ್ಗದರ್ಶನದಿಂದಲೇ ಸುಸಂಸ್ಕೃತ ಸಮಾಜ ನಿರ್ಮಾಣ | ಸತ್ಯಾತ್ಮ ತೀರ್ಥಶ್ರೀ

June 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL