No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Saturday, May 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದಲ್ಲಿ ಸನಾತನ ಧರ್ಮವನ್ನು ಘಾಸಿಗೊಳಿಸುವ ಶಕ್ತಿಗಳು ಹೆಚ್ಚುತ್ತಿವೆ | ಸಂಸದ ಕಾಗೇರಿ ಆತಂಕ

ಬೆಂಗಳೂರು | ಹವ್ಯಕ ಸಭಾಭವನದಲ್ಲಿ 'ಸಂಸ್ಕಾರೋತ್ಸವ' ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 31, 2025
in ಬೆಂಗಳೂರು ನಗರ
0
ರಾಜ್ಯದಲ್ಲಿ ಸನಾತನ ಧರ್ಮವನ್ನು ಘಾಸಿಗೊಳಿಸುವ ಶಕ್ತಿಗಳು ಹೆಚ್ಚುತ್ತಿವೆ | ಸಂಸದ ಕಾಗೇರಿ ಆತಂಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಷ್ಟ್ರದ ಉದ್ದಗಲಕ್ಕೆ ಸನಾತನ ಧರ್ಮ ಸಂಸ್ಕೃತಿಯನ್ನು ಘಾಸಿಗೊಳಿಸುವ ಶಕ್ತಿಗಳು ಹೆಚ್ಚುತ್ತಿವೆ. ಇದು ಹಿಂದಿನಿಂದಲೂ ಇದೆ. ಭಾರತಕ್ಕೆ ಇದು ಹೊಸತಲ್ಲವಾದರೂ, ಇದನ್ನು ತಡೆಯದಿದ್ದರೆ ಮುಂದಿನ ಪೀಳಿಗೆಯ ಮೇಲೆ ಇದು ಪರಿಣಾಮವನ್ನು ಬಿರುತ್ತದೆ.
-ವಿಶ್ವೇಶ್ವರ ಹೆಗಡೆ ಕಾಗೇರಿ

ಪುನರ್ಜನ್ಮ ಮತ್ತು ಕರ್ಮದ ಫಲದ ಮೇಲೆ ನಂಬಿಕೆ ಇದ್ದರೆ ಸಂಸ್ಕಾರಯುತ ಜೀವನ ಸಹಜವಾಗಿ ಬರುತ್ತದೆ. ಸನಾತನ ಸಂಸ್ಕೃತಿಯಲ್ಲಿ ಇದು ರಕ್ತಗತವಾಗಿ ಬೆಳೆದು ಬಂದಿದೆ. ಮುಂದಿನ ಜನಾಂಗಕ್ಕೂ ಸಂಸ್ಕಾರದ ತಿಳಿವಳಿಕೆ ಮೂಡಿಸುವ ನಿಟ್ಟಿನಲ್ಲಿ ಸಂಸ್ಕಾರೋತ್ಸವ ಮಾದರಿ ಕಾರ್ಯ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಬೆಂಗಳೂರಿನ ಮಲ್ಲೇಶ್ವರಂನ ಹವ್ಯಕ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ‘ಸಂಸ್ಕಾರೋತ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ, ತೃತೀಯ ವಿಶ್ವಹವ್ಯಕ ಸಮ್ಮೇಳನದ ಸ್ಮರಣ ಸಂಚಿಕೆ ‘ಸಹಸ್ರಚಂದ್ರ’ ಬಿಡುಗಡೆ ಮಾಡಿ ಮಾತನಾಡಿದ ಕಾಗೇರಿಯವರು, ಹರಿದು ಹಂಚಿಹೋಗಿದ್ದ ಪುಟ್ಟ ದೇಶ ಇಸ್ರೇಲ್ ಮತ್ತೆ ಒಂದಾಗಿ ಇಂದು ಸಂಘಟನೆಗೊಂಡು ಜಗತ್ತಿನಲ್ಲಿ ಶಕ್ತಿಶಾಲಿಯಾಗಿ ಪುಟಿದ್ದೆದಿದೆ. ಅದೇ ರೀತಿ ಹವ್ಯಕರು ಎಲ್ಲೇ ಇದ್ದರೂ ಸಂಘಟನೆಯನ್ನು ಬೆಳೆಸಬೇಕು ಎಂದರು.

ಸಮಾಜದಲ್ಲಿ ಪ್ರಭಾವಿಯಾಗಿ ಗುರುತಿಸಿಕೊಳ್ಳಬೇಕು. ಜಗತ್ತು ಜ್ಞಾನಾಧಾರಿತವಾಗಿ ವೇಗವಾಗಿ ಬೆಳೆಯುತ್ತಿದೆ. ಹವ್ಯಕ ಸಮಾಜ ಜ್ಞಾನದ ಮೂಲಕವೇ ಸಮಾಜದಲ್ಲಿ ಗುರುತಿಸಿಕೊಂಡಿದ್ದು, ಈ ಸಮಾಜವು ಇನ್ನಷ್ಟು ಸಂಘಟನೆಯಾಗಬೇಕಿದೆ. ಡಾ.ಗಿರಿಧರ ಕಜೆಯವರ ನಾಯಕತ್ವದಲ್ಲಿ ಹವ್ಯಕ ಸಂಘಟನೆಯು ಸಂಸ್ಕಾರಯುತವಾಗಿ ಇನ್ನಷ್ಟು ಗಟ್ಟಿಯಾಗಬೇಕು ಎಂದ ಅವರು, ಒಂದು ಸಮಾಜದ ಸಂಖ್ಯೆ ಕುಸಿಯುತ್ತಿರುವುದು ಅಪಾಯದ ಸಂಕೇತವಾಗಿದೆ. ತಾಂತ್ರಿಕವಾಗಿ ಮುಂದುವರಿದ ಈ ಕಾಲಘಟ್ಟದಲ್ಲಿ ಸಂಘಟನೆಯನ್ನು ಸಂಸ್ಕಾರಯುತವಾಗಿ ಬೆಳೆಸುವುದು ಸವಾಲಿನಿಂದ ಕೂಡಿದೆ ಎಂದು ಅಭಿಪ್ರಾಯಪಟ್ಟರು.ರಾಷ್ಟ್ರದ ಉದ್ದಗಲಕ್ಕೆ ಸನಾತನ ಧರ್ಮ ಸಂಸ್ಕೃತಿಯನ್ನು ಘಾಸಿಗೊಳಿಸುವ ಶಕ್ತಿಗಳು ಹೆಚ್ಚುತ್ತಿವೆ. ಇದು ಹಿಂದಿನಿಂದಲೂ ಇದೆ. ಭಾರತಕ್ಕೆ ಇದು ಹೊಸತಲ್ಲವಾದರೂ, ಇದನ್ನು ತಡೆಯದಿದ್ದರೆ ಮುಂದಿನ ಪೀಳಿಗೆಯ ಮೇಲೆ ಇದು ಪರಿಣಾಮವನ್ನು ಬಿರುತ್ತದೆ ಎಂದು ಎಚ್ಚರಿಸಿದ ಅವರು,
ಹವ್ಯಕ ಸಮಾಜದಲ್ಲಿ ಸಂಸ್ಕಾರಕ್ಕೆ ಕೊರತೆ ಇಲ್ಲ. ವೇದ,ಸಂಸ್ಕೃತದಿಂದ ಜ್ಞಾನ ಪಡೆದುಕೊಳ್ಳುತ್ತಿದ್ದಾರೆ. ಆದರೆ, ಷೋಡಷ ಸಂಸ್ಕಾರ ನೀಡುವ ಸಂದರ್ಭದಲ್ಲಿ ವಿದ್ವಾಂಸರು ಶ್ಲೋಕ, ಮಂತ್ರದಲ್ಲಿನ ಸಾರವನ್ನು ತಿಳಿಸಿ ಹೇಳುವ ಕೆಲಸವನ್ನು ಮಾಡಬೇಕು. ಆಗ ಜನ ಸಾಮಾನ್ಯರು ಅಂಧಶ್ರದ್ಧೆಯ ಮೂಲಕ ಅನುಸರಿಸುವ ಪದ್ಧತಿ ತಪ್ಪುತ್ತದೆ. ಜನ ಸಾಮಾನ್ಯರು ಕೂಡ ವೇದ ಮಂತ್ರಗಳಲ್ಲಿನ ಜ್ನಾನವನ್ನು ಪಡೆಯಲು ಸಾಧ್ಯ ಎಂದು ಹೇಳಿದರು.

ದೇಶದಲ್ಲಿ ಹಾಗೂ ರಾಜ್ಯದಲ್ಲಿ ಯಾವ ಸಮುದಾಯದ ಸಂಖ್ಯೆ ಎಷ್ಟು? ಎಂಬ ಚರ್ಚೆ ನಡೆದಿದೆ. ಹವ್ಯಕ ಸಮುದಾಯದ ಸಂಖ್ಯೆಯು ಕೆಲವೇ ಲಕ್ಷದಷ್ಟಿದೆ. ವನವಾಸಿ ಜನರಿಗಿಂತಲೂ ಕಡಿಮೆ ಜನಸಂಖ್ಯೆ ಹವ್ಯಕ ಸಮಾಜದ್ದು. ಹೀಗಾಗಿ ಅಲ್ಪಸಂಖ್ಯಾತರ ಸ್ಥಾನಮಾನ ನಿಜವಾಗಿಯೂ ಲಭಿಸಬೇಕಿರುವುದು ಹವ್ಯಕರಿಗೆ ಎಂದು ಪ್ರತಿಪಾದಿಸಿದರು.

ಅಭ್ಯಾಗತರಾದ ಪಂಡಿತ ವಿನಾಯಕ ತೊರವಿ ಮಾತನಾಡಿ, ಹವ್ಯಕ ಸಮಾಜದ ವ್ಯಕ್ತಿ ಮತ್ತು ಸಮಾಜದ ಸಂಸ್ಕಾರದ ಶಕ್ತಿ ಎಲ್ಲ ಸಮುದಾಯಕ್ಕೆ ಮಾದರಿಯಾಗಿದೆ. ಸಂಸ್ಕಾರೋತ್ಸವದ ಮೂಲಕ ಹವ್ಯಕರಲ್ಲಿನ ಸಂಸ್ಕಾರ ಪುನಶ್ಚೇತನಗೊಳಿಸುವ ಕೆಲಸ ಶ್ಲಾಘನೀಯ ಎಂದರು.

ಶತಾವಧಾನಿ ಡಾ. ಆರ್. ಗಣೇಶ್ ಅವರು ‘ಸಂಸ್ಕಾರಗಳ ಮಹತ್ವ ಹಾಗೂ ಪ್ರಸ್ತುತತೆ’ ಕುರಿತಾಗಿ ಮಾತನಾಡಿ, ಸನಾತನ ಧರ್ಮದ ಕುರಿತಾದ ಶ್ರದ್ಧೆ ಹಾಗೂ ರಾಷ್ಟ್ರಭಕ್ತಿಯ ವಿಚಾರದಲ್ಲಿ ಹವ್ಯಕ ಸಮುದಾಯ ಬೇರೆಲ್ಲರಿಗಿಂತ ದೊಡ್ದಮಟ್ಟದಲ್ಲಿ ತೊಡಗಿಸಿಕೊಂಡಿದೆ. ಇದು ಅತಿಶಯೋಕ್ತಿಯಾಗಿರದೇ ವಾಸ್ತವವಾಗಿದೆ. ವೀಣೆಯನ್ನು ಎಷ್ಟೇ ಸರಿಯಾಗಿ ಶೃತಿಮಾಡಿದ್ದರೂ ಕಾಲ ಕಳೆದಂತೆ ಶೃತಿ ಬದಲಾಗುತ್ತದೆ. ಸಿಹಿ ಮೊಸರು ಕೆಲವು ಕಾಲದ ನಂತರ ಹುಳಿಯಾಗುತ್ತದೆ. ಕಾಲದ ಪ್ರಭಾವ ಎಲ್ಲರ ಮೇಲೂ ಇದ್ದು, ನಾವು ನಿಂತ ನೀರಾಗಿರದೇ ನಮ್ಮ ಸಂಸ್ಕೃತಿ ಸಂಸ್ಕಾರಗಳನ್ನು ಉಳಿಸಿಕೊಳ್ಳಬೇಕು ಎಂದರು.
ಚಿಂತಕ ಚಕ್ರವರ್ತಿ ಸೂಲಿಬೆಲೆ ‘ಜಪ ತಪಗಳೊಂದಿಗೆ ಆಧುನಿಕ ಜೀವನ’ ಕುರಿತಾಗಿ ಮಾತನಾಡಿ, ಇಂದು ನಮ್ಮ ಶ್ರದ್ಧಾಸ್ಥಾನಗಳ ಮೇಲೆ ಆಕ್ರಮಣಗಳು ನಡೆಯುತ್ತಿದ್ದು, ನಮ್ಮ ನಂಬಿಕನ್ನು ಅಳಿಸಿವ ಕೆಲಸಗಳು ನಡೆಯುತ್ತಿವೆ. ನಮ್ಮ ತಲೆಮಾರು, ನಮ್ಮ ತಂದೆಯ ತಲೆಮಾರಿನ ನಂಬಿಕೆಯನ್ನು ಅಳಿಸುವುದು ಸುಲಭವಲ್ಲ. ಆದರೆ ಮಕ್ಕಳ ಮನಸ್ಸಿನಲ್ಲಿ ನಮ್ಮ ಧರ್ಮದ ಶ್ರದ್ಧೆಯನ್ನು ದುರ್ಬಲಗೊಳಿಸುವ ಕೆಲಸ ನಡೆಯುತ್ತಿದ್ದು, ಈ ಬಗ್ಗೆ ಸಮಾಜ ಜಾಗೃತವಾಗಬೇಕು. ನಮ್ಮ ಸಂಸ್ಕೃತಿ ಸಂಸ್ಕಾರಗಳನ್ನು ಮಕ್ಕಳಿಗೆ ಎಳವೆಯಲ್ಲಿಯೇ ಕಲಿಸಬೇಕು. ಒಂದು ಕ್ಷಣದ ಜಾಗೃತಿ ನಮ್ಮ ಸಾಧನೆಗೆ ಮೂಲ ತಳಹದಿಯಾಗಿದ್ದು, ಮಹಾಪುರುಷರು ಈ ವಿಧದ ಜಾಗೃತಿಯನ್ನು ಹೊಂದಿದ್ದರಿಂದ ಲೋಕಕ್ಕೆ ಅನೇಕ ಪ್ರಜೋಜನಗಳು ಆಗಿವೆ ಎಂದರು.

ಶ್ರೀಶ್ರೀ ನಿರ್ಭಯಾನಾಂದ ಸ್ವಾಮಿಜಿ ‘ಸಂಸ್ಕಾರಯುತ ಯುವ ನಡೆ ನುಡಿ ಕುರಿತಾಗಿ ಉಪನ್ಯಾಸ ನೀಡಿದರೆ, ಭಾಷಾ ಸಂಸ್ಕಾರದ ಬಗ್ಗೆ ಶ್ರೀ ದೇವೇಂದ್ರ ಬೆಳೆಯೂರು, ಉಪನಯನದ ಮಹತಿಯ ಬಗ್ಗೆ ವಿದ್ವಾನ್ ರಾಮಕೃಷ್ಣ ಭಟ್ಟ ಕೂಟೇಲು, ಶಂಕರ ತತ್ವಾಧಾರಿತ ಸಂಸ್ಕಾರದ ಬಗ್ಗೆ ವಿದ್ವಾನ್ ಜಗದೀಶ ಶರ್ಮಾ ಸಂಪ, ಮಾನವೀಯ ಸಂಬಂಧಗಳಲ್ಲಿ ಸಂಸ್ಕಾರದ ಕುರಿತಾಗಿ ಡಾ. ಭರತ್ ಚಂದ್ರ, ಸಂಧ್ಯಾವಂದನೆಯಿಂದ ಬದುಕಿನಲ್ಲಿ ಪವಾಡಗಳ ಕುರಿತಾಗಿ ವಿದ್ವಾನ್ ಕೆ.ಎಲ್ ಶ್ರೀನಿವಾಸನ್, ವಿವಾಹದ ಕುರಿತಾಗಿ ಶ್ರೀ ಮೋಹನ ಭಾಸ್ಕರ ಹೆಗಡೆ, ಸ್ತ್ರೀ ಸಂಸ್ಕ್ರಾರದ ಬಗ್ಗೆ ಶ್ರೀಮತಿ ರೂಪಾ ಗುರುರಾಜ್ ಹಾಗೂ ಸಂಸ್ಕಾರಗಳ ವೈಜ್ನಾನಿಕ ತಳಹದಿ ಕುರಿತಾಗಿ ಪ್ರೋ. ಶಲ್ವಪಿಳ್ಳೈ ಅಯ್ಯಂಗಾರ್ ಕುರಿತಾಗಿ ಉಪನ್ಯಾಸ ನೀಡಿದರು. ಶ್ರೀ ಕೂರ್ಗಿ ಶಂಕರನಾರಾಯಣ ಉಪಾಧ್ಯಾಯರು ಬ್ರಹ್ಮತೇಜೋ ಬಲಂ ಬಲಂ ಎಂಬ ವಾಚಿಕಾಭಿನಯ ಜನಮನ ಸೆಳೆಯಿತು.

ಇದಕ್ಕೂ ಮೊದಲು ಐತಿಹಾಸಿಕ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಸ್ಮರಣಸಂಚಿಕೆ “ಸಹಸ್ರಚಂದ್ರ” ಲೋಕಾರ್ಪಿತವಾಯಿತು. ಕಲಾ ಸಂಸ್ಕಾರದ ಭಾಗವಾಗಿ ಯಕ್ಷ ಸಂಸ್ಕಾರ ಪ್ರದರ್ಶನ ಹಾಗೂ ವಿಶಿಷ್ಟವಾದ ಸಂಸ್ಕಾರ ಸ್ವರ ಚಿತ್ತಾರ ಕಾರ್ಯಕ್ರಮಗಳು ನಡೆದವು. ಇದಕ್ಕೂ ಪೂರ್ವದಲ್ಲಿ 108 ಮಾತೆಯರಿಂದ ಕುಂಕುಮಾರ್ಚನೆ, 108 ವೈದಿಕರಿಂದ ರುದ್ರಾಭಿಷೇಕ, ಶಂಕರ ಪಲ್ಲಕ್ಕಿ ಉತ್ಸವ, ಸಿದ್ದಿವಿನಾಯಕ ದೇವರಿಗೆ ರಂಗಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳೂ ನಡೆದವು.

ಮಹಾಸಭೆಯ ಅಧ್ಯಕ್ಷರಾದ ಡಾ. ಗಿರಿಧರ ಕಜೆ, ಪ್ರಧಾನ ಕಾರ್ಯದರ್ಶಿ ಸಿಎ. ವೇಣುವಿಘ್ನೇಶ ಸಂಪ, ಉಪಾಧ್ಯಕ್ಷರಾದ ಶ್ರೀಧರ್ ಭಟ್ ಕೆಕ್ಕಾರು, ಕಾರ್ಯದರ್ಶಿ ಪ್ರಶಾಂತ ಭಟ್, ಆದಿತ್ಯ ಕಲಗಾರು, ಕೋಶಾಧಿಕಾರಿ ಕೃಷ್ಣಮೂರ್ತಿ ಭಟ್ , ಕಾರ್ಯಕ್ರಮದ ಸಂಚಾಲಕ ಡಾ. ನರಸಿಂಹ ಕುಮಾರ್ ಸೇರಿದಂತೆ ಮಹಾಸಭೆಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

Tags: BENGALURUHavyaka MahasabhaHavyaka SabhabhavanaKannada News WebsiteLatest News Kannadaಡಾ.ಗಿರಿಧರ ಕಜೆಪುನರ್ಜನ್ಮಬೆಂಗಳೂರುವಿಶ್ವೇಶ್ವರ ಹೆಗಡೆ ಕಾಗೇರಿಸನಾತನ ಸಂಸ್ಕೃತಿಸಂಸ್ಕಾರೋತ್ಸವಹವ್ಯಕ ಸಭಾಭವನಹವ್ಯಕ ಸಮಾಜ
Share196Tweet123Send
Previous Post

ಸೆ.1ರಿಂದ ನಿಮ್ಮ ಜೀ ವಾಹಿನಿಯಲ್ಲಿ ಬರಲಿದ್ದಾರೆ ಕಲಿಯುಗ ಕಾಮಧೇನು ಗುರುಸಾರ್ವಭೌಮರು

Next Post

ತಿರುಪತಿ, ಚಿಕ್ಕಜಾಜೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ತುರ್ತು ಬಿಗ್ ಅಪ್ಡೇಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

ತಿರುಪತಿ, ಚಿಕ್ಕಜಾಜೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ತುರ್ತು ಬಿಗ್ ಅಪ್ಡೇಟ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

May 2, 2026
ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

May 2, 2026
ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

May 2, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL