ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಒಂದು ಕಾಲದಲ್ಲಿ ಭೂಗತ ಲೋಕವನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಂಡಿದ್ದ ದೊರೆ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್. ಮುತ್ತಪ್ಪ ರೈ ನಿಧನರಾಗಿದ್ದಾರೆ.
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ನಸುಕಿನ 2.30ರ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ.
ಮೂಲತಃ ಪುತ್ತೂರಿನ ಕೆಯ್ಯೂರು ನಿವಾಸಿಯಾಗಿದ್ದ ಮುತ್ತಪ್ಪ ರೈ ಅವರು ಬೆಂಗಳೂರಿನ ಬಿಡದಿಯಲ್ಲಿ ಜೀವನ ನಡೆಸುತ್ತಿದ್ದರು. ಸದ್ಯ ಅವರ ಅಂತ್ಯ ಸಂಸ್ಕಾರವನ್ನು ಬಿಡದಿಯಲ್ಲಿಯೇ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಕೋವಿಡ್19 ಲಾಕ್ ಡೌನ್ ಹಿನ್ನೆಲೆಯಲ್ಲಿ ಅಂತಿಮ ವಿಧಿ ವಿಧಾನದಲ್ಲಿ ಕುಟುಂಬಸ್ಥರು ಮಾತ್ರ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಒಂದು ಕಾಲದಲ್ಲಿ ಭೂಗತ ಲೋಕವನ್ನು ನಡುಗಿಸಿದ್ದ ಮುತ್ತಪ್ಪ ರೈ, ಆನಂತರ ಅದಕ್ಕೆಲ್ಲಾ ವಿದಾಯ ಹೇಳಿ, ಸಮಾಜ ಹಾಗೂ ಬಡವರ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಇದಕ್ಕಾಗಿ, ಜಯ ಕರ್ನಾಟಕ ಎಂಬ ಸಂಘಟನೆಯನ್ನು ಸ್ಥಾಪಿಸಿ, ರಾಜ್ಯದಾದ್ಯಂತ ಅದನ್ನು ವಿಸ್ತರಿಸಿ, ಸಾವಿರಾರು ಮಂದಿಗೆ ಸಹಾಯಹಸ್ತ ಚಾಚಿದ್ದರು.
Get in Touch With Us info@kalpa.news Whatsapp: 9481252093
Discussion about this post