ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಂಜಾನ್ ಹಬ್ಬದ ಸಂದರ್ಭದಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ವಾರಕ್ಕೆ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿರುವುದು ಅಲ್ಪ ಸಂಖ್ಯಾತರಿಗೆ ತೊಂದರೆ ಮಾಡುವ ದುರುದ್ದೇಶ ಹೊಂದಿರುವಂತಿದೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆ ಮುಖಂಡರು, ಕೊರೋನಾ ಮಹಾಮಾರಿ ವ್ಯಾಪಕವಾಗಿದ್ದರಿಂದ ಜನರಿಗೆ ಸೋಂಕು ತಗುಲದಂತೆ ಕಳೆದ ಕೆಲವು ದಿನಗಳಿಂದ ಲಾಕ್ ಡೌನ್ ಜಾರಿಯಲ್ಲಿದೆ. ಜವಾಬ್ದಾರಿಯುತ ನಾಗರಿಕರಾಗಿ ನಾವು ಕಟ್ಟು ನಿಟ್ಟಾಗಿ ನಿಯಮ ಪಾಲಿಸುತ್ತಿದ್ದೇವೆ ಎಂದಿದ್ದಾರೆ.

ಇವರಿಗೆ ನಾಗರಿಕರ ಹಿತಕ್ಕಿಂತ ಬರುವ ರಂಜಾನ್ ಹಬ್ಬದಲ್ಲಿ ಅಲ್ಪ ಸಂಖ್ಯಾತ ಕೋಮಿನವರಿಗೆ ತೊಂದರೆ ಆಗಲಿ ಎಂಬ ದುರುದ್ದೇಶವೇ ಇದ್ದಂತೆ ಕಾಣುತ್ತಿದ್ದು, ಉಸ್ತುವಾರಿ ಸಚಿವರ ಈ ತೀರ್ಮಾನವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಹಲವು ರೋಗಿಗಳು ಹೋಮ್ ಐಸೋಲೆಷನ್’ನಲ್ಲಿರುವವರು ಸೇರಿದಂತೆ ಹಸುಗೂಸುಗಳು, ವಯೋವೃದ್ದರಿಗೆ ಕೆಲವು ಅಗತ್ಯ ವಸ್ತುಗಳು ಬೇಕೇಬೇಕು. ನಗರದ ನಾಗರೀಕರ ಹಿತದೃಷ್ಟಿಯಿಂದ ಯಾವ ರೀತಿಯಲ್ಲಿ ಬೆಳಿಗ್ಗೆ 6ರಿಂದ 10 ರವರೆಗಿನ ರಿಯಾಯಿತಿ ಇತ್ತೋ ಅದನ್ನೇ ಮುಂದುವರೆಸಲು ಒತ್ತಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post