ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಎಲ್ಲ ಹಂತದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತದೆ ಎಂದು ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ನಡೆಸಿದ ಪ್ರಥಮ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಘೋಷಣೆ ಮಾಡಿದರು.
Also Read>> ರಾಜ್ಯ ವಿಧಾನ ಪರಿಷತ್ ಚುನಾವಣೆ | 4 ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ
ರಾಜ್ಯದ ವಿದ್ಯಾರ್ಥಿಗಳ ಹಿತ ಕಾಯುವುದು ನಮ್ಮ ಆದ್ಯತೆ. ಹೀಗಾಗಿ, ಎಲ್ಲಾ ಹಂತದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲು ತೀರ್ಮಾನ ಮಾಡಲಾಗಿದೆ. ಅರ್ಜಿ ಸಲ್ಲಿಸಿ, ಉಚಿತ ಪಾಸ್ ಪಡೆಯಬಹುದಾಗಿದೆ ಎಂದು ತಿಳಿಸಿದರು.
ಇನ್ನು, ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಉದ್ಯೋಗ ಸೃಷ್ಠಿಯಾಗಬೇಕಿದೆ. ಇದಕ್ಕಾಗಿ ಸರ್ಕಾರ ಕೆಲಸ ಮಾಡಲಿದೆ. ಯುವಕರಿಗೆ ತರಬೇತಿ ನೀಡಿ ಉದ್ಯೋಗ ನೀಡುವ ಕೆಲಸವನ್ನು ಸರ್ಕಾರ ಮಾಡಲಿದೆ. ಅರ್ಹರಿಗೆ ತರಬೇತಿ ನೀಡಿ ಕಂಪೆನಿಗಳಿಗೆ ಕಳುಹಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಇದಕ್ಕಾಗಿ ಯೋಜನೆ ರೂಪಿಸಲಾಗುತ್ತಿದ್ದು, ಶೀಘ್ರದಲ್ಲಿ ಸಂಪೂರ್ಣ ವಿವರ ನೀಡಲಾಗುತ್ತದೆ ಎಂದರು.
ಹತ್ತು ಸಾವಿರ ಭಾರತ್ ಜೋಡೋ ಯುವಕರ ಸಂಘವನ್ನು ರಚನೆ ಮಾಡಲು ಮುಂದಾಗಿದ್ದೇವೆ. ಪ್ರತಿ ಪಂಚಾಯ್ತಿಯಲ್ಲಿಯೂ ಸಹ ಯುವಕರ ಸಂಘವನ್ನು ಆರಂಭಿಸಲಿದ್ದು, ಇದರ ಮೂಲಕ ಹಲವು ಯೋಜನೆಗಳನ್ನು ಜಾರಿ ಮಾಡಲಾಗುತ್ತದೆ ಎಂದರು.
ಈ ಯುವಕರ ಸಂಘಗಳಿಗೆ 10 ಲಕ್ಷ ರೂ. ಅನುದಾನ ನೀಡಲಿದ್ದು, ಈ ಯೂಥ್ ಕ್ಲಬ್ ಮೂಲಕ ನಮ್ಮ ಇತಿಹಾಸ, ಸಂಸ್ಕೃತಿ, ಉತ್ತಮ ಸಮಾಜ ನಿರ್ಮಾಣ ಮಾಡುವ ಉದ್ದೇಶವನ್ನು ಹೊಂದಿದ್ದೇವೆ ಎಂದರು.
ಇನ್ನು, ಬಿ2 ಎ ಖಾತೆ ಇಡೀ ರಾಜ್ಯಕ್ಕೆ ವಿಸ್ತರಣೆ ಮಾಡಲು ತೀರ್ಮಾನ ಮಾಡಲಾಗಿದೆ. ಹೀಗಾಗಿ, ಇನ್ನು ಮುಂದೆ 2500 ಚದುರ ಅಡಿ ಕಟ್ಟಡಗಳಿಗೆ ಒಸಿ, ಸಿಸಿ ಇಲ್ಲದೇ ಇದ್ದರೂ ವಿದ್ಯುತ್ ನೀಡಲಾಗುವುದು ಎಂದು ಘೋಷಣೆ ಮಾಡಿದರು.
ಇದು ಎಐ ಯುಗ. ಇಂದಿನ ಯುವ ಜನರ ಸಮಸ್ಯೆಗಳು ಏನು, ಅವರಿಗೆ ಏನಾಗಬೇಕು ಎಂಬುದನ್ನು ಚಿಂತಿಸುತ್ತಿದ್ದೇವೆ. ಇದರೊಟ್ಟಿಗೆ ರೈತರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತಾಗಿ ಅಧ್ಯಯನ ಮಾಡಿ, ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ. ಹೀಗಾಗಿ, ರೈತರ ಸಮಸ್ಯೆಗಳ ಪರಿಹಾರ ನಮಗೆ ಆದ್ಯತೆ ಎಂದರು.
ಇನ್ನು ಹಳ್ಳಿಯಿಂದ ನಗರಗಳಿಗೆ ಉದ್ಯೋಗಕ್ಕಾಗಿ ವಲಸೆ ಬರುವುದನ್ನು ತಪ್ಪಿಸುವ ಅಗತ್ಯವಿದೆ. ಇದಕ್ಕಾಗಿ, ಗ್ರಾಮೀಣ ಪ್ರದೇಶದಲ್ಲಿಯೇ ಏನೆಲ್ಲಾ ಮಾಡಬಹುದು ಎಂಬುದನ್ನು ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.
ಗ್ರಾಮೀಣ ಹಾಗೂ ನಗರ ಪ್ರದೇಶದ ಜನರ ಸಮಸ್ಯೆಗಳು ಏನು ಎಂಬುದು ನನಗೆ ಗೊತ್ತಿದೆ. ಉದ್ಯೋಗಕ್ಕಾಗಿ ಹಳ್ಳಿ ಜನರು ವಲಸೆ ಬರುತ್ತಿದ್ದಾರೆ. ಇದನ್ನು ಬದಲಿಸಲು ಕಾರ್ಯನಿರ್ವಹಿಸುತ್ತೇವೆ ಎಂದರು.
ಕುವೆAಪು ಅವರ ಆಶಯದಂತೆ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಕರ್ನಾಟಕವನ್ನು ರೂಪಿಸಬೇಕು ಎಂಬುದು ನಮ್ಮ ಆಶಯ. ಎಲ್ಲ ವರ್ಗದವರು ನಮ್ಮ ಸಂಪುಟಸದಲ್ಲಿ ಇದ್ದಾರೆ. ಎಲ್ಲರೂ ಸೇರಿ ಆಶಯಗಳನ್ನು ಈಡೇರಿಸಲು ಎಲ್ಲರೂ ಒಟ್ಟಾಗಿ ಶ್ರಮಿಸುತ್ತೇವೆ ಎಂದರು.
ನನಗೆ ಜಾತಿ ಹಾಗೂ ಧರ್ಮದಲ್ಲಿ ನಂಬಿಕೆಯಿಲ್ಲ. ಎಲ್ಲಕ್ಕೂ ಮಿಗಿಲಾಗಿ ಮಾನವ ಹಾಗೂ ಮಾನವೀಯತೆಯ ಧರ್ಮದಲ್ಲಿ ನಂಬಿಕೆಯಿಟ್ಟವನು ನಾನು. ಹೀಗಾಗಿ, ಎಲ್ಲ ವರ್ಗದ ಜನರ ಏಳಿಗೆಗಾಗಿ ಶ್ರಮಿಸುತ್ತೇವೆ. ಇದು ಜನರ ಸರ್ಕಾರ, ಜನರಿಗಾಗಿಯೇ, ಜನರೊಂದಿಗೆ ಸೇರಿ ರಾಜ್ಯದ ಅಭಿವೃದ್ಧಿಗೆ ದುಡಿಯುತ್ತೇವೆ ಎಂದರು.
ಎಲ್ಲ ವರ್ಗದ ಜನರಿಗೆ ಅನುಕೂಲವಾಗಲು ಕೆಲಸ ಮಾಡಲು ಮುಂದಾಗಿದ್ದೇನೆ. ಪ್ರಮುಖವಾಗಿ, ಯುವ ಯುಗ ಆರಂಭಿಸಲು ತೀರ್ಮಾನ ಮಾಡಿದ್ದೇನೆ. ರೈತರಿಗೆ ಅನುಕೂಲವಾಗುವ ಕಾರ್ಯ ಮಾಡಲಿದ್ದೇನೆ ಎಂದರು.
ಇವತ್ತು ಹೊಸ ದಿನ, ಹೊಸ ಕೆಲಸ ಆರಂಭವಾಗಿದೆ. ಹೊಸ ಕೆಲಸ ಮಾಡಲು ಅವಕಾಶ ದೊರೆತಿದೆ. ಹಿಂದೆ ಬಹಳಷ್ಟು ಟೀಕೆಗಳು, ಮಾತುಗಳು ಬಂದಿರಬಹುದು. ಆದರೆ, ಅವುಗಳೆಲ್ಲಾ ಅಳಿದು, ಕೆಲಸಗಳು ಮಾತ್ರ ಉಳಿಯುತ್ತವೆ ಎನ್ನುವುದು ನನ್ನ ನಂಬಿಕೆ ಎಂದರು.
ಈ ಸಿಎಂ ಖುರ್ಚಿ ನನ್ನದಲ್ಲ. ರಾಜ್ಯದ ಜನರದ್ದು, ಪಕ್ಷದ ಕಾರ್ಯಕರ್ತರದ್ದು. ನನ್ನ ಮೇಲೆ ನಂಬಿಕೆಯಿಟ್ಟು, ಇಂತಹ ಜವಾಬ್ದಾರಿ ನೀಡಿದ್ದು, ಇದನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದರು.
ನಾನು ಸಿಎಂ ಆಗುವುದು ಸ್ವಲ್ಪ ತಡವಾಯಿತು. ಆದರೆ, ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್


















