No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಗದಗ

ಫೆ.10ರಿಂದ ಐತಿಹಾಸಿಕ ಲಕ್ಕುಂಡಿ ಉತ್ಸವ: ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 7, 2023
in ಗದಗ
0
ಫೆ.10ರಿಂದ ಐತಿಹಾಸಿಕ ಲಕ್ಕುಂಡಿ ಉತ್ಸವ: ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಗದಗ  |

ಇದೇ ಫೆ.10 ರಂದು ಆರಂಭಗೊಳ್ಳಲಿರುವ ಐತಿಹಾಸಿಕ ಲಕ್ಕುಂಡಿ ಉತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಉದ್ಘಾಟಿಸಲಿದ್ದು ಉತ್ಸವದ ಯಶಸ್ವಿಗಾಗಿ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಲೋಕೊಪಯೋಗಿ ಇಲಾಖೆ ಸಚಿವರಾದ ಸಿ.ಸಿ. ಪಾಟೀಲ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ, ಇದೇ 10 ರಿಂದ 12ರ ವರೆಗೆ ಮೂರು ದಿನಗಳ ಕಾಲ ಜರುಗಲಿರುವ ಲಕ್ಕುಂಡಿ ಉತ್ಸವದ ಯಶಸ್ವಿಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಫೆ. 10 ರಂದು ಲಕ್ಕುಂಡಿ ಸರಕಾರಿ ಮಾದರಿ ಪ್ರೌಢ ಶಾಲೆಯಲ್ಲಿ ಮುಂಜಾನೆ 10 ಗಂಟೆಗೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ಸ್ಥಳೀಯ ಕಲಾತಂಡಗಳಿಂದ 25ಕ್ಕೂ ಹೆಚ್ಚು ಕಲಾ ಪ್ರಕಾರಗಳ ಜಾನಪದ ಕಲಾವಾಹಿನಿಗಳ ಮೆರವಣಿಗೆ ಮೂಲಕ ಲಕ್ಕುಂಡಿ ಉತ್ಸವ ಪ್ರಾರಂಭವಾಗುವದು. ಅದೇ ದಿನ ಸಾಯಂಕಾಲ 6 ಗಂಟೆಗೆ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಧಾನ ವೇದಿಕೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ಜರುಗಲಿದ್ದು ಕಾರ್ಯಕ್ರಮವನ್ನು ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಉದ್ಘಾಟಿಸಲಿದ್ದಾರೆ ಎಂದರು.
ಉತ್ಸವದ ಅಂಗವಾಗಿ ಲಕ್ಕುಂಡಿಯ ಬಿ.ಎಚ್.ಪಾಟೀಲ ಪ್ರೌಢಶಾಲೆ ಆವರಣದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು ಕ್ರೀಡಾ ಸ್ಪರ್ಧೆಗಳಿಗೆ ಬೆ. 10 ಗಂಟೆಗೆ ಚಾಲನೆ ದೊರೆಯಲಿದೆ. ಕುಸ್ತಿ ಸ್ಪರ್ಧೆಗೆ ಲಕ್ಕುಂಡಿಯ ಅಂತರಾಷ್ಟ್ರೀಯ ಕುಸ್ತಿ ಪಟು ಕು. ಪ್ರೇಮಾ ಹುಚ್ಚಣ್ಣವರ, ಕಬಡ್ಡಿ ಸ್ಪರ್ಧೆಗೆ ಅರ್ಜುನ ಪ್ರಶಸ್ತಿ ಪುರಸ್ಕøತ ಅಂತರಾಷ್ಟ್ರೀಯ ಕಬಡ್ಡಿ ಕ್ರೀಡಾ ಪಟು ಡಾ. ಸಿ.ಹೊನ್ನಪ್ಪಗೌಡ ಚಾಲನೆ ನೀಡುವರು. ಕ್ರೀಡಾ ಸ್ಪರ್ಧೆಗಳಲ್ಲಿ ಕುಸ್ತಿ, ಕಬಡ್ಡಿ, ಮಲ್ಲಕಂಬ, ಯೋಗ, ಚಿತ್ರಕಲಾ ಸ್ಪರ್ಧೆ, ಬೋಟಿಂಗ್, ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ನೀರಗ್ನಿ ಅಡಿಗೆ ಸ್ಪರ್ಧೆ ಏರ್ಪಡಿಸಲಾಗಿದೆ. ಸಿರಿಧಾನ್ಯಗಳ ಮಹತ್ವ ಸಾರುವ ಸದುದ್ದೇಶದಿಂದ ಪಾರಂಪರಿಕ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 3 ಗಂಟೆಯಿಂದ ಪ್ರಧಾನ ವೇದಿಕೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಮಂಗಲವಾದ್ಯ, ತತ್ವಪದ, ನೃತ್ಯ, ದೊಡ್ಡಾಟಪದ, ಹಿಂದೂಸ್ತಾನಿ ಸಮೂಹ ನೃತ್ಯ, ಡೊಳ್ಳಿನ ಪದ, ಜನಪದ ನೃತ್ಯ, ಶಾಸ್ತ್ರೀಯ ಸಂಗೀತ, ಮಲ್ಲಕಂಬ, ದೀಪನೃತ್ಯ, ಯಕ್ಷಗಾನ ಸೇರಿದಂತೆ ವಿವಿಧ ಕಲಾಪ್ರಕಾರಗಳ ಅನಾವರಣಗೊಳ್ಳಲಿದೆ. ಗದಗ ಜಿಲ್ಲೆಯ ಪ್ರಮುಖವಾಗಿ ಲಕ್ಕುಂಡಿಯ ಐತಿಹಾಸಿಕ ಹಾಗೂ ಪಾರಂಪರಿಕ ಹಿನ್ನೆಲೆಯನ್ನು ಗಮನದಲ್ಲಿರಿಸಿಕೊಂಡು ವಿಶೇಷ ಲೇಸರ್ ಶೋ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ವೀರ ರಾಣಿ ಕಿತ್ತೂರ ಚನ್ನಮ್ಮ ನಾಟಕ:
ಬಿ.ಎಚ್.ಪಾಟೀಲ ಪ್ರೌಢಶಾಲೆಯ ಆವರಣದಲ್ಲಿ ಫೆ.10 ರಂದು ರಾತ್ರಿ 9 ಗಂಟೆಯಿಂದ ವೀರರಾಣಿ ಕಿತ್ತೂರು ಚೆನ್ನಮ್ಮ ನಾಟಕ ಪ್ರದರ್ಶನ ನಡೆಯಲಿದೆ. ಧಾರವಾಡದ ರಂಗಾಯಣ ತಂಡದಿಂದ ರಚಿಸಲಾದ ಈ ನಾಟಕವು ರಾಣಿ ಚೆನ್ನಮ್ಮಳ ಸಾಹಸ ಯುದ್ಧ ಕಲೆ ಹಾಗೂ ಸ್ವಾತಂತ್ರ್ಯ ಹೋರಾಟದ ವಿವಿಧ ಹಂತಗಳನ್ನು ತೆರೆದಿಡಲಿದೆ. ಬ್ರೀಟೀಷರ ಸೊಕ್ಕಡಗಿಸಿ ಸ್ವತಂತ್ರ್ಯದ ಕಹಳೆ ಊದುವಲ್ಲಿ ಚೆನ್ನಮ್ಮನ ಸಾಹಸ ಗಾಥೆ ಬಿಂಬಿಸುವ ನಾಟಕ ಪ್ರದರ್ಶನದಲ್ಲಿ 250ಕ್ಕೂ ಹೆಚ್ಚು ಕಲಾವಿದರು ಸಜೀವ ಆನೆ, ಕುದುರೆ, ಒಂಟೆಗಳೊಂದಿಗೆ ನಾಟಕವು ಜನಮನ ರಂಜಿಸಲಿದೆ.
ಗೋಷ್ಠಿಗಳು:
ಐತಿಹಾಸಿಕ ಲಕ್ಕುಂಡಿ ಉತ್ಸವದಲ್ಲಿ ಪ್ರಮುಖವಾಗಿ ನಾಲ್ಕು ಗೋಷ್ಟಿಗಳನ್ನು ಹಮ್ಮಿಕೊಳ್ಳಲಾಗಿದೆ. ಫೆ.11 ರಂದು ಬೆ 10 ಗಂಟೆಗೆ ಲಕ್ಕುಂಡಿಯ ಇತಿಹಾಸ ಕುರಿತು ವಿಚಾರ ಗೋಷ್ಟಿ ಜರುಗಲಿದೆ. ಕನ್ನಡ ಪ್ರಭ ದಿನಪತ್ರಿಕೆಯ ಸ್ಥಾನಿಕ ಸಂಪಾದಕರಾದ ಮಲ್ಲಿಕಾರ್ಜುನ ಸಿದ್ಧಣ್ಣವರ ಗೋಷ್ಟಿ ಉದ್ಘಾಟಿಸಿ ಆಶಯ ನುಡಿಗಳನ್ನಾಡಲಿದ್ದಾರೆ. ಡಾ. ಎಸ್.ವೈ.ಸೋಮಶೇಖರ, ಡಾ. ಅಪ್ಪಣ್ಣ ಹಂಜೆ ವಿಷಯ ಮಂಡಿಸಲಿದ್ದಾರೆ. ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ವಿ. ಬಡಿಗೇರ ಕವಿಗೋಷ್ಟಿಯ ಆಶಯ ನುಡಿಗಳನ್ನಾಡುವರು. ಹಿರಿಯ ವಿಮರ್ಶಕ ಶ್ಯಾಮಸುಂದರ ಬಿದರಕುಂದಿ ಅಧ್ಯಕ್ಷತೆ ವಹಿಸುವ ಈ ಗೋಷ್ಠಿಯಲ್ಲಿ ಜಿಲ್ಲೆಯ 15 ಕ್ಕೂ ಅಧಿಕ ಕವಿಗಳು ಗೋಷ್ಟಿಯಲ್ಲಿ ಪಾಲ್ಗೊಳ್ಳುವರು. ಫೆ.12 ರಂದು ಬೆ.10 ಗಂಟೆಗೆ ಕೃಷಿ ಗೋಷ್ಠಿ ಜರುಗಲಿದ್ದು ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದ ಅಶೋಕ ಆಲೂರ ಆಶಯನುಡಿಗಳನ್ನಾಡುವರು. ಕೃಷಿ ಪಂಡಿತ ಪ್ರಶಸ್ತಿ ಪುರಸ್ಕøತ ಈಶ್ವರಪ್ಪ ಹಂಚಿನಾಳ ಅಧ್ಯಕ್ಷತೆ ವಹಿಸುವರು. ಕೃಷಿ ಸಾಧಕಿ ಕವಿತಾ ಮಿಶ್ರಾ, ಪ್ರಗತಿ ಪರ ಕೃಷಿಕ ನಾಗರಾಜ ಕುಲಕರ್ಣಿ ವಿಷಯ ಮಂಡಿಸಲಿದ್ದಾರೆ. ಮ. 12 ಗಂಟೆಗೆ ಖ್ಯಾತ ಹೃದ್ರೋಗ ತಜ್ಞೆ ವಿಜಯಲಕ್ಷ್ಮೀ ಬಾಳೇಕುಂದ್ರಿ ಆಶಯ ನುಡಿಗಳನ್ನಾಡುವರು. ಲಕ್ಕುಂಡಿ ಗ್ರಾ.ಪಂ. ಅಧ್ಯಕ್ಷೆ ಲಲಿತಾ ಗದಗಿನ ಅಧ್ಯಕ್ಷತೆ ವಹಿಸುವರು. ಸಂಶೋಧಕಿ ಡಾ. ಸಂಧ್ಯಾ ವಿ ಹಾಗೂ ವಾಣಿಜ್ಯೋದ್ಯಮ ಸಂಸ್ಥೆಯ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಪಾಟೀಲ ಉಪನ್ಯಾಸ ನೀಡುವರು. ನಗರಸಭೆ ಅಧ್ಯಕ್ಷೆ ಉಷಾ ದಾಸರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

Also read: ಟರ್ಕಿಯಲ್ಲಿ ಮತ್ತೆ ಪ್ರಬಲ ಭೂಕಂಪನ: ಸಾವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆ

ಸಾಂಸಕೃತಿಕ ಕಾರ್ಯಕ್ರಮಗಳು:
ಫೆ.11 ರಂದು ರಾತ್ರಿ 10 ಗಂಟೆಗೆ ಸೋಜಿಗದ ಸೂಜಿ ಮಲ್ಲಿಗೆ, ಕಾಂತಾರದ ಶೃಂಗಾರ ಸಿರಿ ಹಾಡಿಗೆ ಧ್ವನಿ ನೀಡಿದ ಖ್ಯಾತ ಗಾಯಕಿ ಕು.ಅನನ್ಯ ಭಟ್ ಮತ್ತು ತಂಡದವರಿಂದ ರಸಮಂಜರಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ನಲ್ಲಿ ಮೆಚ್ಚುಗೆಗೆ ಪಾತ್ರವಾದ ಗದುಗಿನ ಕಾ.ವೆಂ.ಶ್ರೀ ತಂಡದಿಂದ ಯಕ್ಷಗಾನ, ಭಗವದ್ಗೀತೆ ರೂಪಕ ಮೂಡಿಬರಲಿದೆ. ಅತ್ತಿಮಬ್ಬೆ ನಾಟಕ, ಸರಿಗಮಪ ತಂಡದ ಜ್ಞಾನೇಶ, ಮೆಹಬೂಬ ಸಾಬ ಅವರಿಂದ ಜುಗಲ್ ಬಂದಿ, ಮಿಮಿಕ್ರಿ ಗೋಪಿ ಹಾಗೂ ಕಾರ್ತಿಕ ಪತ್ತಾರ ಅವರಿಂದ ಹಾಸ್ಯ ಕಾರ್ಯಕ್ರಮ, ಕ್ಲಾಸಿಕಲ್ ಇವೆಂಟ್, ದೀಪನೃತ್ಯ, ಜನಮನ ಸೆಳೆಯಲಿವೆ. ಫೆ.12 ರಂದು ಸಂಜೆ 4 ರಿಂದ ವಿವಿಧ ಕಲಾ ಪ್ರಕಾರಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ. ಹಲವು ಕನ್ನಡ ಪ್ರಸಿದ್ಧ ಗಾಯನಗಳ ಮುಖಾಂತರ ಖ್ಯಾತಿಗೊಂಡ ಮುಂಬೈನ್ ಪ್ರಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಅವರಿಂದ ಅದ್ಭುತ ರಸಮಂಜರಿ ಕಾರ್ಯಕ್ರಮ ಮೂಡಿಬರಲಿದೆ. ಉಮೇಶ ಕಿನ್ನಾಳ ಹಾಗೂ ತಂಡದಿಂದ ಹಾಸ್ಯ ಕಾರ್ಯಕ್ರಮ, ಪದ್ಮಶ್ರೀ ವೆಂಕಟೇಶ ಕುಮಾರ್ ಅವರಿಂದ ಹಿಂದೂಸ್ತಾನಿ ಸಂಗೀತ, ಕನ್ನಡದ ಪುಟಾಣಿ ಕೋಗಿಲೆ ಮಹನ್ಯಾ ಪಾಟೀಲ ಅವರಿಂದ ರಸಮಂಜರಿ ಕಾರ್ಯಕ್ರಮ, ಪ್ರಭಾತ ಕಲಾತಂಡದಿಂದ ನೃತ್ಯ ರೂಪಕ ನೆರೆದ ಜನರನ್ನು ಮನರಂಜಿಸಲಿವೆ. ತೋಟಗಾರಿಕೆ ಇಲಾಖೆಯಿಂದ ಫಲಪುಷ್ಪ ಪ್ರದರ್ಶನ ಸೇರಿದಂತೆ ವಿವಿಧ ಇಲಾಖೆಗಳ ಮಳಿಗೆಗಳನ್ನು ತೆರೆಯಲಾಗುವುದು. ಕೃಷಿ, ಮಹಿಳಾ, ಕೈಮಗ್ಗ, ನೈರ್ಮಲ್ಯ ಇಲಾಖೆಗಳ ಮಳಿಗೆಗಳು ಕಾರ್ಯನಿರ್ವಹಿಸಲಿವೆ.
ಸಮಾರೋಪ :
ಫೆ.12 ರ ಸಂಜೆ 5.30 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಘನ ಉಪಸ್ಥಿತಿ ವಹಿಸುವರು. ಸಚಿವರುಗಳಾದ ಬಿ.ಸಿ.ಪಾಟೀಲ, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಬೈರತಿ ಬಸವರಾಜ ಗೌರವ ಉಪಸ್ಥಿತಿ ವಹಿಸುವರು. ವಿಶ್ವವಾಣಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ ಅವರು ಸಮಾರೋಪ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಪ್ರಮುಖ ಅಧಿಕಾರಿಗಳು ಹಾಜರಿರುವರು.

ಉಚಿತ ಸಾರಿಗೆ ವ್ಯವಸ್ಥೆ ಗದಗ ನಗರದಿಂದ ಲಕ್ಕುಂಡಿ ಉತ್ಸವಕ್ಕೆ ಆಗಮಿಸುವ ಸಾರ್ವಜನಿಕರೆಲ್ಲರಿಗೂ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕೆ.ಎಸ್.ಆರ್.ಟಿ.ಸಿಯ 10 ಬಸ್ ಗಳು ಗದಗ ಹೊಸ ಹಾಗೂ ಹಳೆಯ ಬಸ ನಿಲ್ದಾಣಗಳಿಂದ ನಿರಂತರವಾಗಿ ಸಂಚರಿಸಲಿದ್ದು ಉತ್ಸವಕ್ಕೆ ಆಗಮಿಸುವ ಕಲಾವಿದರು, ಅತಿಥಿಗಳು ಹಾಗೂ ಸಾರ್ವಜನಿಕರೆಲ್ಲರಿಗೂ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆಯನ್ನು ಮಾಡಲಾಗಿದ್ದು ಸಾರ್ವಜನಿಕರು ಉತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಸಚಿವ ಸಿ.ಸಿ. ಪಾಟೀಲ ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪಂಚಾಯತ ಸಿ.ಇ.ಓ. ಡಾ.ಸುಶೀಲಾ ಬಿ, ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೇಯಿ, ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ, ಉಪವಿಭಾಗಾಧಿಕಾರಿ ಅನ್ನಪೂರ್ಣ, ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM Basavaraja BommaiGadagaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಗದಗಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Previous Post

ಟರ್ಕಿಯಲ್ಲಿ ಮತ್ತೆ ಪ್ರಬಲ ಭೂಕಂಪನ: ಸಾವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆ

Next Post

ಟರ್ಕಿ ಮಾರಕ ಭೂಕಂಪನಕ್ಕೆ ಅನಾಥರಾದ ಮಕ್ಕಳು: ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಇಬ್ಬರ ರಕ್ಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಟರ್ಕಿ ಮಾರಕ ಭೂಕಂಪನಕ್ಕೆ ಅನಾಥರಾದ ಮಕ್ಕಳು: ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಇಬ್ಬರ ರಕ್ಷಣೆ

ಟರ್ಕಿ ಮಾರಕ ಭೂಕಂಪನಕ್ಕೆ ಅನಾಥರಾದ ಮಕ್ಕಳು: ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಇಬ್ಬರ ರಕ್ಷಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

March 23, 2026
Sagara Engulfed In The Ocean of Music

Sagara Engulfed In The Ocean of Music

March 23, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಹುಬ್ಬಳ್ಳಿ-ವಿಜಯಪುರ ನಡುವಿನ ರೈಲುಗಳ ಸೇವೆ ಪೂರ್ಣ ಪುನಾರಂಭ

March 23, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ತಿರುಪತಿ, ಸುಬ್ರಹ್ಮಣ್ಯ-ಮಂಗಳೂರು ಸೇರಿ 9 ಪ್ರಮುಖ ರೈಲುಗಳ ಮಹತ್ವದ ಅಪ್ಡೇಟ್

March 23, 2026
ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL