No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Thursday, June 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಹರಿಕಥಾಮೃತಸಾರದಲ್ಲಿ ಗಣಪತಿ ಚಿಂತನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 12, 2018
in Special Articles
0
Share on FacebookShare on TwitterShare on WhatsApp

ಮಹೇಶಸಂಭವ ರುದ್ರದೇವರಿಂದ ಅವತರಿಸಿದ ಗಣಪತಿ; ವ್ಯಾಸಕರುಣಾಪಾತ್ರ ವೇದವ್ಯಾಸದೇವರ ಕರುಣಾಪಾತ್ರ
ಏಕದಂತ -ಏಕದಂತವುಳ್ಳವನು
ಇಭೇಂದ್ರಮುಖ ಆನೆಮುಖವುಳ್ಳವನು
ವಿಘ್ನರಾಜ ವಿಘ್ನನಾಶಕ
ಷಣ್ಮುಖನನುಜ ಷಣ್ಮುಖನ ಅನುಜ
ಚಾರುದೇಷ್ಣಾಹ್ವಯ ಚಾರುದೇಷ್ಣನೆಂಬ ಹೆಸರಿನಿಂದ ಅವತರಿಸಿದ;
ವಿಶ್ವೋಪಾಸಕ ಪರಮಾತ್ಮನ ವಿಶ್ವರೂಪ ಉಪಾಸಕ
ಇಂದುದರ್ಪಹರ ಚಂದ್ರನ ದರ್ಪವನ್ನು ಹೋಗಲಾಡಿಸಿದವನು
ಪಾಶಪಾಣಿ ಪಾಶಧರ
ಮೂಷಿಕಾವವಹನ ಶ್ರೇಷ್ಟವಾದ ಇಲಿಯನ್ನು ವಾಹನವಾಗುಳ್ಳವನು
ರಕ್ತವಾಸದ್ವಯ ವಿಭೂಷಣ ಕೆಂಪುವಸ್ತ್ರ ಉಟ್ಟು, ಕೆಂಪು ವಸ್ತ್ರವನ್ನು ಉತ್ತರೀಯವಾಗಿ ಉಳ್ಳವ
ತಾರಕಾಂತಕನನುಜ ತಾರಕಾಸುರನ ಸಂಹರಿಸಿದ ಷಣ್ಮುಖನ ಅನುಜ

ಏಕವಿಂಶತಿ ಮೋದಕಪ್ರಿಯ 21 ಮೋದಕ ಪ್ರಿಯ
ಪಿನಾಕಿ ಭಾರ್ಯಾತನುಜ ಪಿನಾಕಿಯಾದ ರುದ್ರದೇವರ ಭಾರ್ಯೆಯಾದ ಪಾರ್ವತೀಸುತ

ಪಂಚವಕ್ತ್ರನ ತನಯ ಐದು ಮುಖಗಳುಳ್ಳ ರುದ್ರದೇವರ ಪುತ್ರ
ವಿಘ್ನೇಶ ಭಕ್ತರ ವಿಘ್ನಗಳ ಪರಿಹರಿಸುವ
ಚಾರ್ವಾಂಗ ಮನೋಹರವಾದ ಅಂಗವುಳ್ಳವನೆ

ಉಡುದಾರದಂತೆ ಸೊಂಟಕ್ಕೆ ಗಣಪತಿಯು ಸುತ್ತಿಕೊಂಡ ಸರ್ಪದ ಹೆಸರು ವಿಕಚ

ಪ್ರಶ್ನೆ: ಗಣಪತಿಯು ತಾರತಮ್ಯದಲ್ಲಿ 18ನೇಯವನು. ರುದ್ರದೇವರು 5ನೇ ಕಕ್ಷ್ಯ. ವಿವಿಂದ್ಯ ಮೊದಲಾದ ರುದ್ರದೇವರ ವರದಿಂದ ಉದ್ಧಟರಾದ ರಾಕ್ಷಸರನ್ನು ಚಾರುದೇಷ್ಣನಿಗೆ ಕೊಲ್ಲಲು ಹೇಗೆ ಸಾಧ್ಯವಾಯಿತು?
ಶ್ರೀಹರಿಯು ಚಾರುದೇಷ್ಣನಲ್ಲಿ ವಿಶ್ವಂಭರನಾಮಕನ್ನಗಿ ಅವನಲ್ಲಿದ್ದು, ವಾಯುದೇವರ ವಿಶೇಷ ಆವೇಶ ಚಾರುದೇಷ್ಣನಲ್ಲಿರುವುದರಿಂದ, ವಿವಿಂದ್ಯ ಮೊದಲಾದ ರಾಕ್ಷಸರ ಸಂಹಾರ ಕಾರ್ಯ ಸಾಧ್ಯವಾಯಿತು.

ಪ್ರಶ್ನೆ: ಗಣಪತಿಯ ಕೈಯಲ್ಲಿ ಧರಿಸಿದ ಅಂಕುಶದ ಹೆಸರೇನು ?
ಸ್ವರ್ಪಿತ

ಪ್ರಶ್ನೆ: ಗಣಪತಿಯನ್ನು ಕರ್ಮಸಾಕ್ಷಿಗ ಎಂದೇಕೆ ಪ್ರಯೋಗ ಮಾಡಿದ್ದಾರೆ?
ಗಣಪತಿಯು ಭೂತಾಕಾಶದ ಅಭಿಮಾನಿ. ಭೂತಾಕಾಶವು ಎಲ್ಲ ಕಡೆಗೂ ವ್ಯಾಪ್ತವಾಗಿದೆ. ಅದರಂತೆ ಗಣಪತಿಯೂ ಎಲ್ಲ ಕಡೆ ವ್ಯಾಪ್ತನು. ಆದ್ದರಿಂದ ಎಲ್ಲರೂ ಮಾಡುವ ಸಮಸ್ತ ಕರ್ಮಗಳಿಗೆ ಭೂತಾಕಾಶ ಅಭಿಮಾನಿ ಗಣಪತಿಯು ಸಾಕ್ಷೀಭೂತನಾಗಿರುವನು.

ಪ್ರಶ್ನೆ: ಗಣಪತಿಯು ಶ್ರೀಹರಿಯ ಯಾವ ಪ್ರದೇಶದಲ್ಲಿ ಆಶ್ರಯವನ್ನು ಹೊಂದಿರುವನು ?
ಗಣಪತಿಯು ಶ್ರೀಹರಿಯ ನಾಭೀ ಪ್ರದೇಶದಲ್ಲಿ ಆಶ್ರಯ ಹೊಂದಿರುವನು.

ಪ್ರಶ್ನೆ: ಸರ್ವೋತ್ತಮನಾದ ಶ್ರೀರಾಮಚಂದ್ರನು ಸೇತುಬಂಧನದ ಆರಂಭದಲ್ಲಿ ಗಣಪತಿಯ ಪೂಜೆಯ ಮಾಡಿದುದರ ಉದ್ದೇಶವೇನು ?
ಪರಿವಾರ ದೇವತೆಗಳೆಲ್ಲರೂ ತನ್ನ ಅಧೀನರು, ದೇವತೆಗಳಿಗೆ ವಿಶೇಷ ಸಾಧನೆ ಮಾಡಿಸಲು, ತಾನೇ ಅವರಲ್ಲಿದ್ದು, ಫಲ ಕೊಡುವವನು ಎಂಬುದಾಗಿ ತಿಳಿಸಲು, ಲೋಕ ಶಿಕ್ಷನಾರ್ಥವಾಗಿ, ಪರಿವಾರ ದೇವತೆಗಳಲ್ಲಿ ಒಬ್ಬರಾದ ಗಣಪತಿಯ ಅಂತರ್ಯಾಮಿಯಾದ ತನ್ನನ್ನೇ ಶ್ರೀರಾಮಚಂದ್ರನು ಪೂಜಿಸಿದನು. ಇಲ್ಲಿ ಗಣಪತಿಯು ಶ್ರೇಷ್ಠ ಎಂದಲ್ಲ. ಬೇರೆಲ್ಲರೂ ಗಣಪನನ್ನು ಮೊದಲು ಪೂಜಿಸಲಿ ಎಂದು ಲೋಕಶಿಕ್ಷಣಕ್ಕಾಗಿ ಮಾಡಿದನು.

ಪ್ರಶ್ನೆ: ದುರ್ಯೋಧನಾದಿ ದೈತ್ಯರು, ಗಣಪತಿಯನ್ನು ಯುದ್ಧಾರಂಭದಲ್ಲಿ ಪೂಜಿಸದಿದ್ದುದರ ಪರಿಣಾಮವೇನಾಯಿತು?
ಗಣಪತಿಯನ್ನು ಆರಂಭದಲ್ಲಿ ಪೂಜಿಸದಿದ್ದ ದುರ್ಯೋಧನಾದಿಗಳು ವಾಯ್ವಂಶರಾದ ಭೀಮಸೇನದೇವರಿಂದ ಗದಾ ಹತರಾದರು.

ಪ್ರಶ್ನೆ: ಅರೆಕ್ಷಣವೂ ಬಿಡದೆ ಬೆಂಗಾವಲಾಗಿರಲು, ಗಣಪತಿಯನ್ನು ಏನೆಂದು ಪ್ರಾರ್ಥಿಸಬೇಕು ?
ಸತ್ಕರ್ಮಗಳನ್ನು ಮಾಡುವಾಗ್ಗೆ, ವಿಘ್ನಗಳು ಹಲವು. ಅವುಗಳನ್ನು ಪರಿಹರಿಸಿ, ಭಗವನ್ನಾಮ ಧ್ಯಾನಿಸಲು, ಪೂಜಿಸಲು, ನಮಗೆ ಬೆಂಗಾವಲಾಗಿರಲು ಗಣಪತಿಯನ್ನು ಪ್ರಾರ್ಥಿಸಬೇಕು.

ಶುಕ್ರಶಿಷ್ಯರ ಸಂಹರಿಪುದಕೆ ಶಕ್ರ ನಿನ್ನನು ಪೂಜಿಸಿದನು ಉ
ರುಕ್ರಮ ಶ್ರೀರಾಮಚಂದ್ರನು ಸೇತುಮುಖದಲ್ಲಿ ಚಕ್ರವರ್ತಿಪ
ಧರ್ಮರಾಜನು ಚಕ್ರಪಾಣಿಯ ನುಡಿಗೆ ಭಜಿಸಿದ ವಕ್ರತುಂಡನೆ
ನಿನ್ನೊಳೆಂತುಂಟೊ ಈಶನುಗ್ರಹವು

ಶುಕ್ರಾಚಾರ್ಯರ ಶಿಷ್ಯರಾದ ದೈತ್ಯರನ್ನು ಸಂಹರಿಸಲು ಶಕ್ರನು ನಿನ್ನನು ಪೂಜಿಸಿ ದೇವೇಂದ್ರನು ಗೆದ್ದನು. ಶ್ರೀ ರಾಮಚಂದ್ರನು ಸೇತುಬಂಧನಾರಂಭದಲ್ಲಿ ಲೋಕಶಿಕ್ಷಣಾರ್ಥವಾಗಿ ನಿನ್ನನ್ನು ಪೂಜಿಸಿದನು. ಚಕ್ರವರ್ತಿ ಧರ್ಮರಾಜನು ನಿನ್ನನ್ನು ಪೂಜಿಸಿ ಕುರುಕ್ಷೇತ್ರದಿ ವಿಜಯಿಯಾದನು. ವಕ್ರತುಂಡನಾದ ಗಣಪನಲ್ಲಿ ಶ್ರೀಹರಿಯ ಅನುಗ್ರಹವು ಬಹಳವಾಗಿದೆ.

ಪ್ರಶ್ನೆ: ಪಾರ್ವತೀ ದೇವಿಯು ತನ್ನ ದೇಹದ ಮಣ್ಣಿನಿಂದ ಗಣಪತಿಯನ್ನು ಸೃಷ್ಟಿಸಿದಳೇ. ಅವಳ ದೇಹದಲ್ಲಿ ಅಷ್ಟೊಂದು ಮಣ್ಣಿತ್ತೇ? ರುದ್ರದೇವರಿಗೆ ಅದು ತಿಳಿದಿರಲಿಲ್ಲವೇ?
ತಾಮಸ ಪುರಾಣವಾದ ಸ್ಕಾಂದ ಪುರಾಣದಲ್ಲಿ ಈ ಉಲ್ಲೇಖ ವಿದೆ. ಆದರೆ ಅದು ಅಸುರ ಜನ ಮೋಹನಾರ್ಥವಾದ ಕಥೆ. ಹಿಂದೆ ದಕ್ಷಪ್ರಜಾಪತಿಯ ಮಗಳು ಸತೀದೇವಿಯಾಗಿದ್ದಾಗ ಅಗ್ನಿಯನ್ನು ಸೃಷ್ಟಿ ಮಾಡಿ ಅಗ್ನಿಪ್ರವೇಶಿಸಿದ್ಧಳು. ಅದೇ ರೀತಿ ಈಗಲೂ ಸೃಷ್ಟಿಸಿದ್ದಾಳೆಂದು ತಿಳಿಯಬೇಕು.

ಉತ್ತಮ ಮಕ್ಕಳನ್ನು ಪಡೆಯಲು ಪಾರ್ವತಿ ಪರಮೇಶ್ವರರನ್ನು ಸೇವಿಸಿ ಪಡೆಯಬೇಕು. ಜಗನ್ನಾಥದಾಸರು ಹರಿಕಥಾಮೃತಸಾರದಲ್ಲಿ ಪಿನಾಕಿ ಭಾರ್ಯಾತನುಜ ಮೃದ್ಭವ ಎಂದಿದ್ದಾರೆ.

ಬ್ರಹ್ಮವೈವರ್ಥ ಪುರಾಣ ರೀತ್ಯಾ ಗಣಪತಿಯು ಜನನ ವೃತ್ತಾಂತ :

ಪಾರ್ವತಿ ತನಗೆ ಮಕ್ಕಳ ಪಡೆಯಲು ಶ್ರೀಹರಿಯ ಕುರಿತು ತಪಗೈದಳು. ಒಮ್ಮೆ ಶಿವಪಾರ್ವತಿಯರು ಏಕಾಂತದಲ್ಲಿರಲು, ಕೆಲವು ಋಷಿಗಳು ಆಗಮಿಸಿದರು. ಪಾರ್ವತಿ ಬಂದು ಋಷಿಗಳಿಗೆ ಆತಿಥ್ಯ ಭಿಕ್ಷೆ ನೀಡಲು ಹೋದಾಗ ಶಿವನ ವೀರ್ಯ ನೆಲದ ಮೇಲೆ ಬಿದ್ದಾಗ ಜನಿಸಿದ ಮಗುವೇ ಗಣಪತಿ.

ಗಣಪತಿಗೆ ಆನೆಮುಖ ಬಂದಿದ್ದು. ಇಲ್ಲಿಯೂ ಎರಡು ಪುರಾಣದಲ್ಲೂ ವ್ಯತ್ಯಾಸವಿದೆ.
ಸ್ಕಾಂದ ಪುರಾಣ ರೀತ್ಯಾ ಪಾರ್ವತಿ ಸ್ನಾನಕ್ಕೆ ಹೋಗುವ ಮುನ್ನ ಗಣಪತಿಯನ್ನು ಬಾಗಿಲಲ್ಲಿ ನಿಲ್ಲಿಸಿ ಹೋಗಿರುತ್ತಾರೆ. ಶಿವ ಬಂದಾಗ ಗಣಪತಿ ತಡೆಯುತ್ತಾನೆ. ಕೋಪಗೊಂಡ ಶಿವನು ಅವನ ತಲೆ ಕಡಿಯಲು, ಪಾರ್ವತಿ ಸ್ನಾನಗೃಹದಿಂದ ಬಂದು ನಡೆದುದನ್ನು ಅರಿತು, ಶಿವನಿಗೆ ಮಗನನ್ನು ಉಳಿಸಲು ಕೋರಲು, ಶಿವನು ತನ್ನ ಮಗನಿಗಾಗಿ ಪರಿತಪಿಸಿದ. ತನ್ನ ಮೃತ್ಯುವಿಗೆ ಯಾರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿಹರೋ ಅವರು ತಲೆಯ ತನ್ನಿರಿ ಎನ್ನಲು ಉತ್ತರ ದಿಕ್ಕಿಗೆ ಮಲಗಿದ್ದ ಆನೆಯ ತಲೆಯನ್ನು ತರಲು ಶಿವನು ಅದನ್ನು ಗಣಪತಿಗೆ ಜೋಡಿಸಿ ಜೀವತುಂಬಿದನು.

ಲೇಖನ: ನರಹರಿ ಸುಮಧ್ವ

Tags: Ganesha FestivalHarikathamruthasaraLord GaneshaLord Shivaಹರಿಕಥಾಮೃತಸಾರ
Share196Tweet123Send
Previous Post

ಶಿವಮೊಗ್ಗದಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

Next Post

ದೇವರನ್ನು ನಂಬಿದವರಿಗೆ, ದೊರೆಯೂ ಏನು ಮಾಡಲಾಗದು: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೇವರನ್ನು ನಂಬಿದವರಿಗೆ, ದೊರೆಯೂ ಏನು ಮಾಡಲಾಗದು: ರಾಘವೇಶ್ವರ ಶ್ರೀ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

June 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ಕೃಷ್ಣರಾಜಪುರಂ – ವೈಟ್‌ಫೀಲ್ಡ್ ನಡುವೆ ಕಾಮಗಾರಿ: ಕೆಲವು ರೈಲುಗಳ ರದ್ದತಿ, ಭಾಗಶಃ ರದ್ದತಿ

June 4, 2026
ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

June 4, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಮಂಗಳೂರು-ಹೈದರಾಬಾದ್ ವಿಶೇಷ ರೈಲು | ಮಂತ್ರಾಲಯಕ್ಕೆ ತೆರಳುವವರಿಗೆ ಅನುಕೂಲ

June 4, 2026
ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL