ಕಲ್ಪ ಮೀಡಿಯಾ ಹೌಸ್ | ಗಾಂಧೀನಗರ |
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ Asaduddin OYC ಹಾಗೂ ಪಕ್ಷದ ಗುಜರಾತ್ ರಾಜ್ಯಾಧ್ಯಕ್ಷ ಸಬೀರ್ ಕಬ್ಲಿವಾಲಾ ಮತ್ತು ಪಕ್ಷದ ಇತರ ನಾಯಕರು ಅಹಮದಾಬಾದ್ನಿಂದ ಸೂರತ್ಗೆ ‘ವಂದೇ ಭಾರತ್ ಎಕ್ಸ್ಪ್ರೆಸ್’ ನಲ್ಲಿ ಪ್ರಯಾಣಿಸುತ್ತಿದ್ದಾಗ ಕಲ್ಲು ತೂರಾಟ ನಡೆಸಿದ ಘಟನೆ ಗುಜರಾತ್ನಲ್ಲಿ ನಡೆದಿದೆ.
आज शाम जब हम @asadowaisi साहब,SabirKabliwala साहब और @aimim_national की टीम अहमदाबाद से सूरत के लिए ‘Vande Bharat Express’ train में सफर कर रहे थे तब कुछ अज्ञात लोगों ने ट्रेन पर ज़ोर से पत्थर मारकर शीशा तोड़ दिया!#GujaratElections2022 pic.twitter.com/ZwNO2CYrUi
— Waris Pathan (@warispathan) November 7, 2022
ಗುಜರಾತ್ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸ ಅವರು ಪ್ರಯಾಣಿಸುತ್ತಿದ್ದಾಗ ಕಲ್ಲು ತೂರಾಟ ನಡೆಸಲಾಗಿದೆ ಎಂದು ಪಕ್ಷದ ವಕ್ತಾರ ವಾರಿಸ್ ಪಠಾಣ್ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರೈಲಿನ ಕಂಪಾರ್ಟ್ಮೆಂಟ್ನ ಕಿಟಿಕಿಯ ಗಾಜು ಒಡೆದು ಹೋಗಿರುವ ಫೋಟೋವನ್ನು ಹಂಚಿಕೊಂಡಿದ್ದು, ಓವೈಸಿ ಪ್ರಯಾಣಿಸುತ್ತಿದ್ದ ಕಂಪಾರ್ಟ್ಮೆಂಟ್ ಮೇಲೆ ಅಪರಿಚಿತ ವ್ಯಕ್ತಿ ಕಲ್ಲು ತೂರಾಟ ನಡೆಸಿದ್ದಾನೆ ಎಂದು ಕ್ಯಾಪ್ಷನ್ನಲ್ಲಿ ಬರೆದುಕೊಂಡಿದ್ದಾರೆ.
Also read: ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ಬಳಿ ಮಹಿಳೆ ಶವ ಪತ್ತೆ! ಅತ್ಯಾಚಾರವೆಸಗಿ ಹತ್ಯೆಗೈದಿರುವ ಶಂಕೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















