ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಗೌರಿಬಿದನೂರು: ಆರೋಗ್ಯವಂತ ಯುವಕರು ರಕ್ತದಾನ ಮಾಡುವ ಮೂಲಕ ಮತ್ತೊಂದು ಜೀವಕ್ಕೆ ಆಸರೆಯಾಗಬೇಕಾಗಿದೆ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಂದ್ರಮೋಹನ್ ರೆಡ್ಡಿ ತಿಳಿಸಿದರು.
ತಾಲೂಕಿನ ಕಲ್ಲಿನಾಯಕನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.
ಆಕಸ್ಮಿಕ ಅಪಘಾತಗಳು ಸಂಭವಿಸಿದಾಗ ಸಾಕಷ್ಟು ಮಂದಿ ಸಕಾಲದಲ್ಲಿ ರಕ್ತ ಸಿಗದೆ ಆಸ್ಪತ್ರೆಗಳಲ್ಲಿ ಮರಣ ಹೊಂದುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವೈದ್ಯರೂ ಕೂಡ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದಂತಾಗುತ್ತದೆ. ಆದ್ದರಿಂದ ಯುವಕರು ಪ್ರತೀ ಮೂರು ತಿಂಗಳಿಗೆ ಒಮ್ಮೆ ರಕ್ತದಾನ ಮಾಡಿದರೆ ಆರೋಗ್ಯವಾಗಿರಬಹುದಾಗಿದೆ ಎಂದರು.
ನಿವೃತ್ತ ಸಹಾಯಕ ಆರೋಗ್ಯ ಅಧಿಕಾರಿ ನಾಗರಾಜೇಂದ್ರ ಪ್ರಸಾದ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಆಯೋಜಿಸುವ ರಕ್ತದಾನ ಶಿಬಿರಗಳು ಅತ್ಯಂತ ಉಪಯುಕ್ತವಾಗಿರುತ್ತವೆ. ಗರ್ಭಿಣಿ ಸ್ತ್ರೀಯರು ಚಿಕಿತ್ಸೆಯ ಸಂದರ್ಭದಲ್ಲಿ ಹಾಗೂ ನಿಶ್ಯಕ್ತರಿಗೆ ಇದರ ಅವಶ್ಯಕತೆ ಹೆಚ್ಚಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಗೋಪಮ್ಮ, ಉಪಾಧ್ಯಕ್ಷ ಗೋಪಾಲ್, ಸದಸ್ಯರಾದ, ಉಮಾದೇವಿ, ಶ್ರೀನಿವಾಸರೆಡ್ಡಿ, ರಂಗಪ್ಪ, ಸುವರ್ಣ, ವಿಮಲಮ್ಮ, ವಕೀಲರಾದ ಶ್ರೀನಿವಾಸ್, ಲಯನ್ಸ್ ಕ್ಲಬ್ ಅಧಿಕಾರಿ ಡಾ.ಹೇಮಂತ್ ರಾಜ್ ಸವಾಣಿಗೆ, ಜಯಕರ್ನಾಟಕ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.
(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)
Get in Touch With Us info@kalpa.news Whatsapp: 9481252093
Discussion about this post