ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಗೌರಿಬಿದನೂರು: ಸಮಾಜದಲ್ಲಿ ಹೆಣ್ಣು ಸಾಮಾಜಿಕ ಮತ್ತು ಮಾನಸಿಕವಾಗಿ ಸದೃಢವಾಗಿ ಬೆಳೆದಲ್ಲಿ ಯಾವುದೇ ಸಮಸ್ಯೆಗಳು ಎದುರಾದರೂ ಧೈರ್ಯವಾಗಿ ನಿಭಾಯಿಸಬಲ್ಲರು ಎಂದು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಬಸವರಾಜು ತಿಳಿಸಿದರು.
ತಾಲೂಕಿನ ಕಲ್ಲಿನಾಯಕನಹಳ್ಳಿಯಲ್ಲಿ ಗ್ರಾಮ ಪಂಚಾಯ್ತಿ ವತಿಯಿಂದ ಆಯೋಜಿಸಿದ್ದ ಮಹಿಳೆಯರ ಗ್ರಾಮ ಸಭೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.
ಸರ್ಕಾರ ಹಾಗೂ ವಿವಿಧ ಸಂಘಸಂಸ್ಥೆಗಳು ಮಹಿಳೆಯರ ಸಬಲೀಕರಣಕ್ಕಾಗಿ ಸಾಕಷ್ಟು ಯೋಜನೆಗಳ ಮೂಲಕ ಶ್ರಮಿಸುತ್ತಿವೆ. ಅವುಗಳ ಬಗ್ಗೆ ಅರಿತು ಗ್ರಾಮೀಣ ಭಾಗದ ಎಲ್ಲಾ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ಪ್ರಯೋಜನ ಪಡೆಯಬೇಕಾಗಿದೆ. ಮಹಿಳೆಯರ ಮೇಲೆ ದೌರ್ಜನ್ಯ ಹಾಗೂ ಅನ್ಯಾಯವಾದಲ್ಲಿ ಕೂಡಲೇ ಸಂಬಂಧಪಟ್ಟ ಸಹಾಯವಾಣಿಯನ್ನು ಸಂಪರ್ಕಿಸಿ ದೂರನ್ನು ನೀಡಬೇಕಾಗಿದೆ. ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಎಲ್ಲರೂ ಕೈಜೋಡಿಸಬೇಕಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಮಂಜುಳಾ ಮಹಿಳಾ ಗ್ರಾಮಸಭೆಯ ಉದ್ದೇಶ ಮತ್ತು ಸಿಆರ್’ಪಿ ಭ್ರಮರಾ, ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ವಿಜಯ್ ಕುರ್ಮಾ, ಗ್ರಾಮ ಪಂಚಾಯ್ತಿ ಸದಸ್ಯೆ ಚಿಕ್ಕಮ್ಮಯ್ಯ, ಅಂಗನವಾಡಿ ಕಾರ್ಯಕರ್ತೆಯರಾದ ಸುನಂದಮ್ಮ, ಸುಲೋಚನ, ವಿಜಯಲಕ್ಷ್ಮಿ, ಗಂಗಮ್ಮ, ರಾಮಲಕ್ಷ್ಮಮ್ಮ, ಕಮಲಮ್ಮ, ಸತ್ಯವತಿ ಹಾಗೂ ಆಶಾ ಕಾರ್ಯಕರ್ತರು ಭಾಗವಹಿಸಿದ್ದರು.
(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)
Get in Touch With Us info@kalpa.news Whatsapp: 9481252093






Discussion about this post