No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗೌರಿಬಿದನೂರು: ದನಗಳ ಕೊಂಬು, ಮೂಳೆ ಪುಡಿ ಮಾಡುವ ಅಕ್ರಮ ಕೇಂದ್ರ ಬಂದ್

kalpa News by kalpa News
August 22, 2019
in Small Bytes, ಚಿಕ್ಕ ಬಳ್ಳಾಪುರ
0
ಗೌರಿಬಿದನೂರು: ದನಗಳ ಕೊಂಬು, ಮೂಳೆ ಪುಡಿ ಮಾಡುವ ಅಕ್ರಮ ಕೇಂದ್ರ ಬಂದ್
Share on FacebookShare on TwitterShare on WhatsApp

ಗೌರಿಬಿದನೂರು: ತಾಲೂಕಿನ ನಗರಗೆರೆ ಹೋಬಳಿಯ ಜಿ.ಕೊತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೋಳಶೆಟ್ಟಿಹಳ್ಳಿ ಸಮೀಪದಲ್ಲಿರುವ ಖಾಸಗಿ ವ್ಯಕ್ತಿಗೆ ಸೇರಿದ ಜಮೀನಿನಲ್ಲಿ ಅಕ್ರಮವಾಗಿ ದನಗಳ ಕೊಂಬು, ಮೂಳೆ, ತಲೆ ಸೇರಿದಂತೆ ಇನ್ನಿತರ ಅಂಗಗಳನ್ನು ತಂದು ಅದನ್ನು ಪುಡಿ ಮಾಡುವಂತಹ ಘಟಕವನ್ನು ಆರಂಭಿಸಿ ಸ್ಥಳೀಯರಿಗೆ ತೀವ್ರ ತೊಂದರೆ ಮಾಡಲಾಗಿದೆ.

ಈ ವಿಚಾರವಾಗಿ ಸ್ಥಳೀಯರು ಪೊಲೀಸರು, ಗ್ರಾಮ ಪಂಚಾಯಿತಿ ಮತ್ತು ತಾಲೂಕು ದಂಡಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಸ್ಥಳೀಯರು ನೀಡಿದ ದೂರಿನ ಮೇರೆಗೆ ಅಧಿಕಾರಿಗಳು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಘಟಕವನ್ನು ಸುಮಾರು ಎರಡು ತಿಂಗಳ ಹಿಂದೆಯೇ ಯಾವುದೇ ಅನುಮತಿ ಇಲ್ಲದೆ ಗುಡಿಬಂಡೆ ಮೂಲದವರಾದ ಅಬ್ದುಲ್ಲಾ ಮತ್ತು ಚಾಂದ್ ಬಾಷಾ ಎಂಬ ಇಬ್ಬರು ವ್ಯಾಪಾರಿಗಳು ಅವೈಜ್ಞಾನಿಕವಾಗಿ ತಾಲೂಕಿನ ಗಡಿ ಭಾಗದಲ್ಲಿ ರೈತರ ಜಮೀನನ್ನು ಬಾಡಿಗೆ ಪಡೆದಿದ್ದಾರೆ ಜೊತೆಗೆ ಪಕ್ಕದಲ್ಲಿರುವ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ದನಗಳು ಮತ್ತು ಇನ್ನಿತರ ಜಾನುವಾರುಗಳ ತಲೆ, ಕೊಂಬು, ಮೂಳೆ ಸೇರಿದಂತೆ ಇನ್ನಿತರರ ಅಂಗಾಂಗಗಳನ್ನು ತಂದು ಈ ಪ್ರದೇಶದಲ್ಲಿ ಶೇಖರಿಸಿ ಅದನ್ನು ಸಂಸ್ಕರಿಸಿ ತ್ಯಾಜ್ಯವನ್ನು ಪಕ್ಕದ ಜಮೀನುಗಳಿಗೆ ಎಸೆದು ಸುತ್ತಲಿನ ಪ್ರದೇಶವನ್ನು ಮಲಿನಗೊಳಿಸಿದ್ದಾರೆ ಎಂದು ದೂರಲಾಗಿದೆ.

ಇದಲ್ಲದೇ ಇದರಿಂದ ಸುಮಾರು 2-3 ಕಿಮೀ ದೂರದ ವರೆಗೆ ಬರುವ ಕೆಟ್ಟ ವಾಸನೆಯಿಂದ ಸ್ಥಳೀಯ ರೈತರು ತಮ್ಮ ಜಮೀನುಗಳ ಬಳಿ ತೆರಳಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ಈ ಘಟಕದ ಸಮೀಪದಲ್ಲೇ ಇರುವ ವಸತಿ ಶಾಲೆಯ ಮಕ್ಕಳು ಇದರ ಪರಿಣಾಮವಾಗಿ ಶಾಲೆಯನ್ನು ಬಿಟ್ಟಿದ್ದಾರೆ. ಇನ್ನು ರೈತರ ಜಮೀನುಗಳಲ್ಲಿ ಕೆಲಸ ಮಾಡುವ ಯಾವುದೇ ಕಾರ್ಮಿಕರು ಬರುವುದಿಲ್ಲ ಎಂಬುದು ಸ್ಥಳೀಯರು ಆರೋಪವಾಗಿದೆ.

ಇದರ ಪರಿಣಾಮವಾಗಿ ಮಂಗಳವಾರ ಸ್ಥಳೀಯ ಗ್ರಾಮ ಪಂಚಾಯ್ತಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಇಲ್ಲಿನ ತ್ಯಾಜ್ಯವನ್ನು ಹಾಗೂ ಜಾನುವಾರುಗಳ ಅವಶೇಷಗಳನ್ನು ಕೂಡಲೇ ಸ್ಥಳಾಂತರಿಸಿ ಈ ಘಟಕವನ್ನು ಮುಚ್ಚುವಂತೆ ತಿಳಿಸಿದ್ದಾರೆ.

ಈ ಘಟಕದಿಂದ ಸೂಸುವ ಕೆಟ್ಟ ವಾಸನೆಯ ಪರಿಣಾಮವಾಗಿ ಸ್ಥಳೀಯರು ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಲ್ಲಿದ್ದಾರೆ. ಅಲ್ಲದೆ ಘಟಕದ ಸುತ್ತಲೂ ನೂರಾರು ನಾಯಿಗಳು ಜಮಾಯಿಸಿವೆ. ಇದರಿಂದ ಸ್ಥಳೀಯರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ.

ಈ ವಿಚಾರವಾಗಿ ಸ್ಥಳೀಯ ಮುಖಂಡ ಮಾಳಪ್ಪ ಪ್ರತಿಕ್ರಿಯೆ ನೀಡಿ, ಈ ಘಟಕವು ಅಕ್ರಮವಾಗಿ ತಲೆ ಎತ್ತಿದ್ದು ಇದರಿಂದ ಸುತ್ತಲಿನ ಜನತೆಗೆ ಸಂಕಷ್ಟ ಎದುರಾಗಿದೆ. ಅಲ್ಲದೆ ತೀವ್ರ ಮಾಲಿನ್ಯದ ಪರಿಣಾಮವಾಗಿ ರೋಗಗಳ ಭೀತಿಯಲ್ಲಿ ಜನತೆ ಬದುಕುತ್ತಿದ್ದಾರೆ. ಇದರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು ಕೂಡಲೇ ಇದನ್ನು ತೆರವುಗೊಳಿಸದಿದ್ದಲ್ಲಿ ಸ್ಥಳೀಯರೇ ಮುಂದಾಗಿ ಘಟಕವನ್ನು ಸ್ಥಗಿತಗೊಳಿಸಲಾಗುವುದು ಎಂದು ಹೇಳಿದರು.

ಸ್ಥಳೀಯ ರೈತ ಗಂಗಪ್ಪ ಮಾತನಾಡಿ, ಇದೊಂದು ಅಪಾಯಕರವಾದ ಘಟಕವಾಗಿದ್ದು, ಇದರಿಂದ ನಿತ್ಯ ಹೊರಸೂಸುವ ದುರ್ನಾತದಿಂದ ಈ ಭಾಗದ ಜನತೆ ಕಟ್ಟಲಾಗಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ವಹಿಸಿ ಜನರ ಆರೋಗ್ಯವನ್ನು ಕಾಪಾಡಬೇಕಾಗಿದೆ ಎಂದರು.

ಇನ್ನು ಈ ಕುರಿತಂತೆ ಕಲ್ಪ ನ್ಯೂಸ್ ಜೊತೆಯಲ್ಲಿ ಮಾತನಾಡಿದ ತಹಶೀಲ್ದಾರ್ ಎಚ್. ಶ್ರೀನಿವಾಸ್, ತಾಲೂಕಿನ ಗಡಿ ಭಾಗದ ಹಳ್ಳಿಯೊಂದರಲ್ಲಿ ಅಕ್ರಮವಾಗಿ ಜಾನುವಾರುಗಳ ಕೊಂಬು, ತಲೆ ಮತ್ತು ಮೂಳೆಗಳನ್ನು ಪುಡಿ ಮಾಡುವ ಘಟಕ ಸ್ಥಾಪನೆಯಾಗಿರುವ ಬಗ್ಗೆ ಸ್ಥಳೀಯರಿಂದ ದೂರು ಬಂದಿದೆ. ಇದರಿಂದ ಇಲಾಖೆಯ ಅಧಿಕಾರಿಗಳ ಮೂಲಕ ಘಟಕದ ಮಾಲೀಕರಿಗೆ ಎಚ್ಚರಿಕೆ ನೀಡಿ ಗುರುವಾರ ಸಂಜೆಯ ಒಳಗಾಗಿ ಘಟಕ ಸೇರಿದಂತೆ ಅಲ್ಲಿನ ಎಲ್ಲ ತ್ಯಾಜ್ಯವನ್ನು ತೆರವುಗೊಳಿಸುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Tags: Bone CrushingGauribidanurKannada Newsಗೌರಿಬಿದನೂರುದನಗಳ ಕೊಂಬುದನಗಳ ಮೂಳೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹವ್ಯಕ ಮಹಾಸಭಾದಿಂದ ರಾಘವೇಶ್ವರ ಶ್ರೀಗಳಿಗೆ ಗುರುಭಿಕ್ಷಾ ಸೇವೆ

Next Post

ತಾಯಿ-ಮಗುವಿನ ಜೀವ ಉಳಿಸಿದ 108 ಆಂಬ್ಯುಲೆನ್ಸ್‌ ಶುಶ್ರೂಶಕನ ಸಮಯಪ್ರಜ್ಞೆ

kalpa News

kalpa News

Next Post
ತಾಯಿ-ಮಗುವಿನ ಜೀವ ಉಳಿಸಿದ 108 ಆಂಬ್ಯುಲೆನ್ಸ್‌ ಶುಶ್ರೂಶಕನ ಸಮಯಪ್ರಜ್ಞೆ

ತಾಯಿ-ಮಗುವಿನ ಜೀವ ಉಳಿಸಿದ 108 ಆಂಬ್ಯುಲೆನ್ಸ್‌ ಶುಶ್ರೂಶಕನ ಸಮಯಪ್ರಜ್ಞೆ

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL