No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಭಾರತದ ಭಯೋತ್ಪಾದನೆ ನಿಗ್ರಹ ಸಂದೇಶ: ಅಮೆರಿಕ ಪ್ರವಾಸದಲ್ಲಿ ಸರ್ವಪಕ್ಷ  ನಿಯೋಗ

ಗಯಾನಾದ ಉಪಾಧ್ಯಕ್ಷ ಭರತ್ ಜಗ್ದೇವ್, ಡಾ. ಶಶಿ ತರೂರ್, ಸಂಸದ ತೇಜಸ್ವಿ ಸೂರ್ಯ ಭೇಟಿ

kalpa News by kalpa News
May 26, 2025
in ರಾಷ್ಟ್ರೀಯ
0
ಭಾರತದ ಭಯೋತ್ಪಾದನೆ ನಿಗ್ರಹ ಸಂದೇಶ: ಅಮೆರಿಕ ಪ್ರವಾಸದಲ್ಲಿ ಸರ್ವಪಕ್ಷ  ನಿಯೋಗ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಜಾರ್ಜ್‌ಟೌನ್, ಗಯಾನಾ  |

ಡಾ. ಶಶಿ ತರೂರ್, #Shashi Taroor ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಅಮೆರಿಕ ಪ್ರವಾಸದಲ್ಲಿರುವ ಭಾರತೀಯ ಸರ್ವಪಕ್ಷ  ನಿಯೋಗದ ಸದಸ್ಯರು, ಗಯಾನಾ ಗಣರಾಜ್ಯದ ಉಪಾಧ್ಯಕ್ಷ ಘನತೆವೆತ್ತ ಭರತ್ ಜಗ್ದೇವ್ #Bharath Jagdev ಅವರನ್ನು ಭೇಟಿ ಮಾಡಿದ್ದು, ಈ ವೇಳೆ, ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ಭಾರತದ ಶೂನ್ಯ ಸಹಿಷ್ಣುತೆಯ ನಿಲುವು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ#Tejaswi Surya ತಿಳಿಸಿದ್ದಾರೆ.

ಉಪಾಧ್ಯಕ್ಷ ಜಗ್ದೇವ್ ಅವರು ಈ ಹಿಂದೆ 12 ವರ್ಷಗಳ ಕಾಲ ಗಯಾನಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಈ ಪ್ರದೇಶದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು. ಇತ್ತೀಚೆಗೆ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಅವರು ಸ್ಪಷ್ಟವಾಗಿ ಖಂಡಿಸಿ, ಭಾರತದ ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಗೆ ಬಲವಾದ ಬೆಂಬಲ ವ್ಯಕ್ತಪಡಿಸಿದ್ದನ್ನು ಸ್ಮರಿಸಬಹುದು. ಭಾರತ-ಗಯಾನಾ ನಡುವೆ ಹಲವು ಕ್ಷೇತ್ರಗಳಲ್ಲಿನ ಸಹಯೋಗದ ಬಗ್ಗೆಯೂ ಈ ಸಂದರ್ಭದಲ್ಲಿ ಉಭಯ ನಾಯಕರು ಚರ್ಚಿಸಿದರು.
ಸಭೆಯ ನಂತರ ಮಾತನಾಡಿದ ಸೂರ್ಯ ರವರು, “ನಮ್ಮ ನಿಯೋಗವು ಗಯಾನಾದ ಉಪಾಧ್ಯಕ್ಷರಾದ  ಭರತ್ ಜಗ್ದೇವ್ ಅವರನ್ನು ಭೇಟಿ ಮಾಡಿ, ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟ ಸೇರಿದಂತೆ ಹಲವು ವಿಷಯಗಳ ಕುರಿತು ಅವರೊಂದಿಗೆ ಮಾತನಾಡಿದ್ದು, ಜಗ್ದೇವ್ ಅವರು ದೇಶದ ಅತ್ಯಂತ ಗೌರವಾನ್ವಿತ ನಾಯಕರಲ್ಲಿ ಒಬ್ಬರು. ಮೂಲಸೌಕರ್ಯ, ಇಂಧನ, ಫಿನ್ಟೆಕ್ ಮತ್ತು ಕೃಷಿ ಕ್ಷೇತ್ರಗಳಲ್ಲಿನ ಪ್ರಮುಖ ಅಭಿವೃದ್ಧಿ ಯೋಜನೆಗಳಲ್ಲಿ ಭಾರತದೊಂದಿಗೆ ಸಹಕರಿಸಲು ಅವರು ತೀವ್ರ ಆಸಕ್ತಿ ವ್ಯಕ್ತಪಡಿಸಿದ್ದು ವಿಶೇಷ.

ಗಯಾನಾ ಹೊಸ ತೈಲ ನಿಕ್ಷೇಪಗಳನ್ನು ಕಂಡುಕೊಳ್ಳುತ್ತಿದ್ದು, ಶೇ. 30ರಷ್ಟು ವೇಗವಾಗಿ ಬೆಳೆಯುತ್ತಿದೆ. ಹೀಗಾಗಿ, ಭಾರತೀಯ ವ್ಯವಹಾರಗಳಿಗೆ ಇಲ್ಲಿ ಅಪಾರ ಅವಕಾಶಗಳಿವೆ. ನಮ್ಮ ಎರಡೂ ರಾಷ್ಟ್ರಗಳ ನಡುವಿನ ಸಮನ್ವಯದ ಈ ಕ್ಷೇತ್ರಗಳ ಬಗ್ಗೆಯೂ ನಾವು ಚರ್ಚಿಸಿದ್ದೇವೆ.” ಎಂದು ತಿಳಿಸಿದರು.
ಇದಕ್ಕೂ ಮೊದಲು, ತೇಜಸ್ವಿ ಸೂರ್ಯ ಅವರು ಟೆಕ್ಸಿಲಾ ಅಮೆರಿಕನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಯೋತ್ಪಾದನೆಯ ವಿರುದ್ಧ ಭಾರತದ ಶೂನ್ಯ-ಸಹಿಷ್ಣುತಾ ನೀತಿ, ನಿಲುವುಗಳ ಬಗ್ಗೆ ಮಾತನಾಡಿ, ಪಾಕಿಸ್ತಾನ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಭಾರತದ ಸುದೀರ್ಘ ಹೋರಾಟವನ್ನು ಒತ್ತಿ ಹೇಳಿದ್ದು ಗಮನಾರ್ಹ.

“ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆಯನ್ನು ನಿಲ್ಲಿಸಲು ಮತ್ತು ಶಾಂತಿಯನ್ನು ಎತ್ತಿಹಿಡಿಯಲು ಜಗತ್ತು ಒಂದಾಗಬೇಕು. ಆಪರೇಷನ್ ಸಿಂದೂರ್ ನಂತಹ ನಿರ್ಣಾಯಕ ಕ್ರಮಗಳ ಮೂಲಕ ಭಾರತ ಈ ಜಾಗತಿಕ ಪ್ರಯತ್ನದಲ್ಲಿ ಮುಂಚೂಣಿಯಲ್ಲಿದೆ ಎಂದರು.

ಟೆಕ್ಸಿಲಾ, ಭಾರತ-ಗಯಾನಾ ಸಂಬಂಧಗಳನ್ನು ಬಲಪಡಿಸುವ ಪ್ರಮುಖ ಸಂಸ್ಥೆಯಾಗಿದೆ. 2010ರಿಂದ ಇಲ್ಲಿಯವರೆಗೆ 538ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಮತ್ತು 76 ಭಾರತೀಯ ಅಧ್ಯಾಪಕರು ಹಾಗೂ ಸಿಬ್ಬಂದಿಯನ್ನು ಇದು ಆತಿಥ್ಯ ವಹಿಸಿದೆ. 234 ಕ್ಕೂ ಹೆಚ್ಚು ಭಾರತೀಯ ಪದವೀಧರರು ಪ್ರಸ್ತುತ ಗಯಾನಾದ ಆರೋಗ್ಯ ಸೇವಾ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ” ಎಂದು ತಿಳಿಸಿದರು.
ಈ ನಿಯೋಗವು ಹಿರಿಯ ಸಂಸದ ಡಾ. ಶಶಿ ತರೂರ್ ನೇತೃತ್ವದ ಗ್ರೂಪ್ 5ರ ಭಾಗವಾಗಿದೆ ಮತ್ತು ವಿವಿಧ ಪಕ್ಷಗಳ ಸಂಸದರನ್ನು ಒಳಗೊಂಡಿದೆ: ಶಾಂಭವಿ (ಎಲ್‌ಜೆಪಿ – ರಾಮ್ ವಿಲಾಸ್), ಡಾ. ಸರ್ಫರಾಜ್ ಅಹ್ಮದ್ (ಜೆಎಂಎಂ), ಜಿ.ಎಂ. ಹರೀಶ್ ಬಾಲಯೋಗಿ (ಟಿಡಿಪಿ), ಶಶಾಂಕ್ ಮಣಿ ತ್ರಿಪಾಠಿ (ಬಿಜೆಪಿ), ಭುವನೇಶ್ವರ್ ಕಲಿತಾ (ಬಿಜೆಪಿ), ಮಿಲಿಂದ್ ಮುರಳಿ ದಿಯೋರಾ (ಶಿವಸೇನೆ – ಶಿಂಧೆ ಬಣ), ಶ್ರೀ ತೇಜಸ್ವಿ ಸೂರ್ಯ (ಬಿಜೆಪಿ), ಮತ್ತು ರಾಯಭಾರಿ ತರಂಜಿತ್ ಸಿಂಗ್ ಸಂಧು ಸೇರಿದಂತೆ ನಿಯೋಗದ ಒಂದು ಭಾಗವು ನ್ಯೂಯಾರ್ಕ್‌ನಲ್ಲಿರುವ 9/11 ಸ್ಮಾರಕಕ್ಕೆ ಭೇಟಿ ನೀಡಿದರೆ, ಸೂರ್ಯ ಮತ್ತು ಡಾ. ಅಹ್ಮದ್ ಅವರು ಭಾರತದಿಂದ 30 ಗಂಟೆಗಳ ಪ್ರಯಾಣದ ನಂತರ ನೇರವಾಗಿ ಗಯಾನಾಗೆ ತೆರಳಿದ್ದಾರೆ.

ಈ ಉಪಕ್ರಮವು ಭಯೋತ್ಪಾದನೆಯ ವಿರುದ್ಧ ಭಾರತದ ಬಲವಾದ ನಿಲುವನ್ನು ಜಗತ್ತಿಗೆ ತಲುಪಿಸಲು ಮತ್ತು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಜಾಗತಿಕ ಬೆಂಬಲವನ್ನು ಪಡೆಯಲು ಭಾರತ ಸರ್ಕಾರವು ಕೈಗೊಂಡ ಬಹು-ದೇಶಗಳ ಅಭಿಯಾನದ ಭಾಗವಾಗಿದೆ ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Bharath JagdevGeorgetown / GuyanaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaShashi TaroorTejaswi suryaಗಯಾನಾಜಾರ್ಜ್‌ಟೌನ್ತೇಜಸ್ವಿ ಸೂರ್ಯಭರತ್ ಜಗ್ದೇವ್ಶಶಿ ತರೂರ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Heavy summer rush in Tirumala | Continuous supply of Annaprasadams to devotees

Next Post

ಕೆಸಿಇಟಿ | ಕ್ರೈಸ್ಟ್‌ಕಿಂಗ್ ಪಿಯು ಕಾಲೇಜಿನ ಅನಂತ್’ ಗೆ 57ನೇ ರ್‍ಯಾಂಕ್

kalpa News

kalpa News

Next Post
ಕೆಸಿಇಟಿ | ಕ್ರೈಸ್ಟ್‌ಕಿಂಗ್ ಪಿಯು ಕಾಲೇಜಿನ ಅನಂತ್’ ಗೆ 57ನೇ ರ್‍ಯಾಂಕ್

ಕೆಸಿಇಟಿ | ಕ್ರೈಸ್ಟ್‌ಕಿಂಗ್ ಪಿಯು ಕಾಲೇಜಿನ ಅನಂತ್' ಗೆ 57ನೇ ರ್‍ಯಾಂಕ್

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL