ನವದೆಹಲಿ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಹಿರಿಯ ಸಾಹಿತಿ ಗಿರೀಶ್ ಕಾನಾರ್ಡ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿಯವರು, ನಟನೆ ಸೇರಿದಂತೆ ಬಹುಮುಖ ಪ್ರತಿಭೆಯನ್ನು ಹೊಂದಿದ್ದ ಕಾರ್ನಾಡರ ಕೊಡುಗೆ ದೊಡ್ಡದಿದೆ. ಅವರ ಸೇವೆಗಳು ಮುಂದಿನಗಳಲ್ಲೂ ಸಹ ಹಸಿರಾಗಿರುತ್ತವೆ. ಇವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
Girish Karnad will be remembered for his versatile acting across all mediums. He also spoke passionately on causes dear to him. His works will continue being popular in the years to come. Saddened by his demise. May his soul rest in peace.
— Narendra Modi (@narendramodi) June 10, 2019
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟ್ವೀಟ್ ಮಾಡಿದ್ದು, ಗಿರೀಶ್ ಕಾರ್ನಾಡ್ ಅವರ ನಿಧನದಿಂದ ನಮ್ಮ ಸಾಂಸ್ಕೃತಿಕ ಜಗತ್ತು ಇಂದು ಬಡವಾಗಿದೆ. ಕಾರ್ನಾಡ್ ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ.
Sad to hear of the passing of Girish Karnad, writer, actor and doyen of Indian theatre. Our cultural world is poorer today. My condolences to his family and to the many who followed his work #PresidentKovind
— President of India (@rashtrapatibhvn) June 10, 2019
ಇನ್ನು, ಕಾರ್ನಾಡ್ ಅವರ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ನಿಧನದ ಸುದ್ದಿ ಕೇಳಿ ತುಂಬಾ ದುಃಖವಾಗಿದೆ. ಸಾಹಿತ್ಯ, ರಂಗಭೂಮಿ, ಸಿನಿಮಾ ಕ್ಷೇತ್ರಕ್ಕೆ ಅವರ ಕೊಡುಗೆ ಅನುಪಮವಾಗಿದ್ದು, ಯಾವಾಗಲೂ ನೆನಪಿನಲ್ಲಿ ಉಳಿಯುವಂತಾಗಿದೆ.ಅವರ ನಿಧನದಿಂದಾಗಿ ನಾವು ಸಾಂಸ್ಕೃತಿಕ ರಾಯಬಾರಿಯನ್ನು ಕಳೆದುಕೊಂಡಿದ್ದೇವೆ ಎಂದು ಸಂತಾಪ ಸೂಚಿಸಿದ್ದಾರೆ.
Deeply saddened to hear of the demise of Jnanpith laureate writer and iconic actor/film maker, Sri #GirishKarnad .
His outstanding contribution to literature, theatre and films will always be remembered.
In his death, we lost a cultural ambassador. May his soul rest in peace. pic.twitter.com/8GslPO50Jy
— CM of Karnataka (@CMofKarnataka) June 10, 2019
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಹಿರಿಯ ಸಾಹಿತಿ, ಚಿಂತಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನಿಧನದಿಂದ ನಾಡಿನ ಬಹುಮುಖ್ಯ ಸಾಕ್ಷಿಪ್ರಜ್ಞೆಯ ದನಿ ಮೌನವಾದಂತಾಗಿದೆ. ಈ ದುರಿತದ ಕಾಲದಲ್ಲಿ ಅವರು ನಮ್ಮೊಡನೆ ಇನ್ನಷ್ಟು ಕಾಲ ಇರಬೇಕಿತ್ತು. ಅವರ ಸಾವಿನ ಶೋಕದಲ್ಲಿ ನಾನು ಭಾಗಿಯಾಗಿದ್ದೇನೆ ಎಂದಿದ್ದಾರೆ.
ಹಿರಿಯ ಸಾಹಿತಿ,ಚಿಂತಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನಿಧನದಿಂದ ನಾಡಿನ ಬಹುಮುಖ್ಯ ಸಾಕ್ಷಿಪ್ರಜ್ಞೆಯ ದನಿ ಮೌನವಾದಂತಾಗಿದೆ. ಈ ದುರಿತದ ಕಾಲದಲ್ಲಿ ಅವರು ನಮ್ಮೊಡನೆ ಇನ್ನಷ್ಟು ಕಾಲ ಇರಬೇಕಿತ್ತು. ಅವರ ಸಾವಿನ ಶೋಕದಲ್ಲಿ ನಾನು ಭಾಗಿಯಾಗಿದ್ದೇನೆ.#GirishKarnad pic.twitter.com/VWTWZO12xa
— Siddaramaiah (@siddaramaiah) June 10, 2019
Discussion about this post