Friday, August 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ಶರೀರ ಭಗವಂತ ನೀಡಿದ ಅನರ್ಘ್ಯ ರತ್ನ: ರಾಘವೇಶ್ವರ ಶ್ರೀ

August 29, 2024
in ಉತ್ತರ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಶರೀರವೆಂಬುದು ಭಗವಂತ ನೀಡಿದ ಅನರ್ಘ್ಯ ರತ್ನ. ಇದರ ರಚನೆಗೆ ಹೋಲಿಕೆ ಇಲ್ಲ. ಜೀವನ ಮಾರ್ಗದಲ್ಲಿ ನಮ್ಮನ್ನು ಒಯ್ಯುವ ಸಾಧನ ಅದು. ಪರಮಾರ್ಥದ ಸಾಧನೆ ಕೂಡಾ ಇದರ ಮೂಲಕವೇ ಆಗಬೇಕು. ಇದನ್ನು ಚೆನ್ನಾಗಿ ಇಟ್ಟುಕೊಳ್ಳುವುದು ನಮ್ಮ ಕರ್ತವ್ಯ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು.

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 39ನೇ ದಿನ ಮೈಸೂರು, ಹುಬ್ಬಳ್ಳಿ-ಧಾರವಾಡ, ಹಾವೇರಿ, ದಾವಣಗೆರೆ ವಲಯಗಳ ಸರ್ವ ಸೇವೆ ಸ್ವೀಕರಿಸಿ, ಕಾಲ ಸರಣಿಯ ಪ್ರವಚನ ಅನುಗ್ರಹಿಸಿದರು. ಎಲ್ಲ ಸಾಧನೆಗೂ ಕಾರಣವಾಗುವ ಶರೀರಕ್ಕೆ ಇರುವ ದೊಡ್ಡ ಅಪಾಯ ರೋಗದಿಂದ. ಇಂಥ ರೋಗಗಳು ಬಾರದಂತೆ ಮುನ್ನೆಚ್ಚರಿಕೆ ವಹಿಸಿಕೊಳ್ಳಲು ಜ್ಯೋತಿಷ ಈ ನಿಟ್ಟಿನಲ್ಲಿ ನೆರವಾಗುತ್ತದೆ ಎಂದು ಹೇಳಿದರು.
ಜ್ಯೋತಿಷ ಒಂಬತ್ತು ಗ್ರಹಗಳ ಮೂಲಕ ನಮ್ಮ ಶರೀರಕ್ಕೆ ಬರುವ ರೋಗಗಳನ್ನು ತೋರಿಸಿಕೊಡುತ್ತದೆ. ಆದರೆ ಆಯುರ್ವೇದ ವಾತ, ಪಿತ್ತ, ಕಫದಿಂದ ಎಲ್ಲ ರೋಗವನ್ನೂ ಅಂದಾಜಿಸುತ್ತದೆ. ದೇಹಕ್ಕೆ ಬಲವಿದ್ದಾಗ, ರೋಗಕ್ಕೆ ಬಲ ಕಡಿಮೆ. ದೇಹದ ಬಲ ಕಡಿಮೆಯಾದಾಗ ರೋಗದ ಬಲ ಹೆಚ್ಚುತ್ತದೆ. ಹೀಗೆ ಅನಂತ ರೋಗಗಳು ಇವೆ. ಇವೆಲ್ಲವನ್ನೂ ಗ್ರಹಗತಿಗಳಿಂದ ತಿಳಿದುಕೊಳ್ಳಬಹುದು ಎಂದು ವಿವರಿಸಿದರು.

ವಾತ-ಪಿತ್ತ-ಕಫ, ಸಪ್ತಧಾತು, ದೇವತೆಗಳ ಮೂಲಕ ಜ್ಯೋತಿಷ ರೋಗಗಳನ್ನು ನಿರೂಪಿಸುತ್ತವೆ. ಜತೆಗೆ ಇವುಗಳ ಪರಿಹಾರವನ್ನೂ ನಿರೂಪಿಸುತ್ತದೆ. ಜ್ಯೋತಿಷ, ಆಯುರ್ವೇದ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಂದಕ್ಕೊಂದು ಪೂರಕ ಎಂದು ಬಣ್ಣಿಸಿದರು. ಜ್ಯೋತಿಷ ಮತ್ತು ಆಯುರ್ವೇದವನ್ನು ಬಲ್ಲವನು ಅತ್ಯುತ್ತಮ ವೈದ್ಯನಾಗಬಲ್ಲ. ರೋಗನಿರ್ಣಯದಲ್ಲಿ ಇವೆರಡೂ ಜತೆಜತೆಗೆ ಸಾಗಬೇಕು ಎಂದು ಅಭಿಪ್ರಾಯಪಟ್ಟರು.
ಜಾತಕದಲ್ಲಿ ಶನಿ ದುರ್ಬಲ ಅಥವಾ ದುಸ್ತನಾದರೆ, ರೋಗಕಾರಕ ಸ್ಥಾನದಲ್ಲಿದ್ದರೆ ವಾತಸಂಬಂಧಿ ರೋಗಗಳು ಬರುತ್ತವೆ. ಪಿತ್ತಸಂಬಂಧಿ ರೋಗಗಳು ರವಿ ಹಾಗೂ ಕುಜನ ಕಾರಣದಿಂದ ಬರುತ್ತದೆ. ಕಫದಿಂದ ಬರುವ ಕಾಯಿಲೆಗಳು ಗುರುವಿನಿಂದ ಬರುತ್ತವೆ. ಚಂದ್ರ-ಶುಕ್ರ ಗ್ರಹಗಳಿಂದ ಸಂಸರ್ಗಜ ರೋಗಗಳು ಬರುತ್ತವೆ. ಬುಧನಿಂದ ಸಂನಿಪಾತಕ ರೋಗಗಳು ಬರುತ್ತವೆ. ಇದಕ್ಕೆ ಚಿಕಿತ್ಸೆ ಕೂಡಾ ಕಷ್ಟಕರ ಎಂದು ವಿಶ್ಲೇಷಿಸಿದರು.

ವಾತ-ಪಿತ್ತ-ಕಫಗಳು ತತ್ವಾತ್ಮಕವಾಗಿ ಸಂಯೋಜನೆಯಾಗುವುದರಿಂದ ಸಪ್ತಧಾತುಗಳು ನಿರ್ಮಾಣವಾಗುತ್ತವೆ. ಆಧುನಿಕ ವೈದ್ಯವಿಜ್ಞಾನವನ್ನು ಜ್ಯೋತಿಷದ ಮೂಲಕವೂ ಅರ್ಥ ಮಾಡಿಕೊಳ್ಳಬಹುದು. ಕಾಲ ಹಿತೈಷಿಯಾಗಿ ನಮ್ಮೊಂದಿಗೆ ಪ್ರತಿ ಕ್ಷಣವೂ ಮಾತನಾಡುತ್ತದೆ. ಅನವರತವಾಗಿ ನಮ್ಮ ಹಿತಕ್ಕಾಗಿ ನಮ್ಮೊಂದಿಗೆ ಮಾತನಾಡುತ್ತಿರುತ್ತದೆ. ಸೃಷ್ಟಿಚಕ್ರದಲ್ಲಿ ಒಂದು ನಕ್ಷೆಯನ್ನು ಕೊಟ್ಟು ನಮ್ಮ ಇರುವಿಕೆಯನ್ನು ತೋರಿಸಿಕೊಡುತ್ತದೆ. ಗ್ರಹ- ರಾಶಿಗಳ ಪರಿಭಾಷೆಯಲ್ಲಿ ನಮ್ಮ ಇರುವಿಕೆ, ಮುಂದಿನ ದಾರಿಯ ಬಗ್ಗೆಯೂ ತಿಳಿಸಿಕೊಡುತ್ತದೆ. ಭವಿಷ್ಯದ ಸಂಪತ್ತು- ಆಪತ್ತುಗಳನ್ನು ಹಾಗೂ ಅದರ ಮೂಲವನ್ನು ತೋರಿಸಿಕೊಡುತ್ತದೆ. ಆ ಭಾಷೆಯನ್ನು ಅರ್ಥ ಮಾಡಿಕೊಳ್ಳುವ ಶಕ್ತಿ ನಮಗಿರಬೇಕು ಎಂದು ವಿಶ್ಲೇಷಿಸಿದರು.

http://kalpa.news/wp-content/uploads/2024/04/VID-20240426-WA0008.mp4

ಶರೀರದ ಪ್ರತಿ ಅವಯವಗಳಿಗೂ ಒಬ್ಬೊಬ್ಬ ದೇವರು ಇದ್ದಾರೆ. ಪ್ರತಿ ಕ್ರಿಯೆಗೂ ದೇವತೆ ಇದೆ. ಅವುಗಳಿಗೆ ಕೋಪ ಬಂದಾಗ ನಮ್ಮ ಆರೋಗ್ಯದಲ್ಲಿ ಏರು ಪೇರು ಆಗಬಹುದು. ಶರೀರವನ್ನು ಅದು ಬಂದ ಕಾರಣಕ್ಕೆ ಬಳಸದಿದ್ದರೆ, ಆಯಾ ದೇವತೆಗಳಿಗೆ ಕೋಪ ಬರುತ್ತದೆ. ಇದು ರೋಗಕ್ಕೆ ಕಾರಣವಾಗುತ್ತದೆ ಎಂದರು.

ಇಂದಿನ ಅನಾವರಣದ ಬಗ್ಗೆ ಪ್ರಸ್ತಾವಿಸಿ, ಶ್ರೇಷ್ಠ ಕಾರ್ಯಕರ್ತನ ವ್ಯಕ್ತಿತ್ವದ ಅನಾವರಣ ಇಂದು ನಡೆದಿದೆ. ಅವರ ಭಕ್ತಿ ಹಾಗೂ ಕಾರ್ಯಗಳಿಂದಾಗಿ ಅವರು ಶಾಶ್ವತವಾಗಿ ಉಳಿದಿದ್ದಾರೆ. ಭೌತಿಕತೆಗಿಂತ ಹೆಚ್ಚಿನ ಭಾವನಾತ್ಮಕತೆ ಕೆಲವು ಕಡೆ ಇರುತ್ತದೆ. ಆದರೆ ಅವರು ಭಾವವನ್ನು ತುಂಬಿ ಕೊಟ್ಟವರು. ಯಾವುದೋ ಶುಭಗಳಿಗೆಯಲ್ಲಿ ಸಂಪರ್ಕಕ್ಕೆ ಬಂದಿದ್ದು, ಜನ್ಮಜನ್ಮಾಂತರದ ಬಂಧ ಎನ್ನುವ ರೀತಿಯಲ್ಲಿ ಬೆಳೆಯಿತು. ಅಂಥ ಬಾಂಧವ್ಯ ಪ್ರಮೋದ್ ರಾವ್‍ನದ್ದು. ಮೈಸೂರಿನ ಮಠ ಎನ್ನುವ ಮಟ್ಟಕ್ಕೆ ಆ ಮನೆ ಇತ್ತು. ಎಷ್ಟೋ ಸಭೆ, ಸಮಾಲೋಚನೆಗಳು, ಮಹತ್ವದ ನಿರ್ಣಯಗಳು ಅಲ್ಲಿ ನಡೆದಿವೆ. ಅನೇಕರು ಬೆಳಕಿಗೆ ಬಂದದ್ದು ಅಲ್ಲಿಂದ ಎಂದು ಬಣ್ಣಿಸಿದರು.

ಆ ಚೇತನಕ್ಕೆ ಶಾಶ್ವತ ಶಾಂತಿ ದೊರಕಬೇಕು. ಇಡೀ ಕಾರ್ಯಕರ್ತರ ಸಮೂಹದ ಪರವಾಗಿ ಅವರನ್ನು ನೆನೆಯೋಣ. ನಿಜ ಗುರುವಿನಲ್ಲಿ ಮನಸ್ಸು ಸ್ಥಿರವಾಗಿ ಬರಲು ಪ್ರಮೋದ್ ಸ್ಫೂರ್ತಿಯಾಗಲಿ ಎಂದು ಆಶಿಸಿದರು.

ಮೈಸೂರಿನ ಅಪೂರ್ವ ಕಾರ್ಯಕರ್ತ ಕೀರ್ತಿಶೇಷ ಪ್ರಮೋದ್ ಹೆಗಡೆಯವರ ವ್ಯಕ್ತಿತ್ವದ ಅನಾವರಣವನ್ನು ಅವರ ಪತ್ನಿ ವಿಜಯಾ ಪ್ರಮೋದ್ ರಾವ್ ನೆರವೇರಿಸಿದರು. ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಮಂಜುನಾಥ ಸುವರ್ಣಗದ್ದೆ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಪಂಡಿತ್, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ಅರವಿಂದ ಬಂಗಲಗಲ್ಲು, ಸುಬ್ರಾಯ ಅಗ್ನಿಹೋತ್ರಿ, ಶ್ರೀಶ ಶಾಸ್ತ್ರಿ, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಶ್ರೀಮಠದ ಲೋಕಸಂಪರ್ಕಾಧಿಕಾರಿ ಹರಿಪ್ರಸಾದ್ ಪೆರಿಯಾಪು, ಮೋಹನ ಹರಿಹರ, ವಿಶ್ವನಾಥ ಸಾರಂಗ, ಡಾ.ಎಸ್.ಆರ್.ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news                                                      

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaUttara Kannadaಗೋಕರ್ಣ
Previous Post

ಉನ್ನತ ಶಿಕ್ಷಣಕ್ಕಾಗಿ ಅಣ್ಣಾಮಲೈ ವಿದೇಶಕ್ಕೆ | ತಮಿಳುನಾಡು ಬಿಜೆಪಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ?

Next Post

ಸಾವಿರ ಆನೆ ಬಲದ ನಿಜವಾದ ಹೀರೋ `ಅಪ್ಪ’

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಾವಿರ ಆನೆ ಬಲದ ನಿಜವಾದ ಹೀರೋ `ಅಪ್ಪ'

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ ದಸರಾ-2025 ಸಿದ್ಧತೆಗೆ ಮಹತ್ವದ ಸಭೆ | ಏನೆಲ್ಲಾ ಚರ್ಚೆಯಾಯ್ತು? ಶಾಸಕರ ಸೂಚನೆಯೇನು?

August 8, 2025

ಈ ಕಾರಣಕ್ಕಾಗಿ ಹೆಣ್ಣುಮಕ್ಕಳಿಗೆ ಕರಾಟೆ ಕಲಿಸಿ | ಬಹುಭಾಷಾ ನಟ ಸುಮನ್ ತಲ್ವಾರ್ ಕರೆ

August 8, 2025

ಕುವೆಂಪು ವಿವಿ: ಸ್ನಾತಕೋತ್ತರ ಪದವಿ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | ಎಷ್ಟು ದಿನ?

August 8, 2025

ಬೆಂಗಳೂರು, ಮೈಸೂರಿನಿಂದ ಹೊರಡುವ ಈ ರೈಲುಗಳು, ಈ ದಿನ ತಡವಾಗಿ ಹೊರಡಲಿವೆ | ಇಲ್ಲಿದೆ ವಿವರ

August 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ ದಸರಾ-2025 ಸಿದ್ಧತೆಗೆ ಮಹತ್ವದ ಸಭೆ | ಏನೆಲ್ಲಾ ಚರ್ಚೆಯಾಯ್ತು? ಶಾಸಕರ ಸೂಚನೆಯೇನು?

August 8, 2025

ಈ ಕಾರಣಕ್ಕಾಗಿ ಹೆಣ್ಣುಮಕ್ಕಳಿಗೆ ಕರಾಟೆ ಕಲಿಸಿ | ಬಹುಭಾಷಾ ನಟ ಸುಮನ್ ತಲ್ವಾರ್ ಕರೆ

August 8, 2025

ಕುವೆಂಪು ವಿವಿ: ಸ್ನಾತಕೋತ್ತರ ಪದವಿ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | ಎಷ್ಟು ದಿನ?

August 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!