No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Saturday, May 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಇಹಬಂಧನದಿಂದ ಶಿಷ್ಯರು ಮುಕ್ತರಾಗಬೇಕು: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 20, 2024
in ಉತ್ತರ ಕನ್ನಡ
0
ಇಹಬಂಧನದಿಂದ ಶಿಷ್ಯರು ಮುಕ್ತರಾಗಬೇಕು: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಗಗನವೇ ಗಡಿ ಎನ್ನುವುದು ಸನ್ಯಾಸ ಧರ್ಮದ ಭಾವ. ಇಹ ಬಂಧನಗಳಿಂದ ಶಿಷ್ಯರು ಮುಕ್ತರಾಗಬೇಕು. ಪ್ರತಿಯೊಬ್ಬರ ಜೀವನ ಸೀಮೋಲ್ಲಂಘನೆಯಲ್ಲಿ ಪರಿಸಮಾಪ್ತಿಯಾಗಲಿ. ಇದೇ ಸೀಮೋಲ್ಲಂಘನದ ಸ್ಪಷ್ಟ ಸಂದೇಶ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ #Raghaweshwara Shri ನುಡಿದರು.

ಅನಾವರಣ ಚಾತುರ್ಮಾಸ್ಯ ಸೀಮೋಲ್ಲಂಘನೆಯ ಧರ್ಮಸಭೆಯಲ್ಲಿ ಶ್ರೀಗಳು ಆಶೀವರ್ಚನ ನೀಡಿದರು. ಭಕ್ತರೇ ಮಠಕ್ಕೆ ಶೋಭೆ. ಅಂತೆಯೇ ಚಾತುರ್ಮಾಸ್ಯಕ್ಕೆ ಶೋಭೆ ಬರುವಲ್ಲಿ ಗುರುಗಳಷ್ಟೇ ಶಿಷ್ಯರು ಕೂಡ ಮುಖ್ಯ ಎಂದು ವಿಶ್ಲೇಷಿಸಿದರು.
ಸಾಮಾನ್ಯರು ಅಸಾಮಾನ್ಯರಾಗಲು ನೆರವಾಗುವುದು ಸೀಮೋಲ್ಲಂಘನೆ. ಎಲ್ಲ ಬಂಧನಗಳಿಂದ ಶಿಷ್ಯರು ಮುಕ್ತರಾಗುವಂತಾಗಬೇಕು. ಅದೇ ಸೀಮೋಲ್ಲಂಘನದ ಸಂದೇಶ ಎಂದರು. ನಮ್ಮ ಕರ್ಮಗಳ ಬಂಧನದಲ್ಲಿ ನಾವಿದ್ದೇವೆ. ಅದರಿಂದ ಹೊರಬರುವುದೇ ಸೀಮೋಲ್ಲಂಘನೆ. ಸತ್ವ, ರಜೋ, ತಾಮಸಗುಣಗಳೇ ಸೀಮೆ. ಅವುಗಳನ್ನು ಮೀರಿ ನಾವು ಬೆಳೆಯಬೇಕು ಎಂದು ಆಶಿಸಿದರು.

Also read: ಗಮನಿಸಿ! ಸೆ.21ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ

ಕಾಲದ ಮಹತ್ವವನ್ನು ಎಲ್ಲರೂ ಅರಿತುಕೊಂಡು ಎಲ್ಲರ ಕಾಲ ಶುಭಕಾಲವಾಗಿ ಮುಂದುವರಿಯಲಿ ಎಂದು ಹಾರೈಸಿದರು. ದೇವರು ಮತ್ತು ಗುರು ನಮ್ಮ ಜೀವನದ ಲಕ್ಷ್ಯ ಮತ್ತು ಮಾರ್ಗ. ಸುಖದಲ್ಲಿರುವಾಗ ಯುಗವೂ ಕ್ಷಣವಾಗುತ್ತದೆ. ದುಃಖದಲ್ಲಿರುವಾಗ ಕ್ಷಣವೂ ಯುಗವಾಗುತ್ತದೆ. ಆದರೆ 60 ದಿನಗಳ ಈ ಹಬ್ಬ ಯಾರಿಗೂ ಧೀರ್ಘ ಅನಿಸಿಲ್ಲ. ಈ ಸಂಪ್ರದಾಯವನ್ನು ಸಾವಿರಾರು ಶಿಷ್ಯಭಕ್ತರು ಆಸ್ವಾದನೆ ಮಾಡಿದ್ದಾರೆ ಎಂದರು. ಅನಾವರಣ ಮತ್ತು ಕಾಲಪ್ರವಚನ ಸರಣಿ ಎರಡೂ ಚಾತುರ್ಮಾಸ್ಯದ ಬಳಿಕವೂ ಮುಂದುವರಿಯಲಿದೆ ಎಂದು ಹೇಳಿದರು. ಜೌತಿಷ ಮತ್ತು ಕಾಲ, ಆಯುರ್ವೇದ ಮತ್ತು ಕಾಲ ಹಾಗೂ ಧರ್ಮಶಾಸ್ತ್ರ ಮತ್ತು ಕಾಲದ ಸಂಬಂಧದ ಪ್ರವಚನ ಮುಂದುವರಿಯಲಿದೆ ಎಂದರು.

ಇಂದಿನ ಅನಾವರಣ ಎಲ್ಲ ಅನಾವರಣಗಳ ಮುಕುಟಮಣಿ. ಜಗತ್ತಿಗೆ ರಾಮನನ್ನು ಅನಾವರಣ ಮಾಡಿದವರು ಅಗಸ್ತ್ಯರು. ಅವರು ಅರ್ಚಿಸುತ್ತಿದ್ದ ಷಡ್ವಿಗ್ರಹಗಳನ್ನು ಪೂಜಿಸುತ್ತಿದ್ದರು. ಅವುಗಳನ್ನು ವರದಾಖ್ಯರಿಗೆ ಅವುಗಳನ್ನು ನೀಡಿದ್ದರು ಎನ್ನುವುದನ್ನು ಹವ್ಯಕ ಉತ್ಪತ್ತಿಯ ಇತಿಹಾಸ ಕೃತಿಯಲ್ಲಿ 33ನೇ ರಾಘವೇಶ್ವರರು ಉಲ್ಲೇಖಿಸಿದ್ದನ್ನು ಶ್ರೀಗಳು ವಿವರಿಸಿದರು.

ಕೆಕ್ಕಾರು ಹಾಗೂ ರಾಮಚಂದ್ರಾಪುರ ಮಠ ವಿಲೀನವಾದಾಗ ಮೂರು ವಿಗ್ರಹಗಳು ಕೆಕ್ಕಾರಿನಲ್ಲೇ ಉಳಿದವು. ಇವು ಅತ್ಯಾಕರ್ಷಕ. ಕೆಕ್ಕಾರುಮಠದ ರಾಮಮೂರ್ತಿಗೆ ಜ್ಞಾನಮುದ್ರೆ ಹೃದಯದಲ್ಲಿದೆ. ಪರಮಾತ್ಮನ ಜತೆಗೆ ಜೀವಾತ್ಮ ಸೇರಬೇಕು ಎನ್ನುವುದು ಜ್ಞಾನಮುದ್ರೆಯ ಸಂಕೇತ. ಇದು ಜೀವನದ ಧನ್ಯತೆ, ಪರಿಪೂರ್ಣತೆಯನ್ನು ಹೇಳುವಂಥದ್ದು. ಜೀವ- ದೇವ ಇರುವ ಹೃದಯದಲ್ಲಿ ಈ ಮುದ್ರೆ ಇದೆ.

http://kalpa.news/wp-content/uploads/2024/04/VID-20240426-WA0008.mp4

ಲಕ್ಷ್ಮಣನ ಕೈಯಲ್ಲಿ ಚಾಮರವೂ ಇದೆ; ಧನಸ್ಸೂ ಇದೆ. ಲಕ್ಷ್ಮಣ ಇಲ್ಲಿ ಸೇವಕ ಹಾಗೂ ಸೈನಿಕ. ಇಂಥ ಅಪೂರ್ವ ವಿಗ್ರಹಗಳ ಅನಾವರಣ ಇಂದು ಆಗಿರುವುದು ಅರ್ಥಪೂರ್ಣ. ಶಿಷ್ಯರು ಆ ಭಾವದಿಂದ ಕೆಕ್ಕಾರು ಮಠದ ರಾಮನನ್ನು ನೋಡಬೇಕು ಎಂದು ಬಣ್ಣಿಸಿದರು.

ನಮ್ಮ ವ್ಯವಸ್ಥೆ ಅದನ್ನು ಅಷ್ಟು ಶದ್ಧಾಭಕ್ತಿಯಿಂದ ನಡೆಸಿಕೊಂಡು ಹೋಗಬೇಕು ಎನ್ನುವುದು ಇದರ ಆಶಯ. ಮುಂದೆ ಯಾವ ಸಂದರ್ಭ ಇದೆಯೋ ಎನ್ನುವುದನ್ನು ಶಂಕರರೇ ನಿರ್ಧರಿಸಬೇಕು. ತುಂಬು ಕಾಳಜಿ, ಮುತುವರ್ಜಿಯಿಂದ ಇದನ್ನು ನಿರ್ವಹಿಸಿಕೊಂಡು ಹೋಗಬೇಕು ಎಂದು ಸೂಚಿಸಿದರು. ಈ ನವರಾತ್ರಿಯಲ್ಲಿ ಪಟ್ಟಾಭಿರಾಮ ಹಾಗೂ ತಪೋಭಿರಾಮ ಪರಸ್ಪರ ಸಂಧಿಸಲಿದ್ದಾರೆ. ಅಲ್ಲಿ ದೊಡ್ಡ ಕೌತುಕ ಸಂಭವಿಸಬಹುದು ಎಂಬ ನಿರೀಕ್ಷೆ ಇದೆ ಎಂದರು. ಮುಕ್ತಿಸದೃಶ ಬದುಕು ಪಟ್ಟಾಭಿರಾಮನ ಸಂದೇಶ. ತಪೋಭಿರಾಮ ಮುಕ್ತಿಯ ಸಾಧನವನ್ನು ನೀಡುತ್ತಾನೆ ಎಂದು ಹೇಳಿದರು.

ಕಾಲ ಪ್ರವಚನ ಸರಣಿಗೆ ನಾವು ಕೇವಲ ಸಾಕ್ಷಿಗಳಷ್ಟೇ ಆಗಿದ್ದೆವು. ಭಗವತ್‍ಪ್ರೇರಣೆಯಿಂದ ಜೌತಿಷದ ಪಾಠ ನಡೆದಿದೆ. ಅದು ಜೀವನಕ್ಕೆ ಸಲ್ಲುವಂತದ್ದು. ಅತ್ಯಂತ ಆಪ್ಯಾಯಮಾನವಾದದ್ದು ಎಂದರು.

ಕೆಕ್ಕಾರು ರಾಮದೇವರ ಮಹತಿಯನ್ನು ಶ್ರೀಗಳು ಅನಾವರಣಗೊಳಿಸಿದರು. ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಮಂಜುನಾಥ ಸುವರ್ಣಗದ್ದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್, ವಿವಿವಿ ಗೌರವಾಧ್ಯಕ್ಷ ಡಿ.ಡಿ.ಶರ್ಮಾ, ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಪದಾಧಿಕಾರಿಗಳಾದ ಹೇರಂಭ ಶಾಸ್ತ್ರಿ, ಪ್ರಸನ್ನ ಉಡುಚೆ, ಜಿ.ಎಸ್.ಹೆಗಡೆ, ವಿವಿಧ ಮಂಡಲಗಳ ಅಧ್ಯಕ್ಷರಾದ ಸುಬ್ರಾಯ ಭಟ್ ಮುರೂರು, ಆರ್.ಜಿ.ಹೆಗಡೆ ಹೊಸಾಕುಳಿ, ಉದಯಶಂಕರ ನೀರ್ಪಾಜೆ, ಕೃಷ್ಣಮೂರ್ತಿ ಮಾಡಾವು, ಮುರಳಿ ಗೀಜಗಾರ್, ವಿವಿವಿ ಕೇಂದ್ರೀಯ ಸಮಿತಿ ಗೌರವಾಧ್ಯಕ್ಷ ಆರ್.ಎಸ್.ಹೆಗಡೆ ಹರಗಿ, ಅಧ್ಯಕ್ಷ ಎಸ್.ಎಸ್.ಹೆಗಡೆ, ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ಚಾತುರ್ಮಾಸ್ಯ ಸೇವಾಸಮಿತಿ ಕಾರ್ಯದರ್ಶಿ ಶ್ರೀಕಾಂತ್ ಪಂಡಿತ್, ಕೋಶಾಧ್ಯಕ್ಷ ಸುಧಾಕರ ಬಡಗಣಿ, ಶ್ರೀಕಾರ್ಯದರ್ಶಿ ಮಧು ಜಿ.ಕೆ, ಶಾಸ್ತ್ರಿಗಳಾದ ಸುಬ್ರಾಯ ಅಗ್ನಿಹೋತ್ರಿ, ಶ್ರೀಶಶಾಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು. ಪ್ರಶಾಂತ್ ಹೆಗಡೆ ಮತ್ತು ಬಿಂದು ಅವಧಾನಿ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRaghaweshwara shriUttara Kannadaಗೋಕರ್ಣಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ
Share196Tweet123Send
Previous Post

ಗಮನಿಸಿ! ಸೆ.21ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ

Next Post

ವಾಲಿಬಾಲ್ ಪಂದ್ಯಾವಳಿ: ಕ್ರೈಸ್ಟ್‌ಕಿಂಗ್ ತಂಡ ಸತತ ಎರಡನೇ ಬಾರಿಗೆ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಾಲಿಬಾಲ್ ಪಂದ್ಯಾವಳಿ: ಕ್ರೈಸ್ಟ್‌ಕಿಂಗ್ ತಂಡ ಸತತ ಎರಡನೇ ಬಾರಿಗೆ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

ವಾಲಿಬಾಲ್ ಪಂದ್ಯಾವಳಿ: ಕ್ರೈಸ್ಟ್‌ಕಿಂಗ್ ತಂಡ ಸತತ ಎರಡನೇ ಬಾರಿಗೆ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಆರು ಮಂದಿ ಬಂಧನ!

ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಆರು ಮಂದಿ ಬಂಧನ!

May 23, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ | ಮೇ 24ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

May 23, 2026
ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು: ಪ್ರಾಂಶುಪಾಲ ಡಾ. ರವೀಂದ್ರ ಸಲಹೆ

ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು: ಪ್ರಾಂಶುಪಾಲ ಡಾ. ರವೀಂದ್ರ ಸಲಹೆ

May 23, 2026
SWR to run special trains for Good Friday, Easter rush

ಬೀರೂರು – ತಾಳಗುಪ್ಪ ರೈಲ್ವೆ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ | ಇಲ್ಲಿದೆ ಡೀಟೇಲ್ಸ್

May 23, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಐಎಎಸ್ ಅಧಿಕಾರಿಗಳ ಮಕ್ಕಳಿಗೆ ಏಕೆ ಮೀಸಲು ಕೊಡಬೇಕು: ಸುಪ್ರೀಂ ಕೋರ್ಟ್ ಖಡಕ್ ಪ್ರಶ್ನೆ

May 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL