ಕಲ್ಪ ಮೀಡಿಯಾ ಹೌಸ್ | ಗೋಕರ್ಣ |
ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ
ಮಂಗಳವಾರ ಸಾಮವೇದ ಸಂಹಿತಾ ಯಾಗದ ಪೂರ್ಣಾಹುತಿಯಲ್ಲಿ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಪಾಲ್ಗೊಂಡು ಭಕ್ತರನ್ನು ಹರಿಸಿದರು.

ಸನ್ಮಾರ್ಗದಲ್ಲಿ ನಡೆಯುವ ವಿಪ್ರರಿಗೆ ಸಂಪತ್ತು ಎನಿಸಿದ ವೇದಗಳನ್ನು ಉಳಿಸುವ ಉದ್ದೇಶದಿಂದ ಈ ಅತ್ಯಪೂರ್ವ ಎನಿಸಿದ ಚತುಃಸಂಹಿತಾ ಯಾಗವನ್ನು ಹಮ್ಮಿಕೊಳ್ಳಲಾಗಿದೆ. ವೇದಾಧ್ಯಯನ, ಪ್ರತಿದಿನ ವೇದ ಅಭ್ಯಾಸ, ನಿತ್ಯಾನುಷ್ಠಾನ ಮಾಡುವಂತೆ ಶ್ರೀಶಂಕರರು ಸೂಚಿಸಿದ್ದು, ಈ ಮಂತ್ರಸಂಪತ್ತಿನಿಂದಲೇ ಶ್ರೇಯಸ್ಸು ಹಾಗೂ ಇದು ಮೋಕ್ಷಕ್ಕೆ ದಾರಿ. ಇಂಥ ಅಮೂಲ್ಯ ವೇದಸಂಪತ್ತಿನ ಶ್ರವಣ ಮತ್ತು ಚತುಃಸಂಹಿತಾ ಯಾಗದಲ್ಲಿ ಪಾಲ್ಗೊಳ್ಳುವುದು ಕೂಡಾ ಅತಿಶಯ ಪುಣ್ಯವನ್ನು ತಂದುಕೊಡುವಂಥದ್ದು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ. ಈ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಈ ಯಾಗವನ್ನು ಹಮ್ಮಿಕೊಳ್ಳಲಾಗಿತ್ತು.

ಇದೇ ಸಂದರ್ಭದಲ್ಲಿ ಶಿರಸಿ ಶಾಸಕ ಭೀಮಣ್ಣ ನಾಯಕ, ಎಸ್.ಕೆ.ಭಾಗ್ವತ್, ವಿನಾಯಕ ಕಲಗಾರು, ಕಲಾವಿದ ಶಿವರಾಮ ಹೆಗಡೆ ಕೆರೆಮನೆ ಅವರು ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ರಾಜ್ಯದ ಖ್ಯಾತ ವೈದ್ಯ ಡಾ. ಗಿರಿಧರ ಕಜೆ ಕುಟುಂಬದವರು ಸರ್ವಸೇವೆ ನೆರವೇರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post