ಕಲ್ಪ ಮೀಡಿಯಾ ಹೌಸ್ | ಗೋಕರ್ಣ |
ಸಮಾಜದ ಪ್ರತಿಯೊಬ್ಬರೂ ಗೋವು, ವಿದ್ಯೆ ಹಾಗೂ ಧರ್ಮರಕ್ಷಣೆಗೆ ಕಂಕಣಬದ್ಧರಾಗಬೇಕು, ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದೇ ನಿಜವಾದ ವರ್ಧಂತಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು.
ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತದಲ್ಲಿರುವ ಪರಮಪೂಜ್ಯರ 50ನೆ ೀ ವರ್ಧಂತ್ಯುತ್ಸವ ಅಂಗವಾಗಿ ನಡೆದ ಧಾರ್ಮಿಕ ಸಭೆಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ವರ್ಧಂತಿಯ ರೂಪದಲ್ಲಿ ಇಂಥ ಶಿಕ್ಷಣ ವ್ಯವಸ್ಥೆಯನ್ನು ಬೆಳೆಸುವ ಕಾರ್ಯ ಸದಾ ನಡೆಯಲಿ. ಗೋರಕ್ಷಣೆ, ವಿಶ್ವವಿದ್ಯಾಪೀಠದ ರಕ್ಷಣೆ, ಧರ್ಮದ ಆಚರಣೆಯ ಮೂಲಕ ಅರ್ಥಪೂರ್ಣವಾಗಿ ವಧರ್ಂತಿಯನ್ನು ಆಚರಿಸಿ ಎಂದು ಸಲಹೆ ಮಾಡಿದರು.
ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ. ಆದ್ದರಿಂದ ಮಕ್ಕಳಿಗೆ ಎಳವೆಯಲ್ಲೇ ಸುಜ್ಞಾನ ನೀಡಿ. ತಂದೆ- ತಾಯಿಗಳನ್ನು ದೇವರಂತೆ ಭಕ್ತಿಯಿಂದ ಕಾಣುವ ಸಂಸ್ಕಾರವನ್ನು ನೀಡುವಂತಾಗಬೇಕು. ಆಗ ಮಾತ್ರ ಸಮಾಜಕ್ಕೆ ಭವಿಷ್ಯ ಎಂದು ಪ್ರತಿಪಾದಿಸಿದರು. ವೇದವಿದ್ಯೆಗೆ ಮೀಸಲಾದ ಶಿವಗುರುಕುಲ ಹಾಗೂ ಪರಂಪರಾಗತ ಶಿಕ್ಷಣ ನೀಡುವ ಪರಂಪರಾ ಗುರುಕುಲವಿಷ್ಣು ಗುಪ್ತ ವಿಶ್ವವಿದ್ಯಾಪೀಠದ ಹಾಗೂ ಸಮಾಜದ ಎರಡು ಕಣ್ಣುಗಳಿದ್ದಂತೆ. ಸಕಲ ಪ್ರಾಚೀನ ವಿದ್ಯಾ ಕಲೆಗಳ ಬೀಜಾಂಕುರ ಈ ಗುರುಕುಲದಿಂದಲೇ ಆಗುತ್ತದೆ. ಮುಂದೆ ತಕ್ಷಶಿಲೆಯ ಪ್ರತಿರೂಪವಾದ ವಿಶ್ವವಿದ್ಯಾಪೀಠವಾಗಿ ಇದು ಬೆಳೆಯಲು ಆರಂಭವಾಗುತ್ತಿರುವುದು ಇಲ್ಲಿಂದಲೇ ಎಂದು ಹೇಳಿದರು.

ಶಿಷ್ಯರ ಶ್ರದ್ಧೆ, ನಿಷ್ಠೆ, ನಮಸ್ಕಾರಗಳು ಹೃದಯದಲ್ಲಿ ನೆಲೆಸಿರುವ ಭಗವಂತನಿಗೆ ಸಮರ್ಪಣೆಯಾಗುತ್ತದೆ. ನಿಮ್ಮೆಲ್ಲರ ನಮಸ್ಕಾರಗಳ ಚೈತನ್ಯದ ಮೂಲಕ್ಕೆ ಸಲ್ಲಲಿ ಎಂದರು.
ಎಲ್ಲರನ್ನೂ ಲೋಕಕ್ಕೆ ಮಾತೆಯೇ ಕರೆ ತರುವುದು; ಲೋಕದಲ್ಲಿ ನಮ್ಮನ್ನು ಬೆಳಗುವಂತೆ ಮಾಡಿದ್ದೂ ಮಾತೆಯರೇ. ಮಾತೆಯರು ವರ್ಧಂತಿಯಂದು ಮಠವನ್ನು ಬೆಳಗುವ ಕಾರ್ಯವನ್ನು ಮಾಡುತ್ತಾ ಬಂದಿದ್ದಾರೆ. ಒಬ್ಬ ಮಾತೆ ಗುರುವನ್ನು ಲೋಕಕ್ಕೆ ನೀಡಿದರೆ, ಲಕ್ಷಾಂತರ ಮಾತೆಯರು ಗುರು ಸಂಕಲ್ಪವನ್ನು ಹೊತ್ತು ಬೆಳೆಸಿ, ಯೋಜನೆಯಾಗಿ ಸಮಾಜಕ್ಕೆ ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಮಾತೆಯರ ಸಂಪೂರ್ಣ ಸಮರ್ಪಣೆ ಪರಂಪರಾ ಗುರುಕುಲಕ್ಕೆ ಸಲ್ಲಲಿದೆ ಎಂದು ಶ್ರೀಗಳು ಹೇಳಿದರು. ಸಂಸ್ಕಾರಯುತ ಜ್ಞಾನವನ್ನು ಹೊತ್ತು ಪರಿಪೂರ್ಣರಾಗಿ ಹೊರಬರುವ ಮೂಲಕ ಪರಂಪರಾ ಗುರುಕುಲದ ವಿದ್ಯಾರ್ಥಿಗಳು ಸಮಾಜದ ಆಸ್ತಿಯಾಗಿ ಬೆಳೆಯಲಿ ಎಂದು ಆಶಿಸಿದರು. ವೈದಿಕರು ಕೂಡಾ ಶಿವಗುರುಕುಲಕ್ಕೆ 18 ಲಕ್ಷ ರೂಪಾಯಿಗಳನ್ನು ಸಮರ್ಪಿಸಿದ್ದಾರೆ. ಇಂದು ಸಮರ್ಪಣೆಯಾದ ದೇಣಿಗೆಯೆಲ್ಲ ಪರಂಪರಾ ಹಾಗೂ ಶಿವಗುರುಕುಲಕ್ಕೆ ಸಲ್ಲುತ್ತದೆ.

ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್, ಲೋಕಸಂಪರ್ಕಾಧಿಕಾರಿ ಕೆಕ್ಕಾರು ರಾಮಚಂದ್ರ, ಶಾಸನತಂತ್ರ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ, ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪ್ಪು, ಪ್ರಧಾನ ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಮಾತೃಪ್ರಧಾನರಾದ ದೇವಿಕಾ ಶಾಸ್ತ್ರಿ, ಪದಾಧಿಕಾರಿಗಳಾದ ಈಶ್ವರ ಪ್ರಸಾದ್ ಕನ್ಯಾನ, ರುಕ್ಮಾವತಿ ರಾಮಚಂದ್ರ, ಕೃಷ್ಣಮೂರ್ತಿ ಮಾಡಾವು, ಮಾಜಿ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ, ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಚಾತುರ್ಮಾಸ್ಯ ತಂಡದ ಪ್ರಧಾನ ಸಂಯೋಜಕ ಮಂಜುನಾಥ ಸುವರ್ಣಗದ್ದೆ, ಶ್ರೀಕಾಂತ ಪಂಡಿತ್, ಧರ್ಮಕರ್ಮ ವಿಭಾಗದ ಕೂಟೇಲು ರಾಮಕೃಷ್ಣ ಭಟ್, ವಿವಿವಿ ಗೌರವಾಧ್ಯಕ್ಷ ಡಿ.ಡಿ.ಶರ್ಮಾ, ಆಡಳಿತಾಧಿಕಾರಿ ಡಾ.ಟಿ.ಜಿ.ಪ್ರಸನ್ನ ಕುಮಾರ್, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ ಗೋಳಗೋಡು, ಮಹೇಶ್ ಹೆಗಡೆ ಮತ್ತಿತತರು ಉಪಸ್ಥಿತರಿದ್ದರು. ಗಣೇಶ್ ಜೋಶಿ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post