No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಭಾಷೆ ಅಳಿದರೆ ಸಂಸ್ಕೃತಿ – ಸಂಸ್ಕಾರದ ನಾಶ: ರಾಘವೇಶ್ವರ ಶ್ರೀ

ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯದಲ್ಲಿ ಸವಿಗನ್ನಡ ಗೋಷ್ಠಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 18, 2025
in ಉತ್ತರ ಕನ್ನಡ
0
ಭಾಷೆ ಅಳಿದರೆ ಸಂಸ್ಕೃತಿ – ಸಂಸ್ಕಾರದ ನಾಶ: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಭಾಷೆ ಅಳಿದರೆ ಸಂಸ್ಕøತಿ- ಸಂಸ್ಕಾರವೂ ನಾಶವಾಗುತ್ತದೆ. ನಮ್ಮ ಭಾಷೆಯ ಮಧ್ಯದಲ್ಲಿ ಬೇರೆ ಭಾಷೆಯ ಕಲಬೆರಕೆ ಬೇಡ; ಆಂಗ್ಲಪದಗಳನ್ನು ಬಳಸದೇ ಕನ್ನಡ ಮಾತನಾಡುವುದೇ ನಮಗೆ ಕಷ್ಟವಾಗುತ್ತಿದೆ ಎನ್ನುವುದು ನಾಚಿಕೆಗೇಡು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು.

ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 39ನೇ ದಿನವಾದ ಭಾನುವಾರ ಅಖಿಲ ಹವ್ಯಕ ಮಹಾಸಭಾ ವತಿಯಿಂದ ಸರ್ವಸೇವೆ ಸ್ವೀಕರಿಸಿ, ಸವಿಗನ್ನಡ ಗೋಷ್ಠಿಯ ಸಾನ್ನಿಧ್ಯ ವಹಿಸಿ ಆಶೀರ್ವಚನ ಅನುಗ್ರಹಿಸಿದರು.
ಭಾಷೆಯನ್ನು ಉಳಿಸಿಕೊಳ್ಳಲು ಇಚ್ಛಾಶಕ್ತಿ ಅಗತ್ಯ. ನಮ್ಮಿಂದ ಪರಕೀಯ ಶಬ್ದಗಳು ಬರಬಾರದು ಎಂಬ ಪಣ ತೊಡೋಣ. ಪ್ರತಿ ದಿನ ಆ ಸಂಕಲ್ಪ ಸಾಕಾರಕ್ಕೆ ಪ್ರಯತ್ನ ಅಗತ್ಯ ಎಂದು ಅಭಿಪ್ರಾಯಟ್ಟರು. ಸರ್ಕಾರ, ಸಂಘ ಸಂಸ್ಥೆಗಳು ಕನ್ನಡ ಉಳಿಸುತ್ತವೆ ಎಂಬ ಭ್ರಮೆಯಿಂದ ಹೊರಬಂದು, ನಮ್ಮ ಮುಂದಿನ ಪೀಳಿಗೆಗೆ ಶುದ್ಧ ಭಾಷೆ ಉಳಿಸಲು ಪ್ರಯತ್ನ ಮಾಡೊಣ ಎಂದರು.

ಯಕ್ಷಗಾನ, ತಾಳಮದ್ದಳೆಯಲ್ಲಿ ಇಂದಿಗೂ ಕನ್ನಡದ ಶುದ್ಧತೆ ಉಳಿದುಕೊಂಡಿದೆ. ಕನ್ನಡ ಉಳಿದುಕೊಳ್ಳಲು ಈ ಕಲಾಪ್ರಕಾರಗಳು ಕೊಡುಗೆ ನೀಡಿವೆ ಎಂದು ಶ್ಲಾಘಿಸಿದರು. ನಮ್ಮತನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹವ್ಯಕ ಮಹಾಸಭೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಸಮಾಜ ಇದನ್ನು ಸಮಗ್ರವಾಗಿ ಅನುಷ್ಠಾನಕ್ಕೆ ತರಬೇಕು ಎಂಬ ದೃಷ್ಟಿಯಿಂದ ಸ್ವಭಾಷೆಯನ್ನು ಚಾತುಮಾಸ್ಯದ ಸೂತ್ರವನ್ನಾಗಿರಿಸಿಕೊಳ್ಳಲಾಯಿತು ಎಂದರು. ತನ್ನವಸ್ತುವನ್ನು ಪ್ರೀತಿಸುವುದು ಸಹಜ; ಇನ್ನೊಬ್ಬರದ್ದನ್ನು ತನ್ನದು ಎಂದು ಭಾವಿಸುವುದು ಪಾಪ. ನಮ್ಮದಲ್ಲದ್ದು ನಮ್ಮ ಜೀವನವನ್ನು ವ್ಯಾಪಿಸುತ್ತಿದೆ ಎಂದರು.

ಹಂಪಿ ವಿವಿಯ ಡಾ.ಅಶೋಕ್ ಕುಮಾರ್, ಜಗತ್ತಿನ 30 ಪ್ರಾಚೀನ ಭಾಷೆಗಳ ಪೈಕಿ ಕನ್ನಡವೂ ಒಂದು. ಚರಿತ್ರೆಯುದ್ದಕ್ಕೂ ಮಾರ್ಪಾಡುಗಳನ್ನು ಮಾಡಿಕೊಂಡು ಬೆಳೆದುಕೊಂಡು ಬಂದಿದೆ. ಇದೀಗ ಕನ್ನಡ ರೂಪಾಂತರಗೊಳ್ಳುತ್ತಿದೆಯೇ ಅಥವಾ ತನ್ನತನ ಕಳೆದುಕೊಳ್ಳುತ್ತಿದೆಯೋ ಎನ್ನುವುದನ್ನು ಅವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದರು.
ಕನ್ನಡ ಬೇರೆ ಭಾಷೆಗಳ ಪದ ಬಳಸಿಕೊಳ್ಳುವಾಗ ಕನ್ನಡೀಕರಿಸಿಕೊಂಡು ಬಳಕೆ ಮಾಡಿಕೊಳ್ಳುತ್ತಾ ಬಂದಿದೆ ಎಂದು ಸಮರ್ಥಿಸಿಕೊಂಡರು.

ಡಾ.ಶ್ರೀಧರ್ ಹೆಗಡೆ ಭದ್ರನ್  ಮಾತನಾಡಿ, ಕನ್ನಡದ ಅಸ್ಮಿತೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.
ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಜಿ.ಎಲ್.ಹೆಗಡೆ, ಅಖಿಲ ಹವ್ಯಕ ಮಹಾಸಭಾ ಅಧ್ಯಕ್ಷ ಡಾ.ಗಿರಿಧರ ಕಜೆ ಭಾಗವಹಿಸಿದ್ದರು. ಡಾ.ಪಾದೇಕಲ್ ವಿಷ್ಣು ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಜಿ.ಎಲ್.ಹೆಗಡೆ, “ಎಲ್ಲ ಭಾಷೆಗಳಿಗೂ ಅದರದ್ದೇ ಆದ ಮಹತ್ವವಿದೆ. ಆದರೆ ನಮ್ಮ ನಮ್ಮ ಭಾಷೆ ನಮಗೆ ಮುಖ್ಯ. ಭಾಷೆಗೆ ಭಾರತದ ಸಂಸ್ಕøತಿಯಲ್ಲಿ ಜೀವಂತಿಕೆಯ ಸ್ಥಾನವಿದೆ. ನಮ್ಮ ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ ನಮ್ಮ ಭಾಷೆಯನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ” ಎಂದು ಪ್ರತಿಪಾದಿಸಿದರು.

“ಕನ್ನಡ ಉಳಿಸುವ ದೃಷ್ಟಿಯಿಂದಲೇ ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾಗಿದ್ದಾಗ ಕನ್ನಡ ವಿಶ್ವವಿದ್ಯಾನಿಲಯ ಸ್ಥಾಪಿಸಿದರು. ಇದು ಅವರ ದೂರದರ್ಶಿತ್ವಕ್ಕೆ ಉದಾಹರಣೆ. ಸಾವಿರಾರು ಭಾಷೆಗಳ ಮಧ್ಯೆ ಕನ್ನಡ ವಿಶ್ವದ ಅತ್ಯಂತ 30 ಪ್ರಾಚೀನ ಭಾಷೆಗಳ ಪೈಕಿ ಒಂದು ಎನ್ನುವುದು ನಮ್ಮ ಹೆಮ್ಮೆ. ಬೇರೆ ಭಾಷೆಯನ್ನು ತಿರಸ್ಕರಿಸುವುದು ಬೇಡ; ಆದರೆ ಪರಕೀಯರಾಗಿ ಇರಲು ಬಯಸುವುದಿಲ್ಲ” ಎಂದು ಮಾರ್ಮಿಕವಾಗಿ ನುಡಿದರು.

ಆದರೆ ಇಂದು ಇಂಗ್ಲಿಷ್ ಪ್ರಭಾವದಿಂದಾಗಿ ನಮ್ಮ ಸಂಬಂಧಗಳನ್ನು ಗುರುತಿಸುವುದು ಕೂಡಾ ಸಾಧ್ಯವಿಲ್ಲದಂದಾಗಿದೆ. ಮನುಷ್ಯನನ್ನು ತಿಳಿದುಕೊಳ್ಳಲು ಭಾಷೆ ಒಳ್ಳೆಯ ಸಾಧನ. ಭಾಷೆಯ ಬಗ್ಗೆ ಅಭಿಮಾನ- ಗೌರವ ಬೇಕು; ನಮ್ಮ ಸತ್ವವನ್ನು ಉಳಿಸಿಕೊಳ್ಳಲು ಭಾಷೆ ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಅಖಿಲ ಹವ್ಯಕ ಮಹಾಸಭಾ ಅಧ್ಯಕ್ಷ ಡಾ.ಗಿರಿಧರ ಕಜೆ ಮಾತನಾಡಿ, “ನಾವು ಇತರ ಭಾಷೆಗಳಿಗೆ ಒಗ್ಗಿಕೊಳ್ಳಬೇಕೇ ವಿನಃ ಬಗ್ಗಬಾರದು. ಆಹಾರ, ವಸ್ತ್ರ ಸೇರಿದಂತೆ ನಮಗೆ ಹಿತವೆನಿಸಿದ್ದನ್ನೇ ನಾವು ಬಳಸುತ್ತೇವೆ. ಇದು ಭಾಷೆಯ ವಿಚಾರಕ್ಕೂ ಅನ್ವಯವಾಗಬೇಕು” ಎಂದು ಅಭಿಪ್ರಾಯಪಟ್ಟರು. ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ; ಅದು ನಮ್ಮ ಸಂಸ್ಕಾರ, ಸಂಸ್ಕøತಿ, ಪರಂಪರೆ, ನಮ್ಮತನ. ವಿಶ್ವದ ಮೂರು ಪರಿಪೂರ್ಣ ಭಾಷೆಗಳಲ್ಲಿ ಕನ್ನಡ ಕೂಡಾ ಒಂದು ಎನ್ನುವುದನ್ನು ಅಮೆರಿಕದ ಭಾಷಾಸಂಶೋಧನಾ ಸಂಸ್ಥೆಯೂ ದೃಢಪಡಿಸಿದೆ” ಎಂದು ಹೇಳಿದರು.

ಸ್ವಭಾಷಾ ಚಿಂತನೆ ಕೃತಿಯ ಎರಡನೇ ಆವೃತ್ತಿಯನ್ನು ಶ್ರೀಗಳು ಲೋಕಾರ್ಪಣೆಗೊಳಿಸಿದರು. ಶ್ರೀಮಾತೆ ವಿಜಯಲಕ್ಷ್ಮಿ, ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಪ್ಪು, ಚಾತುರ್ಮಾಸ್ಯ ತಂಡದ ಸಂಚಾಲಕ ಮಂಜುನಾಥ ಸುವರ್ಣಗದ್ದೆ, ವಿವಿವಿ ಆಡಳಿತಾಧಿಕಾರಿ ಡಾ.ಟಿ.ಜೆ.ಪ್ರಸನ್ನ ಕುಮಾರ್, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಪಿಆರ್‍ಓ ಎಂ.ಎನ್.ಮಹೇಶ ಭಟ್ಟ, ಉಂಡೇಮನೆ ವಿಶ್ವೇಶ್ವರ ಭಟ್, ತೆಕ್ಕೆಕೆರೆ ಸುಬ್ರಹ್ಮಣ ಭಟ್, ವಿವಿವಿ ಸಮಿತಿ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ ಮತ್ತಿತರರು ಉಪಸ್ಥಿತರಿದ್ದರು. ಗುರುಕುಲ ಶಿಕ್ಷಕ ಲೋಹಿತ್ ಹೆಬ್ಬಾರ್ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

   

Tags: GokarnaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaUttara Kannadaಗೋಕರ್ಣ
Share196Tweet123Send
Previous Post

ಭದ್ರಾವತಿ | ಅನನ್ಯ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಕೃಷ್ಣ-ರಾಧೆ ವೇಷ ಪ್ರದರ್ಶನ

Next Post

ಭದ್ರಾ ಡ್ಯಾಂನಿಂದ ನೀರು ನದಿಗೆ | ತುಂಬಿದ ಭದ್ರೆ | ಬಹುತೇಕ ಮುಳುಗಿದ ಹೊಸ ಸೇತುವೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾ ಡ್ಯಾಂನಿಂದ ನೀರು ನದಿಗೆ | ತುಂಬಿದ ಭದ್ರೆ | ಬಹುತೇಕ ಮುಳುಗಿದ ಹೊಸ ಸೇತುವೆ

ಭದ್ರಾ ಡ್ಯಾಂನಿಂದ ನೀರು ನದಿಗೆ | ತುಂಬಿದ ಭದ್ರೆ | ಬಹುತೇಕ ಮುಳುಗಿದ ಹೊಸ ಸೇತುವೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL