No Result
View All Result
Food & Hospitality Sector a Global Employment Hub: Celebrity Chef Satish Nagaraj
English Articles

Food & Hospitality Sector a Global Employment Hub: Celebrity Chef Satish Nagaraj

by ಕಲ್ಪ ನ್ಯೂಸ್
March 21, 2026
0

Kalpa Media House  |  Mysuru | Trained and experienced Indian chefs today have immense job opportunities across the globe, and...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Saturday, March 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ದೇಶ- ಕಾಲ ಗೆದ್ದರೆ ಜೀವನ ಗೆಲ್ಲಬಹುದು: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 16, 2025
in ಉತ್ತರ ಕನ್ನಡ
0
ದೇಶ- ಕಾಲ ಗೆದ್ದರೆ ಜೀವನ ಗೆಲ್ಲಬಹುದು: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ದಿನವನ್ನು ಅರ್ಥ ಮಾಡಿಕೊಂಡರೆ ಜೀವನವನ್ನೇ ಗೆಲ್ಲಬಹುದು. ಕಾಲ, ದೇಶ, ವಸ್ತುವಿನ ಪೈಕಿ ಒಂದನ್ನು ಗೆದ್ದರೂ ಜೀವನ ಗೆಲ್ಲಬಹುದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.

ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು ಮಂಗಳವಾರ ‘ದಿನಚರಿ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದರು. ಭಗವಂತ ನೀಡಿದ ಕಾಲವೆಂಬ ಅಮೃತವನ್ನು ಹೊಣೆಯರಿತು ಬಳಸಿದಾಗ ಅದು ಬುದುಕಿನ ಬುತ್ತಿಯಾಗುತ್ತದೆ; ಇದರಿಂದ ಬದುಕಿಗೆ ಮುಕ್ತಿಯ ಸಂತೃಪ್ತಿ ದೊರಕುತ್ತದೆ ಎಂದು ವಿಶ್ಲೇಷಿಸಿದರು.
ಬದುಕಿನಲ್ಲಿ ಒಂದು ದಿನವನ್ನು ತಿದ್ದಿಕೊಂಡರೆ ಇಡೀ ಜೀವನವನ್ನೇ ತಿದ್ದಿಕೊಳ್ಳಲು ಸಾಧ್ಯವಾಗುತ್ತದೆ. ಪ್ರತಿದಿನದ ಕರ್ತವ್ಯವೇ ದಿನಚರಿ. ಆದ್ದರಿಂದ ಜೀವನದಲ್ಲಿ ದಿನದಿನವೂ ಮಾಡುವ ಸಂಗತಿಗಳೇ ದಿನಚರಿ ಎಂದರು.

ವಾರ, ಪಕ್ಷ, ಮಾಸದಲ್ಲಿ ದಿನಕ್ಕೆ ವಿಶೇಷ ಮಹತ್ವ. ಹನ್ನೆರಡು ಮಾಸ ಸೇರಿ ಒಂದು ಸಂವತ್ಸರ. ಹಲವು ಸಂವತ್ಸರಗಳು ಸೇರಿ ಒಂದು ಶಕ; ಹಲವು ಶಕಗಳು ಸೇರಿ ಒಂದು ಪಾದ. ನಾಲ್ಕು ಪಾದಗಳು ಸೇರಿದರೆ ಒಂದು ಯುಗ; ನಾಲ್ಕು ಯುಗ ಸೇರಿದರೆ ಒಂದು ಮಹಾಯುಗ; 71 ಮಹಾಯುಗ ಸೇರಿದತೆ ಒಂದು ಮನ್ವಂತರ. 28 ಮನ್ವಂತರ ಸೇರಿದರೆ ಒಂದು ಕಲ್ಪ. ಕಾಲಕಲ್ಪದಲ್ಲಿ ದಿನ ಎನ್ನುವುದು ಅತ್ಯಂತ ಚಿಕ್ಕ ತುಣುಕು ಎಂದು ಹೇಳಿದರು.

ಕಾಲಕ್ಕೆ ಮುಖಗಳು ಹಲವು; ಕಳೆದ ಬಾರಿ ಜ್ಯೌತಿಷದ ಮುಖ ಆಯ್ಕೆ ಮಾಡಲಾಗಿತ್ತು. ಈ ಬಾರಿ ಆಯುರ್ವೇದದ ಮುಖವನ್ನು ಆಯ್ಕೆ ಮಾಡಿಕೊಂಡು ದಿನಚರಿ ಬಗ್ಗೆ ಪ್ರವಚನ ನೀಡುವ ಇಚ್ಛೆ ನಮ್ಮದು. ಇದರಲ್ಲಿ ಧರ್ಮಶಾಸ್ತ್ರ, ಜೌತಿಷಗಳೂ ಸೇರುತ್ತವೆ. ಕಾಲ, ದೇಶ ಮತ್ತು ವಸ್ತುಗಳ ಜ್ಞಾನ ಇರುವವನು ಚೆನ್ನಾಗಿ ಬಾಳಬಲ್ಲನು. ಜೀವನ ಉತ್ತಮವಾಗಬೇಕಿದ್ದರೆ, ಈ ಮೂರು ಪರಿಚ್ಛೇದಗಳು ಅಗತ್ಯ; ಇವೆಲ್ಲಕ್ಕೂ ಮಿತಿ ಇರುವಂತೆ ಜೀವನಕ್ಕೂ ಒಂದು ಮಿತಿ ಇದೆ ಎಂದು ವಿಶ್ಲೇಷಿಸಿದರು.
ನಮ್ಮ ಜೀವನವನ್ನು ಉದಾಹರಣೆಯಾಗಿ ತೆಗೆದುಕೊಂಡರೆ ನಾವು ಬದುಕಿರುವ ಅವಧಿ ಸೀಮಿತ. ನಮ್ಮ ವಾಸಸ್ಥಳಕ್ಕೂ ಮಿತಿ ಇದೆ; ಅಂತೆಯೇ ವಸ್ತು ಮಿತಿಯೂ ಇದೆ. ನಿರ್ದಿಷ್ಟ ಚೌಕಟ್ಟಿನೊಳಗೆ ನಾವು ಬದುಕು ಸಾಗಿಸಬೇಕಾಗುತ್ತದೆ. ಕಾಲ, ದೇಶ ಮತ್ತು ವಸ್ತು ಮಿತಿಯನ್ನು ಮೀರಿ ಬೆಳೆದವರು ಪರಮಾತ್ಮ; ದೇವರಲ್ಲಿ ಲೀನವಾಗುವವರೆಗೂ ಅದಕ್ಕೆ ಮಿತಿ ಇದೆ. ಈ ಮೂರಲ್ಲಿ ಯಾವುದನ್ನು ಎದುರು ಹಾಕಿಕೊಂಡರೂ ಬದುಕು ದುಸ್ತರವಾಗುತ್ತದೆ ಎಂದು ಹೇಳಿದರು.

ಕಾಲವನ್ನು ಎದುರು ಹಾಕಿಕೊಂಡರೆ ಅದು ರೋಗವಾಗಿ ಕಾಡಬಹುದು ಅಥವಾ ಅದು ಸಾವಿಗೂ ಕಾರಣವಾಗಬಹುದು; ಮಲಗುವ ಕಾಲದಲ್ಲಿ ಮಲಗಿ, ಏಳುವ ಕಾಲಕ್ಕೆ ಏಳಬೇಕು. ಕಾಲ, ದೇಶ, ವಸ್ತುವಿಗೆ ಅನುಗುಣವಾಗಿ ಬಾಳುವೆ ನಡೆಸಿದರೆ ಬದುಕು ಸುಂದರ. ಕಾಲ, ದೇಶ ಮತ್ತು ವಸ್ತು ಮರ್ಯಾದೆಯನ್ನು ಮೀರಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದರು.

ಸಾಗರ ಮಂಡಲದ ಆವಿನಹಳ್ಳಿ, ಮರಗುಡಿ, ಕೋಗೋಡು, ಕೆಳದಿ ಪೂರ್ವ ಮತ್ತು ಪಶ್ಚಿಮ ವಲಯಗಳ ಶಿಷ್ಯರು ಸರ್ವಸೇವೆ ನೆರವೇರಿಸಿದರು. ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪ್ಪು, ಪ್ರಧಾನ ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಸಾಗರ ಮಂಡಲದ ಅಧ್ಯಕ್ಷ ಮುರಳಿ ಗೀಜಗಾರ್, ಕಾರ್ಯದರ್ಶಿ ಪ್ರಖ್ಯಾತ್, ಚಾತುರ್ಮಾಸ್ಯ ತಂಡದ ಪ್ರಧಾನ ಸಂಚಾಲಕ ಮಂಜುನಾಥ್ ಸುವರ್ಣಗದ್ದೆ, ಶ್ರೀಕಾಂತ್ ಪಂಡಿತ್, ವಿವಿವಿ ಆಡಳಿತಾಧಿಕಾರಿ ಡಾ.ಟಿ.ಜಿ.ಪ್ರಸನ್ನಕುಮಾರ್, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ ಗೋಳಗೋಡು,  ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaUttara Kannadaಗೋಕರ್ಣ
Share196Tweet123Send
Previous Post

ಹೊಳಲ್ಕೆರೆ & ಅಮೃತಾಪುರ ರೈಲು ಪ್ರಯಾಣಿಕರಿಗೆ ನೈಋತ್ಯ ರೈಲ್ವೆಯಿಂದ ಗುಡ್ ನ್ಯೂಸ್

Next Post

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ | ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ | ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಪಾಂಡವಪುರ-ಅಶೋಕಪುರಂ ಮೆಮು ರೈಲು ಪ್ರಯಾಣಿಕರೇ, ನಿಮಗಿದೋ ಮಾಹಿತಿ

March 21, 2026
Food & Hospitality Sector a Global Employment Hub: Celebrity Chef Satish Nagaraj

ಆಹಾರ – ಆತಿಥ್ಯೋದ್ಯಮ ಕ್ಷೇತ್ರ ಜಾಗತಿಕ ಉದ್ಯೋಗಾವಕಾಶಗಳ ಗಣಿ: ಸತೀಶ್ ನಾಗರಾಜ್

March 21, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಯುವಕರು ದುಶ್ಚಟಗಳನ್ನು ಬಿಟ್ಟು ಕ್ರೀಡೆಗಳಲ್ಲಿ ಭಾಗವಹಿಸಬೇಕು: ಮಾಜಿ ಡಿಸಿಎಂ ಈಶ್ವರಪ್ಪ

March 21, 2026
Food & Hospitality Sector a Global Employment Hub: Celebrity Chef Satish Nagaraj

Food & Hospitality Sector a Global Employment Hub: Celebrity Chef Satish Nagaraj

March 21, 2026
ಶ್ರೀರಾಮನವಮಿ ಸಂಗೀತೋತ್ಸವ | ಮಾ.27ರವರೆಗೆ ಸಂಗೀತ ಮಹೋತ್ಸವ

ಶ್ರೀರಾಮನವಮಿ ಸಂಗೀತೋತ್ಸವ | ಮಾ.27ರವರೆಗೆ ಸಂಗೀತ ಮಹೋತ್ಸವ

March 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL