ಕಲ್ಪ ಮೀಡಿಯಾ ಹೌಸ್ | ಗೋಕರ್ಣ |
ಸರ್ವ ಸಮಾಜದ ಒಳಿತಿಗಾಗಿ ಹುಟ್ಟಿಕೊಂಡ ಸಮಾಜ ಹವ್ಯಕ ಸಮುದಾಯವಾಗಿದ್ದು, ಎಲ್ಲ ಸಮುದಾಯಗಳ ಜೊತೆ ಹೊಂದಿಕೊಂಡು, ಬೆಳೆದುಬಂದ ಸಮಾಜ ಹವ್ಯಕ ಸಮಾಜ ಎಂದು ಶ್ರೀರಾಮಚಂದ್ರಾಪುರಮಠದ Shri Ramachandrapura Mutt ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು.
ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀ ರಾಮಚಂದ್ರಾಪುರಮಠದ ಶ್ರೀಗಳಿಗೆ ಶ್ರೀ ಅಖಿಲ ಹವ್ಯಕ ಮಹಾಸಭೆಯಿಂದ ಸಮರ್ಪಿತವಾದ ಗುರುಭಿಕ್ಷಾಸೇವೆ ಸ್ವೀಕರಿಸಿ ಮಾತನಾಡಿದ ಶ್ರೀಗಳು, ಪ್ರಯತ್ನಶೀಲರು, ಸಮಾಜದ ಹಿತಚಿಂತನೆಯ ಒತ್ತಾಸೆಯಿರುವವರು ಸಂಘಟನೆಯಲ್ಲಿ ತೊಡಗಿಕೊಂಡರೆ ಸಮಾಜಕ್ಕೆ ಒಳಿತಾಗುತ್ತದೆ. ಹವ್ಯಕ ಮಹಾಸಭೆಯ ಪದಾಧಿಕಾರಿಗಳೆಲ್ಲರೂ ಸಮಾಜಕ್ಕಾಗಿ ಬದುಕಿನ ಒಂದು ಭಾಗವನ್ನು ಮೀಸಲಿಟ್ಟು, ಸಮಾಜೋದ್ಧಾರದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

Also read: ಭದ್ರಾವತಿ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಸಂಗಮೇಶ್ವರ ಚಾಲನೆ
ನಿತ್ಯ ಪ್ರವಚನ ಮಾಲಿಕೆಯಲ್ಲಿ ‘ಕ್ರೋಧ’ದ ವಿಚಾರವಾಗಿ ಪ್ರವಚನವನ್ನು ಅನುಗ್ರಸಿದ ಪೂಜ್ಯ ಶ್ರೀಗಳು, ಕ್ರೋಧದ ನಿಯಂತ್ರಣದಲ್ಲಿ ನೀವಿದ್ದಾಗ ಕ್ರೋಧ ದೋಷ. ನಿಮ್ಮ ನಿಯಂತ್ರಣದಲ್ಲಿ ಕೋಪ ಇದ್ದಾಗ ಅದು ಗುಣ. ಕೋಪ ಇರುವುದು ಆತ್ಮರಕ್ಷಣೆಗೆ; ಆದರೆ ಅದು ಇನ್ನೊಬ್ಬರಿಗೆ ಹಾನಿಯನ್ನು ಉಂಟು ಮಾಡಬಾರದು. ನಮ್ಮ ನಿಯಂತ್ರಣದಲ್ಲಿರುವ ಕೋಪ ಪ್ರತಿಯೊಬ್ಬರಿಗೂ ಬೇಕು ಎಂದು ಮಾರ್ಮಿಕವಾಗಿ ನುಡಿದರು.

ಕಾರ್ಯದರ್ಶಿ ಪ್ರಶಾಂತ್ ಭಟ್ ಮಲವಳ್ಳಿ ದಂಪತಿಗಳು ಮಹಾಸಭೆಯ ಪರವಾಗಿ ಶ್ರೀಗುರುಭಿಕ್ಷಾಸೇವೆ, ಶ್ರೀಗುರುಪಾದ ಪೂಜೆ ನೆರವೇರಿಸಿದರು. ರುದ್ರಹವನ, ರಾಮತಾರಕ ಹವನ, ಚಂಡೀಪಾರಾಯಣ, ನವಚಂಡಿ ಹವನ, ಗಣಪತಿ ಹವನ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪ್ರಧಾನ ಕಾರ್ಯದರ್ಶಿ ಸಿಎ. ವೇಣುವಿಘ್ನೇಶ್ ಸಂಪ, ಕೋಶಾಧಿಕಾರಿ ಕೃಷ್ಣಮೂರ್ತಿ ಭಟ್ ಯಲಹಂಕ, ನಿರ್ದೇಶಕರಾದ ಆರ್ ಜಿ ಹೆಗಡೆ ಹೊಸಾಕುಳಿ, ಹಂಡ್ರಮನೆ ಗೋಪಾಲಕೃಷ್ಣ ಭಟ್ ಸೇರಿದಂತೆ ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಸೇರಿದಂತೆ ಎಲ್ಲಾ ಭಾಗಗಳ ನಿರ್ದೇಶಕರು, ಸಂಚಾಲಕರು ಉಪಸ್ಥಿತರಿದ್ದರು.










Discussion about this post