ಕಲ್ಪ ಮೀಡಿಯಾ ಹೌಸ್ | ಗೋಕರ್ಣ |
ಬೀದರ್ನಲ್ಲಿ ಜನಿವಾರದ ಕಾರಣಕ್ಕಾಗಿ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡದ ಘಟನೆ ಮತ್ತು ಶಿವಮೊಗ್ಗದಲ್ಲಿ ಜನಿವಾರ ತುಂಡರಿಸಿದ ಘಟನೆ ತೀರಾ ವಿಷಾದನೀಯ; ಈ ದುರ್ವರ್ತನೆಯನ್ನು ಸಮಸ್ತ ಸಮಾಜ ಪ್ರತಿಭಟಿಸಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾ
ಅಧಿಕಾರಿಗಳ ಈ ವರ್ತನೆಯ ಹಿಂದ ದ್ವೇಷ, ಜಾತಿದ್ವೇಷ, ಒಂದು ಜಾತಿಯನ್ನು ಸಂಪೂರ್ಣ ತುಳಿದು ಬಿಡಬೇಕು ಎನ್ನುವ ಭಾವ ಕಾಣಿಸುತ್ತಿದೆ. ಪರೀಕ್ಷೆಗಳು ಮಕ್ಕಳ ಹಣೆಬರಹವನ್ನು ನಿರ್ಧರಿಸುವಂಥದ್ದು; ವಿದ್ಯಾರ್ಥಿಗಳು ಪರೀಕ್ಷೆಯ ಮಾನಸಿಕ ಒತ್ತಡದಲ್ಲಿರುವಾಗ ಅಧಿಕಾರಿಗಳು ಕ್ರೌರ್ಯ ಮೆರೆದಿರುವುದು ದಬ್ಬಾಳಿಕೆ ನಡೆಸಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.

ಈ ಕೃತ್ಯವನ್ನು ಬ್ರಾಹ್ಮಣರು ಸಂಘಟಿತರಾಗಿ ಪ್ರತಿಭಟಸುವುದು ಅಗತ್ಯ ಮಾತ್ರವಲ್ಲ; ಅನಿವಾರ್ಯವೂ ಹೌದು. ಇದು ಬ್ರಾಹ್ಮಣರಿಗಷ್ಟೇ ಸೀಮಿತವಲ್ಲ; ಬೇರೆಯವರೂ ಜನಿವಾರವನ್ನು ಗೌರವದಿಂದ ಧಾರಣೆ ಮಾಡುತ್ತಾರೆ. ಲಿಂಗಾಯಿತರು ಕೂಡಾ ಲಿಂಗವನ್ನು ಧರಿಸುತ್ತಾರೆ. ಅದನ್ನೂ ಇಂಥದ್ದೇ ಸೂತ್ರದಿಂದ ಧರಿಸಲಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಇಡೀ ಸಮಾಜಕ್ಕೆ ಅಪಾಯ ಕಾದಿದೆ ಎಂದು ಹೇಳಿದ್ದಾರೆ.

ಇಡೀ ಬ್ರಾಹ್ಮಣ ಸಮಾಜ ಮಾತ್ರವಲ್ಲ; ಭಾರತೀಯರೆಲ್ಲರೂ ಒಗ್ಗೂಡಿ ತಕ್ಕ ಪ್ರತಿಕ್ರಿಯೆ ನೀಡಬೇಕು ಎಂದು ಅವರು ಆಶಿಸಿದ್ದಾರೆ.
ಹವ್ಯಕ ಮಹಾಮಂಡಲ ಕೂಡಾ ಘಟನೆಯನ್ನು ಖಂಡಿಸಿದ್ದು, ಸಮಗ್ರ ಹವ್ಯಕ ಮಹಾಮಂಡಲ ಸಭೆಯಲ್ಲಿ ಈ ಬಗ್ಗೆ ಖಂಡನಾ ನಿರ್ಣಯ ಆಂಗೀಕರಿಸಿದೆ. ಅಕ್ಷಮ್ಯ ಅಪರಾಧ ಎಸಗಿದ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕು. ಜನಿವಾರ ಕಾರಣಕ್ಕೆ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿ, ವಿದ್ಯಾರ್ಥಿಯ ಭವಿಷ್ಯ ಹಾಗೂ ಆತ್ಮಗೌರವ ರಕ್ಷಿಸಬೇಕು ಎಂದು ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಆಗ್ರಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post