Saturday, September 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ಆಂಗ್ಲರ ಅಂಧಾನುಕರಣೆ ತೊರೆದು ನಮ್ಮತನ ಉಳಿಸಿಕೊಳ್ಳೋಣ: ರಾಘವೇಶ್ವರ ಶ್ರೀ

September 2, 2025
in ಉತ್ತರ ಕನ್ನಡ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ನಮ್ಮ ಹಿರಿಯರು ಬಳಸುತ್ತಿದ್ದ ಪದಗಳನ್ನು ಮತ್ತೆ ಬಳಕೆಗೆ ತರುವ ಮೂಲಕ ನಾವು ನಾವಾಗೋಣ; ಆಂಗ್ಲರ ಅಂಧಾನುಕರಣೆ ತೊರೆದು ನಮ್ಮತನವನ್ನು ಉಳಿಸಿಕೊಳ್ಳೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ಕರೆ ನೀಡಿದರು.

ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 54ನೇ ದಿನವಾದ ಸೋಮವಾರ ಮಂಗಳೂರು ಮಂಡಲದ ಕನ್ಯಾನ, ಬಾಯಾರು, ಕೋಳ್ಯೂರು, ವಿಟ್ಲ, ಕೇಪು ಮತ್ತು ಕಲ್ಲಡ್ಕ ವಲಯಗಳ ಶಿಷ್ಯರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು.

ಕನ್ನಡ ಭಾಷೆಯಲ್ಲಿ ಕಲಬೆರಕೆಯಾಗಿರುವ ಆಂಗ್ಲ ಮತ್ತು ಇತರ ಭಾಷೆಗಳ ಪದಗಳನ್ನು ಬಿಡುವುದು ಮೊದಮೊದಲು ಕಷ್ಟವೆನಿಸಬಹುದು. ಆದರೆ ನಮ್ಮ ಭಾಷೆ- ಸಂಸ್ಕøತಿ ಉಳಿಸಿಕೊಳ್ಳುವ ಹೊಣೆ ನಮ್ಮ ಮೇಲಿದೆ. ಆದ್ದರಿಂದ ಈ ಕಷ್ಟಗಳಿಗೆ ಅನಿವಾರ್ಯವಾಗಿ ನಾವು ಅದಕ್ಕೆ ಒಗ್ಗಿಕೊಳ್ಳಲೇಬೇಕು ಎಂದು ಸೂಚಿಸಿದರು.

ಸ್ವಭಾಷಾ ಚಾತುರ್ಮಾಸ್ಯದಲ್ಲಿ ಸವಿಗನ್ನಡ ಗೋಷ್ಠಿ ಮತ್ತು ಹವಿಗನ್ನಡ ಗೋಷ್ಠಿ ಮುಗಿದಲ್ಲಿಗೆ ನಮ್ಮ ಕೆಲಸ ಮುಗಿಯುವುದಿಲ್ಲ. ಇದೀಗ ಸಮಾಜದ ಪ್ರತಿಯೊಬ್ಬರೂ ಮತ್ತೆ ನಮ್ಮತನಕ್ಕೆ ಮರಳುವಂತೆ ಮಾಡುವ ದೊಡ್ಡ ಹೊಣೆ ನಮ್ಮ ಮೇಲಿದೆ ಎಂದು ಅಭಿಪ್ರಾಯಪಟ್ಟರು.

ದಿನಕ್ಕೊಂದು ಆಂಗ್ಲಪದ ಕೈಬಿಡುವ ಅಭಿಯಾನದಲ್ಲಿ ಪರ್ಸ್ ಪದ ಬಿಡುವಂತೆ ಸಲಹೆ ಮಾಡಿದರು. ಇದಕ್ಕೆ ಸಂಚಿ ಎಂಬ ಪದದಿಂದ ಕರೆಯಲಾಗುತ್ತಿದೆ. ಕೈಚೀಲ, ಥೈಲಿ, ಕೋಶ, ಸ್ಯೂತ ಪದಗಳನ್ನು ಬಳಸಬಹುದು ಎಂದರು.

ಸಂಘಟನೆಯಿಂದ ಸಮಾಜಕ್ಕೆ ದೊಡ್ಡ ಪ್ರಯೋಜನವಿದೆ. ಸಂಘಟನೆಯನ್ನು ಬಲಪಡಿಸುವ ಮೂಲಕ ಸಮಾಜದ ಉನ್ನತಿಗೆ ಕೊಡುಗೆ ನೀಡಿ ಎಂದು ಆಶಿಸಿದರು. ನದಿಗಳು ಕೂಡಿ ಸಮುದ್ರವಾಗುವಂತೆ ಚಾತುರ್ಮಾಸ್ಯವೆಂಬ ಸಮುದ್ರಕ್ಕೆ ಆರು ವಲಯಗಳಿಂದ ನದಿಗಳು ಬಂದು ಸೇರಿವೆ. ಎಲ್ಲ ಶಿಷ್ಯರ ಬಾಳು ಹಸನಾಗಲಿ ಎಂದು ಅನುಗ್ರಹಿಸಿದರು. ಜೀವನ ಪೂರ್ಣವಾಗಬೇಕಾದರೆ ಅನುಗ್ರಹ ಬೇಕು. ಪಂಕ ತಿರುಗಲು ವಿದ್ಯುತ್ ಹೇಗೆ ಅಗತ್ಯವೋ ಜೀವನ ಮುನ್ನಡೆಯಲು ಅನುಗ್ರಹ ಬೇಕು ಎಂದು ಹೇಳಿದರು.
ಕೆಲ ಕಾರ್ಯಕರ್ತರಲ್ಲಿ ಮಾತ್ರ ಸಮಾಜಸೇವೆಯ ಪ್ರಜ್ಞೆ ಜಾಗೃತವಾಗುತ್ತದೆ. ಇದಕ್ಕೆ ಪ್ರೇರಣೆ ಸಿಗುತ್ತದೆ. ಹೊಸ ಉತ್ಸಾಹ, ಹೊಸ ಯೋಚನೆಗಳೊಂದಿಗೆ ಸಂಘಟನೆ ಬೆಳೆಸಿ ಎಂದು ಸೂಚಿಸಿದರು. ಗಂಗೆ ಪವಿತ್ರವಾಗಲು ಹೇಗೆ ನಿರಂತರ ಹೊಸತನ ಅಗತ್ಯವೋ ಹಾಗೇ ಸಂಘಟನೆಗೂ ಹೊಸ ವಿಧಾನ, ಹೊಸ ಶಿಷ್ಯರನ್ನು ಕರೆ ತನ್ನಿ ಎಂದು ಕರೆ ನೀಡಿದರು.

ಅತ್ಯುತ್ಸಾಹ ಮತ್ತು ನಿರುತ್ಸಾಹ ಎರಡೂ ಒಳ್ಳೆಯದಲ್ಲ; ಬದಲಾಗಿ ಸದೋತ್ಸಾಹ ಇರಬೇಕು ಎಂದು ಅಭಿಪ್ರಾಯಪಟ್ಟರು. ಕಾರ್ಯಕರ್ತರಲ್ಲೂ ಸೇವಾವಧಿಯುದ್ದಕ್ಕೂ ಉತ್ಸಾಹ ಉಳಿಸಿಕೊಳ್ಳಿ. ಸೈನಿಕ ದೇಶದ ಬಗ್ಗೆ ಎಷ್ಟು ನಿಷ್ಠೆ ಹೊಂದಿದ್ದಾನೋ ಅಷ್ಟೇ ನಿಷ್ಠೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.

ಹವ್ಯಗಂಧ ಎಂಬ ದೊಡ್ಡ ಕಾರ್ಯ ಬಾಯಾರು ವಲಯದಲ್ಲಿ ತಲೆ ಎತ್ತುತ್ತಿದೆ. ಸಮಾಜದ ಅಸ್ಮಿತೆ ಹೆಚ್ಚಿಸುವ ಹಲವು ಕಾರ್ಯಗಳು ಇಲ್ಲಿ ನಡೆಯಲಿವೆ. ಈ ಹವ್ಯಗಂಧ ಎಲ್ಲೆಡೆ ಪಸರಿಸಲಿ ಎಂದು ಹಾರೈಸಿದರು.
ವಿವಿವಿ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಪರಿಸರ ಸ್ನೇಹಿ ಅವಜಲ ಘಟಕವನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ರಾಸಾಯನಿಕ ರಹಿತ, ಕೇವಲ ತುಳಸಿ, ಸ್ಫಟಿಕ ಮತ್ತು ಹಾಸುಗಲ್ಲು ಬಳಸಿ ಘಟಕ ನಿರ್ಮಿಸಿದ ಬಾಲಚಂದ್ರ ಹೆಗಡೆ ಮತ್ತು ಗಜಾನನ ಹೆಗಡೆಯವರನ್ನು ಸನ್ಮಾನಿಸಿ ಆಶೀರ್ವದಿಸಿದ ಶ್ರೀಗಳು, “ಪ್ರಕೃತಿಯಲ್ಲಿ ಸಿಗುವುದೆಲ್ಲವೂ ಶುದ್ಧ. ನಾವು ಅದನ್ನು ಮಲಿನಗೊಳಿಸುತ್ತೇವೆ. ಉಪಯೋಗಿಸಿ ಅಶುದ್ಧವಾದ್ದನ್ನು ಶುದ್ಧ ಮಾಡುವುದು ಪ್ರವಾಹದ ವಿರುದ್ಧ ಈಜಿದಂತೆ. ಕೊಳಚೆ ನೀರನ್ನು ಬಾವಿ ನೀರಿನಷ್ಟೇ ಶುದ್ಧಗೊಳಿಸುವ ಈ ಅವಜಲ ಘಟಕ ಎಲ್ಲೆಡೆಗೆ ಮಾದರಿ. ಇಂಥ ಪರಿಸರ ಸ್ನೇಹಿ ಮಾದರಿ ಸಮಾಜದಲ್ಲಿ ಹೆಚ್ಚು ಹೆಚ್ಚಾಗಿ ಅಳವಡಿಸಿಕೊಳ್ಳಬೇಕು” ಎಂದು ಸೂಚಿಸಿದರು.

ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಶ್ರೀಗಳ ದರ್ಶನಾಶೀರ್ವಾದ ಪಡೆದರು. ಗ್ರಾಮಪಂಚಾಯ್ತಿ ಪಿಡಿಓ ವಂಕಟರಮಣ ಪಟಗಾರ, ಕಾರ್ಯದರ್ಶಿ ಮಂಜುನಾಥ್ ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ ಹೆಗಡೆ, ವಿತ್ತಾಧ್ಯಕ್ಷ ಗಣೇಶ ಜಿ.ಎಲ್, ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಪ್ಪು, ಪ್ರಧಾನ ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ವಿವಿವಿ ಆಡಳಿತಾಧಿಕಾರಿ ಟಿ.ಜೆ.ಪ್ರಸನ್ನ ಕುಮಾರ್, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಮುಖ್ಯ ಎಂಜಿನಿಯರ್ ವಿಷ್ಣು ಬನಾರಿ, ವ್ಯವಸ್ಥಾ ಪರಿಷತ್ ಕಾರ್ಯದರ್ಶಿ ಶ್ರೀಕಾಂತ ಪಂಡಿತ್, ಉಪಸ್ಥಿತರಿದ್ದರು. ವಿಟ್ಲದ ಹರಿಓಂ ತತ್ಸತ್ ತಂಡದಿಂದ 251 ವಿಷ್ಣು ಸಹಸ್ರನಾಮ ಪಾರಾಯಣ ಸೇವೆ, ಗೋವಿಶ್ವಕ್ಕೆ 25108 ರೂಪಾಯಿಗಳ ಸಮರ್ಪಣೆ ನೆರವೇರಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/08/VID-20250820-WA0058.mp4
http://kalpa.news/wp-content/uploads/2024/04/VID-20240426-WA0008.mp4

                               

Tags: GokarnaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaUttara Kannadaಗೋಕರ್ಣ
Previous Post

ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

Next Post

ಗಣೇಶ ಮೂರ್ತಿ – ಈದ್ ಮಿಲಾದ್ ಮೆರವಣಿಗೆ | ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ | ಎಡಿಜಿಪಿ ಹಿತೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಣೇಶ ಮೂರ್ತಿ - ಈದ್ ಮಿಲಾದ್ ಮೆರವಣಿಗೆ | ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ | ಎಡಿಜಿಪಿ ಹಿತೇಂದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಹಿಂದೂ ಅವಿಭಜಿತ ಕುಟುಂಬದ ಯಜಮಾನನಿಗೆ ಆಸ್ತಿ ಮಾರಲು ಅಧಿಕಾರವಿದೆ: ಸುಪ್ರೀಂ ಕೋರ್ಟ್ ಹೇಳಿರುವುದೇನು?

September 27, 2025

ನವರಾತ್ರಿ | ಕಾತ್ಯಾಯನಿ ವ್ರತದ ಮಹತ್ವವೇನು?

September 27, 2025

ಸೆ.28ರಂದು ಗಮಕ ದಸರಾ | ರಾಜ್ಯಮಟ್ಟದ ಗಮಕವಾಚನ ಸ್ಪರ್ಧೆ

September 26, 2025

ಹುಬ್ಬಳ್ಳಿ | ಕೆಳಸೇತುವೆಯಲ್ಲಿ ಕಲಾತ್ಮಕ ಅಲಂಕಾರ ಮಾಡಿ ಮಾದರಿಯಾದ ರೈಲ್ವೆ ಅಧಿಕಾರಿಗಳು

September 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಹಿಂದೂ ಅವಿಭಜಿತ ಕುಟುಂಬದ ಯಜಮಾನನಿಗೆ ಆಸ್ತಿ ಮಾರಲು ಅಧಿಕಾರವಿದೆ: ಸುಪ್ರೀಂ ಕೋರ್ಟ್ ಹೇಳಿರುವುದೇನು?

September 27, 2025

ನವರಾತ್ರಿ | ಕಾತ್ಯಾಯನಿ ವ್ರತದ ಮಹತ್ವವೇನು?

September 27, 2025

ಸೆ.28ರಂದು ಗಮಕ ದಸರಾ | ರಾಜ್ಯಮಟ್ಟದ ಗಮಕವಾಚನ ಸ್ಪರ್ಧೆ

September 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!