No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Tuesday, June 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಆಂಗ್ಲರ ಅಂಧಾನುಕರಣೆ ತೊರೆದು ನಮ್ಮತನ ಉಳಿಸಿಕೊಳ್ಳೋಣ: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 2, 2025
in ಉತ್ತರ ಕನ್ನಡ
0
ಆಂಗ್ಲರ ಅಂಧಾನುಕರಣೆ ತೊರೆದು ನಮ್ಮತನ ಉಳಿಸಿಕೊಳ್ಳೋಣ: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ನಮ್ಮ ಹಿರಿಯರು ಬಳಸುತ್ತಿದ್ದ ಪದಗಳನ್ನು ಮತ್ತೆ ಬಳಕೆಗೆ ತರುವ ಮೂಲಕ ನಾವು ನಾವಾಗೋಣ; ಆಂಗ್ಲರ ಅಂಧಾನುಕರಣೆ ತೊರೆದು ನಮ್ಮತನವನ್ನು ಉಳಿಸಿಕೊಳ್ಳೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ಕರೆ ನೀಡಿದರು.

ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 54ನೇ ದಿನವಾದ ಸೋಮವಾರ ಮಂಗಳೂರು ಮಂಡಲದ ಕನ್ಯಾನ, ಬಾಯಾರು, ಕೋಳ್ಯೂರು, ವಿಟ್ಲ, ಕೇಪು ಮತ್ತು ಕಲ್ಲಡ್ಕ ವಲಯಗಳ ಶಿಷ್ಯರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು.

ಕನ್ನಡ ಭಾಷೆಯಲ್ಲಿ ಕಲಬೆರಕೆಯಾಗಿರುವ ಆಂಗ್ಲ ಮತ್ತು ಇತರ ಭಾಷೆಗಳ ಪದಗಳನ್ನು ಬಿಡುವುದು ಮೊದಮೊದಲು ಕಷ್ಟವೆನಿಸಬಹುದು. ಆದರೆ ನಮ್ಮ ಭಾಷೆ- ಸಂಸ್ಕøತಿ ಉಳಿಸಿಕೊಳ್ಳುವ ಹೊಣೆ ನಮ್ಮ ಮೇಲಿದೆ. ಆದ್ದರಿಂದ ಈ ಕಷ್ಟಗಳಿಗೆ ಅನಿವಾರ್ಯವಾಗಿ ನಾವು ಅದಕ್ಕೆ ಒಗ್ಗಿಕೊಳ್ಳಲೇಬೇಕು ಎಂದು ಸೂಚಿಸಿದರು.

ಸ್ವಭಾಷಾ ಚಾತುರ್ಮಾಸ್ಯದಲ್ಲಿ ಸವಿಗನ್ನಡ ಗೋಷ್ಠಿ ಮತ್ತು ಹವಿಗನ್ನಡ ಗೋಷ್ಠಿ ಮುಗಿದಲ್ಲಿಗೆ ನಮ್ಮ ಕೆಲಸ ಮುಗಿಯುವುದಿಲ್ಲ. ಇದೀಗ ಸಮಾಜದ ಪ್ರತಿಯೊಬ್ಬರೂ ಮತ್ತೆ ನಮ್ಮತನಕ್ಕೆ ಮರಳುವಂತೆ ಮಾಡುವ ದೊಡ್ಡ ಹೊಣೆ ನಮ್ಮ ಮೇಲಿದೆ ಎಂದು ಅಭಿಪ್ರಾಯಪಟ್ಟರು.

ದಿನಕ್ಕೊಂದು ಆಂಗ್ಲಪದ ಕೈಬಿಡುವ ಅಭಿಯಾನದಲ್ಲಿ ಪರ್ಸ್ ಪದ ಬಿಡುವಂತೆ ಸಲಹೆ ಮಾಡಿದರು. ಇದಕ್ಕೆ ಸಂಚಿ ಎಂಬ ಪದದಿಂದ ಕರೆಯಲಾಗುತ್ತಿದೆ. ಕೈಚೀಲ, ಥೈಲಿ, ಕೋಶ, ಸ್ಯೂತ ಪದಗಳನ್ನು ಬಳಸಬಹುದು ಎಂದರು.

ಸಂಘಟನೆಯಿಂದ ಸಮಾಜಕ್ಕೆ ದೊಡ್ಡ ಪ್ರಯೋಜನವಿದೆ. ಸಂಘಟನೆಯನ್ನು ಬಲಪಡಿಸುವ ಮೂಲಕ ಸಮಾಜದ ಉನ್ನತಿಗೆ ಕೊಡುಗೆ ನೀಡಿ ಎಂದು ಆಶಿಸಿದರು. ನದಿಗಳು ಕೂಡಿ ಸಮುದ್ರವಾಗುವಂತೆ ಚಾತುರ್ಮಾಸ್ಯವೆಂಬ ಸಮುದ್ರಕ್ಕೆ ಆರು ವಲಯಗಳಿಂದ ನದಿಗಳು ಬಂದು ಸೇರಿವೆ. ಎಲ್ಲ ಶಿಷ್ಯರ ಬಾಳು ಹಸನಾಗಲಿ ಎಂದು ಅನುಗ್ರಹಿಸಿದರು. ಜೀವನ ಪೂರ್ಣವಾಗಬೇಕಾದರೆ ಅನುಗ್ರಹ ಬೇಕು. ಪಂಕ ತಿರುಗಲು ವಿದ್ಯುತ್ ಹೇಗೆ ಅಗತ್ಯವೋ ಜೀವನ ಮುನ್ನಡೆಯಲು ಅನುಗ್ರಹ ಬೇಕು ಎಂದು ಹೇಳಿದರು.
ಕೆಲ ಕಾರ್ಯಕರ್ತರಲ್ಲಿ ಮಾತ್ರ ಸಮಾಜಸೇವೆಯ ಪ್ರಜ್ಞೆ ಜಾಗೃತವಾಗುತ್ತದೆ. ಇದಕ್ಕೆ ಪ್ರೇರಣೆ ಸಿಗುತ್ತದೆ. ಹೊಸ ಉತ್ಸಾಹ, ಹೊಸ ಯೋಚನೆಗಳೊಂದಿಗೆ ಸಂಘಟನೆ ಬೆಳೆಸಿ ಎಂದು ಸೂಚಿಸಿದರು. ಗಂಗೆ ಪವಿತ್ರವಾಗಲು ಹೇಗೆ ನಿರಂತರ ಹೊಸತನ ಅಗತ್ಯವೋ ಹಾಗೇ ಸಂಘಟನೆಗೂ ಹೊಸ ವಿಧಾನ, ಹೊಸ ಶಿಷ್ಯರನ್ನು ಕರೆ ತನ್ನಿ ಎಂದು ಕರೆ ನೀಡಿದರು.

ಅತ್ಯುತ್ಸಾಹ ಮತ್ತು ನಿರುತ್ಸಾಹ ಎರಡೂ ಒಳ್ಳೆಯದಲ್ಲ; ಬದಲಾಗಿ ಸದೋತ್ಸಾಹ ಇರಬೇಕು ಎಂದು ಅಭಿಪ್ರಾಯಪಟ್ಟರು. ಕಾರ್ಯಕರ್ತರಲ್ಲೂ ಸೇವಾವಧಿಯುದ್ದಕ್ಕೂ ಉತ್ಸಾಹ ಉಳಿಸಿಕೊಳ್ಳಿ. ಸೈನಿಕ ದೇಶದ ಬಗ್ಗೆ ಎಷ್ಟು ನಿಷ್ಠೆ ಹೊಂದಿದ್ದಾನೋ ಅಷ್ಟೇ ನಿಷ್ಠೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.

ಹವ್ಯಗಂಧ ಎಂಬ ದೊಡ್ಡ ಕಾರ್ಯ ಬಾಯಾರು ವಲಯದಲ್ಲಿ ತಲೆ ಎತ್ತುತ್ತಿದೆ. ಸಮಾಜದ ಅಸ್ಮಿತೆ ಹೆಚ್ಚಿಸುವ ಹಲವು ಕಾರ್ಯಗಳು ಇಲ್ಲಿ ನಡೆಯಲಿವೆ. ಈ ಹವ್ಯಗಂಧ ಎಲ್ಲೆಡೆ ಪಸರಿಸಲಿ ಎಂದು ಹಾರೈಸಿದರು.
ವಿವಿವಿ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಪರಿಸರ ಸ್ನೇಹಿ ಅವಜಲ ಘಟಕವನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ರಾಸಾಯನಿಕ ರಹಿತ, ಕೇವಲ ತುಳಸಿ, ಸ್ಫಟಿಕ ಮತ್ತು ಹಾಸುಗಲ್ಲು ಬಳಸಿ ಘಟಕ ನಿರ್ಮಿಸಿದ ಬಾಲಚಂದ್ರ ಹೆಗಡೆ ಮತ್ತು ಗಜಾನನ ಹೆಗಡೆಯವರನ್ನು ಸನ್ಮಾನಿಸಿ ಆಶೀರ್ವದಿಸಿದ ಶ್ರೀಗಳು, “ಪ್ರಕೃತಿಯಲ್ಲಿ ಸಿಗುವುದೆಲ್ಲವೂ ಶುದ್ಧ. ನಾವು ಅದನ್ನು ಮಲಿನಗೊಳಿಸುತ್ತೇವೆ. ಉಪಯೋಗಿಸಿ ಅಶುದ್ಧವಾದ್ದನ್ನು ಶುದ್ಧ ಮಾಡುವುದು ಪ್ರವಾಹದ ವಿರುದ್ಧ ಈಜಿದಂತೆ. ಕೊಳಚೆ ನೀರನ್ನು ಬಾವಿ ನೀರಿನಷ್ಟೇ ಶುದ್ಧಗೊಳಿಸುವ ಈ ಅವಜಲ ಘಟಕ ಎಲ್ಲೆಡೆಗೆ ಮಾದರಿ. ಇಂಥ ಪರಿಸರ ಸ್ನೇಹಿ ಮಾದರಿ ಸಮಾಜದಲ್ಲಿ ಹೆಚ್ಚು ಹೆಚ್ಚಾಗಿ ಅಳವಡಿಸಿಕೊಳ್ಳಬೇಕು” ಎಂದು ಸೂಚಿಸಿದರು.

ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಶ್ರೀಗಳ ದರ್ಶನಾಶೀರ್ವಾದ ಪಡೆದರು. ಗ್ರಾಮಪಂಚಾಯ್ತಿ ಪಿಡಿಓ ವಂಕಟರಮಣ ಪಟಗಾರ, ಕಾರ್ಯದರ್ಶಿ ಮಂಜುನಾಥ್ ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ ಹೆಗಡೆ, ವಿತ್ತಾಧ್ಯಕ್ಷ ಗಣೇಶ ಜಿ.ಎಲ್, ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಪ್ಪು, ಪ್ರಧಾನ ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ವಿವಿವಿ ಆಡಳಿತಾಧಿಕಾರಿ ಟಿ.ಜೆ.ಪ್ರಸನ್ನ ಕುಮಾರ್, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಮುಖ್ಯ ಎಂಜಿನಿಯರ್ ವಿಷ್ಣು ಬನಾರಿ, ವ್ಯವಸ್ಥಾ ಪರಿಷತ್ ಕಾರ್ಯದರ್ಶಿ ಶ್ರೀಕಾಂತ ಪಂಡಿತ್, ಉಪಸ್ಥಿತರಿದ್ದರು. ವಿಟ್ಲದ ಹರಿಓಂ ತತ್ಸತ್ ತಂಡದಿಂದ 251 ವಿಷ್ಣು ಸಹಸ್ರನಾಮ ಪಾರಾಯಣ ಸೇವೆ, ಗೋವಿಶ್ವಕ್ಕೆ 25108 ರೂಪಾಯಿಗಳ ಸಮರ್ಪಣೆ ನೆರವೇರಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/08/VID-20250820-WA0058.mp4
http://kalpa.news/wp-content/uploads/2024/04/VID-20240426-WA0008.mp4

                               

Tags: GokarnaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaUttara Kannadaಗೋಕರ್ಣ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

Next Post

ಗಣೇಶ ಮೂರ್ತಿ – ಈದ್ ಮಿಲಾದ್ ಮೆರವಣಿಗೆ | ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ | ಎಡಿಜಿಪಿ ಹಿತೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಣೇಶ ಮೂರ್ತಿ – ಈದ್ ಮಿಲಾದ್ ಮೆರವಣಿಗೆ | ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ | ಎಡಿಜಿಪಿ ಹಿತೇಂದ್ರ

ಗಣೇಶ ಮೂರ್ತಿ - ಈದ್ ಮಿಲಾದ್ ಮೆರವಣಿಗೆ | ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ | ಎಡಿಜಿಪಿ ಹಿತೇಂದ್ರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
govt-makes-doctors-prescription-mandatory-to-buy-cough-syrup

ಇನ್ಮುಂದೆ ಮೆಡಿಕಲ್ ಶಾಪ್’ನಲ್ಲಿ ನೇರವಾಗಿ ಕೆಮ್ಮಿನ ಸಿರಪ್ ಕೊಳ್ಳುವಂತಿಲ್ಲ | ಕಾರಣವೇನು?

June 16, 2026
ಸಾಹಿತಿ ಶಾಸ್ತ್ರಿಯವರ ಸಾಧನೆಗೆ ತಕ್ಕ ಮಾನ್ಯತೆ ಸಿಗದಿರುವುದು ವಿಷಾದನೀಯ”: ವಾಸುದೇವ ಶಾನಭಾಗ

ಸಾಹಿತಿ ಶಾಸ್ತ್ರಿಯವರ ಸಾಧನೆಗೆ ತಕ್ಕ ಮಾನ್ಯತೆ ಸಿಗದಿರುವುದು ವಿಷಾದನೀಯ”: ವಾಸುದೇವ ಶಾನಭಾಗ

June 16, 2026
ಭೀಕರ ಅಪಘಾತ | ಆರು ಮಂದಿ ಸ್ಥಳದಲ್ಲೇ ಸಾವು

ಶಿಕಾರಿಪುರ ಸಮೀಪ ಟಿಟಿ ವಾಹನ ಪಲ್ಟಿ; ಮೂವರಿಗೆ ಗಂಭೀರ ಗಾಯ

June 16, 2026
telegram ban in India till NEET UG Retest completes

NEET ReTest | ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ನಿರ್ಬಂಧ | ಕಾರಣವೇನು?

June 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL