ಕಲ್ಪ ಮೀಡಿಯಾ ಹೌಸ್ | ಗೋಕರ್ಣ |
ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾ
ಶ್ರೀಮಠದ ಮಾತೆಯರು 10 ಸಾವಿರ ಕುಂಕುಮಾರ್ಚನೆ ನಡೆಸಿ ಸೇವಾ ಕಾಣಿಕೆಯಾಗಿ 50 ಲಕ್ಷ ರೂಪಾಯಿಗಳ ನಿಧಿಯನ್ನು ಶ್ರೀಸಂಸ್ಥಾನದವರಿಗೆ ಸಮರ್ಪಿಸಲಿದ್ದಾರೆ. ಒಂದು ಸಾವಿರಕ್ಕೂ ಹೆಚ್ಚು ಮಾತೆಯರು ಶ್ರೀಸಾನ್ನಿಧ್ಯದಲ್ಲಿ ಕುಂಕುಮಾರ್ಚನೆ ನೆರವೇರಿಸಲಿದ್ದು, ಉಳಿದಂತೆ ಶ್ರೀಮಠದ ಅಂಗಸಂಸ್ಥೆಗಳಲ್ಲಿ, ಶಾಖಾ ಮಠಗಳಲ್ಲಿ, ರಾಜ್ಯಾದ್ಯಂತ ಮಂದಿರ- ದೇಗುಲಗಳಲ್ಲಿ ಕುಂಕುಮಾರ್ಚನೆ ನಡೆಸಲಿದ್ದಾರೆ ಎಂದು ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು ಹೇಳಿದ್ದಾರೆ.

ಪ್ರತಿಕೂಲ ಹವಾಮಾನದ ನಡುವೆಯೂ ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಕಾಸರಗೋಡು, ಶಿವಮೊಗ್ಗ ಸೇರಿದಂತೆ ರಾಜ್ಯದ ಮೂಲೆಮೂಲೆಗಳಿಂದ ಮಾತೆಯರು ಹಾಗೂ ದೊಡ್ಡಸಂಖ್ಯೆಯಲ್ಲಿ ಶಿಷ್ಯಭಕ್ತರು ಈ ವಿಶೇಷ ಕಾರ್ಯಕ್ರಮಕ್ಕಾಗಿ ಅಶೋಕೆಗೆ ಆಗಮಿಸುತ್ತಿದ್ದಾರೆ.

ಹವ್ಯಕ ಮಹಾಮಂಡಲ ವ್ಯಾಪ್ತಿಯ ಎಲ್ಲ ಶಿಷ್ಯರು ಇದೇ ಸಂದರ್ಭದಲ್ಲಿ ಮಹಾರುದ್ರ ಪಠಣ ಹಮ್ಮಿಕೊಂಡಿದ್ದು, 500ಕ್ಕೂ ಹೆಚ್ಚು ಮಂದಿ ರುದ್ರ ಪಠಣ ಕೈಗೊಳ್ಳಲಿದ್ದಾರೆ ಎಂದು ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪ್ಪು ಹೇಳಿದ್ದಾರೆ.
ಶ್ರೀಮಠದ ವೈದಿಕ ವಿಭಾಗದಿಂದ ಶ್ರೀಗಳ ವರ್ಧಂತಿ ಅಂಗವಾಗಿ ಅರುಣ ಹವನ, ಅರುಣ ನಮಸ್ಕಾರ, ವೇದ ನಿಧಿ ಸಮರ್ಪಣೆಯಂಥ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ವೈದಿಕ ಪ್ರಧಾನ ವಿನಾಯಕ ಭಟ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post