No Result
View All Result
South Western Railway, Mysuru Division Hosts Inter Department Drama Competition
English Articles

South Western Railway, Mysuru Division Hosts Inter Department Drama Competition

by ಕಲ್ಪ ನ್ಯೂಸ್
May 16, 2026
0

Kalpa Media House  |  Bengaluru  | The South Western Railway, Mysuru Division, successfully organized the much-awaited Inter Department Drama Competition,...

Read moreDetails
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
  • Advertise With Us
  • Grievances
  • About Us
  • Contact Us
Sunday, May 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ರಾಮಚಂದ್ರಾಪುರ ಮಠ-ಗೋಕರ್ಣ ದೇಗುಲ ಒಂದೇ ನಾಣ್ಯದ ಎರಡು ಮುಖಗಳು: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 16, 2024
in ಉತ್ತರ ಕನ್ನಡ
0
ರಾಮಚಂದ್ರಾಪುರ ಮಠ-ಗೋಕರ್ಣ ದೇಗುಲ ಒಂದೇ ನಾಣ್ಯದ ಎರಡು ಮುಖಗಳು: ರಾಘವೇಶ್ವರ ಶ್ರೀ

ಮಾಜಿ ಸಚಿವ ಆರ್.ವಿ.ದೇಶಪಾಂಡೆಯವರು ಶ್ರೀಗಳ ಆಶೀರ್ವಾದ ಪಡೆದರು.

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ರಾಮಚಂದ್ರಾಪುರ ಮಠ #Ramachandrapura Mutt (ಆದ್ಯ ರಘೂತ್ತಮ ಮಠ) ಹಾಗೂ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ #Raghaweshwara Shri ನುಡಿದರು.

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು ಗೋಕರ್ಣ ದೇವಾಲಯ ಮತ್ತು ಶ್ರೀಮಠದ ನಡುವಿನ ಸಂಬಂಧದ ಬಗೆಗಿನ ದಾಖಲೆಗಳ ಅನಾವರಣದ ಬಳಿಕ ಆಶೀರ್ವಚನ ನೀಡಿದರು.
ಗೋಕರ್ಣ ಮಂಡಲಾಚಾರ್ಯತ್ವ ಮತ್ತು ಮಹಾಬಲೇಶ್ವರನ ವಿಧಿವತ್ತಾದ ಅರ್ಚನೆಯ ಎರಡು ಅನುಜ್ಞೆಯನ್ನು ಶಂಕರರು ನಮ್ಮ ಮಠದ ಪ್ರಥಮಾಚಾರ್ಯರಾದ ವಿದ್ಯಾನಂದರಿಗೆ ನೀಡಿದರು. ಶ್ರೀಸಂಸ್ಥಾನ ಮಹಾಬಲೇಶ್ವರ ದೇವಸ್ಥಾನ ಎನ್ನಲಾಗುತ್ತದೆ. ಮಹಾಬಲೇಶ್ವರ ದೇವಸ್ಥಾನದ ಪಶ್ಚಿಮ ಪಡಸಾಲೆಯಲ್ಲಿ ಮಠ ಇತ್ತು. ದೇವಾಲಯ ನಿರ್ವಹಣೆಗಾಗಿಯೇ ಇತ್ತು. ಪೂರ್ವಾಚಾರ್ಯರ ಸಮಾಧಿಗಳೂ ಇಲ್ಲೇ ಇದ್ದವು. ಮಹಾಬಲೇಶ್ವರ ದೇವಾಲಯದ ವ್ಯವಸ್ಥೆಗಾಗಿಯೇ ಮಠದಲ್ಲಿ ಉತ್ತರಾಧಿಕಾರಿಗಳನ್ನು ನೇಮಕ ಮಾಡುವ ಪದ್ಧತಿ ಇತ್ತು. 33ನೇ ಯತಿಗಳು ಒಂದು ತಿಂಗಳು ಇಲ್ಲೇ ಇದ್ದು, ರಥವನ್ನು ದುರಸ್ತಿ ಮಾಡಿಸಿದ ನಿದರ್ಶನಗಳಿವೆ ಎಂದು ವಿವರಿಸಿದರು.

ಧನಮೂಲ ಅಲ್ಲ; ಪ್ರತಿಷ್ಠೆಗಾಗಿ ಅಲ್ಲ. ದೇವರ ಸೇವೆಗೆ ನಾವು ಇರುವವರು. ಅವನ ಇಚ್ಛೆಯಂತೆ ಆಗಲಿ. ನಿಶ್ಚಿಂತೆಯಿಂದ ಪ್ರತೀಕ್ಷೆ ಮಾಡೋಣ. ಪೂರ್ವಪರಂಪರೆಗೆ ಅನುಸಾರವಾಗಿ ಪೂಜೆ, ಉತ್ಸವಗಳು ನಡೆಯಬೇಕು. ದೇವಹಿತ, ಕಿಂಕರಹಿತ ಭಕ್ತಹಿತವನ್ನು ಚೆನ್ನಾಗಿ ನಡೆಸಿಕೊಂಡು ಹೋಗಬೇಕು. ಇಂದು ಅನಾವರಣಗೊಂಡಿರುವ ಈ ದಾಖಲೆಗಳು ಪ್ರಶ್ನಾತೀತ ಎಂದು ಹೇಳಿದರು.

ಗುರಿಕ್ಕಾರರ ಸಮಾವೇಶದಲ್ಲಿ ಆಶೀರ್ವಚನದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಗುರಿಕ್ಕಾರರನ್ನು ಉದ್ದೇಶಿಸಿ ಆಶೀರ್ವಚನ ನೀಡಿದ ಅವರು, ರಾಮದೇವರ ಪರವಾಗಿ ಸಂಸ್ಥಾನ. ಸಂಸ್ಥಾನದ ಪರವಾಗಿ ಇರುವವರು ಗುರಿಕ್ಕಾರರು. ಆಶೀರ್ವಾದ ಮಾತ್ರ ಅವರಿಗೆ ಸಲ್ಲುವ ಸಂಭಾವನೆ. ಅತ್ಯಂತ ನಿಷ್ಠೆ- ಶ್ರದ್ಧೆಯಿಂದ ಮುಪ್ಪನ್ನೂ ಮರೆತು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಕೆಲಸ ಮಾಡುತ್ತಾರೆ. ಜೊಸ ತಲೆಮಾರಿನಲ್ಲಿ ಗುರಿಕ್ಕಾರರಾಗಲು ಹಿಂಜರಿಕೆ ಕಾಣುತ್ತಿದೆ. ಜಾಂಬವಂತರಿಗೆ ಹನುಮಂತನಂತೆ ಯುವಕರು ಈ ಕಾರ್ಯಕ್ಕೆ ಸಜ್ಜಾಗಬೇಕು ಎಂದು ಸೂಚಿಸಿದರು.
ಮಠದ ಧರ್ಮಧ್ವಜವನ್ನು ಎತ್ತರಕ್ಕೆ ಎತ್ತಿಹಿಡಿಯುವವರು ಬೇಕು. ಸಮಾಜದ ಹೊಸ ತಲೆಮಾರಿನವರು ಇದಕ್ಕೆ ಸಜ್ಜಾಗಬೇಕು. ಗುರಿಕ್ಕಾರರ ವೈಯಕ್ತಿಕ ಶ್ರೇಯಸ್ಸಿಗಾಗಿ ಗಣಪತಿ ಹವನ, ಆಂಜನೇಯ ಹವನ, ನವಗ್ರಹ ಹವನ ನಡೆಸಲಾಗಿದೆ. ಹೆಚ್ಚು ಸೇವೆ ಮಾಡುವ ಶಕ್ತಿ ಬರುವಂತೆ ಹರಸಿ ಇದನ್ನು ನೆರವೇರಿಸಲಾಗುತ್ತಿದೆ ಎಂದರು.

Also read: ಈದ್ ಮಿಲಾದ್ | ಖಾಕಿ ಭದ್ರಕೋಟೆಯಾಗಿದೆ ನಾಗಮಂಗಲ | ಹೇಗಿದೆ ನೋಡಿ ಭದ್ರತೆ?

ಮಠದ ಶ್ರೀಮುದ್ರೆಯ ಸಾಠಿ, ಸಂಸ್ಥಾನದ ಹಸ್ತಾಕ್ಷರದ ಸನ್ನದು, ರಜತ ರಕ್ಷೆ ನಿಮ್ಮನ್ನು ಅಧಿಕರಿಸುವಂಥದ್ದು. ಶಕ್ತಿ ತುಂಬುವಂಥದ್ದು. ಸಮಾಜವನ್ನು ಮುನ್ನಡೆಸಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಸಮಾಜದಲ್ಲಿ ಶ್ರೀಸಂಸ್ಥಾನದವರ ಪರವಾಗಿ ಸ್ವರ್ಣಪಾದುಕೆ ಸಂಚಾರ ನಡೆಯುತ್ತಿದೆ. ಸ್ವರ್ಣಪಾದುಕೆಗೆ ನಿಗದಿಪಡಿಸಿದ್ದ ಕಾಣಿಕೆಯನ್ನು ಈ ಬಾರಿ ರದ್ದುಪಡಿಸಿ, ಐಚ್ಛಿಕವಾಗಿ ಕಾಣಿಗೆ ಸಮರ್ಪಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಹೆಚ್ಚು ಹೆಚ್ಚು ಜನರಿಗೆ ವಿವಿವಿ ಬಗ್ಗೆ ಮಾಹಿತಿ ಈ ಮೂಲಕ ತಲುಪಬೇಕು ಎಂದು ಆಶಿಸಿದರು.
ಅಷ್ಟಮಂಗಲ ಚಿಂತನೆ ಮುಂದುವರಿಸಿದ ಶ್ರೀಗಳು, ಪ್ರತಿಯೊಬ್ಬರೂ ಬೆಳಿಗ್ಗೆ ಶ್ವಾಸಪರೀಕ್ಷೆ ಮಾಡಿಕೊಂಡು ಎಲ್ಲಿದೆ ಎನ್ನುವುದನ್ನು ತಿಳಿದುಕೊಳ್ಳಬೇಕು. ವಾಮನಾಡಿ, ಮಧ್ಯನಾಡಿ, ಕ್ಷಿಣ ನಾಡಿ, ಇಡಾ, ಇಂಗಳ, ಸುಷುನ್ಮಾ ಅಥವಾ ಸೋಮ, ಅಗ್ನಿ, ಸೂರ್ಯನಾಡಿಯಲ್ಲಿ ಶ್ವಾಸ ಇರಬಹುದು. ಇದರಿಂದ ನಮ್ಮ ಮರಣದ ವರೆಗಿನ ಪ್ರತಿ ಅಂಶಗಳನ್ನು ತಿಳಿದುಕೊಳ್ಳಬಹುದು. ಇದನ್ನು ದೈವಜ್ಞರು ಹೆಚ್ಚಾಗಿ ಬಳಕೆ ಮಾಡುತ್ತಿಲ್ಲ. ಇದರ ಬಳಕೆ ಹೆಚ್ಚಬೇಕು ಎಂದು ಆಶಿಸಿದರು.

ದೈವಜ್ಞರು ಕೂಡಾ ತಮ್ಮ ಶ್ವಾಸದ ಮೂಲಕ ತನ್ನ ಜೀವನದ ಆಗುಹೋಗುಗಳನ್ನು ತಿಳಿದುಕೊಳ್ಳಬೇಕು. ಶುಭವಾರಗಳಲ್ಲಿ ಉಸಿರು ಎಡಕ್ಕೆ ಇದ್ದರೆ ಶುಭ. ಸೋಮ, ಬುಧ, ಶುಕ್ರವಾರಗಳಂದು ಉಸಿರು ಬಲಕ್ಕೆ ಇದ್ದರೆ ಅಶುಭ. ಭಾನು, ಮಂಗಳ, ಶನಿವಾರದಂದು ಶ್ವಾಸ ಬಲಕ್ಕಿದ್ದರೆ ಶುಭ. ಶ್ವಾಸ ಸ್ವಸ್ಥವಾಗಿದ್ದರೆ ಆರೋಗ್ಯದ ಸೂಚಕ. ಲಾಭ, ಅನುಕೂಲಗಳನ್ನು, ಸುಭೋಜನವನ್ನು ಕೂಡಾ ಇದು ಸೂಚಿಸುತ್ತದೆ. ಜೀವನಕ್ಕೆ ಬೇಕಾದ ಎಲ್ಲವೂ ಸಾಧನೆಯಾಗುತ್ತದೆ ಎನ್ನುವುದಕ್ಕೆ ಇದು ಸೂಚನೆ. ಶ್ವಾಸ ಕೆಟ್ಟಿತು ಎಂದಾದರೆ ಊಟ ಕೆಡುತ್ತವೆ ಎಂಬ ಅರ್ಥ. ಕಲಹಗಳು ಏರ್ಪಡುತ್ತವೆ. ಒಳ್ಳೆಯ ನಿದ್ದೆ ಬರುವುದಿಲ್ಲ. ಶರೀರದಿಂದ ಕಶ್ಮಲಗಳು ಹೋಗುವುದಿಲ್ಲ ಎಂದು ವಿಶ್ಲೇಷಿಸಿದರು.

ಭಾನುವಾರ ಶ್ವಾಸಾನುಕೂಲವಾಗದಿದ್ದರೆ ದೇಹದಲ್ಲಿ ವೇದನೆ, ಸೋಮವಾರ ಕಲಹ, ಮಂಗಳವಾರ ಮರಣ, ಬುಧವಾರ ದೂರಪ್ರಯಾಣ, ಗುರುವಾರ ಶ್ವಾಸಾನುಕೂ ಇಲ್ಲದಿದ್ದರೆ ರಾಜ್ಯಕ್ಕೆ ಆಪತ್ತು ಬರಬಹುದು. ಶುಕ್ರವಾರ ಕಾರ್ಯಹಾನಿ, ಶನಿವಾರ ಪರನಾಶ, ಕೃಷಿನಾಶ, ಭೂ ವಿವಾದಕ್ಕೆ ಕಾರಣವಾಗುತ್ತದೆ ಎಂದರು.

http://kalpa.news/wp-content/uploads/2024/04/VID-20240426-WA0008.mp4

ಎಂಟು ಭಾನುವಾರ ಶ್ವಾಸ ಪ್ರತಿಕೂಲವಾದರೆ ಗುರುವಿಗೆ ಜೀವಕ್ಕೆ ಅಪಾಯ ಅಥವಾ ತನಗೆ ದೊಡ್ಡ ವ್ಯಾಧಿ ಬರುವ ಸೂಚನೆ. ಎಂಟು ಸೋಮವಾರ ಹೀಗಾದರೆ ಮಕ್ಕಳಿಗೆ ಆಪತ್ತು, ಮಂಗಳವಾರ ಬಂಧನಯೋಗ, ಬುಧವಾರದ ಶ್ವಾಸ ಪ್ರತಿಕೂಲ ಬಂದರೆ ಸಾವು ಎಂಬ ಅರ್ಥ, ಗುರುವಾರ ಗುರುವಿನ ನಿಶ್ಚಯ ಮೃತ್ಯು, ಶುಕ್ರವಾರ ಧನಕ್ಷಯ, ಶನಿವಾರ ಗೃಹಣಿ ಅಥವಾ ಗೃಹನಾಶ ಎಂದು ವಿಶ್ಲೇಷಿಸಿದರು.

ಮಹತ್ವದ ವಿಷಯಕ್ಕೆ ಹೊರಡುವಾಗ ನಾಡಿ ಎಡಕ್ಕಿರಬೇಕು. ಬಲಕ್ಕಿದ್ದರೆ ಅಶುಭ. ಪ್ರವೇಶ ಮಾಡುವಾಗ ನಾಡಿ ಬಲಕ್ಕಿದ್ದರೆ ಶುಭ. ಯೋಗಸಾಧನೆಗೆ ಮಧ್ಯನಾಡಿ ಪ್ರಶಸ್ತ. ಆತ್ಮಸಾಧನೆ, ಮುಕ್ತಿಗೆ ಪ್ರಯತ್ನ ಮಾಡಲು ಇದು ಅಗತ್ಯ ಎಂದರು.

ಮಾಜಿ ಸಚಿವ ಆರ್.ವಿ.ದೇಶಪಾಂಡೆಯವರು ಶ್ರೀಗಳ ಆಶೀರ್ವಾದ ಪಡೆದರು. 34ನೇ ಗುರುಗಳ ಪೂರ್ವಾಶ್ರಮ ಪರಂಪರೆಯ ವಿನಾಯಕ ರಮಣಿ ಭಟ್ ಗೋಕರ್ಣದ ದಾಖಲೆಗಳನ್ನು ಅನಾವರಣಗೊಳಿಸಿದರು. ಮಹಾಮಂಡಲ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಳ್ಳೇರಿಯಾ ಮಂಡಲದ ಪ್ರಧಾನ ಗುರಿಕ್ಕಾರರಾದ ಮೊಗ್ರ ಸತ್ಯನಾರಾಯಣ ಭಟ್ ಗುರಿಕ್ಕಾರರ ಕಾರ್ಯಚಟುವಟಿಕೆಗಳ ಬಗ್ಗೆ ವಿವರ ನೀಡಿದರು.

ಶ್ರೀಮಠದ ಸಮ್ಮುಖ ಸರ್ವಾಧಿಕಾರಿ ತಿಮ್ಮಪ್ಪಯ್ಯ ಮಡಿಯಾಳ್, ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಚಾತುಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಮಂಜುನಾಥ ಸುವರ್ಣಗದ್ದೆ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಪಂಡಿತ್, ಕೋಶಾಧ್ಯಕ್ಷ ಸುಧಾಕರ ಬಡಗಣಿ, ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಜಿ.ವಿ.ಹೆಗಡೆ, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ಶ್ರೀಶ ಶಾಸ್ತ್ರಿ, ಅರವಿಂದ ಬಂಗಲಗಲ್ಲು ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news                     

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRaghaweshwara shriRamachandrapura muttUttara Kannadaಗೋಕರ್ಣರಾಮಚಂದ್ರಾಪುರ ಮಠಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ
Share197Tweet123Send
Previous Post

ಈದ್ ಮಿಲಾದ್ | ಖಾಕಿ ಭದ್ರಕೋಟೆಯಾಗಿದೆ ನಾಗಮಂಗಲ | ಹೇಗಿದೆ ನೋಡಿ ಭದ್ರತೆ?

Next Post

ಮನುಷ್ಯನಿಗೆ ಜೀವನ ಪೂರ್ತಿ ಹಾಲುಣಿಸುವ ಗೋಮಾತೆ ಮಹಾತಾಯಿ: ಚಿದಾನಂದಗೌಡ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮನುಷ್ಯನಿಗೆ ಜೀವನ ಪೂರ್ತಿ ಹಾಲುಣಿಸುವ ಗೋಮಾತೆ ಮಹಾತಾಯಿ: ಚಿದಾನಂದಗೌಡ ಅಭಿಪ್ರಾಯ

ಮನುಷ್ಯನಿಗೆ ಜೀವನ ಪೂರ್ತಿ ಹಾಲುಣಿಸುವ ಗೋಮಾತೆ ಮಹಾತಾಯಿ: ಚಿದಾನಂದಗೌಡ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

ನನ್ನ ಬಿಪಿ ನಾರ್ಮಲ್ ಆಯ್ತು, ಹಾಗಾಗಿ ಮಾತ್ರೆ ನಿಲ್ಲಿಸಿದೆ | ಜೀವಕ್ಕೆ ಕುತ್ತು | ಅಪಾಯಕಾರಿ ತಪ್ಪು ಕಲ್ಪನೆಗಳು

May 17, 2026
ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ನೀರು | ಎಷ್ಟು ದಿನ? ಕಾರಣವೇನು?

ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ಡೇಟ್ ಫಿಕ್ಸ್ | ಯಾವತ್ತು? ಎಷ್ಟು ನೀರು? ಯಾರಿಗೆ ಪ್ರಯೋಜನ?

May 16, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಕೇಂದ್ರ ಗೃಹ ಇಲಾಖೆ ಭರ್ಜರಿ ಬೇಟೆ | 182 ಕೋಟಿ ರೂ ಮೌಲ್ಯದ ಜಿಹಾದಿ ಡ್ರಗ್ಸ್ ಸೀಜ್

May 16, 2026
ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

May 16, 2026
ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

May 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL