No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

Gokarna | ಜು.29-ಸೆ.26 | ಅಶೋಕೆಯಲ್ಲಿ ರಾಘವೇಶ್ವರ ಶ್ರೀಗಳ ಅನ್ನಬ್ರಹ್ಮ ಚಾತುರ್ಮಾಸ್ಯ

ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆಯನ್ನು ಸಮಾಜಕ್ಕೆ ತಿಳಿಸಬೇಕು : ರಾಮಚಂದ್ರಾಪುರ ಶ್ರೀ | ಧಾನ್ಯಲಕ್ಷ್ಮೀ ಪೂಜೆ ಹಾಗೂ ಪೂರ್ವಸಿದ್ಧತಾ ಸಭೆ

kalpa News by kalpa News
July 28, 2026
in ಉತ್ತರ ಕನ್ನಡ
0
Gokarna Ramachandrapura Seer from july 29 to Sept 26
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಗೋಕರ್ಣದಲ್ಲಿ (Gokarna) ಜು. 29ರಂದು ವ್ಯಾಸಪೂಜೆಯೊಂದಿಗೆ ಚಾತುರ್ಮಾಸ್ಯಕ್ಕೆ ಚಾಲನೆ | ಧಾನ್ಯಲಕ್ಷ್ಮೀ ಪೂಜೆ ಹಾಗೂ ಪೂರ್ವಸಿದ್ಧತಾ ಸಭೆ

ನಮ್ಮ ಪ್ರಾಚೀನ ಆಚರಣೆಗಳ ಹಿನ್ನೆಲೆ ತಿಳಿಯದೇ ಇರುವುದರಿಂದ ಅವುಗಳನ್ನು ಕಂದಾಚಾರ ಎಂದು ಭಾವಿಸಿ ಅನೇಕರು ಕೈಬಿಡುತ್ತಿರುವುದು ವಿಷಾದನೀಯ. ಪಾರಂಪರಿಕ ಆಚರಣೆಗಳ ವೈಜ್ಞಾನಿಕತೆ ಹಾಗೂ ಅದರ ಹಿಂದಿರುವ ತಾತ್ವಿಕ ಅರ್ಥವನ್ನು ಸಮಾಜಕ್ಕೆ ತಿಳಿಸುವ ಅಗತ್ಯತೆಯಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಅವರು ಜುಲೈ 27ರಂದು ಗೋಕರ್ಣದ ಅಶೋಕೆಯ ಪರಿಸರದಲ್ಲಿ ಅನ್ನಬ್ರಹ್ಮ ಚಾತುರ್ಮಾಸ್ಯದ ಅಂಗವಾಗಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಮಠಕ್ಕೆ ಬರುವ ಪ್ರತಿಯೊಬ್ಬನನ್ನೂ ಭಗವಂತನೆಂದು ಕಾಣಬೇಕು. ಶ್ರೀಮಂತ-ಬಡ ಎಂಬ ಬೇಧಭಾವವಿಲ್ಲದೆ ಎಲ್ಲರನ್ನೂ ಸಮಾನವಾಗಿ ಗೌರವಿಸಿ, ಅವರು ಸಂತೃಪ್ತಿಯಿಂದ ಹಿಂತಿರುಗುವಂತೆ ಮಾಡುವ ಜವಾಬ್ದಾರಿ ಕಾರ್ಯಕರ್ತರದ್ದೆಂದು ಶ್ರೀಗಳು ತಿಳಿಸಿದರು.

ಇಂದು ಆಹಾರ ಪದ್ಧತಿ ಹಾಗೂ ಊಟದ ವಿಧಾನಗಳಲ್ಲಿ ಅನೇಕ ಲೋಪಗಳಿವೆ. ನಾವು ಏನು ತಿನ್ನುತ್ತೇವೆ ಹಾಗೂ ಹೇಗೆ ತಿನ್ನುತ್ತೇವೆ ಎಂಬುದು ನಮ್ಮ ದೇಹ-ಮನಸ್ಸಿನ ಮೇಲೆ ಮಹತ್ತರ ಪರಿಣಾಮ ಬೀರುತ್ತದೆ. ಈ ಹಿನ್ನೆಲೆ ನಮ್ಮ ಪ್ರಾಚೀನ ಆಹಾರ ಸಂಸ್ಕೃತಿ ಮತ್ತು ಆಚರಣೆಗಳನ್ನು ಪುನರುಜ್ಜೀವನಗೊಳಿಸುವ ಅಗತ್ಯವಿದೆ ಎಂದು ಹೇಳಿದರು.

ಈ ವರ್ಷದ ಚಾತುರ್ಮಾಸ್ಯವನ್ನು ವಿಚಾರ ಪ್ರಧಾನವಾಗಿ ಆಚರಿಸಲಾಗುತ್ತಿದ್ದು, ತತ್ತ್ವ ಸಂವಾದಗಳು, ಜ್ಞಾನ ಚರ್ಚೆಗಳು ಹಾಗೂ ಸಮಾಜ ಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ. ಉತ್ತರ ಕನ್ನಡ, ಶಿವಮೊಗ್ಗ, ಮಂಗಳೂರು, ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್., ಶಾಸನತಂತ್ರದ ಕಾರ್ಯದರ್ಶಿ ಕೆ.ಪಿ. ಎಡಪ್ಪಾಡಿ, ಹವ್ಯಕ ಮಹಾಮಂಡಲದ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪು, ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಮಂಜುನಾಥ ಸುವರ್ಣಗದ್ದೆ, ಪ್ರಧಾನ ಸಂಯೋಜಕ ಚಂದನ್ ಶಾಸ್ತ್ರಿ ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.

ಅನ್ನಬ್ರಹ್ಮ ಚಾತುರ್ಮಾಸ್ಯಕ್ಕೆ ಚಾಲನೆ

ಈ ವರ್ಷದ ಅನ್ನಬ್ರಹ್ಮ ಚಾತುರ್ಮಾಸ್ಯವು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ಜುಲೈ 29ರಿಂದ ಸೆಪ್ಟೆಂಬರ್ 26ರವರೆಗೆ ನಡೆಯಲಿದೆ. ಜುಲೈ 29ರಂದು ವ್ಯಾಸಪೂಜೆಯೊಂದಿಗೆ ಶ್ರೀಗಳು ತಮ್ಮ 33ನೇ ವರ್ಷದ ಚಾತುರ್ಮಾಸ್ಯ ಸಂಕಲ್ಪವನ್ನು ಸ್ವೀಕರಿಸಲಿದ್ದಾರೆ.

Also Read>> Chamararajanagara | ಶ್ರೀ ಚಾಮರಾಜೇಶ್ವರ ರಥೋತ್ಸವ ಸಂಭ್ರಮ: ಇತಿಹಾಸ ಅರಿವು ಅಭಿಯಾನಕ್ಕೆ ಚಾಲನೆ

ಚಾತುರ್ಮಾಸ್ಯವು ಗುರುಗಳಿಗೆ ವ್ರತವಾಗಿದ್ದರೆ, ಶಿಷ್ಯಭಕ್ತರಿಗೆ ಹಬ್ಬದಂತಾಗಿದೆ. ಪ್ರತಿವರ್ಷ ವಿಷಯಾಧಾರಿತವಾಗಿ ಚಾತುರ್ಮಾಸ್ಯವನ್ನು ಆಚರಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಶ್ರೀರಾಮಚಂದ್ರಾಪುರ ಮಠದ ವಿಶೇಷತೆಯಾಗಿದೆ.

ಈ ಬಾರಿ ಆಹಾರದ ಮಹತ್ವವನ್ನು ಕೇಂದ್ರವಾಗಿಟ್ಟುಕೊಂಡು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ಶ್ರೀಗಳೇ ನಡೆಸುವ ಪ್ರವಚನಗಳಲ್ಲಿ ಭೋಜನವೆಂಬ ತಪಸ್ಸು, ಆಹಾರ ಸೇವನೆಯ ಸರಿಯಾದ ಸಮಯ, ಜಲಪಾನದ ನಿಯಮಗಳು, ಉಪವಾಸದ ಮಹತ್ವ, ಭೋಜನದ ಬಳಿಕ ಪಾಲಿಸಬೇಕಾದ ಕ್ರಮಗಳು, ಭೋಜನ ಪಾತ್ರೆಗಳ ಪ್ರಾಮುಖ್ಯತೆ ಸೇರಿದಂತೆ ಅನೇಕ ವಿಷಯಗಳು ಚರ್ಚೆಯಾಗಲಿವೆ. ಜೊತೆಗೆ ಪ್ರಾಚೀನ ವಿಧಾನದಲ್ಲಿ ಸಿದ್ಧಪಡಿಸಿದ ಆಹಾರವೂ ವಿಶೇಷ ಆಕರ್ಷಣೆಯಾಗಲಿದೆ.

ಧಾನ್ಯಲಕ್ಷ್ಮೀ ಪೂಜೆ

ಅನ್ನಬ್ರಹ್ಮ ಚಾತುರ್ಮಾಸ್ಯಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಶಿಷ್ಯಭಕ್ತರು ಸಮರ್ಪಿಸಿದ ಧಾನ್ಯಲಕ್ಷ್ಮಿಗೆ ಜುಲೈ 26ರಂದು ಪೂಜೆ ಸಲ್ಲಿಸಲಾಯಿತು. ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕುಮಟಾ ಶಾಸಕ ದಿನಕರ ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ರಾಜ್ಯದಾದ್ಯಂತದ ಶ್ರೀಮಠದ ಮಂಡಲಗಳು, ಅಂಗಸಂಸ್ಥೆಗಳು ಹಾಗೂ ಭಕ್ತರಿಂದ ಬಂದ ಧಾನ್ಯ ಸಮರ್ಪಣೆ ಚಾತುರ್ಮಾಸ್ಯದ ಸಾರ್ಥಕತೆಯನ್ನು ಹೆಚ್ಚಿಸಿತು.

Gokarna | Chaturmasya begins on July 29 with Vyasa Puja

Gokarna: Emphasising the need to revive awareness about ancient traditions, Jagadguru Shankaracharya Sri Sri Raghaveshwara Bharathi Mahaswamiji of Sri Ramachandrapura Math said that many people are abandoning traditional practices due to a lack of understanding about their scientific and philosophical foundations.

He was addressing volunteers during a preparatory meeting held on July 27, 2026, at Ashokavana in Gokarna as part of the upcoming Annabrahma Chaturmasya. The seer stressed that every person visiting the Math must be treated as divine, without discrimination between rich and poor, and that it is the responsibility of volunteers to ensure all devotees leave with satisfaction.

Highlighting the importance of food habits, he noted that there are several shortcomings in modern dietary practices. “What we eat and how we eat have a profound impact on our physical and mental well-being. There is a need to reintroduce our traditional food culture and practices,” he said.

This year’s Chaturmasya will be observed as a “thought-oriented” spiritual programme, featuring philosophical dialogues and awareness initiatives. The seer expressed happiness over the enthusiastic response from devotees across regions including Uttara Kannada, Shivamogga, Mangaluru and Bengaluru.

Prominent attendees at the event included Math administrator Santosh Hegde, Finance Head Ganesh J.L., Legislative Secretary K.P. Edappadi, Havyaka Mahamandala President Hariprasad Periyapu, Secretary Mahesh Chatnalli, Manjunath Suvarnagadde, and Chief Coordinator Chandan Shastri, among others.Kalahamsa Infotech private limited

Annabrahma Chaturmasya from July 29

The Annabrahma Chaturmasya will be held from July 29 to September 26, 2026, at the Ashokavana premises of the Gokarna Moola Math. The seer will undertake his 33rd Chaturmasya vow with the ceremonial Vyasa Puja on July 29.

While Chaturmasya is a sacred observance for spiritual leaders, it is celebrated as a festival by devotees. The Math has been uniquely organising theme-based Chaturmasya programmes each year to promote social awareness.

This year’s focus is on food awareness. Daily discourses by the seer will cover topics such as mindful eating as a form of spiritual discipline, the right time to eat, water consumption practices, the purpose of food, fasting, post-meal discipline, and the significance of traditional utensils. Traditional food preparations will also be a highlight of the event.

Dhanya Lakshmi Puja Performed

As part of the preparations, Dhanya Lakshmi Puja was performed on July 26, for the grains offered by devotees from across the state for the Annabrahma Chaturmasya.

The puja was conducted by Jagadguru Sri Raghaveshwara Bharathi Mahaswamiji in the presence of several dignitaries, including Kumta MLA Dinakar Shetty. Contributions from various Math units, affiliated organisations, and devotees added to the significance of the upcoming Chaturmasya.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalpa News Advertising Disclaimer

Tags: AshokeChaturmasyaGokarnaKannada News WebsiteLatest News KannadaRaghaveshwara Bharati SwamijiRamachandrapura MathUttara Kannadaಅನ್ನಬ್ರಹ್ಮ ಚಾತುರ್ಮಾಸ್ಯಅಶೋಕೆಗೋಕರ್ಣಧಾನ್ಯಲಕ್ಷ್ಮೀ ಪೂಜೆರಾಘವೇಶ್ವರ ಶ್ರೀಶ್ರೀರಾಮಚಂದ್ರಾಪುರ ಮಠ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

Chamararajanagara | ಶ್ರೀ ಚಾಮರಾಜೇಶ್ವರ ರಥೋತ್ಸವ ಸಂಭ್ರಮ: ಇತಿಹಾಸ ಅರಿವು ಅಭಿಯಾನಕ್ಕೆ ಚಾಲನೆ

Next Post

Shivamogga | ದೇಶ ಸೇವೆಗೆ ಯುವಕರು ಸನ್ನದ್ಧರಾಗಬೇಕು | ನಿ.ಮೇಜರ್ ದಿನೇಶ್ ಕರೆ

kalpa News

kalpa News

Next Post
Youth must Ready to Serve the Country: Re.Ma.Dinesh

Shivamogga | ದೇಶ ಸೇವೆಗೆ ಯುವಕರು ಸನ್ನದ್ಧರಾಗಬೇಕು | ನಿ.ಮೇಜರ್ ದಿನೇಶ್ ಕರೆ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL