No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Thursday, March 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಶಿಷ್ಯಹಿತಂ ಮಹಾಸಂಕಲ್ಪ | ಪ್ರತಿ ಶಿಷ್ಯರ ಮನೆಗೆ ಸ್ವರ್ಣಯಾತ್ರೆ

ಸ್ವಭಾಷಾ ಚಾತುರ್ಮಾಸ್ಯ ಸೀಮೋಲ್ಲಂಘನ ಧರ್ಮಸಭೆಯಲ್ಲಿ ರಾಘವೇಶ್ವರ ಶ್ರೀ ಘೋಷಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 8, 2025
in ಉತ್ತರ ಕನ್ನಡ
0
ಶಿಷ್ಯಹಿತಂ ಮಹಾಸಂಕಲ್ಪ | ಪ್ರತಿ ಶಿಷ್ಯರ ಮನೆಗೆ ಸ್ವರ್ಣಯಾತ್ರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಸಮಸ್ತ ಗುರು ಪರಂಪರೆಯ ಆಶೀರ್ವಾದವನ್ನು ಹೊತ್ತು ಸಮಾಜದ ಪ್ರತಿ ಶಿಷ್ಯರ ಮನೆಗೆ ಸ್ವರ್ಣಪಾದುಕೆ ಚಿತ್ತೈಸುವ ಸ್ವರ್ಣಯಾತ್ರೆ ಈ ವರ್ಷದ ವಿಜಯದಶಮಿಯಿಂದ ಆರಂಭವಾಗಲಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ #Raghaveshwara Shri ನುಡಿದರು.

ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡ ಶ್ರೀಗಳು ಸೀಮೋಲ್ಲಂಘನ ಬಳಿಕ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡುವ ವೇಳೆ ಈ ಉದ್ಘೋಷ ಮಾಡಿದರು.
ಶ್ರೀಮಠದ ಶಿಷ್ಯತ್ವ ಹೊಂದಿರುವ ಎಲ್ಲರ ಹೆಸರಲ್ಲಿ ಸಂಕಲ್ಪ ಮಾಡಿ ಶಿಷ್ಯಹಿತಂ ಎಂಬ ಬೃಹತ್ ಕಾರ್ಯಕ್ರಮ ಆಯೋಜಿಸಿದ್ದು, ಇದಕ್ಕೆ ಪೂರ್ವಭಾವಿಯಾಗಿ ಸ್ವರ್ಣಪಾದುಕೆಗಳು ಮನೆ ಮನೆಗೆ ತೆರಳಲಿವೆ ಎಂದು ನುಡಿದರು. ಪ್ರತಿ ಶಿಷ್ಯರ ಹೆಸರು, ರಾಶಿ, ನಕ್ಷತ್ರ, ಗೋತ್ರ ಸಹಿತವಾಗಿ ಸಂಕಲ್ಪ ಮಾಡಿ ಭಗವಂತನನ್ನು ಆರಾಧಿಸುವ ಈ ವಿಶಿಷ್ಟ ಕಾರ್ಯಕ್ರಮ ನೂರಾರು ಸಂಕಲ್ಪ ಮಂಟಪ, ಸಾವಿರಾರು ವೈದಿಕರನ್ನೊಳಗೊಂಡಿರುತ್ತದೆ. ಶಿಷ್ಯರ ಸರ್ವತೋಮುಖ ಹಿತವನ್ನು ಬಯಸಿ, ಭಗವಂತನಲ್ಲಿ ಸಂಪ್ರಾರ್ಥನೆ ಮಾಡುವ ಪೂರ್ವಭಾವಿಯಾಗಿ ಗುರು ಅನುಗ್ರಹ ಪ್ರತಿ ಮನೆ ತಲುಪಲಿದೆ. ಇಡೀ ಶಿಷ್ಯಸ್ತೋಮ ಗುರುಪರಂಪರೆಯ ಅನುಗ್ರಹದ ಸ್ವರ್ಣಘಳಿಗೆಯ ಪ್ರತೀಕ್ಷೆಯಲ್ಲಿರಿ ಎಂದು ಕರೆ ನೀಡಿದರು.

ಗುರು ತಾನೇ ನೀಡಿದರೆ ಅದಕ್ಕೆ ಅನನ್ಯ ಫಲ ಎಂದು ಶಾಸ್ತ್ರಗಳು ಹೇಳಿವೆ. ಅದರ ಫಲ ಪ್ರತಿಮನೆಗೆ ದೊರಕಲಿದೆ. ಗುರು ಪರಂಪರೆಯ ಪರಮಾನುಗ್ರಹ ಬದುಕಿನ ಎಲ್ಲ ಗ್ರಹಣಗಳನ್ನು ಬಿಡಿಸಲಿ. ಸಾಧನೆಯ ಮಹಾಪರ್ವಕ್ಕೆ ಮುನ್ನುಡಿಯಾಗಲಿ ಎಂದು ಆಶೀರ್ವದಿಸಿದರು.
ನಮ್ಮತನ ಉಳಿಸಿಕೊಳ್ಳಿ

ನಾವು ಎಂಥದ್ದೇ ಪರಿಸ್ಥಿತಿಯಲ್ಲೂ ನಮ್ಮತನವನ್ನು ಬಿಡಬಾರದು; ನಮ್ಮತನವನ್ನು ಬಿಟ್ಟು ಬದುಕುವುದು ಸಾವಿಗೆ ಸಮಾಜ; ಸರ್ವತ್ರ ನಮ್ಮತನವನ್ನು ಉಳಿಸಿಕೊಳ್ಳಬೇಕು. ಸ್ವಭಾಷಾ ಅಭಿಯಾನ ಚಾತುರ್ಮಾಸ್ಯಕ್ಕೆ ಅಥವಾ ಶಿಷ್ಯರಿಗೆ ಸೀಮಿತವಾಗದೇ ನಾಡಿನ ಹೊರಗೂ ಪಸರಿಸಬೇಕು. ಸ್ವಭಾಷಾ ಚಾತುರ್ಮಾಸ್ಯದ ಪರಿಕಲ್ಪನೆ ಭಗವತ್ಪ್ರೇರಣೆ. ಮನೆಮಾತನ್ನು ಮತ್ತೆ ನೆನಪಿಸಿಕೊಳ್ಳುವ ಕಾರ್ಯ ಚಾತುರ್ಮಾಸ್ಯದಲ್ಲಿ ನಡೆದಿದೆ. ಹೊಸ ಅನ್ವೇಷಣೆ, ಅನುಶೋಧನೆಗಳಿಗೆ ಹೊಸ ಪದಗಳನ್ನು ಸೃಷ್ಟಿಸುವ ಅಗತ್ಯವಿದೆ ಎಂದರು.

ದಿನಕ್ಕೊಂದು ಆಂಗ್ಲಪದ ತ್ಯಜಿಸುವ ಅಭಿಯಾನದಲ್ಲಿ ‘ಶೇವಿಂಗ್’ ಪದ ಕೈಬಿಡುವಂತೆ ಸಲಹೆ ಮಾಡಿದರು. ಮುಖಕ್ಷೌರ ಎಂಬ ಕನ್ನಡ ಶಬ್ದ ಬಳಕೆಯಲ್ಲಿದೆ. ವಪನ, ಮುಂಡನ, ಹೆರೆ, ಬೋಳಿಸು, ಎಂಬ ಶಬ್ದಗಳೂ ಆಡುಭಾಷೆಗಳಲ್ಲಿ ಪ್ರಯೋಗಗಳಿವೆ. ಪರ್ಶಿಯನ್ ಮೂಲದ ಹಜಾಮತಿ ಶಬ್ದವೂ ಬಳಸಲ್ಪಡುತ್ತಿದೆ ಎಂದು ವಿವರಿಸಿದರು.
ಕ್ಷೌರ ಒಳ್ಳೆಯ ಕ್ರಿಯೆ; ನಮ್ಮ ಸಂಸ್ಕøತಿಯಲ್ಲಿ ಇದಕ್ಕೆ ವಿಶೇಷ ಮಹತ್ವವಿದೆ. ಶುಭಗ್ರಹಗಳ ವಾರದಲ್ಲೇ ಕ್ಷೌರ ಮಾಡುವುದು ರೂಢಿ. ಇದು ಹೊಸ ಪರ್ವದ ಆರಂಭಕ್ಕೆ ಮುನ್ನುಡಿ. ಕೆಲ ತಿಥಿಗಳೂ ನಿಷಿದ್ಧ. ಚೌತಿ, ಚತುರ್ದಶಿ, ಸಂಕ್ರಾಂತಿ, ಹುಣ್ಣಿಮೆ, ಅಮಾವಾಸ್ಯೆ, ಅಷ್ಟಮಿ, ನವಮಿಗಳು ಯೋಗ್ಯವಲ್ಲ ಎಂದು ವಿಶ್ಲೇಷಿಸಿದರು.

ನಮ್ಮೆಲ್ಲರ ಬದುಕು ಭಗವತ್ಕಾರುಣ್ಯದ ಭಿಕ್ಷೆ, ಕರುಣೆ, ಆಶೀರ್ವಾದ. ಬಹುಜನ, ಬಹುದಿನ, ಬಹುಶ್ರಮ, ಬಹುವಿತ್ತ ಸಾಧ್ಯ ಸತ್ರಯಾಗ ನಡೆಯುತ್ತಿತ್ತು. ಸಹಸ್ರಾರು ವರ್ಷಗಳ ಕಾಲ ಇದು ನಡೆಯುತ್ತಿತ್ತು. ಇದನ್ನು ನೆನಪಿಸುವ ರೀತಿಯಲ್ಲಿ ಚಾತುರ್ಮಾಸ್ಯ ಅತ್ಯದ್ಭುತವಾಗಿ ನಡೆದಿದೆ. ಯಾವುದೇ ಸಮಿತಿಯೇ ಇಲ್ಲದೇ ಕಾರ್ಯಕ್ಕೊಬ್ಬ ಸಮರ್ಪಿತ ಕಾರ್ಯಕರ್ತನ ಶ್ರಮದ ಫಲವಾಗಿ ಇದು ಸಾಧ್ಯವಾಗಿದೆ ಎಂದರು.

ಯಾವುದೇ ಪೂರ್ವಸಿದ್ಧತೆ ಇಲ್ಲದೆ ಸರಳ, ಸಹಜ, ಆಡಂಬರರಹಿತವಾಗಿ ನಡೆಯಬೇಕು ಎನ್ನುವುದು ನಮ್ಮ ಅಪೇಕ್ಷೆಯಾಗಿತ್ತು. ಅದರಂತೆ ಈ ಬಾರಿಯ ಚಾತುರ್ಮಾಸ್ಯ ಊಟ- ಉಸಿರಾಟದಷ್ಟೇ ಸಹಜವಾಗಿ ನಡೆದಿದೆ. ಕೃತಯುಗದ ಆರಂಭದಲ್ಲಿ ರಾಜ- ರಾಜ್ಯ ಎಂಬ ಪರಿಕಲ್ಪನೆ ಇರಲಿಲ್ಲ. ಚತುರ್ವರ್ಣಗಳೂ ಇರಲಿಲ್ಲ. ಎಲ್ಲರೂ ಬ್ರಹ್ಮಜ್ಞಾನ ಪಡೆದ ಹಂಸರು ಮಾತ್ರ ಇದ್ದರು. ಈ ಬಾರಿಯ ಚಾತುರ್ಮಾಸ್ಯ ಕೂಡಾ ಅಂತೆಯೇ ಆಗಿದೆ. ಯಾರೂ ಏನನ್ನೂ ಆದೇಶಿಸದೇ ತಾವಾಗಿಯೇ ಸ್ವಯಂಸ್ಫೂರ್ತಿಯಿಂದ ಕಾರ್ಯ ನಿರ್ವಹಿಸಿದ್ದಾರೆ. ಇಡೀ ಮಠದ ವ್ಯವಸ್ಥೆಯೇ ಹೀಗೆ ನಡೆಯಬೇಕು ಎನ್ನುವುದು ನಮ್ಮ ಅಪೇಕ್ಷೆ ಎಂದು ಬಣ್ಣಿಸಿದರು.

ಪ್ರತಿಯೊಬ್ಬರೂ ತಮ್ಮ ತಮ್ಮ ಕರ್ತವ್ಯವನ್ನು ತಿಳಿದುಕೊಂಡು ಅವರ ಆತ್ಮ ಮೆಚ್ಚುವಂತೆ ಅದನ್ನು ನಿರ್ವಹಿಸಿದರೆ ಅದು ಅತ್ಯುತ್ತಮ ವ್ಯವಸ್ಥೆಯಾಗುತ್ತದೆ. ಇದರಲ್ಲಿ ಅತ್ಯಂತ ದೊಡ್ಡ ಧನ್ಯತೆ ಇದೆ. ಹೊಗಳಿಕೆಯಿಂದ ಸತ್ಕಾರ್ಯದ ಪುಣ್ಯ ಕ್ಷಯಿಸುತ್ತದೆ. ಇಂಥ ಕಾರ್ಯಗಳಿಂದ ಪುಣ್ಯ ವೃದ್ಧಿಯಾಗುತ್ತದೆ. ಇದು ಕೃತಯುಗದ ಒಂದು ಸಣ್ಣ ಹೊಳಹು ಎಂದು ಹೇಳಿದರು.
ಯಥಾಯೋಗ್ಯವಾಗಿ, ಧರ್ಮಕಾರ್ಯಗಳು ಚೆನ್ನಾಗಿ ನಡೆದವು. ನಿರ್ವಿಘ್ನವಾಗಿ ಚಾತುರ್ಮಾಸ್ಯ ಸಂಪನ್ನಗೊಂಡಿದೆ. ತತ್ವಗಳನ್ನು, ಸೂಕ್ಷ್ಮಗಳನ್ನು ತಿಳಿದುಕೊಂಡು ಆರಾಧಿಸಿದರೆ ಅದಕ್ಕೆ ಫಲ ಅಧಿಕ ಎಂದು ವಿಶ್ಲೇಷಿಸಿದರು.

ವಿಷವಲ್ಲದ ಪಾತ್ರೆಗಳಲ್ಲಿ, ಅಡ್ಡಪರಿಣಾಮಗಳಿಲ್ಲದ ಪಾರಂಪರಿಕ ಪಾತ್ರೆಗಳಲ್ಲಿ ಆಹಾರ ಸಿದ್ಧಪಡಿಸುವ ವ್ಯವಸ್ಥೆ ಶ್ರೀಮಠದಲ್ಲಿ ಆರಂಭವಾಗಲಿದೆ. ಅದು ಬುದ್ಧಿ- ಸಂಸ್ಕಾರ ಬೆಳೆಯಲು ಪೂರೈಸಲು ಸಹಕಾರಿ ಎಂದರು.

ಸೀಮೋಲ್ಲಂಘನ ಸಂದರ್ಭದಲ್ಲಿ ಗಂಗಾವಳಿ ನದಿಗೆ ಬಾಗಿನ ಸಮರ್ಪಿಸಿದ ಶ್ರೀಗಳು ಗಂಗಾಂಬಿಕಾ ದೇವಸ್ಥಾನದಲ್ಲಿ ಮತ್ತು ಅಶೋಕೆಯ ಮಲ್ಲಿಕಾರ್ಜುನ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಚಾತುರ್ಮಾಸ್ಯ ತಂಡದ ಪ್ರಧಾನ ಸಂಚಾಲಕ ಮಂಜುನಾಥ ಸುವರ್ಣಗದ್ದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜಿ.ಎಲ್, ಶಾಸನತಂತ್ರ ಕಾರ್ಯದರ್ಶಿ ಕೆ.ಪಿ.ಎಡಪ್ಪಾಡಿ, ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಪ್ಪು, ಪ್ರಧಾನ ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಡಾ.ವೈ.ವಿ.ಕೃಷ್ಣಮೂರ್ತಿ, ನಾಗರಾಜ ಭಟ್ ಪೆದಮಲೆ, ಮಹಾಮಂಡಲ ಪದಾಧಿಕಾರಿಗಳಾದ ಈಶ್ವರ ಪ್ರಸಾದ್ ಕನ್ಯಾನ, ಶಾಂತರಾಮ ಹೆಗಡೆ, ದೇವಿಕಾ ಶಾಸ್ತ್ರಿ, ಸೇವಾಖಂಡದ ಶ್ರೀಸಂಯೋಜಕ ಕೇಶವ ಪ್ರಕಾಶ್ ಮುಣ್ಚಿಕಾನ, ವಿವಿವಿ ಆಡಳಿತಾಧೀಕಾರಿ ಡಾ.ಟಿ.ಜೆ.ಪ್ರಸನ್ನಕುಮಾರ್, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಪಿಆರ್‍ಓ ಎಂ.ಎನ್.ಮಹೇಶ ಭಟ್ಟ, ಚಾತುರ್ಮಾಸ್ಯ ತಂಡದ ಶ್ರೀಕಾಂತ ಪಂಡಿತ, ಅರವಿಂದ ಧರ್ಬೆ, ರಾಘವೇಂದ್ರ, ವಿಷ್ಣು ಬನಾರಿ, ಶ್ರೀಮಠದ ಶಾಸ್ತ್ರಿಗಳಾದ ಸುಚೇತನ ಘನಪಾಠಿಗಳು, ಶ್ರೀಕಾರ್ಯದರ್ಶಿ ಮಧು ಜಿ.ಕೆ, ರಾಘವೇಂದ್ರ ಮಧ್ಯಸ್ಥ ಮತ್ತಿತರರು ಉಪಸ್ಥಿತರಿದ್ದರು. ಸ್ವರಾತ್ಮ ಗುರುಕುಲದ ಪ್ರಾಚಾರ್ಯರಾದ ಹರೀಶ್ ಹೆಗಡೆ ಮಾರ್ಗದರ್ಶನದಲ್ಲಿ ಶತಕಂಠ ಗಾಯನ ನಡೆಯಿತು. ಗಣೇಶ್ ಜೋಶಿ ಮತ್ತು ಬಿಂದು ಅವಧಾನಿ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: GokarnaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRaghaveshwara shriUttara Kannadaಗೋಕರ್ಣಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ
Share196Tweet123Send
Previous Post

ಮುಂಜಾನೆ ಸುವಿಚಾರ | ಬೆಳಗಿನ ಸಮಯ ಮನುಷ್ಯನ ಚೈತನ್ಯವನ್ನು ಹೆಚ್ಚಿಸುತ್ತದೆ

Next Post

ಭೀಕರ ಅಪಘಾತ | ತಲೆ ಮೇಲೆ ಬಸ್ ಹರಿದು ಯುವತಿ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದಲ್ಲಿ ಭೀಕರ ಅಪಘಾತ | MBBS ಇಬ್ಬರು ವಿದ್ಯಾರ್ಥಿಗಳು ದಾರುಣ ಸಾವು | ಹೇಗಾಯ್ತು ಘಟನೆ?

ಭೀಕರ ಅಪಘಾತ | ತಲೆ ಮೇಲೆ ಬಸ್ ಹರಿದು ಯುವತಿ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL