No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

kalpa News by kalpa News
June 25, 2025
in ಉತ್ತರ ಕನ್ನಡ
0
ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ ಎಂಬ ಅಭಿದಾನದೊಂದಿಗೆ ಆಚರಿಸಲಾಗುತ್ತಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.

ವಿಶ್ವಾವಸು ಸಂವತ್ಸರದ ಚಾತುರ್ಮಾಸ್ಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಪರಮಪೂಜ್ಯರು ಆಶೀರ್ವಚನ ನೀಡಿದರು. ನಾವು ನಮ್ಮ ಭಾಷೆಯನ್ನು ಮಾತನಾಡುವುದು ದೇಶ, ಸಂಸ್ಕøತಿ, ಭಾಷೆ, ಪರಂಪರೆಗೆ ನಾವು ಸಲ್ಲಿಸುವ ಅತಿದೊಡ್ಡ ಸೇವೆ. ಇದು ಜೀವನಕ್ಕೆ ಸ್ವಾರಸ್ಯವನ್ನೂ ತರುತ್ತದೆ ಎಂದರು.
ಶುದ್ಧವಾದ ಮಾತೃಭಾಷೆಯನ್ನು ಮಾತನಾಡುವ ಪ್ರಯತ್ನ ಸ್ವಭಾಷಾ ಚಾತುರ್ಮಾಸ್ಯದ ತಿರುಳು. ಮರೆತ ಪದಗಳನ್ನು ನೆನಪಿಸಿಕೊಳ್ಳೋಣ. ಪರಕೀಯತೆ ನಮ್ಮ ನಾಲಿಗೆಯಲ್ಲೇ ಇದೆ. ನಮ್ಮ ನಾಲಿಗೆ ಕೆಡಿಸಿಕೊಳ್ಳದಿರೋಣ. ಸಂಸ್ಕಾರದಿಂದ ಶಬ್ದ. ಶಬ್ದದಿಂದ ವಾಕ್ಯ; ಅದು ಭಾಷೆಯ ಮೂಲ. ಆದ್ದರಿಂದ ಪ್ರತಿ ಪದವೂ ತನ್ನೊಂದಿಗೆ ಆ ಭಾಷೆಯ ಸಂಸ್ಕಾರವನ್ನು ತರುತ್ತದೆ. ಈ ಬಗ್ಗೆ ಎಚ್ಚರ ಅಗತ್ಯ ಎಂದು ಪ್ರತಿಪಾದಿಸಿದರು.

ಇದೇ ಮೊಟ್ಟಮೊದಲ ಬಾರಿಗೆ ಇಂಥ ಸೂತ್ರ ಇಟ್ಟುಕೊಂಡು ಚಾತುರ್ಮಾಸ್ಯ ಆಚರಿಸಲಾಗುತ್ತಿದೆ. ಚಾತುರ್ಮಾಸ್ಯ ಧರ್ಮಕ್ಕೆ ಸೀಮಿತ ಎಂದು ವಾದಿಸುವವರಿದ್ದಾರೆ. ಭಾಷೆಯನ್ನು ಉಳಿಸುವುದು ಕೂಡಾ ಧರ್ಮದ ಒಂದು ಅಂಗ. ಉರಿಯುವುದು ಬೆಂಕಿಯ ಧರ್ಮ; ಹರಿಯುವುದು ನೀರಿನ ಧರ್ಮ; ಅಂತೆಯೇ ನಮ್ಮ ಭಾಷೆ ಮಾತನಾಡುವುದು ನಮ್ಮ ಧರ್ಮ ಎಂದು ವಿಶ್ಲೇಷಿಸಿದರು.
“ಮನೆಮಾತು ಮರೆತು ಹೋಗಿದೆ. ಉಪಭಾಷೆಗಳು ಬಹುತೇಕ ನಶಿಸಿವೆ. ಕನ್ನಡ ಮಾತನಾಡುವ ಸಂದರ್ಭದಲ್ಲೂ ಕನ್ನಡವನ್ನು ಕಡೆಗಣಿಸುತ್ತೇವೆ. ನಮ್ಮ ಭಾಷೆಯಲ್ಲಿ ಬೇರೆ ಭಾಷೆ ತೂರಿಕೊಂಡಿದೆ. ಈ ಬಾರಿಯ ಚಾತುರ್ಮಾಸ್ಯ ಭಾಷೆ ಶುದ್ಧಗೊಳಿಸುವ ಪ್ರಯತ್ನಕ್ಕೆ ಶ್ರೀಕಾರ ಹಾಕಲಿದೆ ಎಂದು ಬಣ್ಣಿಸಿದರು.

ಹಲವು ವರ್ಷಗಳ ಹಿಂದೆ ಬಿಎಂಶ್ರೀಯವರ ಕಾಲದಲ್ಲಿ ಒಂದು ಇಂಗ್ಲಿಷ್ ಪದ ಬಳಸಿದರೆ ಒಂದು ರೂಪಾಯಿ ತಪ್ಪುಕಾಣಿಕೆ ತೆಗೆದಿಡಬೇಕು ಎಂಬ ಕಾಸಿನ ಸಂಘ ಹಿಂದೆ ಅಸ್ತಿತ್ವದಲ್ಲಿತ್ತು. ಕನ್ನಡದ ಸಾರ ಉಳಿಸಿಕೊಳ್ಳುವುದು ಇದರ ಉದ್ದೇಶವಾಗಿತ್ತು. ಕನ್ನಡವನ್ನು ಶುದ್ಧವಾಗಿ ಮಾತನಾಡಲು ಕಲಿಯೋಣ. ಭಾಷೆಯಲ್ಲಿ ಒಂದು ಪದ ಮರೆಯಾದರೆ ಅದಕ್ಕೆ ಸಂಬಂಧಿಸಿದ ಸಂಸ್ಕøತಿ- ಸಂಸ್ಕಾರ ಎಲ್ಲವೂ ನಾಶವಾಗುತ್ತದೆ. ಒಂದು ಪರಕೀಯ ಪದ ಆಯಾ ಭಾಷೆಯ ಸಂಸ್ಕಾರವನ್ನು ತರುತ್ತದೆ. ನಮಗೆ ಗೊತ್ತಾಗದಂತೆ ನಾವೇ ಪರಕೀಯರಾಗುತ್ತಿದ್ದೇವೆ. ಉದಾಹರಣೆಗೆ ಇಂಗ್ಲಿಷ್ ನಾವು ಆವಾಹಿಸಿಕೊಂಡಿರುವ ಆಕ್ರಮಣ. ನಮ್ಮತನವನ್ನು ಉಳಿಸಿಕೊಳ್ಳಬೇಕಾದರೆ ನಮ್ಮ ಭಾಷೆ ಉಳಿಸಿಕೊಳ್ಳುವುದು ಅನಿವಾರ್ಯ ಎಂದು ಪ್ರತಿಪಾದಿಸಿದರು.

ಗುಲಾಮಗಿರಿ, ದಾಸ್ಯದ ಸಂಕೇತ ಏಕೆ ಎಂದು ಈಗ ಪ್ರಶ್ನಿಸದಿದ್ದರೆ ಮುಂದಿನ ದಿನ ಈ ಪ್ರಶ್ನೆ ಎತ್ತುವವರೂ ಇರಲಾರರು. ರಾಮಚಂದ್ರಾಪುರ ಮಠ ಶುದ್ಧ ದೇಸಿ ತಳಿಯ ಗೋವು ಉಳಿಸಲು ಬಹುದೊಡ್ಡ ಆಂದೋಲನ ನಡೆಸಿದೆ. ಭಾರತೀಯ ತಳಿಗಳ ಪರಿಶುದ್ಧತೆ ಉಳಿಯಬೇಕು ಎಂಬ ಕಾರಣಕ್ಕೆ ತಳಿಸಂಕರ ವಿರೋಧಿಸುತ್ತಾ ಬಂದಿದೆ. ಗೋವಿನಲ್ಲಿ ತಳಿಸಂಕರ ಹೇಗೆ ಪ್ರಮಾದವೋ ಭಾಷೆಯಲ್ಲಿ ಕೂಡಾ ಸಂಕರ ಒಳ್ಳೆಯ ಬೆಳವಣಿಗೆಯಲ್ಲ ಎಂದು ಅಭಿಪ್ರಾಯಪಟ್ಟರು.

ನಮ್ಮ ಮಾತೃಭಾಷೆಯ ಹಲವು ಪದಗಳು ಮರೆತು ಹೋಗಿವೆ. ಕನ್ನಡ ಮಾತನಾಡುವ ಪ್ರಯತ್ನ ಇಂದಿನಿಂದಲೇ ಆರಂಭವಾಗಲಿ; ಕನ್ನಡ ಮಾತನಾಡಬೇಕಾದಲ್ಲಿ ಕನ್ನಡವನ್ನೇ ಮಾತನಾಡೋಣ. ಪರಿಸ್ಥಿತಿಗೆ ಅನುಗುಣವಾಗಿ ಆಂಗ್ಲಭಾಷೆ ಮಾನಾಡಿದರೆ ತಪ್ಪಲ್ಲ; ಆದರೆ ಕನ್ನಡದ ಜತೆ ಅದನ್ನು ಬೆರೆಸುವುದು ಬೇಡ. ಹಾಗೆ ಮಾಡಿದರೆ ಇಡೀ ಸಮಾಜವೇ ಭಾಷೆ ಇಲ್ಲದ ಸಮಾಜವಾಗಿ ಮಾರ್ಪಾಡಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು.
ಈ ಸಮಾಜವನ್ನು ಬದಲಾಯಿಸುವ ಕಾರ್ಯ ಇಂದಿನಿಂದಲೇ ಆರಂಭವಾಗಲಿ. ಮನೆಗಳಲ್ಲಿ ಕನ್ನಡ ಅಭ್ಯಸಿಸೋಣ. ಮರೆತು ಹೋದ ಹಳೆ ಪದಗಳ ಮರು ಅನ್ವೇಷಣೆ ನಡೆಯಲಿದೆ; ಮತ್ತೆ ಕೆಲ ಪದಗಳನ್ನು ಸೃಷ್ಟಿ ಮಾಡುವ ಪ್ರಮೇಯವೂ ಬರುತ್ತದೆ. ಅದನ್ನೂ ಮಾಡೋಣ ಎಂದು ಸಲಹೆ ಮಾಡಿದರು.

ಮೊದಲ ಹಂತದಲ್ಲಿ ಪರಕೀಯ ಶಬ್ದಗಳನ್ನು ಕಡಿಮೆ ಮಾಡೋಣ; ಅಂತಿಮವಾಗಿ ಶುದ್ಧವಾದ ಭಾಷೆಯನ್ನು ಉಳಿಸಿ ಬೆಳೆಸೋಣ. ಚಾತುರ್ಮಾಸ್ಯದಲ್ಲಿ ನಾಲಿಗೆ ಶುದ್ಧೀಕರಣದ ಕಾರ್ಯ ಮಾಡೋಣ. ನಮ್ಮತನವನ್ನು ಉಳಿಸಿಕೊಳ್ಳೋಣ ಎಂದು ಆಶಿಸಿದರು.

ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಜಿ.ಎಲ್.ಗಣೇಶ್, ಚಾತುರ್ಮಾಸ್ಯ ಸಮಿತಿ ಸಂಚಾಲಕ ಮಂಜುನಾಥ ಸುವರ್ಣಗದ್ದೆ, ಹವ್ಯಕ ಮಹಾಮಂಡಲ ಅಧ್ಯಕ್ಷ ಮೋಹನ್ ಭಾಸ್ಕರ ಹೆಗಡೆ, ಮಹಾಮಂಡಲ ಉಪಾಧ್ಯಕ್ಷ ಜಿ.ಜಿ.ಹೆಗಡೆ ತಲೆಕೇರಿ, ಯುಎಸ್‍ಜಿ ಭಟ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

               

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಗೋಕರ್ಣ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

Next Post

ಮೆಡಿಕವರ್ ಆಸ್ಪತ್ರೆ | ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

kalpa News

kalpa News

Next Post
ಮೆಡಿಕವರ್ ಆಸ್ಪತ್ರೆ | ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

ಮೆಡಿಕವರ್ ಆಸ್ಪತ್ರೆ | ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL