No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಗಲ್ಫ್ ಇಸ್ಲಾಮಿಕ್ ಹೂಡಿಕೆಯ ಕಚೇರಿ

kalpa News by kalpa News
October 19, 2021
in ಬೆಂಗಳೂರು ನಗರ
0
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಗಲ್ಫ್ ಇಸ್ಲಾಮಿಕ್ ಹೂಡಿಕೆಯ ಕಚೇರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದುಬೈ  |  

ಭಾರತ ಹಾಗೂ ‌ಯುನೈಟೆಡ್ ‌ಅರಬ್ ಯಮಿರೆಟ್ಸ್ (ಯುಎಇ) ನಡುವೆ ಹೂಡಿಕೆ ಸಂಬಂಧಗಳನ್ನು ಭವಿಷ್ಯದಲ್ಲಿ ಮತ್ತಷ್ಟು ಬಲಪಡಿಸಲು ಗಲ್ಫ್ ಇಸ್ಲಾಮಿಕ್ ಹೂಡಿಕೆ (GII) ತನ್ನ ಕಚೇರಿಯನ್ನು ರಾಜಧಾನಿ ‌ಬೆಂಗಳೂರಿನಲ್ಲಿ ತೆರೆಯಲು ಮುಂದೆ ‌ಬಂದಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ,ಹಾಗೂ ಐಟಿ ಮತ್ತು ಬಿಟಿ ಸಚಿವ ಸಿಎನ್ ಅಶ್ವಥ್ ನಾರಾಯಣ್ ಅವರುಗಳು ದುಬೈ ‌ಎಕ್ಸ್‌ಪೋ 2020 ಸಮಾರಂಭದಲ್ಲಿ ಸೋಮವಾರ ಕರ್ನಾಟಕ ವಸ್ತು ಪ್ರದರ್ಶನ ಕೇಂದ್ರದಲ್ಲಿ ಪ್ರಮುಖ ಉದ್ಯಮಿಗಳ ಜೊತೆ ನಡೆಸಿದ ‘ ಯಶಸ್ವಿ’ ಮಾತುಕತೆ ‌ಪರಿಣಾಮ ‘ ಐಟಿ ಸಿಟಿ ಖ್ಯಾತಿಯ ಬೆಂಗಳೂರಿನಲ್ಲಿ ‌ಗಲ್ಫ್ ಇಸ್ಲಾಮಿಕ್ ಹೂಡಿಕೆ ಕಚೇರಿಯನ್ನು ಆರಂಭಿಸಲು‌ ತೀರ್ಮಾನಿಸಲಾಯಿತು.

ಮುಂದಿನ 3 ವರ್ಷಗಳಲ್ಲಿ ಭಾರತದಲ್ಲಿ 500 ಮಿಲಿಯನ್ ಯುಎಸ್ (₹ 3,500 ಕೋಟಿ) ಹೂಡಿಕೆ ಮಾಡಲು ಜಿಐಐ ಯೋಜಿಸಿದ್ದು, ಇದರಿಂದಾಗಿ ‌ಸಾವಿರಾರು ಉದ್ಯೋಗಗಳು ‌ಸೃಷ್ಟಿಯಾಗುವ ಸಂಭವವಿದೆ.


ಗಲ್ಫ್ ಇಸ್ಲಾಮಿಕ್ ಇನ್ವೆಸ್ಟ್‌ಮೆಂಟ್ ಯುಎಇ ಮೂಲದ ಪ್ರಮುಖ ಷರಿಯಾ-ಕಂಪ್ಲೈಂಟ್ ಹಣಕಾಸು ಸೇವೆಗಳ ಸಂಸ್ಥೆಯಾಗಿದ್ದು, ನಿರ್ವಹಣೆಯ ಅಡಿಯಲ್ಲಿ $ 2 ಬಿಲಿಯನ್‌ಗಿಂತ ಹೆಚ್ಚಿನ ಆಸ್ತಿಗಳನ್ನು ಹೊಂದಿದೆ.

ಜಿಐಎಯು ತಮ್ಮ ಮಧ್ಯಪ್ರಾಚ್ಯ ವಿಸ್ತರಣಾ ಯೋಜನೆಗಳನ್ನು ಹೆಚ್ಚಿಸಲು ಭಾರತೀಯ ಸ್ಟಾರ್ಟ್ಅಪ್‌ಗಳೊಂದಿಗೆ ಸಹಯೋಗವನ್ನು ಪಡೆಯುವ ಯೋಜನೆಯನ್ನೂ ಹಾಕಿಕೊಂಡಿದೆ.

ಇದೇ ಸಂದರ್ಭದಲ್ಲಿ ‌ಹೂಡಿಕೆಗಳನ್ನು ಆಕರ್ಷಿಸಲು ಮತ್ತು ವ್ಯಾಪಾರವನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರವು (GII) ಸಮೂಹಗಳೊಂದಿಗೆ ವ್ಯಾಪಾರ ಒಪ್ಪಂದ ‌(MOU) ಮಾಡಿಕೊಂಡಿತು.

ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ‌ಮಾತನಾಡಿ, “ಬೆಂಗಳೂರಿನಲ್ಲಿ ತನ್ನ ಕಚೇರಿಯನ್ನು ತೆರೆಯಲು ಜಿಐಐ ನಿರ್ಧಾರವು ಭಾರತ ಮತ್ತು ಯುಎಇ ನಡುವಿನ ಹೂಡಿಕೆ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತದೆ” ಎಂದು ಸಂತಸ ವ್ಯಕ್ತಪಡಿಸಿದರು.

ನಮ್ಮ ರಾಜ್ಯವು ಹೂಡಿಕೆ ಮಾಡಲು ಸೂಕ್ತ ತಾಣವಾಗಿದೆ ಏಕೆಂದರೆ, ನಾವು ಉದ್ಯಮ-ವಹಿವಾಟು ‌ನಡೆಸಲು ಸುಲಭ ಮತ್ತು ಹೂಡಿಕೆದಾರರ ಸ್ನೇಹಿ ವಾತಾವರಣವನ್ನು ನಿರ್ಮಿಸಿದ್ದೇವೆ. ಬೆಂಗಳೂರಿನಲ್ಲಿ ಜಿಐಐ ಕಚೇರಿ ‌ಆರಂಭವಾಗುತ್ತಿರುವುದರಿಂದ‌ ಹೆಚ್ಚಿನ ಹೂಡಿಕೆಗಳು, ವ್ಯಾಪಾರ ಮತ್ತು ಉದ್ಯೋಗ ಸೃಷ್ಟಿಗೆ ದಾರಿ ಮಾಡಿಕೊಡುತ್ತದೆ ಎಂಬ ವಿಶ್ವಾಸ ನನಗಿದೆ‌ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಭಾರತದ ಕಾನ್ಸುಲ್ ಜನರಲ್ ಡಾ ಅಮಾನ್ ಪುರಿ ಮಾತನಾಡಿ, ದುಬೈಗೆ ಕರ್ನಾಟಕ‌ ಏಷ್ಯಾ ಖಂಡದ ರಾಜಧಾನಿಯಾಗಿದೆ.ಬೆಂಗಳೂರಿನಲ್ಲಿ ಭಾರತದ 40% ಯುನಿಕಾರ್ನ್‌ಗಳಿಗೆ ನೆಲೆಯಾಗಿದೆ‌ 5 ಟ್ರಿಲಿಯನ್ ಯುಎಸ್ ಡಾಲರ್ ಆರ್ಥಿಕತೆಯಾಗುವ ಭಾರತದ ಅನ್ವೇಷಣೆಯಲ್ಲಿ ಯುಎಇ ದೊಡ್ಡ ಪಾಲುದಾರವಾಗಿದೆ‌ ಎಂದು ‌ಪ್ರಶಂಸಿದರು.

ಇದೇ ವೇಳೆ ಮೊಹಮ್ಮದ್ ಅಲ್ಹಾಸನ್ ಮತ್ತು ಶ್ರೀ ಪಂಕಜ್ ಗುಪ್ತಾ, ಗಲ್ಫ್ ಇಸ್ಲಾಮಿಕ್ ಇನ್ವೆಸ್ಟ್ಮೆಂಟ್ಸ್ ನ ಸ್ಥಾಪಕ ಪಾಲುದಾರರು ಮತ್ತು ಸಹ ಸಿಇಒಗಳು ತಮ್ಮ ‌ಜಂಟಿ ಹೇಳಿಕೆಯಲ್ಲಿ, “ಭಾರತದ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನಲ್ಲಿ ಜಿಐಐ ಕಚೇರಿಯನ್ನು ಸ್ಥಾಪಿಸುವ ನಮ್ಮ ಯೋಜನೆಗಳನ್ನು ಅಧಿಕೃತವಾಗಿ ಘೋಷಿಸಲು ನಾವು ಸಂತೋಷಪಡುತ್ತೇವೆ” ಎಂದರು.

ಭಾರತವು ಜಿಐಐಗೆ ಒಂದು ಪ್ರಮುಖ ಹೂಡಿಕೆಯ ತಾಣವಾಗಿದೆ.ಈ ವಿಸ್ತರಣೆಯು ದೇಶದಲ್ಲಿ ಬೆಳೆಯುತ್ತಿರುವ ಆರಂಭ ಮತ್ತು ಉನ್ನತ ಬೆಳವಣಿಗೆಯ ಉದ್ಯಮ ಜಾಗದಲ್ಲಿ ಭವಿಷ್ಯದ ಹೂಡಿಕೆಗಳಿಗೆ ನಮ್ಮ ಬದ್ಧತೆಯನ್ನು ತೋರಿಸುತ್ತದೆ ಎಂದು ಹೇಳಿದರು.

ಭಾರತ ಬೆಳವಣಿಗೆ ಪೋರ್ಟ್ಫೋಲಿಯೋ ಸರಣಿಯ ಮೂಲಕ ನಮ್ಮ ಪ್ರಾಥಮಿಕ ಹೂಡಿಕೆ ಸುತ್ತುಗಳ ಯಶಸ್ಸನ್ನು ಗಮನಿಸಿದರೆ, ₹ 1,000 ಕೋಟಿಗೂ ಅಧಿಕ ಮೌಲ್ಯದ ವಹಿವಾಟು ನಡೆಸಲು ‌ಉತ್ಸುಕತೆ ಹೊಂದಿದ್ದೇವೆ. ಭಾರತ-ಯುಎಇ ಹೂಡಿಕೆ ಕಾರಿಡಾರ್ ಅನ್ನು ಹೆಚ್ಚಿಸಲು ಕಾರ್ಯತಂತ್ರವಾಗಿ ಕೊಡುಗೆ ನೀಡಲು ಎದುರು ನೋಡುತ್ತಿದ್ದೇವೆ ಎಂದು ‌ತಿಳಿಸಿದರು.

ಉದ್ಯಮಿಗಳ ‌ಆಕರ್ಷಣೆ
ಇನ್ನು ‌ಕಳೆದ ಮೂರು ದಿನಗಳಿಂದ ಸಚಿವ ಮುರುಗೇಶ್ ನಿರಾಣಿ ಅವರು ಹಲವಾರು ಉದ್ಯಮಿಗಳನ್ನು ಭೇಟಿ ಮಾಡಿ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ‌ಮನವರಿಕೆ ಮಾಡಿದ್ದಾರೆ.

ನಿರಂತರವಾಗಿ ‌ಹೆಸರಾಂತ ನಿಯೋಗಗಳನ್ನು ಭೇಟಿ ಮಾಡಿರುವ‌ ಅವರು, ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹಲವಾರು ಕಂಪನಿಗಳನ್ನು ಮನವೊಲಿಸುವಲ್ಲಿ ಯಶಸ್ವಿಯಾದರು. ಲುಲು ಗುಂಪು, ಡುಕಾಬ್ ಮತ್ತು ಎಲೆಕ್ಟ್ರಿಕ್ ವೇ ಇತರವುಗಳು ರಾಜ್ಯದಲ್ಲಿ ಹೂಡಿಕೆ ಮಾಡುವುದಾಗಿ ಭರವಸೆ ನೀಡಿದವು.

ನಿರಾಣಿ ಅವರು, B2G (ಬಿಸಿನೆಸ್-ಟು-ಗವರ್ನಮೆಂಟ್) ಸಭೆಯನ್ನು ಗೌರವ್ ಖನ್ನಾ, ಗ್ರೂಪ್ ಕಾರ್ಪೊರೇಟ್ ಫೈನಾನ್ಸ್ ಮತ್ತು ಡಿಪಿ ವರ್ಲ್ಡ್ ನ ವ್ಯಾಪಾರ ಅಭಿವೃದ್ಧಿ ಉಪಾಧ್ಯಕ್ಷರ ಜೊತೆ ಮಾತುಕತೆ ನಡೆಸಿದರು.

ಕೇಬಲ್‌ಗಳು, ಕೈಗಾರಿಕಾ ದೀಪಗಳು ಮತ್ತು ವಿದ್ಯುತ್ ವ್ಯವಸ್ಥೆಗಳ ವಿತರಣೆಯಲ್ಲಿ ಮುಂಚೂಣಿಯಲ್ಲಿರುವ ಎಲೆಕ್ಟ್ರಿಕ್ ವೇ ಕಂಪನಿಯ ಸಿಇಒ ಅಥೀಕ್ ಅನ್ಸಾರಿ, ತಾಮ್ರದ ವಿನ್ಯಾಸ ಮತ್ತು ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅಲ್ಯೂಮಿನಿಯಂ ತಂತಿ ಮತ್ತು ಕೇಬಲ್ ಉತ್ಪನ್ನಗಳ ಜನರಲ್ ಮ್ಯಾನೇಜರ್, ಸರ್ಕಾರಿ ವ್ಯವಹಾರಗಳ ಮೊಹಮ್ಮದ್ ಎ. ಅಲ್ ಕುರಾಶಿ, ಆಸ್ಟರ್ ಹೆಲ್ತ್ ಕೇರ್ ಡಿಎಂ ಶ್ರೀನಾಥ್ ಪಿ ರೆಡ್ಡಿ ಸೇರಿದಂತೆ ಅನೇಕ  ಉದ್ಯಮಿಗಳನ್ನು‌ ಭೇಟಿಯಾಗಿ ರಾಜ್ಯದಲ್ಲಿ ಬಂಡವಾಳ ‌ಹೂಡಿಕೆಗೆ ಇರುವ‌ ಅವಕಾಶಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B2GBENGALURUDubaiGIIIndiaIndianKannada News WebsiteLatest News KannadaUAEಗಲ್ಫ್ ಇಸ್ಲಾಮಿಕ್ ಹೂಡಿಕೆದುಬೈಬಿಸಿನೆಸ್-ಟು-ಗವರ್ನಮೆಂಟ್ಭಾರತಯುಎಇಸಚಿವ ಮುರುಗೇಶ್ ನಿರಾಣಿ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೆಎಸ್’ಆರ್’ಟಿಸಿ ಬಸ್ಸನ್ನೇ ಕದ್ದ ಕಳ್ಳರು ಮಾಡಿದ್ದೇನು?

Next Post

ತಾಯಿಯ ವಾತ್ಸಲ್ಯ ಸಾರುವ ವಿಭಿನ್ನ ಕಥಾಹಂದರದ ‘ಅವ್ವ’ ಕಿರುಚಿತ್ರ ಬಿಡುಗಡೆ

kalpa News

kalpa News

Next Post
ತಾಯಿಯ ವಾತ್ಸಲ್ಯ ಸಾರುವ ವಿಭಿನ್ನ ಕಥಾಹಂದರದ ‘ಅವ್ವ’ ಕಿರುಚಿತ್ರ ಬಿಡುಗಡೆ

ತಾಯಿಯ ವಾತ್ಸಲ್ಯ ಸಾರುವ ವಿಭಿನ್ನ ಕಥಾಹಂದರದ ‘ಅವ್ವ’ ಕಿರುಚಿತ್ರ ಬಿಡುಗಡೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL