No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಶಿವಮೊಗ್ಗ ದುರ್ಗಿಗುಡಿ ಶಾಲೆಗೆ ರೌಂಡ್ ಟೇಬಲ್ ಅಪೂರ್ವ ಕೊಡುಗೆ

ನೀವು ಈ ಕುರಿತು ತಿಳಿಯಲೇ ಬೇಕು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 24, 2022
in Special Articles
0
ಶಿವಮೊಗ್ಗ ದುರ್ಗಿಗುಡಿ ಶಾಲೆಗೆ ರೌಂಡ್ ಟೇಬಲ್ ಅಪೂರ್ವ ಕೊಡುಗೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಸಮಾಜ ಸೇವೆ ಎಂಬುದು ಇಂದು ಅರ್ಥ ಕಳೆದುಕೊಂಡು ಶೇ.10 ಕೆಲಸಕ್ಕೆ ಶೇ.90 ಪ್ರಚಾರಕ್ಕೆಂದು  ಸಾಮಾಜಿಕ ಜಾಲತಾಣಗಳ ಮೊರೆ ಹೋಗಿ ಲೈಕ್ ಗಿಟ್ಟಿಸಲು ಮಾತ್ರ ಸೀಮಿತವಾಗುತ್ತಿರುವವರ ನಡುವೆ ಎಲೆಮರೆಯ ಕಾಯಿಗಳಂತೆ ಸದ್ದಿಲ್ಲದೇ ಅಗತ್ಯ ಸೇವೆಗಳನ್ನು ಪೂರೈಸುತ್ತಾ ಪ್ರಚಾರವನ್ನು ಬಯಸದೇ ‘ಕಾಯಕವೇ ಕೈಲಾಸ’ ಎಂಬ ಬಸವಣ್ಣನವರ ಮಾತಿಗೆ ಸಾಕ್ಷಿಯೆಂಬಂತೆ ಕಾರ್ಯನಿರ್ವಹಿಸುತ್ತ ಸಮಾಜಕ್ಕೆ ಹಾಗೂ ಯುವ ಜನತೆಗೆ ಮಾದರಿಯಾಗುತ್ತ ಮುನುಗ್ಗುತ್ತಿರುವ ಒಂದು ಹೆಮ್ಮೆಯ ಸಂಸ್ಥೆಯ ಪರಿಚಯ ಲೇಖನ ನಿಮಗಾಗಿ.

ಹೌದು ‘ರೌಂಡ್ ಟೇಬಲ್ ಇಂಡಿಯಾ’ ಎಂಬ ಹೆಸರು ಅಷ್ಟಾಗಿ ಯಾರೂ ಕೇಳಿರದ ಹೆಸರು. ಆದರೆ ಸಂಸ್ಥೆಯು ಮಾಡುತ್ತಿರುವ ಸಾಧನೆಗಳನ್ನು ನೋಡಿದರೆ ನೀವು ಹುಬ್ಬೇರಿಸುವುದು ಖಂಡಿತ. ಕೇವಲ 18 ರಿಂದ 40 ವಯೋಮಾನದ ಯುವ ಜನರಿಗೆ ಮಾತ್ರ ಇಲ್ಲಿ ಸದಸ್ಯತ್ವ. ಈ ಸಂಸ್ಥೆಯಲ್ಲಿ ಗರಿಷ್ಠ 21 ಸದಸ್ಯರಿಗೆ ಮಾತ್ರ ಅವಕಾಶ ಎಂಬುದು ಮತ್ತೊಂದು ವಿಶೇಷ. ಸದಸ್ಯರ ಸಂಖ್ಯೆ ಹೆಚ್ಚಾದರೆ ಸಂಸ್ಥೆಗೆ ಲಾಭ ಎಂದು ಯೋಚಿಸುವ ಇಂದಿನ ಕಾಲದಲ್ಲಿ ‘ರೌಂಡ್ ಟೇಬಲ್’ ಸಂಸ್ಥೆಯು 22ನೇ ಸದಸ್ಯನಿಗೆ ಅವಕಾಶವಿಲ್ಲ ಎಂದರೆ ವಿಚಿತ್ರವೆನಿಸದೇ ಇರದು. ಆದರೆ ಪ್ರತಿಯೊಬ್ಬರ ಅಧಿಕಾರಾವಧಿ ಕೇವಲ ಒಂದು ವರ್ಷವಷ್ಟೇ ಆದ್ದರಿಂದ ಈ ಕಡಿಮೆ ಅವಧಿಯಲ್ಲೇ ತಮ್ಮ ಸಾಧನೆಯ ಪ್ರಗತಿ ತೋರಲೇಬೇಕಿದೆ.
ಪ್ರತಿಯೊಬ್ಬರೂ ಒಂದೊಂದು ಜವಾಬ್ದಾರಿ ಹೊರುವುದು ಇಲ್ಲಿ ಕಡ್ಡಾಯ ಹಾಗೂ ನಿಗದಿತ ಯೋಜನೆಯ ನಿಗದಿತ ಗುರಿ ಮುಟ್ಟುವುದೂ ಕಡ್ಡಾಯ. ‘ಸಾಧ್ಯವಿಲ್ಲ’ ಎಂಬ ಪದಕ್ಕೆ ಇಲ್ಲಿ ಜಾಗವಿಲ್ಲದಂತೆ ತನ್ನ ಜವಾಬ್ದಾರಿಗಳನ್ನು ನಿರ್ವಹಿಸುತ್ತಿತುವುದೇ ಈ ಸಂಸ್ಥೆಯ ಅತೀ ವಿಶೇಷ.

ಒಂದು ಸರ್ಕಾರ ಮಾಡಬಹುದಾದ ಕೆಲಸವನ್ನು ಸರಕಾರದ ಸಹಾಯವಿಲ್ಲದೆ, ಸರ್ಕಾರ ಕೈಗೊಳ್ಳುವ ಸಮಯಕ್ಕಿಂತ ಅತಿ ಕಡಿಮೆ ಸಮಯದಲ್ಲಿ ಸರ್ಕಾರದ ವೆಚ್ಚಕ್ಕಿಂತ ಕಡಿಮೆ ವೆಚ್ಚದಲ್ಲಿ ಸರ್ಕಾರ ನೀಡುವ ಗುಣಮಟ್ಟಕ್ಕಿಂತ ಅತ್ಯುತ್ತಮ ಗುಣಮಟ್ಟದಲ್ಲಿ, ಸರ್ಕಾರವೇ ಹುಬ್ಬೇರಿಸುವಂತೆ ಅತ್ಯದ್ಭುತವಾಗಿ ಯೋಜನೆಗಳನ್ನು ರೂಪಿಸಿ ನಿರ್ಧಿಷ್ಟ ಸಮಯದಲ್ಲಿ ಪೂರೈಸುವ ಚಾಕಚಕ್ಯತೆ ಪ್ರದರ್ಶಿಸುವಲ್ಲಿ ಯಶಸ್ಸಿ ಸಂಸ್ಥೆಯೆನಿಸಿದ ಹೆಗ್ಗಳಿಕೆ ರೌಂಡ್ ಟೇಬಲ್ ಸಂಸ್ಥೆಗೆ ಸಲ್ಲುತ್ತದೆ. ಇದಕ್ಕೆ ಸ್ಪಷ್ಟ ಉದಾಹರಣೆಯಾಗಿ ಜೂನ್ 24ರ ನಾಳೆ  ಲೋಕಾರ್ಪಣೆಗೊಳ್ಳುತ್ತಿದೆ ದುರ್ಗಿಗುಡಿ ಆಂಗ್ಲಮಾಧ್ಯಮ ಶಾಲೆಯ “ರೌಂಡ್ ಟೇಬಲ್ ಬ್ಲಾಕ್” ಕಟ್ಟಡ.

ಕರ್ನಾಟಕದ ಇತಿಹಾಸದಲ್ಲಿಯೇ ಈ ಶಾಲೆಗೆ ವಿಶೇಷ ಸ್ಥಾನ. ರಾಜ್ಯದ ಏಕೈಕ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದುರ್ಗಿಗುಡಿ ಆಂಗ್ಲಮಾಧ್ಯಮ ಶಾಲೆಯು ಈವರೆಗೂ ಶಾಲಾ ಮಕ್ಕಳ ದಾಖಲಾತಿಯಲ್ಲಿ ನಂಬರ್ ಒನ್ ಸ್ಥಾನ ಕಾಪಾಡಿಕೊಂಡು ಬಂದಿರುವುದು ಎಲ್ಲರಿಗೂ ತಿಳಿದ ವಿಷಯವೇ ಸರಿ. ಆದರೆ ಮೂಲಭೂತ ಸೌಕರ್ಯಗಳಲ್ಲಿ ಈ ನಂಬರ್ ಒನ್ ಸ್ಥಾನ ಕಷ್ಟ ಸಾಧ್ಯವಾಗಿತ್ತು. ಈ ಸಮಯದಲ್ಲಿ ರೋಟರಿ ಸಂಸ್ಥೆಯ ಕಾರ್ಯಕ್ರಮವೊಂದರ ಮೂಲಕ ದುರ್ಗಿಗುಡಿ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗೆ ಪರಿಚಿತಗೊಂಡ ಶ್ರೀಮತಿ ಪ್ರತಿಭಾ ಅರುಣ್ ರವರು ಈ ಶಾಲೆಗೆ ತುರ್ತು ಅಗತ್ಯವಿರುವ ಶಾಲಾ ಕೊಠಡಿಗಳ ಸಮೇತ ಮೂಲಭೂತ ಸೌಕರ್ಯಗಳ ಕೊರತೆಯನ್ನು ಮನಗಂಡು ರೌಂಡ್ ಟೇಬಲ್ ಸಂಸ್ಥೆಯ ಅಂದಿನ ಅಧ್ಯಕ್ಷರಾಗಿದ್ದ ಶ್ರೀ ಶರತ್ ಭೂಪಾಳಂ ರವರನ್ನು ಸಂಪರ್ಕಿಸಿ ಈ ಶಾಲೆಗೆ ಕಾಯಕಲ್ಪ ಒದಗಿಸುವಲ್ಲಿ ಮಹತ್ವದ ಪಾತ್ರವಹಿಸಿರುತ್ತಾರೆ. ಕಳೆದ ಮೂರು ವರ್ಷಗಳಲ್ಲಿ ಶಾಲೆಗೆ ಒಟ್ಟಾರೆ ನಾಲ್ಕು ಸುಸಜ್ಜಿತ ಕೊಠಡಿಗಳು, ಸುಸಜ್ಜಿತ ಶೌಚಾಲಯ ಬ್ಲಾಕ್ ಹಾಗೂ ಡೈನಿಂಗ್ ಹಾಲ್ ಗಳನ್ನು ಸುಮಾರು 42 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಪೂರೈಸಿ ನಾಳೆಯ ಕಾರ್ಯಕ್ರಮದ ಕಾರಣೀಕರ್ತರಾಗಿದ್ದಾರೆ ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಅಡಗಿರುವ ಸಾಮಾಜಿಕ ಕಳಕಳಿಯು ಸೇವಾ ರೂಪಕ್ಕೆ ಪರಿವರ್ತಿತವಾಗಿದರೆ ಅದ್ಭುತ ಸಾಧನೆಗಳು ಸಾಧ್ಯ ಎಂಬುದಕ್ಕೆ ಶ್ರೀಮತಿ ಪ್ರತಿಭಾ ಅರುಣ್ ರವರು ಮಾದರಿ ಎನಿಸಿದ್ದಾರೆ.
ಈಗಾಗಲೇ ಹತ್ತಾರು ದೇಶಗಳಲ್ಲಿ ಕಾರ್ಯನಿರತವಾಗಿರುವ ರೌಂಡ್ ಟೇಬಲ್ ಸಂಸ್ಥೆಯ ಮೂಲ ಉದ್ದೇಶವೇ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದಾಗಿದ್ದು, ಫಲಾನುಭವಿಗಳಿಂದ ಒಂದು ಭಾಗ ಹಣವನ್ನು ಪಡೆದು ದೇಶವಿದೇಶಗಳಲ್ಲಿ ಸಕ್ರಿಯವಾಗಿರುವ ಇತರ ಅಂಗಸಂಸ್ಥೆಗಳಿಂದ ಹೊಂದಾಣಿಕೆಯಾಗಿ ಮತ್ತೊಂದು ಭಾಗವನ್ನು ಪಡೆದು ಕೊರತೆಯಾಗುವ ಶೇ‌.50 ಮೊತ್ತವನ್ನು ತಮ್ಮ ಮಾತೃ ಸಂಸ್ಥೆಯಿಂದ ಭರಿಸಿ ಇಂತಹ ಯೋಜನೆಯನ್ನು ಪೂರೈಸುವ ಮೂಲಕ ಸಾಮಾಜಿಕ ಹೊಣೆ ಹೊತ್ತು, ಸರ್ಕಾರಗಳನ್ನು ದೂಷಿಸುವ ಬದಲಿಗೆ ಸರ್ಕಾರದ ಕಣ್ಣು ತೆರೆಸುವ ಮಹತ್ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಮಾದರಿ ಎನಿಸಿದೆ.

ಯೋಜನೆಗಳಿಗೆ ಹಣದ ಕೊರತೆಯಾದಾಗ ಸಾರ್ವಜನಿಕರ ಪಾಲ್ಗೊಳ್ಳುವಿಕೆಯಲ್ಲಿ ಕಾರ್ಯಕ್ರಮಗಳ ಮೂಲಕ ಕೊರತೆ ನೀಗಿಸುವ ಪ್ರಯತ್ನ ಮಾಡಿರುವ ಉದಾಹರಣೆಗಳೂ ಇವೆ. ಶಿವಮೊಗ್ಗದಲ್ಲಿ ಇದುವರೆಗೆ ಒಟ್ಟಾರೆ 35 ಕ್ಲಾಸ್ ರೂಮ್ ಗಳು, ಆರು ಕಡೆ ಸ್ಮಾರ್ಟ್ ಕ್ಲಾಸ್ಗಳು, ವಿವಿಧ ಕಡೆ ಶಾಲಾಕೊಠಡಿಗಳಿಗೆ ಕಪ್ಪುಹಲಗೆ ಗಳು, ಶಾಲಾ ಮಕ್ಕಳಿಗೆ ಆಟದ ಸಾಮಗ್ರಿಗಳು, ಕೊಠಡಿಗಳಿಗೆ  ಬೆಳಕಿನ ವ್ಯವಸ್ಥೆ, ಶೌಚಾಲಯದ ಬ್ಲಾಕ್ ಗಳು, ಇತ್ಯಾದಿ ಇತ್ಯಾದಿಗಳು ರೌಂಡ್ ಟೇಬಲ್ ಇಂಡಿಯಾದ ಶಿವಮೊಗ್ಗ ವಿಭಾಗದ ಸಾಧನೆಯಾಗಿದೆ.

ಶಿವಮೊಗ್ಗದ ಜನಪ್ರಿಯ ಎಸ್ಪಿ ಆಗಿದ್ದ ಶ್ರೀ ರವಿ ಡಿ ಚೆನ್ನಣ್ಣನವರ್ ಅವರ ಅವಧಿಯಲ್ಲಿ ಸುಮಾರು 10 ಪೊಲೀಸ್ ಠಾಣೆಗಳನ್ನು KNIGHTS IN KHAKI ಎಂಬ ವಿಶೇಷ ಕಾರ್ಯಕ್ರಮದ ಮೂಲಕ ಗುರುತಿಸಿ ಸನ್ಮಾನಿಸಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ. ಪ್ರತಿವರ್ಷ ‘ಆರ್ ಟಿ ಐ ಸಪ್ತಾಹ’ ಎಂಬ ಜನಪ್ರಿಯ ಕಾರ್ಯಕ್ರಮದಲ್ಲಿ ಏಳು ದಿನ ಏಳು ವಿವಿಧ ರೀತಿಯ ಅತ್ಯಗತ್ಯ ಸಮುದಾಯ ಸೇವೆಗಳನ್ನು ಕೈಗೊಳ್ಳುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಮಹತ್ವದ ಕೆಲಸ ಮಾಡುತ್ತಿರುವುದು ಸಂಸ್ಥೆಯ ಸೇವಾ ಭಾವವನ್ನು ತೋರುತ್ತದೆ.
ಎಲೆಮರೆಯ ಸೇವಾ ಕಾರ್ಯಗಳ ಮೂಲಕ ವಿಶೇಷವಾಗಿ, ಸರ್ಕಾರಿ ಶಾಲಾ ಮಕ್ಕಳಿಗೆ ಹತ್ತಿರವಾಗಿರುವ ರೌಂಡ್ ಟೇಬಲ್ ನ ಶಿವಮೊಗ್ಗ ಸಂಸ್ಥೆಯಲ್ಲಿ ಪ್ರತಿಷ್ಠಿತ  ಸರ್ಜಿ ಸಮೂಹ ಆಸ್ಪತ್ರೆಗಳತ್ತ ಖ್ಯಾತ ವೈದ್ಯ ಶ್ರೀ ಧನಂಜಯ್ ಸರ್ಜಿ, ಪರ್ಫೆಕ್ಟ್ ಅಲಾಯ್ ಕಂಪನಿಯ ಕಿರಣ್, ನಾಗರಹಳ್ಳಿ ಹೋಂಡಾದ ನಟರಾಜ್, ಗುತ್ತಿ ಸಮೂಹ ಸಂಸ್ಥೆಯ ರೋಹನ್, ಭದ್ರಾವತಿಯ ಹೆಸರಾಂತ ‘ಪದ್ಮ ನೀಲಯ’ ಹೋಟೆಲ್ ಆದಿತ್ಯ ಆಚಾರ್ಯ, ಹಾರ್ನಳ್ಳಿ ಜುವೆಲರ್ಸ್ ನ ಶ್ರೀಪಾದ್ ಇತ್ಯಾದಿ ಇನ್ನೂ ಹಲವಾರು ಪ್ರತಿಷ್ಠಿತರು 41ನೇ ವಯಸ್ಸಿನಲ್ಲಿ ನಿವೃತ್ತಿ ಹೊಂದಿರುತ್ತಾರೆ. ಗ್ರೀನ್ ಷಾಪ್ ಮಾಲಕರಾಗಿರುವ ಶ್ರೀ ಕೌಶಿಕ್ ರವರು ಹಾಲಿ ಅಧ್ಯಕ್ಷರಾಗಿದ್ದು ಈಶ್ವರ ಸರ್ಜಿ ರವರು ಯೋಜನಾ ನಿರ್ದೇಶಕರಾಗಿ ದುರ್ಗಿಗುಡಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ರೂವಾರಿಗಳೆನಿಸಿದ್ದಾರೆ.
ನಾಳೆಯ ಶಾಲಾ ಬ್ಲಾಕ್ ಉದ್ಘಾಟನೆಗೆ ದೂರದ ಚಂಡೀಗಢದಿಂದ ರೌಂಡ್ ಟೇಬಲ್ ಇಂಡಿಯಾ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ರಚಿತ್ ಬನ್ಸಾಲ್ ರವರು ಆಗಮಿಸುತ್ತಿದ್ದಾರೆ. ಅದ್ಭುತ ಕೆಲಸಗಳ ಮೂಲಕ ತೆರೆಮರೆಯಲ್ಲಿ ಸೇವಾ ನಿರತವಾಗಿರುವ ಇಂತಹ ಸಂಸ್ಥೆಯೊಂದು ನಮ್ಮ ಶಿವಮೊಗ್ಗದಲ್ಲಿ ಇರುವುದು ನಮಗೆ ಹೆಮ್ಮೆಯ ವಿಷಯವೇ ಹೌದಲ್ಲವೇ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Govt SchoolKannada News WebsiteLatest News KannadaRotary ShimogaRound TableRound Table IndiaShivamoggaರೌಂಡ್ ಟೇಬಲ್ರೌಂಡ್ ಟೇಬಲ್ ಇಂಡಿಯಾಶಿವಮೊಗ್ಗ
Share196Tweet123Send
Previous Post

ಜೂ.24ರಂದು ಕುವೆಂಪು ವಿವಿಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Next Post

ಶಿವಮೊಗ್ಗ | 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಾಲಕಿಗೆ ಲೈಂಗಿಕ ಕಿರುಕುಳ: ಶಿವಮೊಗ್ಗದ ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ

ಶಿವಮೊಗ್ಗ | 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದುಬೈನಲ್ಲಿ ಭೀಕರ ರಸ್ತೆ ಅಪಘಾತ | ಕರಾವಳಿಯ ಭರತನಾಟ್ಯ ಶ್ರೀಲತಾ ತಂತ್ರಿ ನಿಧನ

ದುಬೈನಲ್ಲಿ ಭೀಕರ ರಸ್ತೆ ಅಪಘಾತ | ಕರಾವಳಿಯ ಭರತನಾಟ್ಯ ಶ್ರೀಲತಾ ತಂತ್ರಿ ನಿಧನ

May 26, 2026
90 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು | ನಾಲ್ವರು ಮುಸುಕುಧಾರಿಗಳಿಂದ ಅತ್ಯಾಚಾರ

6 ವರ್ಷದ ಬಾಲಕಿಯ ಮೇಲೆ 9ನೇ ತರಗತಿ ವಿದ್ಯಾರ್ಥಿಯಿಂದ ಅತ್ಯಾಚಾರ

May 26, 2026
ಶಿವಮೊಗ್ಗ | ಜಾನುವಾರುಗಳಿಗೆ ಸಿಟಿ ಬಸ್ ಡಿಕ್ಕಿ | ಕರು ಸಾವು | ಹಲವು ಕರುಗಳಿಗೆ ಗಾಯ

ಶಿವಮೊಗ್ಗ | ಜಾನುವಾರುಗಳಿಗೆ ಸಿಟಿ ಬಸ್ ಡಿಕ್ಕಿ | ಕರು ಸಾವು | ಹಲವು ಕರುಗಳಿಗೆ ಗಾಯ

May 26, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL