ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಶಿವಮೊಗ್ಗ-ಯಶವಂತಪುರದ ನಡುವೆ ಸಂಚರಿಸುತ್ತಿರುವ ಜನಶತಾಬ್ದಿ ರೈಲು ಸಂಚಾರವನ್ನು ಮೆಜೆಸ್ಟಿಕ್ ರೈಲು ನಿಲ್ದಾಣದವರೆಗೂ ವಿಸ್ತರಣೆ ಮಾಡಲಾಗಿದೆ.
ಪ್ರತಿನಿತ್ಯ ಸಂಚರಿಸುವ ಜನಶತಾಬ್ದಿ ರೈಲು ಬೆಂಗಳೂರಿನ ಯಶವಂತಪುರದವರೆಗೂ ಮಾತ್ರ ಚಲಿಸುತ್ತಿತ್ತು. ಇದರಿಂದಾಗಿ ಮೆಜೆಸ್ಟಿಕ್ ರೈಲು ನಿಲ್ದಾಣದಿಂದ ಬೇರೆ ಊರು ಹಾಗೂ ರಾಜ್ಯಗಳ ರೈಲುಗಳಲ್ಲಿ ತೆರಳುವ ಮಲೆನಾಡಿನ ಪ್ರಯಾಣಿಕರಿಗೆ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಸಂಸದ ಬಿ.ವೈ. ರಾಘವೇಂದ್ರ ಅವರು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಈ ರೈಲು ಸಂಚಾರವನ್ನು ಮೆಜೆಸ್ಟಿಕ್ ವರೆಗೂ ವಿಸ್ತರಣೆ ಮಾಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post