ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಗೌರಿಬಿದನೂರು: ಕೊರೋನಾ ಕೋವಿಡ್-19 ವೈರಸ್ ಹರಡದಂತೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಶಾಸಕ ಮತ್ತು ಉನ್ನತ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಶಾಸಕ ಶಿವಶಂಕರ ರೆಡ್ಡಿ, ಕೊರೋನಾ ವೈರಸ್ ರೋಗವನ್ನು ತಡೆಗಟ್ಟಲು ಅಧಿಕಾರಿಗಳು ಎಲ್ಲ ಕ್ರಮಗಳನ್ನು ತೆಗದುಕೊಂಡಿದ್ದು ಅದರ ಜೊತೆಗೆ ಜನ ಅಗತ್ಯ ವಸ್ತುಗಳಾದ ಔಷಧಿ, ದಿನಸಿ ವಸ್ತುಗಳ ಸರಬರಾಜುವಿಗೆ ಹೆಚ್ಚಿನ ಕ್ರಮ ತೆಗೆದುಕೊಳ್ಳಬೇಕು ಹಾಗೂ ಯಾವುದೇ ರೀತಿಯಲ್ಲಿ ಜನರಿಗೆ ತೊಂದರೆ ಅಗದಂತೆ ಪೋಲಿಸ್ ಇಲಾಖೆ ನಗರಸಭೆ ಇದರತ್ತ ಹೆಚ್ಚಿನ ಅಸಕ್ತಿ ವಹಿಸತಕ್ಕದ್ದು ಎಂದು ಸೂಚಿಸಿದರು.
ಮೆಡಿಕಲ್ ಸ್ಟೋರ್’ಗಳಲ್ಲಿ ಅಗತ್ಯ ಔಷಧಿಗಳ ಕೊರತೆ ಇರುವ ಮಾಹಿತಿ ಇದ್ದು ಅದರ ಸರಬರಾಜಿಗೆ ಅರೋಗ್ಯ ಇಲಾಖೆ ಹೆಚ್ಚಿನ ಗಮನ ಹರಿಸಬೇಕು. ದಿನಸಿ ಹಾಗೂ ಅಗತ್ಯ ವಸ್ತುಗಳಿಗೆ ಬರುವ ಜನರಿಗೆ ಅಂತರ ಕಾಯ್ದೆಕೊಳ್ಳುವ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು, ಯಾವುದೇ ಕಾರಣಕ್ಕೂ ಗೊಂದಲ ಮೂಡಿಸುವ ಬಗ್ಗೆ ಅಧಿಕಾರಿಗಳು ಹೆಚ್ಚು ನಿಗಾ ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೋಲಿಸ್ ವರಿಷ್ಥಾಧಿಕಾರಿ ಮಿಥುನ್ ಕುಮಾರ್, ಜಿ.ಪಂ. ಅಧ್ಯಕ್ಷ ಚಿನ್ನಿ(ಚಿಕ್ಕ ನರಸಿಂಹಯ್ಯ), ಜಿಲ್ಲಾ ಪಂಚಾಯಿತಿ ಸಿಇಓ ಫೌಜಿಯಾ ತರನಮ್, ನಗರಸಭೆ ಪೌರಾಯುಕ್ತ ಜಿ.ಎನ್. ಚಲಪತಿ, ವೃತ್ತ ನಿರೀಕ್ಷಕ ರವಿ, ಈಓ ಮುನಿರಾಜು, ವಿಶೇಷ ನೋಡಲ್ ಅಧಿಕಾರಿ ವರಪ್ರಸಾದ್ ರೆಡ್ಡಿ ಇನ್ನಿತರೆ ಅಧಿಕಾರಿಗಳು ಭಾಗವಹಿಸಿದ್ದರು.
(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)
Get in Touch With Us info@kalpa.news Whatsapp: 9481252093
Discussion about this post