ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ನಾಳೆಯಿಂದ ರಾಜ್ಯದಾದ್ಯಂತ ಅಂತರ್ಜಲ ಯೋಜನೆ ಆರಂಭಗೊಳ್ಳಲಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನರೇಗಾ ಮುಖಾಂತರ 273 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರಂಭದಲ್ಲಿ ಶಿವಮೊಗ್ಗದಲ್ಲಿ ಪೈಲಟ್ ಯೋಜನೆಗೆ ಚಾಲನೆ ದೊರೆಯಲಿದೆ. ಆರ್ಟ್ ಆಫ್ ಲಿವಿಂಗ್ ರವರ ಸಹಭಾಗಿತ್ವದಲ್ಲಿ ಯೋಜನೆ ಅನುಷ್ಠಾನಕ್ಕೆ ಚಾಲನೆ ನೀಡಲಿದ್ದು, ಈ ಯೋಜನೆಯು ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ. ರಾಜ್ಯದ ಸಮಗ್ರ ಅಂತರ್ ಜಲ ಚೇತನಕ್ಕೆ ಇದು ಸಹಕಾರಿಯಾಗಲಿದೆ ಎಂದರು.
ಯಾದಗಿರಿ, ಬಳ್ಳಾರಿ, ಉತ್ತರ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಕ್ರೀಯಾ ಯೋಜನೆ ಹಾಕಿ 8-10 ದಿನದಲ್ಲಿ ಪ್ರಾರಂಭ ಮಾಡುತ್ತೇವೆ. ಜೂನ್ ವೇಳೆ 9 ಜಿಲ್ಲೆಯಲ್ಲಿ ಈ ಯೋಜನೆ ಪ್ರಾರಂಭ ಆಗುತ್ತದೆ. ಗ್ರಾಮ ಪಂಚಾಯತ್ ಚುನಾವಣೆ ಮುಂದೂಡುವ ಬಗ್ಗೆ ಆಯೋಗಕ್ಕೆ ಪತ್ರ ಬರೆದಿದ್ದೇವೆ. ಈಗ ಆಡಾಳಿತಾಧಿಕಾರಿ ನೇಮಕವೊ ಅಥವಾ ಆಡಳಿತ ಸಮಿತಿ ರಚಿಸಬೇಕೊ ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.
ಇಂದು ರಾಜ್ಯದ ಗ್ರಾಮ ಪಂಚಾಯತ್’ಗಳ ಸಾರ್ವತ್ರಿಕ ಚುನಾವಣೆಯು ಮೇ ತಿಂಗಳಲ್ಲಿ ಚುನಾವಣೆ ನಡೆಯಬೇಕಿತ್ತು. ಕೊರೋನಾ ಮಹಾಮಾರಿಯ ತುರ್ತು ಪರಿಸ್ಥಿತಿಯ ಕಾರಣ ಚುನಾವಣೆ ಮುಂದಕ್ಕೆ ಹಾಕಲು ಈಗಾಗಲೇ ಚುನಾವಣೆ ಆಯೋಗಕ್ಕೆ ಪತ್ರ ಬರೆಯಲಾಗಿದೆ. ಆ ಮಧ್ಯಂತರ ಅವಧಿಗೆ ಆಡಳಿತ ಸಮಿತಿ ಅಥವಾ ಆಡಳಿತಾಧಿಕಾರಿ ನೇಮಿಸುವ ಕುರಿತು ಮಾನ್ಯ ಮುಖ್ಯಮಂತ್ರಿಗಳ ನಿರ್ದೇಶನದಂತೆ ಇಂದು ನನ್ನ ನೇತೃತ್ವದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು. ಚರ್ಚೆಯ ಸಮಗ್ರ ವಿವರಗಳನ್ನು ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
Get in Touch With Us info@kalpa.news Whatsapp: 9481252093

















