No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ವಿಶ್ವ ಹವ್ಯಕ ಸಮ್ಮೇಳನಕ್ಕೆ ಅದ್ದೂರಿ, ಸಾಂಪ್ರದಾಯಿಕ ಚಾಲನೆ

ಬೆಂಗಳೂರು ಅರಮನೆ ಮೈದಾನದಲ್ಲಿ ಮಲೆನಾಡು ಹಾಗೂ ಕರಾವಳಿ ಸೊಗಡು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 29, 2018
in ರಾಷ್ಟ್ರೀಯ
0
ವಿಶ್ವ ಹವ್ಯಕ ಸಮ್ಮೇಳನಕ್ಕೆ ಅದ್ದೂರಿ, ಸಾಂಪ್ರದಾಯಿಕ ಚಾಲನೆ
Share on FacebookShare on TwitterShare on WhatsApp

ಬೆಂಗಳೂರು: ಅರಮನೆ ಮೈದಾನದಲ್ಲಿ ಆಯೋಜನೆಗೊಂಡಿರುವ ಎರಡನೆಯ ವಿಶ್ವ ಹವ್ಯಕ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ನೀಡಲಾಗಿದ್ದು, ಕಾರ್ಯಕ್ರಮದ ಸ್ಥಳದಲ್ಲಿ ಎಲ್ಲೆಲ್ಲೂ ಮಲೆನಾಡು ಹಾಗೂ ಕರಾವಳಿ ಸೊಗಡು ತುಂಬಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು, ವ್ಯಕ್ತಿಗೂ ಸಂಸ್ಥೆಗೂ ವ್ಯತ್ಸಾಸವಿದೆ. 75 ವರ್ಷಕ್ಕೆ ವ್ಯಕ್ತಿ ವೃದ್ಧಾಪ್ಯ ಹೊಂದಿ ಮರಣಕ್ಕೆ ಹತ್ತಿರವದರೇ, ಸಂಸ್ಥೆ 75 ವರ್ಷ ಪೂರೈಸಿದಾಗ ಅಮೃತವಾಗುತ್ತದೆ. ಅಮೃತಮಹೋತ್ಸವವನ್ನು ಆಚರಿಸಿಕೊಳ್ಳುತ್ತದೆ. ವ್ಯಕ್ತಿ ದುರ್ಬಲನಾದರೆ ಸಂಸ್ಥೆ ಮತ್ತಷ್ಟು ಸಶಕ್ತವಾಗುತ್ತದೆ. ಅಂತಹ 75 ವರ್ಷಗಳನ್ನು ಪೂರೈಸಿದ ಅಖಿಲ ಹವ್ಯಕ ಮಹಾಸಭೆಗೆ ಪರ್ಯಾಯ ಇಲ್ಲ. ಇನ್ನೊಂದಲ್ಲ ಹನ್ನೊಂದು ಒಕ್ಕೂಟಗಳನ್ನು ಕಟ್ಟಬಹುದು, ಆದರೆ ಏಳು ದಶಕಗಳನ್ನು ಪೂರೈಸಿದ ಈ ಸಂಸ್ಥೆಯ ಸೇವೆ, ತ್ಯಾಗಗಳಿಗೆ ಪರ್ಯಾಯವಿಲ್ಲ ಎಂದರು.


ಹಿಂದೆ ರಾಜ ಮಯೂರವರ್ಮ ದೇಶದಲ್ಲಿ ಶ್ರೇಷ್ಠ ವೇದ ವಿದ್ವಾಂಸರನ್ನು ಹುಡುಕಿ ಅವನ ದೇಶಕ್ಕೆ ಕರೆತರಲು ಹೊರಟ ಅವನು ಹವ್ಯಕರನ್ನು ತನ್ನ ದೇಶಕ್ಕೆ ಕರೆತಂದ, ಇದರಿಂದ ಹವ್ಯಕರು ಸರ್ವಶ್ರೇಷ್ಠ ಎಂಬುದು ನಿರೂಪಿತವಾಗುತ್ತದೆ ಎಂದರು.

ಐತಿಹಾಸಿಕವಾದ ಈ ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಸರ್ವರಿಗೂ ಅವಕಾಶ ಕೊಟ್ಟದ್ದು ಶ್ಲಾಘನೀಯ. ಎಲ್ಲರ ಜೊತೆಗೆ ಒಟ್ಟಾಗಿ, ಸಹಬಾಳ್ವೆ ಮಾಡಿದ ಪರಂಪರೆ ಹವ್ಯಕರದ್ದು. ಹವ್ಯಕ ಸಮಾಜ ಎಂದೆದಿಗೂ ಇನ್ಕ್ಲೂಸಿವ್ ಪರಂಪರೆಯನ್ನು ಹೊಂದಿರುವಂತದ್ದು. ಸಂಘಟನೆಗೆ ಬೆಳೆಯಲು ಇದು ಮುಖ್ಯ. ಆದರೆ ಪ್ರತಿಷ್ಠೆ ಸಂಘಟನೆಗೆ ಮಾರಕ, ನನ್ನನ್ನು ಮೇಲಿಡು, ಅವನನ್ನು ಕರೆಯಬೇಡ ಎಂಬುದು ಹವ್ಯಕ ಸಂಸ್ಕೃತಿಯಲ್ಲ. ನಾನು ಬರುವುದಿಲ್ಲ, ಆದರೆ ಕಾರ್ಯಕ್ರಮ ಚನ್ನಾಗಿ ಆಗಲಿ ಎಂದು ಹೇಳುವುದು ದೇವತ್ವ, ನನ್ನನ್ನು ಆಹ್ವಾನಿಸು, ಅವರನ್ನೂ ಆಹ್ವಾನಿಸು ಎಂಬುದು ಮನುಷ್ಯತ್ವ. ಎಲ್ಲರನ್ನೂ ಕರೆಯುವುದು, ಎಲ್ಲರ ಜೊತೆ ಸಾಗುವುದು ಹವ್ಯಕತ್ವ. ಅಷ್ಟೇ ಅಲ್ಲದೇ ಒಟ್ಟಾಗುವುದು ಶಂಕರರ ಅದ್ವೈತ ತತ್ವದ ಸಾರ ಎಂದರು.

ಸಮಾಜ ಬೆಳಯಬೇಕು, ಒಟ್ಟು ಭಾರತೀಯ ಸಮಾಜವನ್ನು ಬೆಳೆಸಬೇಕು.ಈ ದಿಶೆಯಲ್ಲಿ ಮಹಾಸಭೆಗೆ ಗುರುಪೀಠದ ಸಂಪೂರ್ಣ ಆಶೀರ್ವಾದ ಸದಾ ಇದೆ. ಯಾವುದೇ ರಚನಾತ್ಮಕ ಕಾರ್ಯದಲ್ಲಿ ರಾಮಚಂದ್ರಾಪುರಮಠದ ಹಾಗೂ ಬಳಗದ ತ್ಯಾಗ ಸಹಕಾರ ಸದಾ ಇದೆ ಎಂದು ಮಹಾಸಭೆಗೆ ಅಭಯಾಶೀರ್ವಾದವನ್ನು ಮಾಡಿ,ಇದು ಆರಂಭವಷ್ಟೇ, ಇಂದು, ನಾಳೆ, ನಾಡಿದ್ದು ಇಲ್ಲಿ ಹವ್ಯಕರ ವಿರಾಟ್ ದರ್ಶನವಾಗಲಿದೆ. ಇಡೀ ವಿಶ್ವದ ಹವ್ಯಕರು ಹಾಗೂ ಅಭಿಮಾನಿಗಳು ಒಟ್ಟಾಗುವ ಕಾಲಕ್ಕೆ ಸಾಕ್ಷಿಯಾಗೋಣ ಎಂದರು.

ಸುಬ್ರಹ್ಮಣ್ಯ ಮಠದ ಶ್ರೀಶ್ರೀ ವಿದ್ಯಾಪ್ರಸನ್ನ ತೀರ್ಥ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಯಜ್ಞಗಳ ಮೂಲಕ ಗುರುತಿಸಿಕೊಂಡ ಸಮಾಜ ಹವ್ಯಕ ಸಮಾಜ. ಆದರೆ ಅಷ್ಟಕ್ಕೇ ಸೀಮಿತವಾಗದೆ ಕಲೆ – ವಿಜ್ಞಾನ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಜಗತ್ತಿನ ಗಮನಸೆಳೆದ ಹಿರಿಮೆ ಹವ್ಯಕರದ್ದು. ನೂತನವಾಗಿ ಲೋಕಾರ್ಪಿತವಾದ ಹವ್ಯಕ ಮಹಾಸಭಾದ ಲಾಂಛನದಲ್ಲಿ ಊರ್ಧ್ವಮುಖಿಯಾದ ಅಗ್ನಿ ಇದೆ, ಇದು ಸಾತ್ವಿಕತೆಯನ್ನು ಸೂಚಿಸುತ್ತದೆ. ಇದು ಸಮಾಜದ ಸಾತ್ವಿಕ ಶಕ್ತಿಯ ಸಂಕೇತ, ನಮ್ಮ ಹಾಗೂ ರಾಮಚಂದ್ರಾಪುರಮಠದ ಸಂಬಂಧ ಐತಿಹಾಸಿಕವಾದದು, ಹಾಗೆಯೇ ಹವ್ಯಕ ಸಮಾಜದ್ದು ಕೂಡ. ಈ ಸಮಾಜ ಲೋಕಹಿತ ಕಾರ್ಯದಲ್ಲಿ ಸದಾ ತೊಡಗಿಸಿಕೊಳ್ಳಲಿ ಎಂದು ಆಶಿಸಿದರು.

ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಶಿವರಾಜ್ ಪಾಟೀಲ್ ‘ಅಮೃತವರ್ಷಿಣಿ” ಸ್ಮರಣಸಂಚಿಕೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿ, ಸಮುದಾಯದ ಸಂಘಟನೆಗಳು ತಪ್ಪಲ್ಲ, ನಮ್ಮ ಸಂತೋಷಕ್ಕಾಗಿ ಸಂಘಟನೆಗಳು ಬೇಕು ಹೊರತು ಬೇರೆಯವರಿಗೆ ದುಃಖ ನೀಡಲಲ್ಲ. ಸಂಘಟನೆ ಅಭಿವೃದ್ಧಿಗೆ ಕಾರಣವಾಗಬೇಕು ಹೊರತು ಮತ್ತೊಬ್ಬರಿಗೆ ಮಾರಕವಾಗಬಾರದು. ಈ ದಿಶೆಯಲ್ಲಿ ತೊಡಗಿಸಿಕೊಂಡ ಎಲ್ಲಾ ಸಂಘಟನೆಗಳಿಗೆ ನನ್ನ ಸಹಮತಿ ಇದೆ. ಹವ್ಯಕ ಮಹಾಸಭೆ ಈ ದಿಶೆಯಲ್ಲಿ ತೊಡಗಿಸಿಕೊಂಡಿದೆ ಎಂಬುದು ನನ್ನ ಅಭಿಪ್ರಾಯ.

ಹವ್ಯಕ ಸಮಾಜ ಈ ರೂಪದಲ್ಲಿ ಸಂಘಟಿತವಾಗಿ 75 ವರ್ಷಗಳಾಗಿದೆ. ಇಲ್ಲಿಯ ವರೆಗಿನ ಕಾರ್ಯಗಳನ್ನು ಅವಲೋಕನ ಮಾಡಿಕೊಂಡು ಮುಂದೇನು ಮಾಡಬಹುದು ಎಂಬ ಕುರಿತು ಆಲೋಚಿಸಬೇಕು. ಮುಂದೆ ನಡೆಯುವ ಗೋಷ್ಠಿಗಳು ಈ ದಿಶೆಯಲ್ಲಿ ಬೆಳಕು ಚೆಲ್ಲಲಿ. ಅಮೃತಮಹೋತ್ಸವದ ಸಂದರ್ಭದಲ್ಲಿ ‘ಅಮೃತ ವರ್ಷಿಣಿ’ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿರುವುದು ಸಂತಸದ ವಿಚಾರ.

ಹವ್ಯಕ ಸಮಾಜ ಶೇ.100 ಸುಶಿಕ್ಷಿತ ಎಂಬುದಯ ನಿಜಕ್ಕೂ ಹೆಮ್ಮೆಯ ವಿಚಾರ. ಎಲ್ಲ ಸಮಾಜಗಳಿಗೆ ಇದು ಮಾದರಿಯಾಗಬೇಕು. ಹವ್ಯಕ ಸಮಾಜಕ್ಕೆ ನಾನು ಈ ಮೂಲಕ ಒಂದು ಕರೆಯನ್ನು ಕೊಡಲು ಬಯಸುತ್ತೇನೆ. ನೀವು ಈ ನಾಡಿನಲ್ಲಿ, ಈ ದೇಶದಲ್ಲಿ ಅನಕ್ಷರತೆಯನ್ನು ಹೋಗಲಾಡಿಸಲು ಪಣತೊಡಬೇಕು. ಸಮಸ್ಥ ದೇಶದಲ್ಲಿ ಅಕ್ಷರ ಜಾಗೃತಿ ಮೂಡಿಸುವ ಕೆಲಸ ನಿಮ್ಮ ಸಮಾಜದಿಂದಾಗಲಿ ಎಂದರು.

ಸಚಿವರಾದ ಆರ್.ವಿ. ದೇಶಪಾಂಡೆ ಮಾತನಾಡಿ, ಹವ್ಯಕ ಸಮಾಜದ ಜೊತೆಗೆ ನಾನು ಅವಿನಾಭಾವದ ಸಂಬಂಧವನ್ನು ಹೊಂದಿದ್ದೇನೆ. ಹವ್ಯಕ ಸಮಾಜ ತನ್ನಲ್ಲಿ ಅನೇಕ ಗುಣಾತ್ಮಕ ಬದಲಾವಣೆಗಳೊಂದಿಗೆ ಮುನ್ನೆಡೆಯುತ್ತಿದೆ. ಇದು ಪ್ರಜ್ಞಾವಂತ ಸಮುದಾಯವಾಗಿದೆ. ರಾಮಚಂದ್ರಾಪುರಮಠದ ಶ್ರೀಗಳ ನೇತೃತ್ವದಲ್ಲಿ ಸಮಾಜ ಉತ್ತಮ ರೀತಿಯಲ್ಲಿ ಮುಂದುವರಿಯುತ್ತಿದ್ದು, ಸಮಾಜದಲ್ಲಿ ಸಂಸ್ಕೃತಿ ಸಂಪ್ರದಾಯಗಳನ್ನು ಉಳಿಸಿಬೆಳೆಸುತ್ತಿರುವ ಕಾಯಕದಲ್ಲಿ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಕಾರ್ಯ ಅನುಪಮವಾದದ್ದು. ಮನುಷ್ಯ ಸಮಾಜಕ್ಕಷ್ಟೇ ಅಲ್ಲದೇ, ಪೂಜ್ಯ ಶ್ರೀಗಳು ಗೋವಿಗಾಗಿ ಜಗತ್ತಿನ ಮೊದಲ ಸ್ವರ್ಗವನ್ನು ನಿರ್ಮಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಸಮಾಜ ಮುಂದುವರಿಯಲಿ ಎಂದರು.

ನನ್ನ ರಾಜಕೀಯ ಗುರುಗಳಾದ ರಾಮಕೃಷ್ಣರ ಹೆಗಡೆಯವರು ರಾಷ್ಟ್ರದ ರಾಜಕಾರಣಕ್ಕೆ ಹವ್ಯಕ ಸಮುದಾಯದ ಕೊಡುಗೆಯಾಗಿದೆ. ಅವರು ಕೈಗೊಂಡ ಅನೇಕ ದೂರದೃಷ್ಟಿಯ ಯೋಜನೆಗಳು ಸದಾ ಮಾರ್ಗದರ್ಶಕವಾಗಿವೆ. ಸಂಘಟನೆಗಳು ಸಮುದಾಯದ ಅಭಿವೃದ್ಧಿಗೆ ಪೂರಕವಾಗಿರಬೇಕು ಹೊರತು ಮಾರಕವಾಗಬಾರದು, ಸಮಾಜದ ಶ್ರೇಯಸ್ಸಿಗೆ ತೊಡಗಿಸಿಕೊಳ್ಳಬೇಕು. ಹವ್ಯಕ ಮಹಾಸಭೆ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು, ಇದು ಮತ್ತಷ್ಟು ಉತ್ತಮ ರೀತಿಯಲ್ಲಿ ಮುಂದುವರಿಯಲಿ ಎಂದರು.

ಎಚ್.ಕೆ. ಪಾಟೀಲ್ ಮಾತನಾಡಿ, ಹವ್ಯಕ ಸಮುದಾಯದೊಂದಿಗೆ ನನ್ನ ಸಂಬಂಧಗಳು ಅನುಪಮವಾದದ್ದು, ನಾನು ಅನೇಕ ಹುದ್ದೆಗಳನ್ನು ನಿರ್ವಹಿಸುವುದರ ಹಿಂದೆ ಹವ್ಯಕ ಸಮಾಜದ ಕೊಡುಗೆ ಅವಿಸ್ಮರಣೀಯ. ಸಹಕಾರಿ ಕ್ಷೇತ್ರದ ಬೆಳವಣಿಗೆಯಲ್ಲಿ ಹವ್ಯಕರ ಕೊಡುಗೆಯನ್ನು ನಾಡಿನ ಜನತೆ ಸದಾ ಸ್ಮರಸಬೇಕಿದೆ. ಸಹಸ್ರಾರು ಸಹಕಾರಿ ಸಂಘಗಳನ್ನು ಹುಟ್ಟುಹಾಕಿ ಯಶಸ್ವಿಯಾಗಿ ಮುನ್ನೆಡೆಸಿ, ಅನೇಕ ಸಂಸ್ಥೆಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಿದ ಕೀರ್ತಿ ಹವ್ಯಕರದ್ದು. ಪೂಜ್ಯ ರಾಘವೇಶ್ವರ ಶ್ರೀಗಳ ಅನುಪಮವಾದ ಆಶೀರ್ವಾದ ನನ್ನ ಮೇಲಿದೆ. ಆ ಸಮಾಜದ ಜೊತೆ ಸಂಬಂಧ ಇರುವುದರಿಂದ ಶ್ರೀಗಳು ‘ಪಾಟೀಲರೇ ನೀವು ಕೂಡ ಹವ್ಯಕರೇ” ಎಂದು ಹೇಳುವುದುಂಟು. ಆಗ ‘ಹವ್ಯಕ ಸಂಸ್ಕಾರಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಅಂದುಕೊಳ್ಳುತ್ತೇನೆ ಎಂದು ಆಪ್ತ ಕ್ಷಣಗಳನ್ನು ಹಂಚಿಕೊಂಡರು.

ಅಧ್ಯಕ್ಷರಾದ ಡಾ. ಗಿರಿಧರ ಕಜೆ ಸ್ವಾಗತ ಭಾಷಣ ಮಾಡಿ, ಲೋಕದ ಒಳಿತಿಗಾಗಿ ಆರ್ವಿಭವಿಸಿದ ಸಮಾಜ ಹವ್ಯಕ ಸಮಾಜ. ಉತ್ತರದ ಅಹಿಚ್ಛತ್ರದಿಂದ ರಾಜ ಮಯೂರವರ್ಮ 30 ವೈದಿಕ ಕುಟುಂಬಗಳನ್ನು ಕರೆತಂದ. ಇದೇ ಕುಟುಂಬಗಳು ಹವ್ಯಕ ಸಮುದಾಯವಾಗಿ ರೂಪುಗೊಂಡು ಲೋಕವಿಖ್ಯಾತವಾಯಿತು. ಹವ್ಯಕ ಸಮುದಾಯ ಅನೇಕ ವೈಶಿಷ್ಠ್ಯಗಳನ್ನು ಹೊಂದಿದೆ ಎಂಬುದು ಸಮಾಜಕ್ಕೆ ಹೆಮ್ಮೆಯ ವಿಚಾರ. ಹವ್ಯಕರು ತಮ್ಮದೇ ಆದ ಹವಿಗನ್ನಡ ಭಾಷೆಯನ್ನು ಹೊಂದಿದೆ, ಅಡಿಕೆ ಕೃಷಿ ನಮ್ಮ ಪಾರಂಪರಿಕ ಕೃಷಿಯಾದರೆ, ಯಕ್ಷಗಾನ ಕ್ಷೇತ್ರದಲ್ಲಿ ಹವ್ಯಕರ ಕೊಡುಗೆ ಅನುಪಮವಾದದ್ದು. ಹಾಗೆಯೇ ಹವ್ಯಕರಲ್ಲಿ ಅನಕ್ಷರಸ್ಥರು ಇಲ್ಲ ಎಂಬುದು ಗಮನಾರ್ಹ.

ಐತಿಹಾಸಿಕವಾದ ಪ್ರಥಮ ವಿಶ್ವ ಹವ್ಯಕ ಸಮ್ಮೇಳನ ಸರಿಯಾಗಿ 22 ವರ್ಷಗಳ ಹಿಂದೆ ಪುತ್ತೂರಿನಲ್ಲಿ ಸಂಪನ್ನವಾಗಿತ್ತು. ಹವ್ಯಕರ ಸಂಸ್ಕೃತಿ ಸಂಪ್ರದಾಯವನ್ನು ಜಗತ್ತಿನ ಮುಂದೆ ತೆರೆದಿಡಲು ಇದೀಗ ಮತ್ತೆ ಐತಿಹಾಸಿಕವಾದ ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನವನ್ನು ಅಮೃತಮಹೋತ್ಸವದ ಜೊತೆಜೊತೆಗೆ ಆಯೋಜಿಸಲಾಗಿದೆ. ಈ ಬೃಹತ್ ಕಾರ್ಯಕ್ರಮದ ಆಯೋಜನೆಯ ಹಿಂದೆ ಸಹಸ್ರಾರು ಸುಸಂಸ್ಕೃತ ಸಂಸ್ಕೃತಿಯ ಸಹೃದಯಗಳು ಕೈಜೋಡಿಸಿವೆ. ಐತಿಹಾಸಿಕ ದಾಖಲೆಯ ಅನೇಕ ಕಾರ್ಯಕ್ರಮ ಸರಣಿಗಳು ಈ ಸಮ್ಮೇಳನದಲ್ಲಿ ಇರಲಿವೆ. ಎಲ್ಲಾ ಸುಮನಸ್ಸುಗಳಿಗೂ ಕಾರ್ಯಕ್ರಮಕ್ಕೆ ಸ್ವಾಗತ ಎಂದು ಸಮ್ಮೇಳನದ ಅಧ್ಯಕ್ಷರಾದ ಡಾ. ಗಿರಿಧರ ಕಜೆಯವರು ತಮ್ಮ ಸ್ವಾಗತ ಭಾಷಣದಲ್ಲಿ ತಿಳಿಸಿದರು.

ಮಾಜಿ ಸಚಿವರಾದ ಹಾಲಪ್ಪ ಮಾತನಾಡಿ, ನಾನು ಅಕ್ಷರ ಕಲಿತು ವಿದ್ಯಾವಂತನಾಗಲು ಹವ್ಯಕ ಸಮಾಜ ಕಾರಣ, ಹಾಗೆಯೇ ನಾನು ಉದ್ಯಮಿಯಾಗಲು, ರಾಜಕಾರಣಿಯಾಗಲು, ಕಷ್ಟಕಾಲವನ್ನು ಧೈರ್ಯವಾಗಿ ಎದುರಿಸಲು ಹವ್ಯಕ ಸಮಾಜದ ಬೆಂಬಲ ಕಾರಣ. ಈಡಿಗರು – ಹವ್ಯಕರ ಸಂಬಂಧ ಉತ್ತಮವಾಗಿದೆ. ಸಮಾಜ ಸಮಾಜಗಳು ಸಹಬಾಳ್ವೆಯಿಂದ ಜೊತೆಸಾಗಲಿ ಎಂದರು.

ಮಾಜಿ ಗೃಹ ಸಚಿವ ಪಿ.ಜಿ.ಆರ್ ಸಿಂಧ್ಯ ಮಾತನಾಡಿ, ಹವ್ಯಕ ಸಮಾಜ ನಾಡಿನ ಅಭಿವೃಧಿಗೆ ಅನೇಕ ಕೊಡುಗೆಗಳನ್ನು ನೀಡಿದೆ. ಸಮಾಜದ ಅಭಿವೃಧಿಯಲ್ಲಿ ಪೂಜ್ಯ ರಾಘವೇಶ್ವರ ಶ್ರೀಗಳ ಪಾತ್ರ ಹಿರಿದಾದದು. ಸಮಾಜದ ಉನ್ನತಿಯಲ್ಲಿ ತೊಡಗಿಕೊಂಡ ಅಂತಹ ಪೂಜ್ಯರಿಗೆ ಅನೇಕ ಕಿರುಕುಳ ನೀಡಲಾಯಿತು. ಆದರೆ ಅವರು ಅದನ್ನೆಲ್ಲವನ್ನೂ ಸಹಿಸಿಕೊಂದು ಉತ್ತಮ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ಸಂಪಾದಕ ರವಿ ಹೆಗಡೆ ಮಾತನಾಡಿ, ಹವ್ಯಕ ಎಂದುಕೊಳ್ಳಲು ನಾನು ಹೆಮ್ಮೆ ಪಡುತ್ತೇನೆ, ನಿಜವಾಗಿ ನಾವು ಅಲ್ಪಸಂಖ್ಯಾತರು ಆದರೆ ನಮ್ಮ ಸಾಮರ್ಥ್ಯದಿಂದಾಗಿ ಜಗತ್ತಿನಲ್ಲಿ ಗುರುತಿಸಿಕೊಂಡಿದ್ದೇವೆ ಎಂದರು.

ಹವ್ಯಕರ ಮೂಲಸ್ಥಾನ ಹೈಗುಂದದಿಂದ ತಂದ ಜ್ಯೋತಿಯನ್ನು ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಹವ್ಯಕ ಮಹಾಸಭಾದ ನೂತನ ಲಾಂಚನವನ್ನು ಇದೇ ಸಂದರ್ಭದಲ್ಲಿ ಲೋಕಾರ್ಪಣೆ ಮಾದಲಾಯಿತು. ಕಾರ್ಯಕ್ರಮದ ಸ್ಮರಣ ಸಂಚಿಕೆ ಲೋಕಾರ್ಪಿತವಾಯಿತು.

100 ಪುಸ್ತಕಗಳ ಲೋಕಾರ್ಪಣೆ : ಹವ್ಯಕರ ಇತಿಹಾಸ – ಎಚ್.ಎಂ. ತಿಮ್ಮಪ್ಪ, ತೆಕ್ಕೆಕೆರೆ ಸುಬ್ರಹ್ಮಣ್ಯ ಭಟ್ – ಪರಂಪರೆ, ವೇದ ವಿಜ್ಞಾನ – ಪಳ್ಳತ್ತಡ್ಕ ಶಂಕರನಾರಾಯಣ ಘನಪಾಠಿಗಳು,ದೇಶಸೇವೆಯಲ್ಲಿ ಹವ್ಯಕ ಯೋಧ ರತ್ನರು – ರವಿ ನಾರಾಯಣ ಪಟ್ಟಾಜೆ, ಮಾಧ್ಯಮದ ಕಣ್ಣಲ್ಲಿ ಮಹಾಸಭೆಯ ಅಮೃತವರ್ಷ – ಸಂದೇಶ ತಲಕಾಲಕೊಪ್ಪ, ಕಾಡು ತೋಟದ ಕೃಷಿಕ – ರಾಧಾಕೃಷ್ಣ ಬಂದಗದ್ದೆ ಸೇರಿದಂತೆ 100 ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು, ಇದು ಲಿಮ್ಕಾ ರೆಕಾರ್ಡ್ ಸೇರಲಿರುವುದು ವಿಷೇಷ.

ಹವ್ಯಕ ವೇದರತ್ನ: ಶಿತಿಕಂಠ ಭಟ್ ಹೀರೇ, ನಾಗಾನಂದಕುಮಾರ ಪುರಾಣಿಕರು, ಗೋಪಾಲಕೃಷ್ಣ ಘನಪಾಠಿಗಳು, ಶಿವರಾಮ ಅಗ್ನಿಹೋತ್ರಿ, ಸೇರಿದಂತೆ 75 ವೇದ ವಿದ್ವಾಂಸರಿಗೆ ಹವ್ಯಕ ವೇದರತ್ನ ಪುರಸ್ಕಾರ ನೀಡಿ ಗೌರವಿಸಲಾಯಿತು.

ಮಲ್ಲೇಪುರಂ ಜಿ ವೆಂಕಟೇಶ್, ಹರಿಕೃಷ್ಣ ಪುನರೂರು, ಅರಳುಮಲ್ಲಿಗೆ ಪಾರ್ಥಸಾರಥಿ, ಡಾ ಕಬ್ಬಿನಾಲೆ ವಸಂತ ಭಾರಧ್ವಾಜ್, ಶಂಕರನಾರಾಯಣ ಜೋಯ್ಸ್ ಮುಂತಾದ ಅನೆಕ ಗಣ್ಯರು ಉಪಸ್ಥಿತರಿದ್ದರು. ದೇಶ ವಿದೇಶದ ವಿವಿಧ ಭಾಗಗಳಿಂದ ಆಗಮಿಸಿದ 6000ಕ್ಕೂ ಅಧಿಕ ಜನರು ಕಾರ್ಯಕರ್ಮಕ್ಕೆ ಸಾಕ್ಷಿಯಾದರು.

ಆಲೆಮನೆ, ಹವ್ಯಕ ಪಾಕೋತ್ಸವ, ಗೋತಳಿಗಳ ಪ್ರದರ್ಶನ ಮುಂತಾದವು ಜನಾಕರ್ಷಣೆಯ ಕೇಂದ್ರವಾಗಿತ್ತು, ನಾಳೆ ನಾಡಿದ್ದು ಇನ್ನಷ್ಟು ಜನ ಹವ್ಯಕ ಪಾಕೋತ್ಸವದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ತುಂಬಿ ತುಳುಕುವ ಸಭೆಯಿದ್ದರೂ ಆರಂಭದಿಂದ ಪಿನ್ ಡ್ರಾಪ್ ಸೈಲೆನ್ಸ್ ಇರುವುದು ಹವ್ಯಕರ ಸುಸಂಸ್ಕೃತಿಯನ್ನು ತೋರಿಸುತ್ತಿತ್ತು. ಇದು ಸಭೆಯಲ್ಲಿರುವವರು Quality audience ಅನ್ನು ಪ್ರತಿಬಿಂಬಿಸುತ್ತದೆ.
– ಶಿವರಾಜ್ ಪಾಟೀಲ್

Tags: 2nd world havyaka ConferenceHavyaka Maha MandalaRaghaveshwara Swamijiವಿಶ್ವ ಹವ್ಯಕ ಸಮ್ಮೇಳನಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ
Share196Tweet123Send
Previous Post

ಭಾರೀ ಹಿಮಪಾತ: 2500 ಮಂದಿಯನ್ನು ರಕ್ಷಿಸಿದ ಭಾರತೀಯ ಸೇನೆ

Next Post

ಶಿವಮೊಗ್ಗ: ಅನ್ನ ಸಂತರ್ಪಣೆಗೆ ಜಿಲ್ಲಾಧಿಕಾರಿ ವಿಧಿಸಿದ ಮಾರ್ಗಸೂಚಿ ಏನು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಅನ್ನ ಸಂತರ್ಪಣೆಗೆ ಜಿಲ್ಲಾಧಿಕಾರಿ ವಿಧಿಸಿದ ಮಾರ್ಗಸೂಚಿ ಏನು ಗೊತ್ತಾ?

ಶಿವಮೊಗ್ಗ: ಅನ್ನ ಸಂತರ್ಪಣೆಗೆ ಜಿಲ್ಲಾಧಿಕಾರಿ ವಿಧಿಸಿದ ಮಾರ್ಗಸೂಚಿ ಏನು ಗೊತ್ತಾ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

SIR ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ನ್ಯಾಯಪೀಠದ ಸ್ಪಷ್ಟನೆಯೇನು?

May 27, 2026
ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL