ಕಲ್ಪ ಮೀಡಿಯಾ ಹೌಸ್ | ಗುಜರಾತ್ |
ಮಹತ್ವದ ಬೆಳವಣಿಗೆಯಲ್ಲಿ ಗುಜರಾತ್ ಸರ್ಕಾರ 6 ರಿಂದ 12ನೇ ತರಗತಿವರೆಗಿನ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಪರಿಚಯಿಸಲು ಮುಂದಾಗಿದೆ.
6 ರಿಂದ 8 ನೇ ತರಗತಿಯವರೆಗೆ ಭಗವದ್ಗೀತೆಯನ್ನು ಕಥೆ, ವಾಚನ, ಸಂಗೀತ ಮತ್ತು ಚಿತ್ರಕಲೆ ರೂಪದಲ್ಲಿ ಪರಿಚಯಿಸಲಾಗುತ್ತದೆ.
Also read: ಚಿಕ್ಕಮಗಳೂರು | ಪೊಲೀಸ್ ಅಧಿಕಾರಿಗಳ ಪ್ರತಿಭಾನ್ವಿತ ಮಕ್ಕಳಿಗೆ ಪ್ರೋತ್ಸಾಹಧನ
ಈ ಕುರಿತಂತೆ ಮಾತನಾಡಿರುವ ಅಲ್ಲಿನ ಶಿಕ್ಷಣ ಸಚಿವ ಪ್ರಫುಲ್ ಪನ್ಷೇರಿಯಾ, ಪ್ರಧಾನಿ ನರೇಂದ್ರ ಮೋದಿಯವರು ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳಲ್ಲಿ ಭಾರತದ ಶ್ರೀಮಂತ ಮತ್ತು ವೈವಿಧ್ಯಮಯ ಸಂಸ್ಕೃತಿ, ಜ್ಞಾನ ವ್ಯವಸ್ಥೆಗಳು ಮತ್ತು ಸಂಪ್ರದಾಯಗಳ ಬಗ್ಗೆ ಹೆಮ್ಮೆಯ ಭಾವನೆ ಮತ್ತು ಸಂಪರ್ಕವನ್ನು ಒತ್ತಿ ಹೇಳುತ್ತದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post