Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಗುರುವು ಮೃತನಾಗಲ್ಲ, ಅಮೃತನಾಗುತ್ತಾನೆ: ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ

December 6, 2019
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು:
ಗುರುವಿನ ಬದುಕು ಸಾಮಾನ್ಯವಾದ್ದಲ್ಲ, ಸಾವಿರಾರು ಜೀವಿಗಳ ಬದುಕಿನ ಉದ್ಧಾರ ಮಾಡುವುದರಿಂದ ಗುರುವು ಯಾವಾಗಲೂ ಮೃತನಾಗುವುದಿಲ್ಲ, ಅಮೃತನಾಗುತ್ತಾನೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದರು.

ಗಿರಿನಗರದ ಪುನರ್ವಸು ಭವನದಲ್ಲಿ ಬುಧವಾರ 35ನೆಯ ಯತಿವರೇಣ್ಯರಾದ ಬ್ರಹ್ಮೈಕ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಂದ್ರ ಭಾರತೀ ಮಹಾಸ್ವಾಮಿಗಳವರ ಆರಾಧನಾ ಮಹೋತ್ಸವ ಹಾಗೂ ಪಾಂಡಿತ್ಯ ಪುರಸ್ಕಾರದ ಧರ್ಮಸಭೆಯಲ್ಲಿ ಆಶೀರ್ವಾಚನ ನೀಡಿ ಅವರು ಮಾತನಾಡಿದರು.

ಗುರುವು ದೇವರ ಪ್ರತಿನಿಧಿಯಾಗಿ ಜೀವಲೋಕದಲ್ಲಿ ಸಂಚಾರ ಮಾಡಿ ಜೀವಗಳನ್ನು ದೇವತ್ವಕ್ಕೆ ಎತ್ತುವ ಕಾಯಕವನ್ನು ಮಾಡುವ ಅವರ ಜೀವನವು ವಿಶಿಷ್ಟ, ಅವರ ಇಹಲೋಕ ತ್ಯಾಗವೂ ವಿಶಿಷ್ಟವೇ ಆಗಿದೆ. ಗುರುವಿನ ಸಾವು ಘೋರವಲ್ಲ, ಗುರುವಿನ ಸಮಾಧಿಯು ಘೋರಿಯಲ್ಲ. ಯಾಕೆಂದರೆ ಸಾವು ಅಮೃತತ್ವ ಗುರುವಿನ ಸಮಾಧಿಯು ನಿತ್ಯ ದರ್ಶನ ಹಾಗೂ ಪೂಜೆಗೆ ಯೋಗ್ಯವಾದ್ದರಿಂದ ಭಕ್ತರ ಉದ್ಧಾರವಾಗುತ್ತದೆ. ಆರಾಧನೆ ಎಂದರೆ ಗುರುಗಳು ಎಲ್ಲೂ ಹೋಗದೆ ಸರ್ವಾಂತರ್ಯಾಮಿಯಾಗಿ, ಸರ್ವವ್ಯಾಪಿಯಾಗಿ ಇದ್ದು ಆ ದಿನ ಬಂದಾಗ ನಮಗೆ ಅಭಿವ್ಯಕ್ತರಾಗಿ ವಿಶೇಷ ಅನುಗ್ರಹವನ್ನು ಮಾಡುತ್ತಾರೆ ಎಂದರು.

ಸಾಮಾನ್ಯ ವ್ಯಕ್ತಿಗೆ ಶ್ರಾದ್ಧ ಮಾಡುವುದು ಆ ಜೀವಕ್ಕೆ ಒಳ್ಳೆದು ಮಾಡುವಂತದ್ದು, ಆರಾಧನೆ ಎನ್ನುವುದು ಸಮಾಜದ ಹಾಗೂ ನಮ್ಮ ಶ್ರೇಯಸ್ಸಿಗಾಗಿ, ನಮಗೆ ಒಳ್ಳೆಯದಾಗಲಿ ಎಂದು, ಗುರುಗಳ ಶ್ರೇಯಸ್ಸಿಗೋಸ್ಕರ ಅಲ್ಲ ಅವರು ಪರಿಪೂರ್ಣ ಶ್ರೇಯಸ್ಸಿನಲ್ಲಿಯೇ ನೆಲೆಸಿದ್ದಾರೆ. ಶ್ರೀರಾಘವೇಂದ್ರ ಭಾರತೀಗಳು ಮಹಾಪಂಡಿತರಾಗಿದ್ದು, ಅವರು ವಿದ್ಯೆ ಹಾಗೂ ವ್ಯವಹಾರದಲ್ಲಿ ಗಟ್ಟಿತನವನ್ನು ಹೊಂದಿದ್ದರು. ಮಠಕ್ಕೆ ವೈದಿಕರು, ವಿದ್ವಾಂಸರು ಬಂದರೆ ಪರೀಕ್ಷೆಗಳನ್ನು ಮಾಡುವುದರ ಜತೆಗೆ ಪುಸ್ತಕವೇ ಮಸ್ತಕಕ್ಕೆ ಬರಬೇಕು ಎನ್ನುತ್ತಿದ್ದರು. ವ್ಯವಹಾರದಲ್ಲಿಯೂ ಅಷ್ಟೇ ನಿಷ್ಣಾತರಾಗಿದ್ದರು ಮಠದಲ್ಲಿ ಎಷ್ಟು ಉತ್ಪತ್ತಿ, ಏನು ನಷ್ಟವಿದೆ ಎಂಬುದು ಅವರಿಗೆ ಗೊತ್ತಿತ್ತು. ಅಲ್ಲದೇ ಅನುಷ್ಠಾನ, ತಪಸ್ಸಿನ ಬಲವನ್ನು ಹೊಂದಿದ್ದರಿಂದ ತ್ರಿಪಠಿಯಾಗಿ ತ್ರಿವೇಣಿ ಸಂಗಮವಾಗಿದ್ದರು ಎಂದು ಬಣ್ಣಿಸಿದರು.

ಪಾಂಡಿತ್ಯ ಪುರಸ್ಕಾರ ಉದ್ಘೋಷ
ಬ್ರಹ್ಮೈಕ್ಯ ಶ್ರೀರಾಘವೇಂದ್ರ ಭಾರತೀ ಸ್ವಾಮೀಜಿಯವರ ಆರಾಧನೆಯ ದಿನದಂದು ನೀಡುವ ಶ್ರೀ ರಾಘವೇಂದ್ರ ಭಾರತೀ ಪಾಂಡಿತ್ಯ ಪುರಸ್ಕಾರವನ್ನು ತಮಿಳುನಾಡು ಮೂಲದ ಯಜುರ್ವೇದ ಆಚಾರ್ಯ ವೇದಬ್ರಹ್ಮ ಶ್ರೀ ಜಂಬೂನಾಥನ್ ಘನಪಾಠಿಗಳಿಗೆ ಉದ್ಘೋಷಿಸಲಾಯಿತು.

ವಿದ್ವಾನ್ ರಾಘವೇಂದ್ರ ಭಟ್ ಕ್ಯಾದಗಿ ಪ್ರಸ್ತಾವನೆಗೈದರೆ, ಧರ್ಮಕರ್ಮ ವಿಭಾಗದ ಶ್ರೀಸಂಯೋಜಕ ಕೂಟೇಲು ರಾಮಕೃಷ್ಣ ಭಟ್ ಪಾಂಡಿತ್ಯ ಪುರಸ್ಕೃತರಾದ ಜಂಬೂನಾಥನ್ ಘನಪಾಠಿಗಳ ಪರಿಚಯ ವಿವರಿಸಿದರು. ಬೆಳಗ್ಗೆ ಆರಾಧನೆಯ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
ಧರ್ಮಸಭೆಯಲ್ಲಿ ಶ್ರೀಮಠದ ಸಮ್ಮುಖ ಸರ್ವಾಧಿಕಾರಿಗಳಾದ ತಿಮ್ಮಪ್ಪಯ್ಯ ಮಡಿಯಾಲ್, ಕಾರ್ಯನಿರ್ವಾಹಣಾಧಿಕಾರಿ ಕೃಷ್ಣ ಗಣೇಶ್ ಭಟ್ ಹಾಗೂ ಶ್ರೀಮಠದ ಪದಾಧಿಕಾರಿಗಳು ಭಾಗವಹಿಸಿದ್ದರು.

Get in Touch With Us info@kalpa.news Whatsapp: 9481252093

Tags: BENGALURUGuruKannada NewsSri Ramachandrapur Muttಗುರುಧರ್ಮಸಭೆಶ್ರೀ ರಾಘವೇಶ್ವರ ಭಾರತೀ ಶ್ರೀಗಳುಶ್ರೀ ರಾಮಚಂದ್ರಾಪುರ ಮಠ
Previous Post

ಮೂರ್ತಿ ಪೂಜಕರಾಗದೆ ವಿಚಾರ ಪೂಜಕರಾಗುವುದೇ ಅಂಬೇಡ್ಕರ್‌ ಅವರಿಗೆ ಸಲ್ಲಿಸುವ ನಿಜ ಗೌರವ

Next Post

ಗೋ ಆಧರಿತ ಪದ್ಧತಿಯಿಂದಷ್ಟೇ ಕೃಷಿ ಪುನರುತ್ಥಾನ: ಕೃಷಿ ತಜ್ಞ ಪಾಟೀಲ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗೋ ಆಧರಿತ ಪದ್ಧತಿಯಿಂದಷ್ಟೇ ಕೃಷಿ ಪುನರುತ್ಥಾನ: ಕೃಷಿ ತಜ್ಞ ಪಾಟೀಲ ಅಭಿಮತ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!