ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು, ತಾಲೂಕಿನ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಯನರನ್ನು ಶಾಸಕ ಎಚ್. ಹಾಲಪ್ಪನವರು ಅಭಿನಂದಿಸಿ, ಸ್ಪೂರ್ತಿ ನೀಡಿದ್ದಾರೆ.
ಸರ್ಕಾರಿ ಪ.ಪೂ ಕಾಲೇಜು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು. ಜಿ.ಎಂ. ಸಿಂಧೂ ಅವರು 595 ಅಂಕಗಳೊಂದಿಗೆ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದು ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿರುವ ಇವರನ್ನು ಅಭಿನಂದಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಶಂಕರ್ ಮೂರ್ತಿ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಪರಮೇಶ್ವರಪ್ಪ, ಮತ್ತಿತರರು ಉಪಸ್ಥಿತರಿದ್ದರು.
ಇನ್ನು, ಸರ್ಕಾರಿ ಪ.ಪೂ ಕಾಲೇಜು ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು.ಅಖಿಲಾ ಯು ಹೆಗ್ಡೆ ಅವರು 594 ಅಂಕಗಳೊಂದಿಗೆ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿರುವ ಇವರನ್ನು ಅಭಿನಂದಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಶಂಕರ್ ಮೂರ್ತಿ, ದೇವೇಂದ್ರಪ ಯಲಕುಂದ್ಲಿ, ಮತ್ತಿತರರು ಉಪಸ್ಥಿತರಿದ್ದರು.
Get In Touch With Us info@kalpa.news Whatsapp: 9481252093
Discussion about this post