ಹರಿಹರ: ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರ ಜನ್ಮ ದಿನದ ಅಂಗವಾಗಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ರಕ್ತದಾನ ಹಾಗೂ ಅಲ್ಲಿರುವಂತಹ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ನೀಡುವುದರ ಮೂಲಕ ಅದ್ಧೂರಿಯಾಗಿ ಆಚರಿಸಲಾಯಿತು.
ಈ ವೇಳೆ ಮಾತನಾಡಿದ ತಾಲೂಕು ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಎಸ್. ಗೋವಿಂದ್, ನಮ್ಮ ಸಂಘಟನೆಯು ತಾಲೂಕಿನಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಇಂದು ನಮ್ಮ ಸಂಸ್ಥಾಪಕರಾದ ಮುತ್ತಪ್ಪ ರೈಯವರ ಹುಟ್ಟುಹಬ್ಬ ಅವರ ಹುಟ್ಟುಹಬ್ಬವನ್ನು ಯಾವುದೇ ಆಡಂಬರವಿಲ್ಲದೆ, ದುಂದು ವೆಚ್ಚವಿಲ್ಲದೆ, ಆಸ್ಪತ್ರೆಯಲ್ಲಿರುವ ಬಡ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸುವುದರ ಮೂಲಕ ಹಾಗೂ ಉಚಿತ ರಕ್ತದಾನವನ್ನು ಮಾಡುವುದರ ಮೂಲಕ ಅವರ ಹುಟ್ಟುಹಬ್ಬವನ್ನು ಅರ್ಥಗರ್ಭಿತವಾಗಿ ಆಚರಿಸಿದ್ದೇವೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರ ಆಸ್ಪತ್ರೆಯವರ ಸಹಕಾರ ಮರೆಯುವಂತಿಲ್ಲ ಹಾಗೂ ಈ ಕಾರ್ಯಕ್ರಮಕ್ಕೆ ಜಿಲ್ಲಾಧ್ಯಕ್ಷರು ಜಿಲ್ಲಾ ಸಂಘಟಕರು ಬಂದಿರೋದು ತುಂಬ ಸಂತೋಷಕರವಾದ ವಿಷಯ ಎಂದು ಈ ಸಂದರ್ಭದಲ್ಲಿ ಹೇಳಿದರು.
ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಹನುಮಾನಾಯಕ್ ಮಾತನಾಡಿ, ಸಂಘ ಸಂಸ್ಥೆಗಳು ಇಂತಹ ಅತ್ಯುತ್ತಮ ಕಾರ್ಯಗಳನ್ನು ಮಾಡುವುದರ ಮೂಲಕ ಸಮಾಜದಲ್ಲಿ ಇರುವ ಬಡವರಿಗೆ ಸಹಾಯ ಮಾಡುವ ಕಾರ್ಯವನ್ನು ಸಂಘಟನೆಗಳು ಮಾಡಬೇಕು. ಅಂತ ಉತ್ತಮ ಕಾರ್ಯವನ್ನು ಇಂದು ಹರಿಹರದ ಜೈ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಮಾಡಿದ್ದಾರೆ. ಹರಿಹರದಲ್ಲಿ ಇನ್ನೂ ಅನೇಕ ಉತ್ತಮವಾದ ಸಂಘ ಸಂಘಟನೆಗಳು ಇದ್ದು ಅವರು ಇದೇ ರೀತಿ ಅತ್ಯುತ್ತಮವಾದ ಸಮಾಜಮುಖೀ ಕಾರ್ಯಗಳನ್ನು ಮಾಡುತ್ತಾ ಬರಲಿ. ಸದೃಢ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಸಂಘಟನೆಗಳ ಪಾತ್ರ ಅತಿ ಮುಖ್ಯವಾದದ್ದು. ಅವರಿಗೆ ನಮ್ಮ ಸಾರ್ವಜನಿಕ ಆಸ್ಪತ್ರೆ ವತಿಯಿಂದ ಎಲ್ಲ ಸಲಹೆ ಸಹಕಾರಗಳನ್ನು ನೀಡುತ್ತೇವೆ ಎಂದರು.
ಸಂಘಟಕರು ಹಾಗೂ ಹರಿಹರದ ಜಯ ಕರ್ನಾಟಕ ಸಂಘಟನೆ ಎಲ್ಲ ಕಾರ್ಯಕರ್ತರು ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Discussion about this post