Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಾವಣಗೆರೆ

ಹರಿಹರದ ವೀರಶೈವ ಪಂಚಮಸಾಲಿ ಪೀಠಕ್ಕೆ ಆಧ್ಯಾತ್ಮಿಕ ಜಿಜ್ಞಾಸು ಅಮಿತ್ ಶಾ ಭೇಟಿ

ಕರ್ನಾಟಕ ಚುನಾವಣಾ ಪ್ರಯುಕ್ತ ರಾಜ್ಯದ ಉದ್ದಗಲಗಳನ್ನು ಸುತ್ತುತ್ತಿರುವ ಕೇಂದ್ರ ಗೃಹ ಸಚಿವ

May 3, 2023
in ದಾವಣಗೆರೆ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಹರಿಹರ |

ಶ್ವಾಸ ಗುರೂಜಿ, ಹರಿಹರ ಪೀಠಾಧಿಪತಿ ಶ್ರೀ ವಚನಾನಂದ ಸ್ವಾಮೀಜಿಯವರ ಜೊತೆ ಕೆಲ ಕಾಲ ಕಳೆದ ಅಮಿತ್ ಶಾ, Amith Shah ಹಲವು ವಿಷಯಗಳ ಕುರಿತು ಜಿಜ್ಞಾಸೆ ನಡೆಸಿದರು. ಈ ಭೇಟಿಯ ಕುರಿತು ತಮಗಾದ ಅನುಭವವನ್ನು ಹಂಚಿಕೊಂಡ ವಚನಾನಂದ ಸ್ವಾಮೀಜಿಯವರು, ಅಖಂಡ ಭಾರತದ ನಿರ್ಮಾಣದಲ್ಲಿ ನಿರತವಾಗಿರುವ ಅಮಿತ್ ಶಾ., ಕೇವಲ ಚುನಾವಣಾ ಚಾಣುಕ್ಯ ಮಾತ್ರವಲ್ಲದೇ, ಭಾರತದ ಮಾಣಿಕ್ಯವೆಂದು ಬಣ್ಣಿಸಿದರು. ಶಾ ಕೇವಲ ಒಬ್ಬ ರಾಜಕಾರಣಿಯಿಲ್ಲದೆ, ಒಬ್ಬ ಅದ್ಭುತ ಜಿಜ್ಞಾಸು ಮತ್ತು ಆಳವಾದ ಆಧ್ಯಾತ್ಮಿಕ ತಳಹದಿ ಹೊಂದಿರುವ ವ್ಯಕ್ತಿ ಎಂದು ಹೊಗಳಿದರು.

ಆಧ್ಯಾತ್ಮಿಕ ಜಿಜ್ಞಾಸು ಅಮಿತ್ ಶಾ
ಹರಿಹರ ಪೀಠಕ್ಕೆ ಭೇಟಿ ನೀಡಿ, ಔಪಚಾರಿಕ ಗೌರವಗಳನ್ನು ಸ್ವೀಕರಿಸಿ, ಸ್ವಾಮೀಜಿಗಳಿಗೆ ವಂದನೆ ಸಲ್ಲಿಸಿದ ಅಮಿತ್ ಶಾ ಒಂದು ಕ್ಷಣ ಮೌನವಾಗಿ, ಅಲ್ಲಿದ್ದ ಶ್ರೀಚಕ್ರದ ಕಲಾಕೃತಿಯನ್ನು ಗಮನವಿಟ್ಟು ನೋಡಿ, ಅದು ಅದ್ಭುತವಾಗಿದೆ ಎಂದು ಬಣ್ಣಿಸುತ್ತಾ ಲಿಂಗಾಯತ ಧರ್ಮದಲ್ಲಿ ಕುಂಡಲನಿ ಯೋಗದ ಕುರಿತಾದ ಮಾಹಿತಿಯ ಬಗ್ಗೆ ವಿಚಾರಿಸಿದರು. ಇದಕ್ಕೆ ವಚನಾನಂದ ಸ್ವಾಮೀಜಿಯವರ ಸಮರ್ಪಕ ಉತ್ತರಗಳನ್ನು ಗಮನವಿಟ್ಟು ಕೇಳುತ್ತಾ, ಹಾಗೇ ಸ್ವಾಮೀಜಿ ಹೃಷಿಕೇಶದಲ್ಲಿ ವಿದ್ಯಾಭ್ಯಾಸ ಮಾಡಿದ್ದನ್ನು ತಿಳಿದು, ಅಲ್ಲಿನ ಸ್ವಾಮಿ ರಾಮರ ಬಗ್ಗೆ ಕೂಡ ಮಾತನಾಡಿದರು. ಹಾಗೆ ತಾವು ಮೂರು ದಿನಗಳ ಕಾಲ ಜೋಷಿ ಮಠದಲ್ಲಿ ತಂಗಿದ್ದು, ಕೇದಾರನಾಥಕ್ಕೆ ಹೋಗಿ ಶಂಕರರ ಪ್ರತಿಮೆ ಸ್ಥಾಪನೆ ಮಾಡಿದ ಬಗ್ಗೆ ಹೇಳುತ್ತಾ ಶಂಕರಾಚಾರ್ಯರ ಸಾಧನೆಗಳನ್ನು ಕೊಂಡಾಡಿದರು. ಸುಮಾರು 800 ವರ್ಷಗಳ ಹಿಂದೆ ಶಂಕರರು ಅಲ್ಲಿನ ಹರಿಹರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದನ್ನು ತಿಳಿದುಕೊಂಡು, ತಾವು ಕೂಡ ಹರಿಹರೇಶ್ವರನ ದರ್ಶನ ಪಡೆದರು.
ಅಖಂಡ ಭಾರತ ನಿರ್ಮಾಣ ಏಕಮೇವ ಧ್ಯೇಯ
ವಚನಾನಂದ ಸ್ವಾಮೀಜಿಯವರು ಭಾರತದ ಭೂಪಟದ ಮುಂದೆ ನಿಂತ ಭಾವಚಿತ್ರವನ್ನು ನೋಡಿ, ಶಾ ಭಾವುಕರಾಗಿ ಅಶ್ರುಪೂರ್ಣರಾದರು. ಈ ಕುರಿತು ಸ್ವಾಮೀಜಿ ವಿಚಾರಿಸಲು, ‘ಭಾರತ ವಿಶ್ವಗುರುವಾಗಬೇಕು, ಅಖಂಡ ಭಾರತ ನಿರ್ಮಾಣಕ್ಕೆ ನಿಮ್ಮಂತಹ ಸಂತ-ಮಹಂತರ ಆಶೀರ್ವಾದಗಳು ಬೇಕು’ ಎಂದು ಭಾವೋದ್ರೇಕಕ್ಕೆ ಒಳಗಾದರು. ಹಾಗೇ ಸ್ವಾಮೀಜಿಯವರಿಂದ ಅಖಂಡ ಭಾರತದ ರಕ್ಷಣೆಗಾಗಿ ಹೋರಾಡಿದ್ದ ಕರ್ನಾಟಕದ ವೀರ ವನಿತೆಯರಾದ ಕಿತ್ತೂರು ರಾಣಿ ಚೆನ್ನಮ್ಮ, ಬೆಳವಡಿ ಮಲ್ಲಮ್ಮ, ರಾಣಿ ಅಬ್ಬಕ್ಕ ಮುಂತಾದವರ ಬಗ್ಗೆ ಕುತೂಹಲದಿಂದ ತಿಳಿದುಕೊಂಡರು. ಹರಿಹರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರೂ, ಸ್ವಾಮೀಜಿಯವರ ಹತ್ತಿರ ಯಾವುದೇ ರಾಜಕಾರಣ ಬಗ್ಗೆ ಮಾತನಾಡದೇ, ಯೋಗ, ಆಧ್ಯಾತ್ಮ ಸಾಧನೆ, ಸಿದ್ದಿಗಳ ಕುರಿತಷ್ಟೇ ಮಾತನಾಡಿ, ಧರ್ಮದಲ್ಲಿ ರಾಜಕಾರಣ ಬೆರಸದೇ ಮಾದರಿ ಪ್ರವರ್ತನೆಯನ್ನು ಪ್ರದರ್ಶಿಸಿದರು. ಹಾಗೇ ಕಾಶ್ಮೀರದ ವಿಷಯ ಮಾತನಾಡುವಾಗಲೂ ಯಾವುದೇ ಧಾರ್ಮಿಕತೆ ಮತ್ತು ರಾಜಕಾರಣ ಲೇಪವಿಲ್ಲದೆ, ಅದು ನಮ್ಮದು ಎಂಬ ದೇಶಭಕ್ತಿಯ ಭಾವದಿಂದ ಮಾತನಾಡುತ್ತಾ, ಅಲ್ಲಿ ಕಲಂ 370 ತೆಗೆದುಹಾಕವುದು ಅಲ್ಲಿನ ಶಾಂತಿಗೆ ಅನಿವಾರ್ಯವಾಗಿತ್ತು ಎಂದು ಪ್ರತಿಕ್ರಿಯಿಸಿದರು.
ಶಾರ ಈ ಭೇಟಿಯ ಬಗ್ಗೆ ಮಾತನಾಡುತ್ತಾ, ವಚನಾನಂದ ಸ್ವಾಮೀಜಿಯವರು ಅಮಿತ್ ಶಾ ಕೇವಲ ಒಬ್ಬ ರಾಜಕಾರಣಿಯಾಗಿರದೇ, ಒಂದು ಸಮ್ಮೋಹಕ ಶಕ್ತಿಯನ್ನು ಹೊಂದಿರುವ, ದೈವಿಕ ಚೈತನ್ಯವಿರುವ ವ್ಯಕ್ತಿಯೆಂದು ಹೊಗಳಿದರು. ಮಗಧರ ಕಾಲದಲ್ಲಿ ದುಷ್ಟ ನಂದರನ್ನು ಸಂಹರಿಸಿ, ಇಡೀ ಸಾಮ್ರಾಜ್ಯವನ್ನು ಒಂದುಗೂಡಿಸಿ ದೇಶ ಕಟ್ಟಿದ ಚಾಣಕ್ಯನಂತೆ ಅಮಿತ್ ಶಾ ದೇಶ ವಿರೋಧಿ ಶಕ್ತಿಗಳನ್ನು ಹೆಡೆಮುರಿಕಟ್ಟುತ್ತಾ ಅಖಂಡ ಭಾರತ ನಿರ್ಮಾಣಕ್ಕೆ ತೊಡಗಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಒತ್ತಾಸೆಯಂತೆ, ಗೃಹ ಸಚಿವಾಲಯದ ಜವಾಬ್ದಾರಿ ವಹಿಸಿಕೊಂಡ ಅಮಿತ್ ಶಾ ನಂತರ ಕಾಶ್ಮೀರದಲ್ಲಿ ವಿಧಿ 370 ತೆಗೆದು ಹಾಕಿ, ಅದನ್ನು ಭಾರತದ ಅವಿಭಾಜ್ಯ ಅಂಗವಾಗಿ ಮಾಡಿದರು. ಈಶಾನ್ಯ ಭಾರತದ ಹಲವು ದಶಕಗಳ ಗಡಿ ವಿವಾದಗಳಿಗೆ ತೆರೆ ಎಳೆಯುತ್ತಾ ಸುಮಾರು ಎಂಟು ಸಾವಿರಕ್ಕೂ ಹೆಚ್ಚು ತೀವ್ರವಾದಿಗಳು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರುವಂತೆ ಮಾಡಿದ್ದಾರೆ. ಹೀಗೆ ತಮ್ಮ ದೃಢ ನಿರ್ಧಾರಗಳಿಗೆ ಹೆಸರಾಗಿರುವ ಅಮಿತ್ ಶಾ ದೇಶದ ಭದ್ರತೆ ಮತ್ತು ಅಖಂಡತೆಗೆ ಬಹುಮೌಲಿಕ ಕೊಡುಗೆ ನೀಡುತ್ತಿದ್ದಾರೆ.

http://kalpa.news/wp-content/uploads/2023/04/Christ-King-PU-College-Video-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: Amith ShahDavanagereHariharaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಅಮಿತ್ ಶಾಹರಿಹರ
Previous Post

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಹಿನ್ನೆಲೆ: ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ

Next Post

ಜೆಡಿಎಸ್‌ಗೆ ಮತ ನೀಡಿ ಭಾರೀ ಬಹುಮತದೊಂದಿಗೆ ಮತ್ತೊಮ್ಮೆ ಗೆಲ್ಲಿಸಿ: ಬಂಡೆಪ್ಪ ಖಾಶೆಂಪುರ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜೆಡಿಎಸ್‌ಗೆ ಮತ ನೀಡಿ ಭಾರೀ ಬಹುಮತದೊಂದಿಗೆ ಮತ್ತೊಮ್ಮೆ ಗೆಲ್ಲಿಸಿ: ಬಂಡೆಪ್ಪ ಖಾಶೆಂಪುರ ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!